Homeಕರ್ನಾಟಕದೇವನಹಳ್ಳಿ ಚಲೋ! ಕಾರ್ಯಕ್ರಮ ಮಾಡಿ ಮನೆಗೆ ಹೋಗುವುದಿಲ್ಲ, ಸರಕಾರ ನ್ಯಾಯ ಕೊಡುವವರೆಗೂ ಇಲ್ಲೇ ಇರುತ್ತೇವೆ: ಕಾರಳ್ಳಿ...

ದೇವನಹಳ್ಳಿ ಚಲೋ! ಕಾರ್ಯಕ್ರಮ ಮಾಡಿ ಮನೆಗೆ ಹೋಗುವುದಿಲ್ಲ, ಸರಕಾರ ನ್ಯಾಯ ಕೊಡುವವರೆಗೂ ಇಲ್ಲೇ ಇರುತ್ತೇವೆ: ಕಾರಳ್ಳಿ ಶ್ರೀನಿವಾಸ್

- Advertisement -
- Advertisement -

ದೇವನಹಳ್ಳಿಯು ಟಿಪ್ಪು ಸುಲ್ತಾನ್ ಹಾಗೂ ಕೆಂಪೇಗೌಡರ ಜನ್ಮಸ್ಥಳ. ಈ ಇಬ್ಬರೂ ರೈತರ ಬದುಕಿಗಾಗಿ, ಈ ನೆಲಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟವರು. ಇಂತಹ ಸ್ಥಳದ ಫಲವತ್ತಾದ ಭೂಮಿಯನ್ನು ಸರ್ಕಾರ ಕಬಳಿಸುವುದನ್ನು ವಿರೋಧಿಸಿ, ಕಳೆದ ಮೂರೂವರೆ ವರ್ಷದಿಂದ ಅನೇಕ ರೀತಿಯ ಹೋರಾಟವನ್ನು ನಾವು ಮಾಡಿದ್ದೇವೆ ಎಂದು ಕಾರಳ್ಳಿ ಶ್ರೀನಿವಾಸ್ ಹೇಳಿದರು.

ಅವರು ಇಂದು ದೇವನಹಳ್ಳಿ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿ, ಇಲ್ಲಿನ ಈ ಚಳವಳಿಯನ್ನು ಹೋರಾಟಗಾರರು ಕಟ್ಟಿದ್ದಲ್ಲ, ಇದು ಇಲ್ಲಿನ ಸಂತ್ರಸ್ತ ರೈತರು ಕಟ್ಟಿದ ಹೋರಾಟವಾಗಿದೆ. ಈ ಹೋರಾಟವನ್ನು ಎಲ್ಲ ಜಾತಿಯ ಜನರು ಸೇರಿ ಕಟ್ಟಿದ್ದಾರೆ. ಇದೊಂದು ರಾಜ್ಯದಲ್ಲಿ ಮಾದರಿ ಹೋರಾಟವಾಗಿದೆ ಎಂದರು.

ಇಡೀ ದೇಶದಲ್ಲಿ ನಮಗೆ ಹೋರಾಟದ ಅನೇಕ ಮಾದರಿಗಳಿವೆ. ಇದು ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು ಕಟ್ಟಿದ ಮತ್ತೊಂದು ಮಾದರಿ ಹೋರಾಟ. ಈ ಹೋರಾಟಕ್ಕೆ ದೇಶದ ಅನೇಕ ನಾಯಕರು, ಸಾಹಿತಿಗಳು, ಕಲಾವಿದರು ನಮಗೆ ಬೆಂಬಲ ನೀಡಿದ್ದಾರೆ ಎಂದು ಸಭೆಯಲ್ಲಿ ಸ್ಮರಿಸಿದರು.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾವು ಅನೇಕರು ಬಂಧನಕ್ಕೊಳಗಾಗಿದ್ದು ಮಾತ್ರವಲ್ಲದೆ ಪೊಲೀಸರಿಂದ ಲಾಠಿ ಬೂಟಿನ ಒದೆತ ತಿಂದಿದ್ದೇವೆ. ಅ ಸಂದರ್ಭದಲ್ಲಿ ನಾವು ಅನೇಕರು ಕೈಮುರಿದುಕೊಂಡು, ಕಣ್ಣುಕಳೆದುಕೊಂಡಾಗ ಆಗಿನ ಕಾಂಗ್ರೆಸ್ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಫ್ರೀಡಂಪಾರ್ಕಿನಲ್ಲಿ ನಮಗೆ ಬೆಂಬಲ ನೀಡಿ ಮಾತನಾಡಿದ್ದರು ಎಂದು ಹೇಳಿದರು.

ಈಗ ಸರ್ಕಾರ ಬದಲಾಗಿದೆ. ಈ ಕಾಂಗ್ರೆಸ್‌ ಸರಕಾರದ ಅನೇಕ ಮಂತ್ರಿಗಳು ಬಿಜೆಪಿ ಸರಕಾರವಿದ್ದಾಗ ನಾವು ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಅನೇಕ ಬಾರಿ ಬಂದಿದ್ದಾರೆ. ಪ್ರತಿ ಸಲ ನಾನು ರೈತರಪರ, ಭೂಮಿ ಸ್ವಾಧೀನ ಮಾಡಿಕೊಳ್ಳುವುದಕ್ಕೆ ಬಿಡುವುದಿಲ್ಲ ಎಂದು ಇಂದಿಗೂ ಹೇಳುತ್ತಿರುವ ಎಂಬಿ ಪಾಟೀಲ್ ಅವರು ಈಗ ರೈತರನ್ನು ಕಂಡರೆ ಸಿಡಿಮಿಡಿಗೊಳ್ಳುತ್ತಿದ್ದಾರೆ. ಇದು ವಿಪರ್ಯಾಸ ಎಂದು ಅವರು ತಿಳಿಸಿದರು.

ಬಿಜೆಪಿ ನೇರವಾಗಿ ನಮಗೆ ಚೂರಿ ಹಾಕಿದರೆ, ಕಾಂಗ್ರೆಸ್ ಹಿಂದಿನಿಂದ ಚೂರಿ ಹಾಕುತ್ತಿದೆ. ಸರ್ಕಾರ ಬದಲಾದರೂ ಅವರ ನೀತಿಗಳ ಮಾತ್ರ ಬದಲಾಗಿಲ್ಲ. ಇದೇ ಸರ್ಕಾರ ಈಗ 10 ಹಳ್ಳಿಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಹಲವು ಸುತ್ತಿನ ಸಭೆಗಳಲ್ಲಿ ಮುಂದಿನ ಸಭೆಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದರು. ಪ್ರತಿನಿತ್ಯ ಸಮಾಜವಾದ, ದಲಿತರಪರ, ರೈತರ ಪರವಾದ ಮಾತುಗಳನ್ನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

13 ಹಳ್ಳಿಗಳ ಜನಗಳ ಕೈಯಲ್ಲಿದ್ದ ಹೋರಾಟವನ್ನು ಇಡೀ ರಾಜ್ಯದ ಜನಗಳ ಹೆಗಲಿಗೆ ಹಾಕುತ್ತಿದ್ದೇವೆ. ಈ ಹೋರಾಟ ಸೋತರೆ ಈ ನಾಡಿನ ದಲಿತ, ಮಹಿಳಾ, ಕಾರ್ಮಿಕ ಹಾಗೂ ದುಡಿಯುವ ಜನರ ಸೋಲು. ಆದರೆ ನಮಗೆ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಈ ದೇಶದ ಜನಚಳವಳಿಗೆ ಸೋಲು ಇಲ್ಲ. ಆಳುವ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟಗಾರರು ಹೋರಾಟ ಮಾಡುತ್ತಲೇ ಬಂದಿದ್ದಾರೆ. ಇಲ್ಲಿಗೆ ಆಗಮಿಸಿರುವ ರಾಜ್ಯದ ಜನರು ಹೋರಾಟವನ್ನು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು.

ನಾವು ಇಲ್ಲಿ ಕಾರ್ಯಕ್ರಮ ಮಾಡಿ ಮನೆಗೆ ಹೋಗುವುದಿಲ್ಲ, ಸರ್ಕಾರ ನಮಗೆ ನ್ಯಾಯ ಕೊಡುವ ತೀರ್ಮಾನಕ್ಕೆ ಬರುವವರೆಗೂ ಇಲ್ಲೇ ಇರುತ್ತೇವೆ. ನಾವು ಊರಲ್ಲಿ ಇರಬೇಕು ಅಥವಾ ಜೈಲಿನಲ್ಲಿ ಇರಬೇಕು. ನಿರ್ಧಾರ ಸರ್ಕಾರಕ್ಕೆ ಬಿಟ್ಟದ್ದು ಎಂದರು.

Emergency @50 | ಪ್ರಜಾಪ್ರಭುತ್ವ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...