Homeಕರ್ನಾಟಕದೇವನಹಳ್ಳಿ ಚಲೋ! ಕಾರ್ಯಕ್ರಮ ಮಾಡಿ ಮನೆಗೆ ಹೋಗುವುದಿಲ್ಲ, ಸರಕಾರ ನ್ಯಾಯ ಕೊಡುವವರೆಗೂ ಇಲ್ಲೇ ಇರುತ್ತೇವೆ: ಕಾರಳ್ಳಿ...

ದೇವನಹಳ್ಳಿ ಚಲೋ! ಕಾರ್ಯಕ್ರಮ ಮಾಡಿ ಮನೆಗೆ ಹೋಗುವುದಿಲ್ಲ, ಸರಕಾರ ನ್ಯಾಯ ಕೊಡುವವರೆಗೂ ಇಲ್ಲೇ ಇರುತ್ತೇವೆ: ಕಾರಳ್ಳಿ ಶ್ರೀನಿವಾಸ್

- Advertisement -
- Advertisement -

ದೇವನಹಳ್ಳಿಯು ಟಿಪ್ಪು ಸುಲ್ತಾನ್ ಹಾಗೂ ಕೆಂಪೇಗೌಡರ ಜನ್ಮಸ್ಥಳ. ಈ ಇಬ್ಬರೂ ರೈತರ ಬದುಕಿಗಾಗಿ, ಈ ನೆಲಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟವರು. ಇಂತಹ ಸ್ಥಳದ ಫಲವತ್ತಾದ ಭೂಮಿಯನ್ನು ಸರ್ಕಾರ ಕಬಳಿಸುವುದನ್ನು ವಿರೋಧಿಸಿ, ಕಳೆದ ಮೂರೂವರೆ ವರ್ಷದಿಂದ ಅನೇಕ ರೀತಿಯ ಹೋರಾಟವನ್ನು ನಾವು ಮಾಡಿದ್ದೇವೆ ಎಂದು ಕಾರಳ್ಳಿ ಶ್ರೀನಿವಾಸ್ ಹೇಳಿದರು.

ಅವರು ಇಂದು ದೇವನಹಳ್ಳಿ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿ, ಇಲ್ಲಿನ ಈ ಚಳವಳಿಯನ್ನು ಹೋರಾಟಗಾರರು ಕಟ್ಟಿದ್ದಲ್ಲ, ಇದು ಇಲ್ಲಿನ ಸಂತ್ರಸ್ತ ರೈತರು ಕಟ್ಟಿದ ಹೋರಾಟವಾಗಿದೆ. ಈ ಹೋರಾಟವನ್ನು ಎಲ್ಲ ಜಾತಿಯ ಜನರು ಸೇರಿ ಕಟ್ಟಿದ್ದಾರೆ. ಇದೊಂದು ರಾಜ್ಯದಲ್ಲಿ ಮಾದರಿ ಹೋರಾಟವಾಗಿದೆ ಎಂದರು.

ಇಡೀ ದೇಶದಲ್ಲಿ ನಮಗೆ ಹೋರಾಟದ ಅನೇಕ ಮಾದರಿಗಳಿವೆ. ಇದು ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು ಕಟ್ಟಿದ ಮತ್ತೊಂದು ಮಾದರಿ ಹೋರಾಟ. ಈ ಹೋರಾಟಕ್ಕೆ ದೇಶದ ಅನೇಕ ನಾಯಕರು, ಸಾಹಿತಿಗಳು, ಕಲಾವಿದರು ನಮಗೆ ಬೆಂಬಲ ನೀಡಿದ್ದಾರೆ ಎಂದು ಸಭೆಯಲ್ಲಿ ಸ್ಮರಿಸಿದರು.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾವು ಅನೇಕರು ಬಂಧನಕ್ಕೊಳಗಾಗಿದ್ದು ಮಾತ್ರವಲ್ಲದೆ ಪೊಲೀಸರಿಂದ ಲಾಠಿ ಬೂಟಿನ ಒದೆತ ತಿಂದಿದ್ದೇವೆ. ಅ ಸಂದರ್ಭದಲ್ಲಿ ನಾವು ಅನೇಕರು ಕೈಮುರಿದುಕೊಂಡು, ಕಣ್ಣುಕಳೆದುಕೊಂಡಾಗ ಆಗಿನ ಕಾಂಗ್ರೆಸ್ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಫ್ರೀಡಂಪಾರ್ಕಿನಲ್ಲಿ ನಮಗೆ ಬೆಂಬಲ ನೀಡಿ ಮಾತನಾಡಿದ್ದರು ಎಂದು ಹೇಳಿದರು.

ಈಗ ಸರ್ಕಾರ ಬದಲಾಗಿದೆ. ಈ ಕಾಂಗ್ರೆಸ್‌ ಸರಕಾರದ ಅನೇಕ ಮಂತ್ರಿಗಳು ಬಿಜೆಪಿ ಸರಕಾರವಿದ್ದಾಗ ನಾವು ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಅನೇಕ ಬಾರಿ ಬಂದಿದ್ದಾರೆ. ಪ್ರತಿ ಸಲ ನಾನು ರೈತರಪರ, ಭೂಮಿ ಸ್ವಾಧೀನ ಮಾಡಿಕೊಳ್ಳುವುದಕ್ಕೆ ಬಿಡುವುದಿಲ್ಲ ಎಂದು ಇಂದಿಗೂ ಹೇಳುತ್ತಿರುವ ಎಂಬಿ ಪಾಟೀಲ್ ಅವರು ಈಗ ರೈತರನ್ನು ಕಂಡರೆ ಸಿಡಿಮಿಡಿಗೊಳ್ಳುತ್ತಿದ್ದಾರೆ. ಇದು ವಿಪರ್ಯಾಸ ಎಂದು ಅವರು ತಿಳಿಸಿದರು.

ಬಿಜೆಪಿ ನೇರವಾಗಿ ನಮಗೆ ಚೂರಿ ಹಾಕಿದರೆ, ಕಾಂಗ್ರೆಸ್ ಹಿಂದಿನಿಂದ ಚೂರಿ ಹಾಕುತ್ತಿದೆ. ಸರ್ಕಾರ ಬದಲಾದರೂ ಅವರ ನೀತಿಗಳ ಮಾತ್ರ ಬದಲಾಗಿಲ್ಲ. ಇದೇ ಸರ್ಕಾರ ಈಗ 10 ಹಳ್ಳಿಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಹಲವು ಸುತ್ತಿನ ಸಭೆಗಳಲ್ಲಿ ಮುಂದಿನ ಸಭೆಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದರು. ಪ್ರತಿನಿತ್ಯ ಸಮಾಜವಾದ, ದಲಿತರಪರ, ರೈತರ ಪರವಾದ ಮಾತುಗಳನ್ನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

13 ಹಳ್ಳಿಗಳ ಜನಗಳ ಕೈಯಲ್ಲಿದ್ದ ಹೋರಾಟವನ್ನು ಇಡೀ ರಾಜ್ಯದ ಜನಗಳ ಹೆಗಲಿಗೆ ಹಾಕುತ್ತಿದ್ದೇವೆ. ಈ ಹೋರಾಟ ಸೋತರೆ ಈ ನಾಡಿನ ದಲಿತ, ಮಹಿಳಾ, ಕಾರ್ಮಿಕ ಹಾಗೂ ದುಡಿಯುವ ಜನರ ಸೋಲು. ಆದರೆ ನಮಗೆ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಈ ದೇಶದ ಜನಚಳವಳಿಗೆ ಸೋಲು ಇಲ್ಲ. ಆಳುವ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟಗಾರರು ಹೋರಾಟ ಮಾಡುತ್ತಲೇ ಬಂದಿದ್ದಾರೆ. ಇಲ್ಲಿಗೆ ಆಗಮಿಸಿರುವ ರಾಜ್ಯದ ಜನರು ಹೋರಾಟವನ್ನು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು.

ನಾವು ಇಲ್ಲಿ ಕಾರ್ಯಕ್ರಮ ಮಾಡಿ ಮನೆಗೆ ಹೋಗುವುದಿಲ್ಲ, ಸರ್ಕಾರ ನಮಗೆ ನ್ಯಾಯ ಕೊಡುವ ತೀರ್ಮಾನಕ್ಕೆ ಬರುವವರೆಗೂ ಇಲ್ಲೇ ಇರುತ್ತೇವೆ. ನಾವು ಊರಲ್ಲಿ ಇರಬೇಕು ಅಥವಾ ಜೈಲಿನಲ್ಲಿ ಇರಬೇಕು. ನಿರ್ಧಾರ ಸರ್ಕಾರಕ್ಕೆ ಬಿಟ್ಟದ್ದು ಎಂದರು.

Emergency @50 | ಪ್ರಜಾಪ್ರಭುತ್ವ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...