Homeಕರ್ನಾಟಕರೈತರ ಜೊತೆ ಇಲ್ಲೇ ಮಲಗುತ್ತೇನೆ, ಜೈಲಿಗೆ ಹಾಕುವುದಾದರೆ ಹಾಕಿ: ನಟ ಪ್ರಕಾಶ್ ರಾಜ್

ರೈತರ ಜೊತೆ ಇಲ್ಲೇ ಮಲಗುತ್ತೇನೆ, ಜೈಲಿಗೆ ಹಾಕುವುದಾದರೆ ಹಾಕಿ: ನಟ ಪ್ರಕಾಶ್ ರಾಜ್

ರೈತರ ಭೂ ಸ್ವಾಧೀನ ವಿರೋಧಿಸಿ 'ದೇವನಹಳ್ಳಿ ಚಲೋ'

- Advertisement -
- Advertisement -

ನಾನು ರೈತರ ಜೊತೆ ಇಲ್ಲಿಯೇ ಮಲಗುತ್ತೇನೆ, ಜೈಲಿಗೆ ಹಾಕುವುದಾದರೆ ಹಾಕಿ. ಜಾಮೀನು ಕೂಡ ತೆಗೆದುಕೊಳ್ಳುವುದಿಲ್ಲ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದರು.

ರೈತರ ಭೂ ಸ್ವಾಧೀನ ವಿರೋಧಿಸಿ ದೇವನಹಳ್ಳಿಯಲ್ಲಿ ನಡೆಯುತ್ತಿರುವ ‘ದೇವನಹಳ್ಳಿ ಚಲೋ’ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.

ಮುಖ್ಯಮಂತ್ರಿ ಅವರೇ, ಸಚಿವ ಎಂ.ಬಿ ಪಾಟೀಲರೇ ನೀವು ಏನು ಮಾಡುತ್ತಿದ್ದೀರಿ? ರೈತರು ಭೂಮಿ ಬಿಟ್ಟು ಕೊಡುವುದಿಲ್ಲ ಎಂದರೆ ಅರ್ಥವಾಗುತ್ತಿಲ್ವಾ? ಒಬ್ಬ ಮನುಷ್ಯನಿಗೆ ಒಂದು ಒಂದೆರಡು ಬಾರಿ ಹೇಳಬಹುದು. ನಾವು ನಿಮ್ಮ ವಿರುದ್ಧ ಮೂರು ವರ್ಷಗಳಿಂದ ಬಾಯಿ ಬಡ್ಕೊಬೇಕಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹದಿಮೂರು ಹಳ್ಳಿಗಳ ಹೆಣ್ಣು ಮಕ್ಕಳು ಅವರ ಜಮೀನಿನ ಮಣ್ಣನ್ನು ತಂದು ಗಿಡಕ್ಕೆ ಹಾಕಿ, ನಾವು ಮಣ್ಣನ್ನು ಮಾರುವುದಿಲ್ಲ ಎಂದು ಹೇಳುತ್ತಿದ್ದಾರೆ. ನಿಮಗೆ ಧಿಕ್ಕಾರ ಕೂಗುವ ಸಮಯ ದೂರವಿಲ್ಲ. ರೈತರ ಬಾಯಿಯಿಂದ ಧಿಕ್ಕಾರ ಕೂಗಿಸಿಕೊಳ್ಳುವ ಪರಿಸ್ಥಿತಿ ನಿಮಗೆ ಬೇಕಾ? ನಿಮಗೆ ಮನಸಾಕ್ಷಿ ಇಲ್ವಾ? ಅಹಿಂದ, ಜನಪರ, ರೈತರಪರ ಅನ್ನುತ್ತೀರಿ. ವಿರೋಧ ಪಕ್ಷದ ನಾಯಕರಾಗಿದ್ದಾಗ ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದೀರಿ. ಮಾತು ಕೊಟ್ಟಿದ್ದೀರಿ ತಾನೇ? ಈಗ ಮಾತಿಗೆ ನಿಲ್ಲುತ್ತೀರಾ? ಮಾತು ತಪ್ಪುತ್ತೀರಾ? ಎಂದು ಪ್ರಶ್ನಿಸಿದರು.

ಎಂ.ಬಿ ಪಾಟೀಲರೇ ಏನಂತ ತುರ್ತು ಪರಿಸ್ಥಿತಿ ಇತ್ತು ನಿಮಗೆ. ಅಷ್ಟೊಂದು ತರಾತುರಿಯಲ್ಲಿ ಸುದ್ದಿಗೋಷ್ಠಿ ಏಕೆ ಕರೆದ್ರಿ? ಒಂದು ದಿನ ಕಾಯಲು ಆಗಲಿಲ್ವಾ? ಮುಖ್ಯಮಂತ್ರಿಗಳು ಏನಾದರು ಬದಲಾಗುತ್ತಿದ್ದರಾ? ಒಳಗಡೆ ಏನಾದರೂ ಮಸಲತ್ತು ನಡೆಯುತ್ತಿದಿಯಾ? ಎಂದು ಪ್ರಕಾಶ್ ರಾಜ್ ಕೇಳಿದರು.

ಮನುಷ್ಯರಿಗೆ ಬೆಲೆ ಕೊಡಿ. ಭೂಮಿ ಬೆಲೆ ಹೆಚ್ಚಾದರೆ ನಿಮ್ಮ ಬೊಕ್ಕಸ ತುಂಬುತ್ತದೆ, ಸಮಾಜ ಬೆಳೆಯುವುದಿಲ್ಲ. ಈ ಹೋರಾಟ ನಿಲ್ಲುವುದಿಲ್ಲ. ಇದು ಅಂತಃಕರಣದ ಹೋರಾಟ. ಹಾಗಾಗಿ, ನೀವು ಬುದ್ದಿವಂತರ ತರ ಉತ್ತರ ಕೊಡಬೇಡಿ. ನಾವು ನಿಮಗೆ ಪ್ರಶ್ನೆಯೇ ಕೇಳುತ್ತಿಲ್ಲ. ನಮ್ಮ ನೋವನ್ನು ಹೇಳುತ್ತಿದ್ದೇವೆ. ನಮ್ಮನ್ನು ಬದುಕಲು ಬಿಡಿ ಎಂದರು.

ನಾವು ಮಣ್ಣನ್ನು ಮಾರುವುದಿಲ್ಲ. ಏನು ಮಾಡುತ್ತೀರಾ ಮಾಡಿ. ಕಾರ್ಖಾನೆ ಎಷ್ಟು ಜನರ ಬದುಕನ್ನು ಕಿತ್ತುಕೊಳ್ಳುತ್ತದೆ ಎನ್ನುವುದು ನಿಮಗೆ ಗೊತ್ತಿಲ್ಲವೇ? 6ಸಾವಿರ ಎಕರೆ ಭೂ ಸೆಟಲ್‌ಮೆಂಟ್‌ ಮಾಡಿದಿರಿ. ರೈತರು ಈಗ ಬೀದಿಗೆ ಬಂದಿದಾರೆ. ಕಾರ್ಖಾನೆಗಳನ್ನು ಮಾಡಿ ನಮ್ಮ ರೈತರನ್ನು ಏನು ಮಾಡುತ್ತೀರಾ? ಅವರನ್ನು ಕಾರ್ಖಾನೆಯ ಸೆಕ್ಯೂರಿಟಿ ಗಾರ್ಡ್‌ಗಳಾಗಿ ಮಾಡುತ್ತೀರಾ? ನಿಮಗೆ ಮರ್ಯಾದೆ ಇದೆಯಾ? ಎಂದು ಕಿಡಿಕಾರಿದರು.

ಸಿದ್ದರಾಮಯ್ಯನವರೇ ಇನ್ನೊಂದು ಹೋರಾಟ ಆಗುವುದು, ನಿಮ್ಮನ್ನು ಇಳಿಸುವುದಕ್ಕೆ ಕಾರಣ ಆಗುವುದು ಬೇಡ. ಮನಸಾಕ್ಷಿಯಿಂದ ಜನರ ನೋವನ್ನು ಅರ್ಥ ಮಾಡಿಕೊಳ್ಳಿ. ರೈತರನ್ನು ಅರ್ಥ ಮಾಡಿಕೊಳ್ಳಿ. ನಾವು ಭೂಮಿ ಮಾರುವುದಿಲ್ಲ ಎಂದರೆ ಮಾರುವುದಿಲ್ಲ. ನಮ್ಮನ್ನು ಬದುಕಲು ಬಿಡಿ ಎಂದು ಮನವಿ ಮಾಡಿದರು.

LIVE UPDATES ‘ದೇವನಹಳ್ಳಿ ಚಲೋ’ | ಸರಿಯಾಗಿ ಕೇಳಿಸಿಕೊಳ್ಳಿ, ನೀವು ಹತ್ತಲ್ಲ ನೂರು ಕೋಟಿ ರೂಪಾಯಿಗಳು ಕೊಟ್ಟರೂ ನಾವು ಒಂದು ಇಂಚು ಭೂಮಿ ಕೊಡಲ್ಲ: ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...