Homeಕರ್ನಾಟಕದೇವನಹಳ್ಳಿ ಚಲೋ! ಸಂತ್ರಸ್ತ ರೈತರಿಂದ ಸರ್ಕಾರಕ್ಕೆ ಫೈನಲ್‌ ನೋಟೀಸ್‌

ದೇವನಹಳ್ಳಿ ಚಲೋ! ಸಂತ್ರಸ್ತ ರೈತರಿಂದ ಸರ್ಕಾರಕ್ಕೆ ಫೈನಲ್‌ ನೋಟೀಸ್‌

- Advertisement -
- Advertisement -

ದೇವನಹಳ್ಳಿ: ನಮ್ಮ ಪಾಡಿಗೆ ನಮ್ಮನ್ನು ಬದುಕಲು ಬಿಡಿ. ಇಲ್ಲವೇ, ಕುಟುಂಬ ಸಮೇತ ನಮ್ಮನ್ನು ಜೈಲಿಗೆ ಹಾಕಿ ಎಂಬ ಶಿರೋನಾಮೆಯೊಂದಿಗೆ ಚನ್ನರಾಯಪಟ್ಟಣದ ಸಂತ್ರಸ್ತ ರೈತರೇ ಸರಕಾರಕ್ಕೆ ಫೈನಲ್ ನೋಟಿಸ್ ನೀಡಿದ್ದಾರೆ.

ಇಂದು ದೇವನಹಳ್ಳಿಯಲ್ಲಿ ನಡೆಯುತ್ತಿರುವ ದೇವನಹಳ್ಳಿ ಚಲೋ ಕಾರ್ಯಕ್ರಮದಲ್ಲಿ ಸಂತ್ರಸ್ತ ರೈತರು ಮುಖ್ಯಮಂತ್ರಿಗಳ ಮೂಲಕ ಸರಕಾರಕ್ಕೆ ತಮ್ಮ ಫೈನಲ್ ನೋಟಿಸ್ ನೀಡಿದ್ದಾರೆ.

ಕಳೆದ 1178 ದಿನಗಳಿಂದ ನಾವು ಅವಡುಗಚ್ಚಿ ಹೋರಾಟ ನಡೆಸಿದ್ದೇವೆ. ಶುದ್ಧ ಮನಸ್ಸಿನಿಂದ ಈ ಹೋರಾಟ ನಡೆಸಿದ್ದೇವೆ. ಎಲ್ಲಾ ಜಾತಿಯ ಜನ ಅಣ್ಣ ತಮ್ಮಂದಿರಂತೆ, ಅಕ್ಕತಂಗಿಯರಂತೆ ಜೊತೆಗೂಡಿ ಹೋರಾಡಿದ್ದೇವೆ. ಅಧಿಕಾರಸ್ಥರ ಮನೆಮನೆಗೆ ಅಲೆದಿದ್ದೇವೆ. ನಮ್ಮ ತಾಳ್ಮೆಗೂ ಒಂದು ಮಿತಿ ಇದೆ. ಕಾಯುವಿಕೆಗೂ ಒಂದು ಕೊನೆ ಇದೆ. ಈ ಹಗ್ಗಜಗ್ಗಾಟ ಸಾಕು. ಒಂದು ಅಂತಿಮ ಇತ್ಯಾರ್ಥ ಆಗಬೇಕು. ನೀವೇ ಈ ತೀರ್ಮಾನ ತೆಗೆದುಕೊಳ್ಳಬೇಕು. ಒಂದೋ ನಮ್ಮನ್ನು ʼನಮ್ಮ ಪಾಡಿಗೆ ಬದುಕಲು ಬಿಡಬೇಕುʼ ಅಥವಾ ಕುಟುಂಬ ಸಮೇತ ನಮ್ಮನ್ನು ಶಾಶ್ವತವಾಗಿ ಜೈಲಿಗೆ ಕಳಿಸಿ ʼಕಂಪನಿಗಳೇ ನಮಗೆ ಮುಖ್ಯʼ ಎಂದು ನೀವು ಘೋಷಿಸಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದ್ದಾರೆ.

ಇಂದು ಮತ್ತೊಮ್ಮೆ ಕೆಲವು ಕಹಿ ಸತ್ಯಗಳನ್ನು ನಿಮಗೆ ನೆನಪಿಸಲು ಬಯಸುತ್ತೇವೆ. 2022ರ ಜನವರಿಯಲ್ಲಿ ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ನಮ್ಮನ್ನು ಒಕ್ಕಲೆಬ್ಬಿಸಿ, ಚನ್ನರಾಯಪಟ್ಟಣದ 13 ಹಳ್ಳಿಗಳಿಗೆ ಸೇರಿದ, 1777 ಎಕರೆ ಭೂಮಿಯನ್ನು ಕಂಪನಿಗಳಿಗೆ ಮಾರುವ ತೀರ್ಮಾನ ಮಾಡಿ ಅಧಿಸೂಚನೆ ನೀಡಿತ್ತು. ಈ ಭೂಮಿಯಲ್ಲಿ 800 ಕುಟುಂಬದ ಜನ ವಾಸಿಸುತ್ತಿದ್ದೇವೆ. ಬಹುತೇಕರು ಕೃಷಿಯನ್ನೇ ನಂಬಿ ಬದುಕಿದ್ದೇವೆ. ನಮ್ಮ ಪೂರ್ವಿಕರ ಸಮಾಧಿಗಳು ಈ ಭೂಮಿಗಳಲ್ಲಿವೆ. ನಮ್ಮೆಲ್ಲಾ ಜೀವಮಾನದ ದುಡಿಮೆಯನ್ನು ಇದಕ್ಕೆ ಸುರಿದು ನೀರಾವರಿ ಮಾಡಿಕೊಂಡಿದ್ದೇವೆ. ತೋಟಗಳನ್ನು ಬೆಳೆಸಿದ್ದೇವೆ. ಹೈನುಗಾರಿಕೆ, ಕೋಳಿಸಾಗಣಿಗೆ ಮುಂತಾದ ಕೃಷಿ ಸಂಬಂಧಿ ಚಟುವಟಿಕೆಗಳನ್ನು ಮಾಡಿಕೊಂಡು ಕಷ್ಟವೋ ನಷ್ಟವೋ ನಮ್ಮ ಕುಟುಂಬಗಳ ಜೊತೆ, ಬಂಧುಬಳಗದ ಜೊತೆ ಬದುಕುತ್ತಿದ್ದೇವೆ. ಈ ಬದುಕನ್ನು ಕಳೆದುಕೊಳ್ಳಲು ನಾವು ಸಿದ್ಧರಿಲ್ಲ. ಏಕೆಂದರೆ ನಮ್ಮ ಸುತ್ತಮುತ್ತವೇ ಈಗಾಗಲೇ 6,000 ಎಕರೆ ಭೂಮಿಯನ್ನು ಏರ್‌ ಪೋರ್ಟ್‌ ಮತ್ತು ಕಂಪನಿಗಳಿಗಾಗಿ ವಶಪಡಿಸಿಕೊಳ್ಳಲಾಗಿದೆ. ಭೂಮಿ ಕಳೆದುಕೊಂಡವರ ಕತೆ ಏನಾಗಿದೆ ಎಂಬುದನ್ನು ಕಣ್ಣಾರೆ ಕಂಡಿದ್ದೇವೆ. ಅನಾಥರಂತೆ ಚೆಲ್ಲಾಪಿಲ್ಲಿಯಾಗಿ ಪಡಬಾರದ ಕಷ್ಟಪಡುತ್ತಾ ಅವರು ಅಲೆಯುತ್ತಿದ್ದಾರೆ. ಈ ಪರಿಸ್ಥಿತಿಯನ್ನು ನಮ್ಮ ಕುಟುಂಬಗಳಿಗೂ ತಂದುಕೊಳ್ಳಲು ನಾವು ಸಿದ್ಧರಿಲ್ಲ, ನಮ್ಮ ಮಕ್ಕಳ ಭವಿಷ್ಯವನ್ನು ಬಲಿಕೊಡಲು ನಾವು ಸಿದ್ಧರಿಲ್ಲ. ಹಾಗಾಗಿಯೇ ನಾವು ನಮ್ಮ ಬದುಕನ್ನು ಕಾಪಾಡಿಕೊಳ್ಳಲು ಉಸಿರು ಹಿಡಿದು ಹೋರಾಡುತ್ತಾ ಬಂದಿದ್ದೇವೆ ಎಂದು ಫೈನಲ್ ನೋಟಿಸ್ ನಲ್ಲಿ ಸರಕಾರಕ್ಕೆ ಸಂತ್ರಸ್ತ ರೈತರು ತಿಳಿಸಿದ್ದಾರೆ.

ನಾವು ಭೂಮಿಯನ್ನು ಬಿಡುವುದಿಲ್ಲ ಎಂದು ಪಟ್ಟು ಹಿಡಿದಾಗ ಭೂಸ್ವಾಧೀನ ಪ್ರಕ್ರಿಯೆಯ ಕಟ್ಟಳೆಯಾಗಿ ಜನಾಭಿಪ್ರಾಯ ಸಂಗ್ರಹಿಸಲೇಬೇಕಿತ್ತು. 2022ರ ಮೇ ತಿಂಗಳಿನಲ್ಲಿ ಜನಾಭಿಪ್ರಾಯ ಸಂಗ್ರಹಣೆ ನಡೆಯಿತು. KIADB ಅಧಿಕಾರಿಗಳೇ ಚನ್ನರಾಯಪಟ್ಟಣದಲ್ಲಿ ಟೇಬಲ್‌ ಹಾಕಿಕೊಂಡು ಜನಾಭಿಪ್ರಾಯ ಸಂಗ್ರಹಿಸಿದರು. ಶೇ 80 ಭಾಗದಷ್ಟು ಜನ ಭೂಮಿ ಕೊಡುವುದಿಲ್ಲ ಎಂದು ಬರೆದುಕೊಟ್ಟೆವು. ಇದರ ಅರ್ಥ ಇನ್ನು ಶೇ 20 ಭಾಗದಷ್ಟು ಜನ ಭೂಮಿ ಕೊಡಲು ಒಪ್ಪಿದರು ಎಂದೂ ಅಲ್ಲ. ಅವರು ಭೂಮಿ ಇಲ್ಲಿದ್ದರೂ ದೂರದೂರದಲ್ಲಿ ಬದುಕುತ್ತಿರುವವರು ಅವರು ತಮ್ಮ ಅಭಿಪ್ರಾಯ ನೀಡಲು ಬರಲೇ ಇಲ್ಲ ಅಷ್ಟೆ. ಕೇವಲ ಬೆರಳೆಣಿಕೆಯ ಜನ ಮಾತ್ರ ಬೇರೊಂದು ಒತ್ತಡಗಳ ಕಾರಣಕ್ಕಾಗಿ ಭೂಮಿ ಕೊಡುತ್ತೇವೆ ಎಂದು ಬರೆದುಕೊಟ್ಟಿದ್ದರು. ಇಂದು ನೀವು ಮತ್ತೆ ಜನಾಭಿಪ್ರಾಯ ಸಂಗ್ರಹಿಸಿದರೆ ಶೇ 95 ಭಾಗದಷ್ಟು ಜನ ಇದನ್ನು ತಿರಸ್ಕರಿಸುವುದು ಶತಸಿದ್ಧ. ಇದು ನಮ್ಮ 13 ಹಳ್ಳಿಗಳ ಒಕ್ಕೊರಲ ತೀರ್ಮಾನ ಎಂಬುದನ್ನು ನೀವು ಮನಸ್ಸಿಗೆ ಇಳಿಸಿಕೊಳ್ಳಬೇಕು. ಇದು ನಿಮ್ಮ ಪಕ್ಷದ ನೇತೃತ್ವದಲ್ಲಿ 2013ರಲ್ಲಿ ತರಲಾದ “ಭೂಸ್ವಾಧೀನ ಹಾಗೂ ಪುನರ್ವಸತಿ ನೀತಿ”ಯ ಸಂಪೂರ್ಣ ಉಲ್ಲಂಘನೆ ಎಂಬುದನ್ನು ನಾವು ನಿಮಗೆ ಹೇಳಬೇಕಿಲ್ಲ ಎಂದು ನೋಟಿಸ್ ನಲ್ಲಿ ರೈತರು ಉಲ್ಲೇಖಿಸಿದ್ದಾರೆ.

ಬಿಜೆಪಿ ಸರ್ಕಾರ ಭೂಸ್ವಾಧೀನದ ಅಧಿಸೂಚನೆ ಹೊರಡಿಸಿದಾಗ ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್‌ ಪಕ್ಷ ವಿರೋದಿಸಿತ್ತು. ಸದನದಲ್ಲೇ ಪ್ರಶ್ನೆ ಕೇಳಿತ್ತು. ಎಲ್ಲದಕ್ಕಿಂತ ಹೆಚ್ಚು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಖುದ್ದು 2022ರ ಸೆಪ್ಟೆಂಬರ್‌ ತಿಂಗಳಿನಲ್ಲಿ ನಮ್ಮ ಹೋರಾಟದ ಪೆಂಡಾಲಿಗೆ ಭೇಟಿ ನೀಡಿದ್ದರು. “ಸರ್ಕಾರ ಈ ರೀತಿ ಮಾಡುವುದು ಸರಿಯಲ್ಲ, ನಾನು ಮತ್ತೆ ಅಧಿಕಾರಕ್ಕೆ ಬಂದರೆ ಇದನ್ನು ರದ್ದುಪಡಿಸುತ್ತೇನೆ” ಎಂದು ಸಿದ್ದರಾಮಯ್ಯನವರೇ ನಮಗೆ ಮಾತುಕೊಟ್ಟಿದ್ದಾರೆ ಎಂದು ಈ ನೋಟಿಸ್ ನಲ್ಲಿ ನೆನಪಿಸಿದ್ದಾರೆ.

ಈ ಎಲ್ಲಾ ಕಾರಣಕ್ಕೆ 2023ರಲ್ಲಿ ನಡೆದ ಚುನಾವಣೆಯಲ್ಲಿ ನಮ್ಮಲ್ಲಿನ ಬಹುತೇಕರು ಕಾಂಗ್ರೆಸ್‌ ಪಕ್ಷವನ್ನೇ ಬೆಂಬಲಿಸಿ ಮತ ಹಾಕಿದರು. ಈ ಬಲವಂತದ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸುತ್ತಿದ್ದ ಕೆ.ಹೆಚ್.‌ ಮುನಿಯಪ್ಪನವರನ್ನು ಗೆಲ್ಲಿಸುವುದರಲ್ಲಿ ನಮ್ಮ ಹಳ್ಳಿಗಳ ಪಾತ್ರವೂ ಮುಖ್ಯವಾಗಿತ್ತು. ಗೆದ್ದನಂತರ ಅವರು ನಮ್ಮನ್ನು ಹಲವು ಬಾರಿ ಎಂ.ಬಿ. ಪಾಟೀಲರ ಬಳಿ, ತಮ್ಮ ಬಳಿ ಕರೆದುಕೊಂಡು ಬಂದರು. ನೀವು ನೋಡೋಣ, ಪರಿಶೀಲಸೋಣ, ಸಭೆ ಕರೆಯೋಣ ಎಂದು ಉತ್ತರ ಕೊಟ್ಟಿರಿ ಗಟ್ಟಿ ತೀರ್ಮಾನ ತೆಗೆದುಕೊಳ್ಳಲಿಲ್ಲ. ಎಂ.ಬಿ. ಪಾಟೀಲರು ಅಂದಿನಿಂದ ಇಂದಿನ ತನಕ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ಸಾಧ್ಯವೇ ಇಲ್ಲ ಎಂದು ಪಟ್ಟುಹಿಡಿಯುತ್ತಾ ಬಂದಿದ್ದಾರೆ. ಕ್ರಮೇಣ ಕೆ.ಹೆಚ್.‌ ಮುನಿಯಪ್ಪನವರೂ ಅವರ ಜೊತೆ ದನಿಗೂಡಿಸಲು ಶುರು ಮಾಡಿದ್ದಾರೆ ಎಂದು ಈ ನೋಟಿಸ್ ಹೇಳಿದೆ.

ಈಗ ನಿನ್ನೆ ಇಬ್ಬರೂ ಸೇರಿ (ಮುನಿಯಪ್ಪ ಮತ್ತು ಎಂ.ಬಿ.ಪಾಟೀಲ್) ಪತ್ರಿಕಾಗೋಷ್ಟಿ ಮಾಡಿದ್ದಾರೆ. ರಿಯಲ್‌ ಎಸ್ಟೇಟ್‌ ಏಜೆಂಟರುಗಳಂತೆ ಮಾತನಾಡಿದ್ದಾರೆ. ʼಮೂರು ಹಳ್ಳಿಗಳನ್ನು ಕೈಬಿಡುವ, ಕಮರ್ಷಿಯಲ್‌ ಚಟುವಟಿಕೆಗೆ ಒಂದಿಷ್ಟು ಜಾಗ ನೀಡುವʼ ಮಾತನಾಡಿದ್ದಾರೆ. ಇದನ್ನು ನಾವು ತೀವ್ರವಾಗಿ ಒಕ್ಕೊರಲಿನ ಜೊತೆ ಖಂಡಿಸುತ್ತಿದ್ದೇವೆ. ಇದು ನಮ್ಮನ್ನು ಒಡೆದಾಳುವ ಕುತಂತ್ರ ಎಂಬುದನ್ನು ಅರ್ಥಮಾಡಿಕೊಳ್ಳಲಾರದಷ್ಟು ಮೂರ್ಖರು ನಾವಲ್ಲ. ಒಂದಿಷ್ಟು ಹಣದ ಆಸೆಗೆ ಭೂಮಿಯನ್ನು ಬರಡುಗೊಳಿಸಲು ಅವಕಾಶ ನೀಡುವಷ್ಟು ಸ್ವಾರ್ಥಿಗಳೂ ನಾವಲ್ಲ. ನಾವು ಈ ಚೌಕಾಸಿ ಡೀಲ್‌ ಅನ್ನು ಒಪ್ಪುವ ಮಾತೇ ಇಲ್ಲ ಎಂದು ಈ ನೋಟಿಸ್ ನಲ್ಲಿ ತಿಳಿಸಲಾಗಿದೆ.

ಮುಖ್ಯಮಂತ್ರಿಗಳೇ, ಈಗ ಕೊನೆಯದಾಗಿ ನಿಮ್ಮ ಬಾಗಿಲನ್ನು ಬಲವಾಗಿ ತಟ್ಟಲು ತೀರ್ಮಾನಿಸಿ ಈ ಹೋರಾಟ ಹಮ್ಮಿಕೊಳ್ಳಲಾಗಿದೆ. ಕರ್ನಾಟಕದ ಸಮಸ್ತ ಸಂಘಟನೆಗಳು ನಮ್ಮ ಬೆನ್ನಿಗೆ ನಿಂತು ಮರು ಉತ್ಸಾಹ ಮೂಡಿಸಿವೆ. ಸಾಹಿತಿ – ಚಿಂತಕರು, ಕಲಾವಿದರು, ಧರ್ಮಗುರುಗಳು, ಜನಸಾಮಾನ್ಯರು ನಮ್ಮ ಪರವಾಗಿ ದನಿ ಎತ್ತಿದ್ದಾರೆ. ಇಂದು ನಮ್ಮನ್ನು ಬೆಂಬಲಿಸಿ ರಾಜ್ಯದ ಮೂಲೆಮೂಲೆಗಳಿಂದ ಬಂದಿರುವ ಬಂಧುಗಳ ಕರುಳ ಮಿಡಿತಕ್ಕೆ ನಾವು ಋಣಿಗಳಾಗಿದ್ದೇವೆ. ಇವರೆಲ್ಲರ ಸಮ್ಮುಖದಲ್ಲಿ ನಾವು ನಮ್ಮ ಕೊನೆ ತೀರ್ಮಾನವನ್ನು ಘೋಷಿಸುತ್ತಿದ್ದೇವೆ. ಒಂದೇ ಮಾತಿನಲ್ಲಿ “ಸರ್ಕಾರ ಈ ಅಧಿಸೂಚನೆಯನ್ನು ರದ್ದುಗೊಳಿಸುತ್ತಿದೆ ಎಂದು ಘೋಷಿಸಿ ನಮ್ಮ ಪಾಡಿಗೆ ನಮ್ಮನ್ನು ಬದುಕಲು ಬಿಡಿ. ಅಥವಾ ನಮ್ಮೆಲ್ಲರನ್ನು ಜೈಲಿಗೆ ಹಾಕಿ ನಿಮಗೆ ಏನು ಮಾಡಬೇಕೆನಿಸುತ್ತೋ ಅದನ್ನು ಮಾಡಿ”. ಆದರೆ ನೀವೀ ಕೆಲಸವನ್ನು ನಮ್ಮನ್ನು ಸೆರೆಗೆ ಹಾಕಿಯೇ ಮಾಡಬೇಕು ಎಂದು ಈ ನೋಟಿಸ್ ನಲ್ಲಿ ಒತ್ತಾಯಿಸಿದ್ದಾರೆ.

ಸರ್ಕಾರ ಜಾಗ ಖಾಲಿ ಮಾಡಲು ನಮಗೆ ಅಂತಿಮ ಅಧಿಸೂಚನೆ ಕಳಿಸಿಯಾಗಿದೆ. ಇಂದು ನಾವು ಈ ಪತ್ರದ ಮೂಲಕ ಸರ್ಕಾರಕ್ಕೆ ಅಂತಿಮ ನೋಟೀಸ್‌ ನೀಡುತ್ತಿದ್ದೇವೆ. ಇಲ್ಲಿಂದ 24 ಗಂಟೆಗಳ ಕಾಲ ನಾವು ನಿಮ್ಮ ಪ್ರತಿಕ್ರಿಯೆಗಾಗಿ ಕಾಯುತ್ತೇವೆ. ಸ್ಪಷ್ಟ ಉತ್ತರ ಬರದಿದ್ದಲ್ಲಿ ನಾಳೆ ಇದೇ ಹೊತ್ತಿಗೆ ತೀವ್ರ ಹೋರಾಟಕ್ಕೆ ಇಳಿಯುತ್ತೇವೆ. ಅಪರಾಧವೇ ಅಧಿಕಾರವಾದಾಗ ಗಾಂಧೀಜಿಯವರೂ ತೀಕ್ಷ್ಣ ಹೆಜ್ಜೆಗಳನ್ನು ಇಟ್ಟಿದ್ದಾರೆ, ನಾವೂ ಸಹ ಅವರ ಹಾದಿಯಲ್ಲೇ ಸಾಗುತ್ತೇವೆ. ಸರ್ಕಾರದ ಪ್ರಾತಿನಿಧಿಕ ತಾಣವಾದ ತಾಲ್ಲೂಕು ಕಛೇರಿಯನ್ನು ಮುತ್ತಿಗೆ ಹಾಕುತ್ತೇವೆ. ನಿಮಗೊಂದು ನೆಪ ಸಿಗುತ್ತದೆ. ನಮ್ಮನ್ನು ಜೈಲಿಗೆ ಹಾಕಬಹುದು. ಕಂಪನಿಗಳ ದಾರಿಯನ್ನು ಸುಗಮಗೊಳಿಸಬಹುದು. ತೀರ್ಮಾನ ತಮ್ಮದು. ನಮಸ್ಕಾರ ಎಂದು ಸಂತ್ರಸ್ತ 13 ಹಳ್ಳಿಗಳ ರೈತರು ಈ ನೋಟಿಸ್ ಅನ್ನು ಸರಕಾರಕ್ಕೆ ನೀಡಿದ್ದಾರೆ.

ಸಂಜೆ 5 ಗಂಟೆಯೊಳಗೆ ಸರ್ಕಾರ ರೈತಪರ ನಿರ್ಣಯ ತೆಗೆದುಕೊಳ್ಳದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ: ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...