Homeಕರ್ನಾಟಕಸಂಜೆ 5 ಗಂಟೆಯೊಳಗೆ ಸರ್ಕಾರ ರೈತಪರ ನಿರ್ಣಯ ತೆಗೆದುಕೊಳ್ಳದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ: ಬಡಗಲಪುರ ನಾಗೇಂದ್ರ

ಸಂಜೆ 5 ಗಂಟೆಯೊಳಗೆ ಸರ್ಕಾರ ರೈತಪರ ನಿರ್ಣಯ ತೆಗೆದುಕೊಳ್ಳದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ: ಬಡಗಲಪುರ ನಾಗೇಂದ್ರ

- Advertisement -
- Advertisement -

ಭೂಮಿ ತಂಟೆಗೆ ಬಂದರೆ ಯಾವ ಸರ್ಕಾರವೂ ಉಳಿಯುವುದಿಲ್ಲ. ರಾಜ್ಯ ಸರ್ಕಾರಕ್ಕೆ ಇಂದು ಸಂಜೆ 5 ಗಂಟೆಯವರೆಗೆ ಗುಡುವು ನೀಡುತ್ತೇವೆ. ಈ ಹಿಂದೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಇದ್ದರೆ, ನಮ್ಮ ಹೋರಾಟದ ಸ್ವರೂಪರ ಬದಲಾಗಲಿದೆ. ಎಂಬಿ ಪಾಟೀಲರ ಕುರ್ಚಿ ಮುರಿಯಲಿದೆ ಎಂದು ರಾಜ್ಯ ರೈತ ಸಂಘದ ನಾಯಕ ಬಡಗಲಪುರ ನಾಗೇಂದ್ರ ಹೇಳಿದರು.

ರೈತರ ಭೂ ಸ್ವಾಧೀನ ವಿರೋಧಿಸಿ ದೇವನಹಳ್ಳಿ ಹಳೆ ಬಸ್‌ ನಿಲ್ದಾಣದ ಬಳಿ ಹಮ್ಮಿಕೊಂಡಿರುವ ‘ದೇವನಹಳ್ಳಿ ಚಲೋ’ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, “13 ಹಳ್ಳಿಗಳ ಜನರು ಈ ಸರ್ಕಾರದ ಒಡೆದಾಳುವ ನೀತಿಯ ವಿರುದ್ಧ ತಮ್ಮ ಧೃಡತೆಯನ್ನು ಪ್ರತಿಜ್ಞೆ ಮೂಲಕ ಸ್ಪಷ್ಟ ಸಂದೇಶ ಕಳಿಸಿದ್ದೇವೆ” ಎಂದರು.

ಕಾರ್ಖಾನೆಗಳಿಗೆ ಭೂಮಿ ಬೇಕು ನಿಜ. ಇಲ್ಲಿರುವವರು ಅಭಿವೃದ್ಧಿ ವಿರೋಧಿಗಳಲ್ಲ. ಆದರೆ, ಯಾವ ರೀತಿಯ ಅಭಿವೃದ್ಧಿ ಎಂದು ಯೋಚಿಸಬೇಕಿದೆ. ಕೆಲವೇ ಕೆಲವು ವ್ಯಕ್ತಿಗಳನ್ನು ಶ್ರೀಮಂತರನ್ನಾಗಿ ಮಾಡುವ ನೀತಿ ವಿರುದ್ಧ ನಮ್ಮ ಹೋರಾಟ. ರೈತರ ಭೂ ಸ್ವಾಧೀನದ ವಿರುದ್ದ ಶೇ.77ರಷ್ಟು ಜನರು ತಮ್ಮ ಅಸಮ್ಮತಿಯನ್ನು ಸೂಚಿಸಿ ಸರ್ಕಾರಕ್ಕೆ ಮನವಿಪತ್ರ ನೀಡಿದ್ದಾರೆ ಎಂದು ಹೇಳಿದರು.

ವಿಶ್ವವಾಣಿಜ್ಯ ಒಪ್ಪಂದದ ಬಳಿಕ ಆಡಳಿತ ನಡೆಸುವವರ ಕಣ್ಣು ದುಡಿಯುವ ಜನರ ಮೇಲಿದೆ. ಶೇಕಡ 60ರಷ್ಟಿರುವ ರೈತರು ಶೇಕಡ 60ರಷ್ಟು ಉದ್ಯೋಗ ಸೃಷ್ಟಿಸಿದ್ದೇವೆ. ನಮ್ಮನ್ನು ಶೇಕಡ 20ಕ್ಕೆ ಇಳಿಸುವ ಹುನ್ನಾರವನ್ನು ಸರ್ಕಾರ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಶ್ವ ವಾಣಿಜ್ಯ ಒಪ್ಪಂದವನ್ನು ಆಗಿನ ಬಿಜೆಪಿ ನಾಯಕರಾಗಿದ್ದ ಮುರಳಿ ಮನೋಹರ್ ಜೋಶಿ ಮತ್ತು ಅಡ್ವಾಣಿ ವಿರೋಧಿಸಿದ್ದರು. ಕಾಂಗ್ರೆಸ್‌ ಸರ್ಕಾರದ ನೀತಿಯನ್ನು ಬಿಜೆಪಿ ವಿಮಾನಕ್ಕಿಂತ ಹೆಚ್ಚಿನ ವೇಗದಲ್ಲಿ ಜಾರಿ ಮಾಡಿತು. ಅದರ ಭಾಗವಾಗಿ ಬೆಂಗಳೂರು ಸುತ್ತಮುತ್ತಲಿನ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿದೆ. ಅದಕ್ಕೆ ಇಲ್ಲಿನ ಕಾಂಗ್ರೆಸ್ ಸರ್ಕಾರ  ಬೆಂಬಲ ನೀಡುತ್ತಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ವಿಪಕ್ಷ ನಾಯಕರಾಗಿದ್ದಾಗ ನಿಮ್ಮ ಹೋರಾಟಕ್ಕೆ ನೂರಕ್ಕೆ ನೂರು ಬೆಂಬಲ ಎಂದು ಹೇಳಿ, ಬಲಾತ್ಕಾರದ ಭೂ ಸ್ವಾಧೀನ ವಿರೋಧಿಸಿದ್ದರು. ಸರ್ಕಾರ ಅಧಿಕಾರಕ್ಕೆ ಬಂದರೆ ಅಧಿಸೂಚನೆ ರದ್ದು ಮಾಡುವುದಾಗಿ ಹೇಳಿದ್ದರು. ಆದರೆ, ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ಸರ್ಕಾರ ರೈತರ ಬದುಕಿನ ಜೊತೆಗೆ ಚೆಲ್ಲಾಟ ಆಡುತ್ತಿದೆ ಎಂದು ಬೇಸರ ಕಿಡಿಕಾರಿದರು.

ಸಚಿವರಾದ ಎಂ.ಬಿ ಪಾಟೀಲ್ ಮತ್ತು ಕೆ.ಎಚ್ ಮುನಿಯಪ್ಪ ಸುದ್ದಿಗೋಷ್ಠಿ ನಡೆಸಿ 493 ಎಕರೆ ಭೂಮಿಯನ್ನು ಭೂ ಸ್ವಾಧೀನದಿಂದ ಕೈಬಿಟ್ಟು ಉಳಿದ ಭೂಮಿ ಸ್ವಾಧೀನ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಅವರು ಹೊಸತೇನೂ ಹೇಳಿಲ್ಲ. ರೈತರಿಗೆ ಅಭಿವೃದ್ಧಿಪಡಿಸಿದ ಭೂಮಿಯನ್ನೂ ಕೊಡುತ್ತೇವೆ ಎಂದು ಹೇಳಿದ್ದಾರೆ. ರೈತಕುಲವನ್ನು ನಿರ್ವಂಶ ಮಾಡಲು ಸರ್ಕಾರ ನಿರ್ಧರಿಸಿದಂತಿದೆ ಎಂದರು.

ಹೈಕೋರ್ಟ್‌ ಆದೇಶ ಇದೆ ಎಂದು ಹೇಳಿ ಪ್ರತಿಭಟಿಸದಂತೆ ಮನವೊಲಿಸಲು ಮುಂದಾದರು. ನಾವು ಜನವಿರೋಧಿ ಕಾನೂನು ಉಲ್ಲಂಘಿಸುತ್ತೇವೆ ಎಂದು ಹೇಳಿದ್ದೇವೆ. ನಮ್ಮ ಹೋರಾಟವನ್ನು ನಾವು ಗೆದ್ದೇ ಗೆಲ್ಲುತ್ತೇವೆ ಎಂದರು.

LIVE UPDATES ‘ದೇವನಹಳ್ಳಿ ಚಲೋ’ | ‘ಪ್ರಾಣ ಕೊಟ್ಟೇವು, ಭೂಮಿ ಬಿಡೆವು’ | ತಮ್ಮ ಭೂಮಿಯ ಮಣ್ಣಲ್ಲಿ ಗಿಡನೆಟ್ಟು ಸಂಕಲ್ಪ ಮಾಡಿದ ರೈತ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...