Homeಮುಖಪುಟವಿಡಿಯೋ ನೋಡಿ: ರಾಹುಲ್ ಗಾಂಧಿ ಭಾಷಣವನ್ನು ಅನುವಾದಿಸಿ ಚಪ್ಪಾಳೆ ಗಿಟ್ಟಿಸಿದ 12 ನೇ ತರಗತಿಯ ಸರ್ಕಾರಿ...

ವಿಡಿಯೋ ನೋಡಿ: ರಾಹುಲ್ ಗಾಂಧಿ ಭಾಷಣವನ್ನು ಅನುವಾದಿಸಿ ಚಪ್ಪಾಳೆ ಗಿಟ್ಟಿಸಿದ 12 ನೇ ತರಗತಿಯ ಸರ್ಕಾರಿ ಶಾಲೆಯ ಹುಡುಗಿ

ರಾಹುಲ್‌ ಗಾಂಧಿಯವರು "ಉತ್ತಮ ಭಾಷಾಂತರವನ್ನು ಮಾಡಿದ್ದಕ್ಕಾಗಿ" ಸಫಾಗೆ ಧನ್ಯವಾದ ಅರ್ಪಿಸಿದರು. ರೋಮಾಂಚನಗೊಂಡ ವಿದ್ಯಾರ್ಥಿನಿಯು ಇದು ತನ್ನ ಜೀವನದ ಅತ್ಯುತ್ತಮ ಕ್ಷಣ ಎಂದಿದ್ದಾಳೆ.

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಗುರುವಾರ ತಮ್ಮ ಸಂಸದೀಯ ಕ್ಷೇತ್ರವಾದ ಕೇರಳದ ವಯನಾಡಿನ ಶಾಲೆಯೊಂದರಲ್ಲಿ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಆಗ ಅವರು ನನ್ನ ಭಾಷಣವನ್ನುಇಂಗ್ಲಿಷ್‌ನಿಂದ ಮಲಯಾಳಂಗೆ ಅನುವಾದಿಸಲು ಯಾರಾದರೂ ಸಿದ್ಧರಿದ್ದೀರಾ? ಎಂದು ವಿದ್ಯಾರ್ಥಿಗಳಲ್ಲಿ ಪ್ರಶ್ನಿಸಿದರು. ಅವರ ಎಂದಿನ ಭಾಷಾಂತರಕಾರರಾಗಿದ್ದ ಪಕ್ಷದ ಮುಖಂಡ ಕೆ.ಸಿ.ವೇಣುಗೋಪಾಲ್ ನಗುತ್ತಾ ಕುಳಿತಿದ್ದರು.

ಎಲ್ಲರೂ ಆಶ್ಚರ್ಯಚಕಿತರಾಗಿ ನೋಡುತ್ತಿದ್ದರೆ, ಸರ್ಕಾರಿ ಶಾಲೆಯಲ್ಲಿ 12 ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿ ಸಫಾ ಸೆಬಿನ್ ಎದ್ದು ವೇದಿಕೆಯಲ್ಲಿದ್ದ ರಾಹುಲ್‌ ಗಾಂಧಿಯತ್ತ ಹೆಜ್ಜೆ ಹಾಕಿದಳು. ಎಲ್ಲರೂ ಜೋರಾಗಿ ಚಪ್ಪಾಳೆ ತಟ್ಟಿ ಆಕೆಯನ್ನು ಸ್ವಾಗತಿಸಿದರು.

ಅವಳು ವೇದಿಕೆಯನ್ನು ತಲುಪಿ ರಾಹಲ್ ಗಾಂಧಿಯನ್ನು ಮುಖಾಮುಖಿಯಾಗಿ ಭೇಟಿಯಾದಾಗ, ಸಫಾಳ ಮೊದಲ ಪ್ರತಿಕ್ರಿಯೆ ಅವರನ್ನು ನಮಸ್ತೆಯಿಂದ ಸ್ವಾಗತಿಸುವುದು. ರಾಹುಲ್‌ ಗಾಂಧಿ ಬೆಚ್ಚಗಿನ ಹ್ಯಾಂಡ್‌ಶೇಕ್‌ ನೀಡಿ ಧನ್ಯವಾದ ತಿಳಿಸಿದರು. ಅವರು ವಿದ್ಯಾರ್ಥಿನಿಗೆ ಮೈಕ್ ಹಸ್ತಾಂತರಿಸಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು.

ಮುಕ್ತ ಮನಸ್ಸಿನಿಂದ ಚಿಂತಿಸುವುದು ವಿಜ್ಞಾನದ ಸಾರವಾಗಿದೆ. ಅದೇ ವಿಜ್ಞಾನವನ್ನು ಕಲಿಯುವ ಮೊದಲ ಹೆಜ್ಜೆಯಾಗಿದೆ. ನಿಮ್ಮ ಮನಸ್ಸು ಎಂದೂ ಮುಚ್ಚಬಾರದು. ಇತರರ ಮಾತುಗಳನ್ನು ಕೇಳಿಸಿಕೊಳ್ಳಬೇಕು. ಇತರರ ಅಭಿಪ್ರಾಯವನ್ನು ಗೌರವಿಸಬೇಕು. ಅವರ ಭಾಷೆ, ಧರ್ಮ, ಸಂಸ್ಕೃತಿಯನ್ನು ನಾವು ಗೌರವಿಸಬೇಕಾಗಿದೆ.

ವಿಡಿಯೋ ನೋಡಿ

“ನಮ್ಮ ದೇಶದಲ್ಲಿ ಈ ದಿನಗಳಲ್ಲಿ ನೀವು ಜನರನ್ನು ದ್ವೇಷಿಸಬಹುದು ಮತ್ತು ಅದೇ ಸಮಯದಲ್ಲಿ ವೈಜ್ಞಾನಿಕವಾಗಿ ಪ್ರಗತಿ ಹೊಂದಬಹುದು ಎಂಬ ಚರ್ಚೆ ಆರಂಭವಾಗಿದೆ. ಆದರೆ ಇದು ಸಂಪೂರ್ಣ ಅಸಂಬದ್ಧವಾಗಿದೆ” ಎಂದು ಅವರು ಹೇಳಿದರು. ಸಫಾ ಯಾವುದೇ ಗೊಂದಲವಿಲ್ಲದೇ ಸರಾಗವಾಗಿ ಮಲೆಯಾಳಂಗೆ ಅನುವಾದಿಸುತ್ತಿದ್ದರೆ ಅವಳ ಸಹಪಾಠಿಗಳು ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಿದ್ದರು.

ಇನ್ನೊಬ್ಬರ ಅಭಿಪ್ರಾಯವನ್ನು ಮುಕ್ತವಾಗಿ ಸ್ಪೀಕರಿಸಿವುದೇ ವಿಜ್ಞಾನವನ್ನು ಕಲಿಯುವ ಅತಿ ಪ್ರಮುಖ ಅಂಶವಾಗಿದೆ. ಉತ್ತರಕ್ಕಿಂತ ಹೆಚ್ಚಾಗಿ ಪ್ರಶ್ನೆ ಕೇಳುವುದು ಅತಿ ಮುಖ್ಯವಾಗಿದೆ. ಹಾಗಾಗಿ ಎಲ್ಲಾ ಶಿಕ್ಷಕರು ಮಕ್ಕಳು ಹೆಚ್ಚು ಪ್ರಶ್ನೆ ಕೇಳು ಅವಕಾಶ ಮಾಡಿಕೊಡಿ. ಅದರಲ್ಲಿ ತಪ್ಪು ಪ್ರಶ್ನೆ, ಒಳ್ಳೆ ಪ್ರಶ್ನೆ ಎಂಬುದಿರುವುದಿಲ್ಲ ಎಂದರು.

ಎಲ್ಲಾ ಮಕ್ಕಳು, ಅದರಲ್ಲಿಯೂ ಚಿಕ್ಕಮಕ್ಕಳು ಎಲ್ಲಾ ವಿಷಯದ ಬಗ್ಗೆ ಕೂತೂಹಲವುಳ್ಳವರಾಗಿತ್ತಾರೆ. ಅವರಲ್ಲಿ ದ್ವೇಷ ಇರುವುದಿಲ್ಲ. ಇದೇ ರೀತಿ ಕಲಿಯಬೇಕು ಎಂದರು.

ದ್ವೇಷ, ಅಸೂಯೆ ಮನೋಭಾವನೆ ವಿಜ್ಞಾನಕ್ಕೆ ವಿರುದ್ಧವಾಗಿದೆ. ನೀವು ಜೀವನದಲ್ಲಿ ಏನಾದರೂ ಆಗಿ. ಆದರೆ ದ್ವೇಷ, ಅಸೂಯೆಯನ್ನು ನಾವು ಕೊಲ್ಲದಿದ್ದರೆ ಮುಂದೆ ಬರಲು ಸಾಧ್ಯವಿಲ್ಲ. ಕೇರಳದ ಶಾಲೆಗಳು ದೇಶದಲ್ಲಿಯೇ ಉತ್ತಮವಾಗಿದ್ದರೂ ಇನ್ನು ಸಾಕಾಗುವುದಿಲ್ಲ. ಕಳೆದ ತಿಂಗಳು ಒಬ್ಬ ವಿದ್ಯಾರ್ಥಿ ಹಾವು ಕಚ್ಚಿ ಮರಣ ಹೊಂದಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಈ ರೀತಿಯಾಗಿ ಆಗದಂತೆ ತಡೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು. ಇದನ್ನು ಪಾರ್ಲಿಮೆಂಟ್‌ನಲ್ಲಿ ಚರ್ಚಿಸುವುದಾಗಿ ಹೇಳಿದರು.

ಭಾಷಣದ ನಂತರ ರಾಹುಲ್‌ ಗಾಂಧಿಯವರು “ಉತ್ತಮ ಭಾಷಾಂತರವನ್ನು ಮಾಡಿದ್ದಕ್ಕಾಗಿ” ಸಫಾಗೆ ಧನ್ಯವಾದ ಅರ್ಪಿಸಿದರು. ಕೇರಳದ ಸ್ಪೂರ್ತಿ ಕ್ರಿಯೆಯಲ್ಲಿದೆ ಎಂದು ರಾಹುಲ್‌ ಟ್ವೀಟ್‌ ಮಾಡಿದ್ದಾರೆ. ರೋಮಾಂಚನಗೊಂಡ ವಿದ್ಯಾರ್ಥಿನಿಯು ಇದು ತನ್ನ ಜೀವನದ ಅತ್ಯುತ್ತಮ ಕ್ಷಣ ಎಂದು ಹೇಳಿದ್ದಾಳೆ.

“ಇದು ನನ್ನ ಜೀವನದ ಅತ್ಯುತ್ತಮ ಕ್ಷಣ. ನಾನೇ ಖುದ್ದು ಅನುವಾದ ಮಾಡಬೇಕು ಎಂಬುದರ ಬಗ್ಗೆ ಮಾತ್ರ ಕಾಳಜಿ ವಹಿಸಿದ್ದೆ. ಯಾವುದೇ ಕಾರಣಕ್ಕೂ ಗೊಂದಲ ಮಾಡಿಕೊಳ್ಳಬಾರದೆಂದು ನಿರ್ಧರಿಸಿದ್ದೆ. ನಾನು ವೇದಿಕೆಗೆ ಹೋಗುವಾಗ ನಡುಗುತ್ತಿದ್ದೆ. ಆದರೆ ರಾಹುಲ್ ಗಾಂಧಿಯವರು ಶಾಂತಗೊಳಿಸಿದರು. ಅವರು ತುಂಬಾ ಸೌಮ್ಯ ಸ್ವಭಾವದರು” ಎಂದು ಆಕೆ ಎನ್‌ಡಿಟಿವಿಗೆ ತಿಳಿಸಿದ್ದಾಳೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...