Homeಮುಖಪುಟಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

ಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

- Advertisement -
- Advertisement -

ಹೊಸದಿಲ್ಲಿ: ಇರಾನ್ ಮತ್ತು ಇಸ್ರೇಲ್ ನಡುವೆ ಕದನವಿರಾಮ ಏರ್ಪಟ್ಟಿರುವುದನ್ನು ಭಾರತ ಸ್ವಾಗತಿಸಿದೆ. ಈ ಕದನವಿರಾಮಕ್ಕೆ ಅಮೆರಿಕ ಮತ್ತು ಕತಾರ್ ವಹಿಸಿದ ಪಾತ್ರವನ್ನು ಶ್ಲಾಘಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ (ಜೂನ್ 24) ಸಂಜೆ ತಿಳಿಸಿದೆ.

ಆದಾಗ್ಯೂ, ಈ ಪ್ರದೇಶದ ಒಟ್ಟಾರೆ ಭದ್ರತೆ ಕುರಿತು ಭಾರತಕ್ಕೆ ಇನ್ನೂ ಕಳವಳವಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಎರಡು ದಿನಗಳ ಹಿಂದೆ ಇರಾನಿನ ಪರಮಾಣು ಘಟಕಗಳ ಮೇಲೆ ಅಮೆರಿಕ ದಾಳಿ ನಡೆಸಿದ ಪ್ರತಿಕ್ರಿಯೆಯಾಗಿ, ಇರಾನ್ ಕತಾರ್‌ನಲ್ಲಿರುವ ಅಮೆರಿಕನ್ ಮಿಲಿಟರಿ ನೆಲೆಯ ಮೇಲೆ ಕ್ಷಿಪಣಿಗಳನ್ನು ಉಡಾಯಿಸಿತ್ತು. ಇದರ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಮುಂಜಾನೆ (ಭಾರತೀಯ ಕಾಲಮಾನದ ಪ್ರಕಾರ) ಇಸ್ರೇಲ್ ಮತ್ತು ಇರಾನ್ ನಡುವೆ “12 ದಿನಗಳ ಯುದ್ಧ” ಕೊನೆಗೊಳ್ಳಲಿದ್ದು, ಕದನವಿರಾಮಕ್ಕೆ ಮುಂದಾಗಲಿವೆ ಎಂದು ಘೋಷಿಸಿದರು. ಕತಾರ್‌ನ ಪ್ರಧಾನ ಮಂತ್ರಿ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರಹಮಾನ್ ಅಲ್ ಥಾನಿ ಅವರು, ಅಮೆರಿಕದ ಕೋರಿಕೆಯ ಮೇರೆಗೆ ತಾವು ಇರಾನ್‌ನೊಂದಿಗೆ ಸಂಪರ್ಕ ಸಾಧಿಸಿದ್ದೇವೆ ಎಂದು ದೃಢಪಡಿಸಿದ್ದಾರೆ.

ಭಾರತವು ತನ್ನ ಹೇಳಿಕೆಯಲ್ಲಿ, ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷಗಳನ್ನು ಬಗೆಹರಿಸಲು “ಸಂವಾದ ಮತ್ತು ರಾಜತಾಂತ್ರಿಕತೆಗೆ ಬೇರೆ ಪರ್ಯಾಯವಿಲ್ಲ” ಎಂದು ಪುನರುಚ್ಚರಿಸಿದೆ. ಈ ಪ್ರಯತ್ನಗಳಲ್ಲಿ ತನ್ನ ಪಾತ್ರವನ್ನು ನಿರ್ವಹಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದ್ದು, ಎಲ್ಲಾ ಸಂಬಂಧಿತ ಪಕ್ಷಗಳು ಶಾಂತಿ ನೆಲಸುವತ್ತ ಕೆಲಸ ಮಾಡುತ್ತವೆ ಎಂದು ಆಶಿಸಿದೆ.

ಆದಾಗ್ಯೂ, ಕದನವಿರಾಮ ಜಾರಿಗೆ ಬರಬೇಕಿದ್ದ ಕೆಲವೇ ಕ್ಷಣಗಳಲ್ಲಿ ಅದರ ಕುರಿತ ವರದಿ ಅಸ್ಪಷ್ಟವಾಯಿತು. ಇರಾನ್ ತನ್ನ ಮೇಲೆ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಇಸ್ರೇಲ್ ಆರೋಪಿಸಿತು. ಇದಕ್ಕೆ ಪ್ರತೀಕಾರವಾಗಿ, ಇರಾನ್ ಬಳಿಯ ರೇಡಾರ್ ಸೌಲಭ್ಯವನ್ನು ನಾಶಪಡಿಸಿರುವುದಾಗಿ ಇಸ್ರೇಲ್ ಹೇಳಿಕೊಂಡಿತು. ಆದರೆ, ಇರಾನ್ ಕದನವಿರಾಮವನ್ನು ಉಲ್ಲಂಘಿಸಿರುವುದನ್ನು ನಿರಾಕರಿಸಿದೆ.

ಟ್ರಂಪ್ ಮತ್ತು ಇಸ್ರೇಲಿ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ನಡುವಿನ ಮಾತುಕತೆಯ ನಂತರ ಇಸ್ರೇಲ್ ಇರಾನ್ ಮೇಲೆ ಹೆಚ್ಚುವರಿ ದಾಳಿಗಳಿಂದ ದೂರ ಉಳಿದಿದೆ ಎಂದು ನೆತನ್ಯಾಹು ಅವರ ಕಚೇರಿ ಮೂಲಗಳು ತಿಳಿಸಿವೆ.

ಆದರೆ, ಟ್ರಂಪ್ ಅವರು ಎರಡೂ ದೇಶಗಳು ಕದನವಿರಾಮವನ್ನು ಉಲ್ಲಂಘಿಸಿವೆ ಎಂದು ಹೇಳಿದ್ದಾರೆ. ಒಪ್ಪಂದವು ಜಾರಿಗೆ ಬಂದ ತಕ್ಷಣ ಅಂದರೆ ಅದು ಸಂಪೂರ್ಣವಾಗಿ ಜಾರಿಗೆ ಬರುವ ಮೊದಲು ಇಸ್ರೇಲ್ “ನಾನು ಹಿಂದೆಂದೂ ನೋಡಿರದಂತಹ ಅತ್ಯಂತ ದೊಡ್ಡ ಪ್ರಮಾಣದ ಬಾಂಬ್‌ಗಳನ್ನು” ಹಾಕಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

“ಇಸ್ರೇಲ್‌ನ ಇಂತಹ ನಡೆ ಬಗ್ಗೆ ನಾನು ಸಂತೋಷವಾಗಿಲ್ಲ” ಎಂದು ಟ್ರಂಪ್ ಸುದ್ದಿಗಾರರಿಗೆ ತಿಳಿಸಿದರು. ಇರಾನ್ ಬಗ್ಗೆ ಅತೃಪ್ತಿ ಹೊಂದಿದ್ದರೂ, ಇಸ್ರೇಲ್ ಬಗ್ಗೆ ತಮಗೆ ವಿಶೇಷವಾಗಿ ಬೇಸರವಾಗಿದೆ ಎಂದು ಅವರು ಹೇಳಿದರು.

“ಈ ಎರಡು ದೇಶಗಳು ಎಷ್ಟು ಸಮಯದಿಂದ ಮತ್ತು ಎಷ್ಟು ಕಠಿಣವಾಗಿ ಹೋರಾಡುತ್ತಿವೆ ಎಂದರೆ ಅವು ಏನು ಮಾಡುತ್ತಿವೆ ಎಂದು ಅವರಿಗೆ ತಿಳಿದಿಲ್ಲ. ನಿಮಗೆ ಅದು ಅರ್ಥವಾಗುತ್ತಿದೆಯೇ?” ಎಂದು ಟ್ರಂಪ್ ಸುದ್ದಿಗಾರರಿಗೆ ಪ್ರಶ್ನಿಸಿದ್ದಾರೆ.

ನಂತರ ಅವರು, “ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡುವುದಿಲ್ಲ. ಎಲ್ಲಾ ವಿಮಾನಗಳು ಹಿಂದಿರುಗಿ ಹೋಗುತ್ತವೆ. ಯಾರಿಗೂ ನೋವುಂಟು ಮಾಡುವುದಿಲ್ಲ, ಕದನವಿರಾಮ ಜಾರಿಯಲ್ಲಿದೆ” ಎಂದು ಸ್ಪಷ್ಟಪಡಿಸಿದರು.

ಇರಾನ್ ಮತ್ತು ಇಸ್ರೇಲ್ ನಡುವಿನ ಈ ಸಂಘರ್ಷವು ಜೂನ್ 13ರಂದು ಪ್ರಾರಂಭವಾಗಿದೆ. ಇರಾನ್ ಅಣು ಶಸ್ತ್ರಾಸ್ತ್ರಗಳನ್ನು ಪಡೆಯುವ ಹಂಚಿನಲ್ಲಿತ್ತು ಎಂದು ಆರೋಪಿಸಿ ಇಸ್ರೇಲ್ ಇರಾನ್‌ನಲ್ಲಿ ಮಿಲಿಟರಿ ಮತ್ತು ಅಣು ಗುರಿಗಳ ಮೇಲೆ ದಾಳಿ ಮಾಡಿದೆ. ಇದು ತನ್ನ ಅಸ್ತಿತ್ವಕ್ಕೆ ಬೆದರಿಕೆ ಎಂದು ಇಸ್ರೇಲ್ ಹೇಳಿದೆ.

ಜೂನ್ 13ರ ಘಟನೆಯ ನಂತರ, ಉಭಯ ದೇಶಗಳು ಪರಸ್ಪರ ಕ್ಷಿಪಣಿಗಳನ್ನು ಉಡಾಯಿಸಿದವು. ಎರಡೂ ಕಡೆ ಸಾವುಗಳು ಸಂಭವಿಸಿದವು. ಅಮೆರಿಕವು ಭಾನುವಾರದಂದು ಇರಾನ್‌ನಲ್ಲಿರುವ ಮೂರು ಪ್ರಮುಖ ಪರಮಾಣು ಕೇಂದ್ರಗಳ ಮೇಲೆ ಬಾಂಬ್ ದಾಳಿ ಮಾಡುವ ಮೂಲಕ ಯುದ್ಧಕ್ಕೆ ಪ್ರವೇಶಿಸಿತು. ಟ್ರಂಪ್ ಈ ಗುರಿಗಳನ್ನು ‘ಸಂಪೂರ್ಣವಾಗಿ ನಾಶಪಡಿಸಲಾಗಿದೆ’ ಎಂದು ಹೇಳಿಕೊಂಡಿದ್ದಾರೆ.

ತನ್ನ ಪರಮಾಣು ಕೇಂದ್ರಗಳ ಮೇಲಿನ ಅಮೆರಿಕ ದಾಳಿಯ ಪ್ರತಿಕ್ರಿಯೆಯಾಗಿ, ಇರಾನ್‌ ದೇಶವು ಕತಾರ್‌ನಲ್ಲಿರುವ ಅಮೆರಿಕದ ಅಲ್ ಉದೈಡ್ ವಾಯುನೆಲೆಯ ಮೇಲೆ ಸೋಮವಾರದಂದು ಕ್ಷಿಪಣಿ ದಾಳಿಯನ್ನು ನಡೆಸಿತು.

Latest Update: ಕದನ ವಿರಾಮಕ್ಕೆ ಒಪ್ಪಿಕೊಂಡ ಇರಾನ್-ಇಸ್ರೇಲ್; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...