Homeಅಂಕಣಗಳುಇಂದು ಮೀಸಲಾತಿಯ ಜನಕ ಛತ್ರಪತಿ ಶಾಹು ಮಹಾರಾಜ್ ಜನ್ಮದಿನ

ಇಂದು ಮೀಸಲಾತಿಯ ಜನಕ ಛತ್ರಪತಿ ಶಾಹು ಮಹಾರಾಜ್ ಜನ್ಮದಿನ

- Advertisement -
- Advertisement -

ಹಿಂದುಳಿದವರ, ದಮನಿತರ ಆಶಾಕಿರಣ, ಸಾಮಾಜಿಕ ಕ್ರಾಂತಿಯಲ್ಲಿ ತಮ್ಮದೇ ಆದ ಛಾಪನ್ನೊತ್ತಿ, ಸಮಾಜದ ಪ್ರಮುಖ ಆಧಾರ ಸ್ತಂಭಗಳಲ್ಲಿ ಒಬ್ಬರಾಗಿದ್ದ ಛತ್ರಪತಿ ಶಾಹು ಮಹಾರಾಜ್ ಒಬ್ಬ ಮಹಾನ್ ದಾರ್ಶನಿಕ. ಭಾರತದಲ್ಲಿ ಫುಲೆಯವರ ಸಶಕ್ತ ಉತ್ತರಾಧಿಕಾರಿ. ಸಾಮಾಜಿಕ ಪ್ರಜಾಪ್ರಭುತ್ವದ ರೂವಾರಿ. ಇಂದು ಅವರ ಜನ್ಮದಿನ.

ಇವರ ಕಾಲಾವಧಿ 1874ರ ಜೂನ್ 26ರಿಂದ 1922ರ ಮೇ 6 ಆಗಿದೆ. ತಂದೆ ಜಯಸಿಂಗರಾವ್ ಅಪ್ಪಾಸಾಹೇಬ್ ಘಾಟ್ಗೆ, ತಾಯಿ ರಾಧಾಬಾಯಿ. ಶಾಹು ಮಹಾರಾಜರ ಮೂಲ ಹೆಸರು ಯಶವಂತ್‌ರಾವ್ ಘಾಟ್ಗೆಯಾಗಿದೆ. ಅಸ್ಪೃಶ್ಯರು ಮತ್ತು ಹಿಂದುಳಿದ ವರ್ಗದವರಿಗೆ ಶಿಕ್ಷಣ, ಅಧಿಕಾರದಲ್ಲಿ ಸಮಪಾಲು ಮತ್ತು ಸಾಮಾಜಿಕ ಸ್ಥಾನಮಾನ ದೊರಕಿಸಿ ಕೊಟ್ಟವರು. ಜೊತೆಗೆ ಮಹಾತ್ಮ ಜ್ಯೋತಿ ಬಾಪುಲೆ ಅವರ ಸತ್ಯಶೋಧ ಸಮಾಜ ಚಳುವಳಿಯನ್ನು ಮುಂದುವರೆಸಿದವರು. ಇವರ ಶಿಕ್ಷಣ ಸೇವೆಯನ್ನು ಗಮನಿಸಿದ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯವು 1902ರ ಜೂನ್ 10ರಂದು ಇವರಿಗೆ ಎಲ್.ಎಲ್.ಡಿ ಪದವಿ ನೀಡಿ ಗೌರವಿಸಿದೆ.

ಮಹಾರಾಜ ಶಾಹುರವರ ಪೂರ್ವಿಕರು ಮೂಲತಃ ಛತ್ರಪತಿ ಶಿವಾಜಿಯ ವಂಶಸ್ಥರು. ಆ ಕಾರಣಕ್ಕಾಗಿ ಶಿವಾಜಿಯವರ ಗೌರವ ಪದವಿಯಾದ ‘ಛತ್ರಪತಿ’ ಬಿರುದು ಮಹಾರಾಜ ಶಾಹುರವರಿಗೆ ಸ್ವಾಭಾವಿಕವಾಗಿ ಸಂದಿದೆ. ಛತ್ರಪತಿ ಶಾಹು ಮಹಾರಾಜ್ ಹುಟ್ಟಿದ ಊರು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಗಲ್‍. ಸಾಕುತಾಯಿ ಆನಂದಿಬಾಯಿ. ತಾತ ಕಾಗಲ್ ಗ್ರಾಮದ ಪ್ರಸಿದ್ದ ವ್ಯಕ್ತಿ ಯಶವಂತರಾವ್ ಘಾಟ್ಗೆ. ಪತ್ನಿ ಲಕ್ಷೀಬಾಯಿ. ಮಕ್ಕಳು ರಾಧಾಬಾಯಿ, 3ನೇ ರಾಜಾರಾಮ್, ಮಹಾರಾಜಕುಮಾರ್ ಶಿವಾಜಿ ಮತ್ತು ರಾಜಕುಮಾರಿ ಅವುಬಾಯಿ. ಇವರು ವಿದ್ಯಾಭ್ಯಾಸವನ್ನು ರಾಜಕೋಟೆಯ ರಾಜಕುಮಾರ್ ಕಾಲೇಜಿನಲ್ಲಿ ಮಾಡಿದರು.

ಇವರು ಮೂಲತಃ ಕುಣುಬಿ(ಕುರುಬ) ಸಮುದಾಯಕ್ಕೆ ಸೇರಿದವರಾಗಿರುತ್ತಾರೆ. ಕೊಲ್ಲಪುರದ ಮಹಾರಾಣಿ ಆನಂಧಿಬಾಯಿರವರು ಮಾರ್ಚ್ 11, 1884ರಂದು ಶಾಹುರವರನ್ನು ದತ್ತು ಸ್ವೀಕಾರ ಮಾಡಿಕೊಂಡರು.

ಇವರು ಜಾರಿಗೆ ತಂದ ಸಾಮಾಜಿಕ ಸುಧಾರಣೆಗಳು ಇಂತಿವೆ. 

1.ವಿಧವಾ ಪುನರ್ ವಿವಾಹ ಪದ್ದತಿ ಜಾರಿ

2.1919ರಲ್ಲಿ ಅಸ್ಪ್ರಶ್ಯತಾ ಆಚರಣೆ ವಿರುದ್ದ ಕಾನೂನು ಜಾರಿ

3.ಶಾಹು ಸತ್ಯಶೋಧಕ ಸಮಾಜವನ್ನು ಪ್ರಾರಂಭ ಮಾಡಿ, ಸಾಮಾಜಿಕ ಪರಿವರ್ತನಾ ಚಳುವಳಿಗೆ ನಾಂದಿ

4.1918ರಲ್ಲಿ ಮಹರ್ ವತನ್ ಪದ್ದತಿಯನ್ನು ನಿಷೇಧಿಸಿ, ಅಸ್ಪ್ರಶ್ಯರಿಗೆ ವಂಶಾವಳಿಯಾಗಿ ಬಂದಿದ್ದ ಜೀತ ಪದ್ದತಿಯನ್ನು ನಿಷೇಧ

5.1919ರ ಜುಲೈ 12ರಂದು ಅಂತರಜಾತಿ ವಿವಾಹ ಕಾಯ್ದೆಯನ್ನು ಜಾರಿ

6.1020 ಜುಲೈ 17ರಂದು ದೇವದಾಸಿ ಪದ್ದತಿ ನಿರ್ಮೂಲನಾ ಕಾನೂನು ಜಾರಿ

7.1920ರ ಮೇ 30ರಂದು ನಾಗಪುರದಲ್ಲಿ ಡಿಪ್ರೆಸ್ಡ್ ಕಾಸ್ಟ್ ಅಧಿವೇಶನ
8.ಡಾ.ಬಿ.ಆರ್.ಅಂಬೇಡ್ಕರ್ ಹೆಚ್ಚಿನ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೋಗಲು ಧನ ಸಹಾಯ

ಇವರು ಜಾರಿಗೆ ತಂದ ಕೃಷಿಗೆ ಸಂಬಂಧಪಟ್ಟ ಸುಧಾರಣೆ

1.ಭೂ ಹೀನರಿಗೆ ಉಚಿತ ಭೂಮಿ ಹಂಚಿಕೆ.

2.ಒಣ ಭೂಮಿಯಲ್ಲಿ ನೀರಾವರಿ ಸೌಲಭ್ಯವನ್ನು ಒದಗಿಸಿ ಹೆಚ್ಚು ಬೆಳೆಗಳನ್ನು ತೆಗೆಯಲು ಪ್ರೋತ್ಸಾಹ

3.ಬಡ್ಡಿರಹಿತ ಸಾಲ ಸೌಲಭ್ಯಗಳ ಜಾರಿ

4.ಕಾಡಿನ ಸಂಪತ್ತಿನ ಶೋಷಣೆಯ ವಿರುದ್ದ ಸಮರ

5.ಸಹಕಾರಿ ಮಾರುಕಟ್ಟೆ ಪದ್ದತಿಯನ್ನು ಮೊದಲಬಾರಿ ತಮ್ಮ ಪ್ರಾಂತ್ಯದಲ್ಲಿ ಜಾರಿ

ಛತ್ರಪತಿ ಶಾಹು ಮಹಾರಾಜ್‍ರ ‘ಮೀಸಲಾತಿ’ ಕೊಡುಗೆ

“ಶೂದ್ರರಿಗೆ 50% ಮೀಸಲಾತಿ” ಎಂಬ ಯೋಜನೆಯನ್ನು ಭಾರತದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ  ಕಂಡುಹಿಡಿದ ಕೀರ್ತಿ ಶಾಹು ಮಹಾರಾಜರದು. ಹಾಗಾಗಿಯೇ ಅವರನ್ನು ಮೀಸಲಾತಿಯ ಜನಕ ಎನ್ನಲಾಗುತ್ತಿದೆ. ಶಾಹು ಮಹಾರಾಜರು ಅಸ್ಪೃಶ್ಯರಿಗೋಸ್ಕರ 18 ಪ್ರತ್ಯೇಕ ಶಾಲೆಗಳನ್ನು ಸ್ಥಾಪಿಸುತ್ತಾರೆ. 1908ರಲ್ಲಿ ವಿಧ್ಯಾಸಂಸ್ಥೆಯನ್ನು ಪ್ರಾರಂಭ ಮಾಡುತ್ತಾರೆ. 1896ರಿಂದ 1912ರ ಅವಧಿಯಲ್ಲಿ ಶೂದ್ರರಿಗೆ 22, ಅಸ್ಪೃಶ್ಯರಿಗೆ 27 ಶಾಲೆಗಳನ್ನು ಸ್ಥಾಪಿಸುತ್ತಾರೆ. 1918ರಲ್ಲಿ ಶೂದ್ರರಿಗೆ ಅರಿವು ಮತ್ತು ಜಾಗೃತಿ ಮೂಡಿಸಲು “ಮೂಕ ನಾಯಕ್” ಎಂಬ ಪತ್ರಿಕೆಯನ್ನು ಪ್ರಾರಂಭಿಸುತ್ತಾರೆ. 1918ರಲ್ಲಿ ಮಹಾತ್ಮ ಜೋತಿಬಾಫುಲೆ ರವರ ಸತ್ಯಶೋಧಕ ಸಮಾಜವನ್ನು ಮುನ್ನಡೆಸಲು “ಶಾಹು ಸತ್ಯ ಶೋಧಕ ಸಮಾಜ”ವನ್ನು ಸ್ಥಾಪನೆ ಮಾಡುತ್ತಾರೆ.

ಮಹಾರಾಜರ ಮೀಸಲಾತಿಯ ವಿಚಾರವನ್ನು ಬಹುತೇಕ ಬ್ರಾಹ್ಮಣರು ವಿರೋಧ ಮಾಡುತ್ತಿರುತ್ತಾರೆ, ಬೇಸತ್ತ ಕೆಲವು ಗೂಂಡಗಳಿಂದ ಮಹಾರಾಜರನ್ನು ಕೊಲೆ ಮಾಡುವ ಪ್ರಯತ್ನವು ನಡೆಯುತ್ತದೆ. ಶಾಹುರವರಿದ್ದ ರೈಲಿಗೆ ಬಾಂಬನ್ನು ಸಹ ಇಡಲಾಗುತ್ತದೆ. ಆದರೆ ಆ ಕೊಲೆಯ ಪ್ರಯತ್ನವು ವಿಫಲವಾಗಿಬಿಡುತ್ತದೆ.

ಒಮ್ಮೆ ಮಹಾರಾಜರು ಅರಮನೆಯ ಆವರಣದಲ್ಲಿ ಗಾಳಿ ಸಂಚಾರ (walking) ಮಾಡುತ್ತಿರುತ್ತಾರೆ. ಆ ಸಮಯದಲ್ಲಿ ಗಣಪತಿರಾವ್ ಎಂಬ ಬ್ರಾಹ್ಮಣ ವಕೀಲ ಶಾಹುರವರನ್ನು ಕಾಣಲು ಬರುತ್ತಾರೆ. ಮೀಸಲಾತಿಯ ಬಗ್ಗೆ ಚರ್ಚೆ ಮಾಡುತ್ತಾ ಅರ್ಹತೆಯಿಲ್ಲದವರಿಗೆಲ್ಲಾ ಉದ್ಯೋಗದಲ್ಲಿ, ಶಿಕ್ಷಣದಲ್ಲಿ ಹಾಗೂ ಎಲ್ಲಾ ರಂಗಗಳಲ್ಲೂ ನೀವು ಮೀಸಲಾತಿ ಕೊಟ್ಟರೆ ಪ್ರತಿಭೆಗೆ ದಕ್ಕೆಯುಂಟಾಗುವುದಿಲ್ಲವೇ? ಎಂದು ಮಹಾರಾಜರನ್ನು ಪ್ರಶ್ನಿಸುತ್ತಾನೆ. ಆಗ ಶಾಹು ಮಹಾರಾಜರು ಓ ನಿಮಗೆ ಆ ರೀತಿ ಅರ್ಥವಾಗಿದೆಯೇ ಬನ್ನಿ ನನ್ನ ಜೊತೆ ಎಂದು ಆ ವಕೀಲನನ್ನು ಕರೆದುಕೊಂಡು ಸಂಚಾರ ಮಾಡುತ್ತಾ ಮಾಡುತ್ತಾ ಅರಮನೆಯ ಆವರಣದಲ್ಲಿ ಕುದುರೆಗಳನ್ನು ಕಟ್ಟಿರುವ ಜಾಗಕ್ಕೆ ತಲುಪುತ್ತಾರೆ. ಅಲ್ಲಿ ಕುದುರೆಗಳನ್ನು ಗುಂಪು ಗುಂಪುಗಳಾಗಿ ಮಾಡಿ ಮೇವನ್ನು ಹಾಕಲಾಗಿರುತ್ತದೆ. ಇದನ್ನು ಗಮನಿಸಿದ ಮಹಾರಾಜರು ಯಾರಲ್ಲಿ ಈ ಕುದುರೆಗಳನ್ನು ಕಟ್ಟಿದವರು ಎಂದಾಗ ಸ್ಥಳದಲ್ಲೇ ಇದ್ದ ಕುದುರೆಗಳನ್ನು ನೋಡಿಕೊಳ್ಳುವವನು ನಾನೇ ಪ್ರಭು ಎನ್ನುತ್ತಾನೆ. ಆಗ ಮಹಾರಾಜರು ಅವನನ್ನು “ಏನಯ್ಯ ನಿನಗೆ ಬುದ್ಧಿ ಇದೆಯಾ? ಕುದುರೆಗಳನ್ನು ಏಕೆ ಈ ರೀತಿ ಗುಂಪುಗುಂಪುಗಳನ್ನಾಗಿ ವಿಂಗಡನೆ ಮಾಡಿ ಬೇರೆ ಬೇರೆ ಕಡೆ ಮೇವನ್ನಕಿದ್ದೀಯಾ? ಎಲ್ಲಾ ಕುದುರೆಗಳನ್ನು ಒಂದೇ ಕಡೆ ಬಿಟ್ಟು ಮೇವನ್ನಾಕಬಹುದಾಗಿತ್ತಲ್ಲವೇ? ಎಂದು ಪ್ರಶ್ನಿಸಿ ಜೊತೆಯಲ್ಲಿದ್ದ ವಕೀಲನನ್ನು ಕೇಳುತ್ತಾರೆ. ಗಣಪತಿರಾವ್ ರವರೇ ನಾನು ಕೇಳಿದ್ದು ಸರಿ ತಾನೆ? ಎಂದಾಗ ಆ ವಕೀಲ ಹೌದು ಮಹಾರಾಜರೇ ನೀವು ಕೇಳಿದ್ದು ಸರಿಯಾಗಿದೆ.
ಅವನು ಆ ಕುದುರೆಗಳನ್ನು ಒಂದೇ ಕಡೆ ಬಿಟ್ಟು ಮೇವನ್ನಾಕಬೇಕಿತ್ತು ಎನ್ನುತ್ತಾನೆ. ಆಗ ಸೇವಕನು ಮಹಾರಾಜರ ಪ್ರಶ್ನೆಗಳನ್ನು ಉದ್ದೇಶಿಸಿ “ಮಹಾರಾಜರೇ ಈ ಕುದುರೆಗಳಲ್ಲಿ ಕೆಲವು ವಯಸ್ಸಾಗಿರುವ ಕುದುರೆಗಳಿವೆ, ಗಾಯಗಳಾಗಿ ಪೆಟ್ಟು ಮಾಡಿಕೊಂಡಿರುವ ಕುದುರೆಗಳಿವೆ, ಸಣ್ಣ ಪ್ರಾಯದ ಕುದುರೆಗಳಿವೆ ಹಾಗೂ ದಷ್ಟಪುಷ್ಟವಾದ ಬಲಿಷ್ಟವಾಗಿರುವ ಕುದುರೆಗಳಿವೆ. ಈ ಎಲ್ಲಾ ಕುದುರೆಗಳನ್ನು ಒಂದೇ ಕಡೆ ಸೇರಿಸಿ ಮೇವನ್ನಾಕಿದರೆ ಯಾವ ಕುದುರೆಗಳಿಗೆ ಹೆಚ್ಚು ಶಕ್ತಿ ಇದೆಯೋ ಅಂದರೆ ದಷ್ಟಪುಷ್ಟವಾದ ಕುದುರೆಗಳು ಮೇವೆಲ್ಲಾ ತಿಂದು ಬಿಡುತ್ತವೆ. ಆಗ ವಯಸ್ಸಾದ ಕುದುರೆಗಳಿಗೆ, ಗಾಯಗಳಾಗಿರುವ ಕುದುರೆಗಳಿಗೆ, ಸಣ್ಣ ಪ್ರಾಯದ ಕುದುರೆಗಳಿಗೆ ಮೇವು ಸಿಗದೇ ದುರ್ಬಲವಾಗಿ ಹಸಿವಿನಿಂದಲೇ ಸತ್ತು ಹೋಗುತ್ತವೆ. ಆದ್ದರಿಂದ ವಯಸ್ಸಾದ ಕುದುರೆಗಳಿಗೆ ಒಂದು ಕಡೆ, ಸಣ್ಣ ಪ್ರಾಯದ ಕುದುರೆಗಳಿಗೆ ಒಂದು ಕಡೆ, ಗಾಯಗೊಂಡಿರುವ ಕುದುರೆಗಳಿಗೆ ಒಂದು ಕಡೆ, ಬಲಿಷ್ಟ ಕುದುರೆಗಳಿಗೊಂದು ಕಡೆ ಮೇವನ್ನಾಕಿದ್ದೇನೆ. ಆಗ ಎಲ್ಲಾ ಕುದುರೆಗಳಿಗೂ ಮೇವು ಸಿಗುತ್ತದೆ” ಎಂದು ಉತ್ತರಿಸುತ್ತಾನೆ.

ಆಗ ಆ ಬ್ರಾಹ್ಮಣ ವಕೀಲನಿಗೆ ಮೀಸಲಾತಿಯ ಬಗ್ಗೆ ಅರ್ಥವಾಗಿ “ಮಹಾರಾಜರೇ ದಯವಿಟ್ಟು ಕ್ಷಮಿಸಿ ಈಗ ನಿಮ್ಮ ಮೀಸಲಾತಿಯ ಬಗ್ಗೆ ನನಗೆ ಸಂಪೂರ್ಣವಾಗಿ ಅರ್ಥವಾಯಿತು” ಎಂದು ಅಲ್ಲಿಂದ ಹೊರಟುಹೋಗುತ್ತಾನೆ.

1927ರ ನವೆಂಬರ್4ರ ಸಂಪಾದಕೀಯ

ಕಳೆದ ಮೂರು ಸಂಚಿಕೆಗಳಲ್ಲಿ “ಮಹರ್ ಮತ್ತು ವತನ” ಕುರಿತಂತೆ ಮೂರು ಮುಖ್ಯ ಲೇಖನಗಳನ್ನು ಪ್ರಕಟಿಸಿದ್ದೆವು. ಆ ಲೇಖನಗಳಲ್ಲಿ ಈ ‘ವತನ’ ಪದ್ಧತಿಯಿಂದ ಮಹರ ಸಮುದಾಯವು ಶೋಷಣೆಯಿಂದ ನರಳುತ್ತಿರುವುದನ್ನು ಮತ್ತು ವತನ ಪದ್ಧತಿಯಲ್ಲಿ ಸುಧಾರಣೆಯ ಅಗತ್ಯವನ್ನು ವಿವರಿಸಿದ್ದೆವು. ನಮ್ಮ ಈ ಲೇಖನಗಳಲ್ಲಿನ ಚಿಂತನೆಗಳಿಗೆ ಪೂರಕವಾಗಿ ಯಾರಾದರೂ ತಮ್ಮ ಅಭಿಪ್ರಾಯಗಳನ್ನು ಸೂಚಿಸುವುದಿದ್ದರೆ ನಮಗೆ ಬರೆದು ಕಳುಹಿಸಬೇಕೆಂದು ಸಹ ಕೇಳಿದ್ದೆವು. ನಾವು ಪ್ರತಿಕ್ರಿಯೆಗಾಗಿ,ಅಭಿಪ್ರಾಯಕ್ಕಾಗಿ ಕಾಯುತ್ತಿದ್ದರೆ ಹಠಾತ್ತಾಗಿ ಮುಂಬೈನಲ್ಲಿ ನಡೆದ ಎರಡು ಸಭೆಗಳಲ್ಲಿ ನಮ್ಮ ಬೇಡಿಕೆಗಳು ಮತ್ತು ಸಲಹೆಗಳನ್ನು ವಿರೋಧಿಸಿ ಈ ಸುಧಾರಣೆಯ ವಿರುದ್ಧ ಗೊತ್ತುವಳಿಯನ್ನು ಅನುಮೋದಿಸಲಾಯಿತು. ನಮಗೆ ಸಲಹೆಗಳನ್ನು ನೀಡುವುದರ ಬದಲಾಗಿ ನಮ್ಮ ಸುಧಾರಣೆಯ ವಿರುಧ್ದ ದನಿ ಎತ್ತಿದ್ದು ನಮಲ್ಲಿ ಆಶ್ಚರ್ಯ ಮೂಡಿಸಿದೆ. ನಂತರ ಇದನ್ನು ಕೂಲಂಕುಷವಾಗಿ ವಿಚಾರಿಸಿದಾಗ ಈ ಸಭೆಯನ್ನು ನಮ್ಮ ವಿರೋಧಿಗಳು ಆಯೋಜಿಸಿದ್ದರು ಎಂದು ಗೊತ್ತಾಯಿತು. ಮಹರ್ ಸಮುದಾಯದ ವತನ್ ಅನ್ನು ನಿರ್ಮೂಲನೆ ಮಾಡಿ ಎನ್ನುವ ನಮ್ಮ ಹಕ್ಕೊತ್ತಾಯವನ್ನು ನಮ್ಮ ವಿರೋಧಿಗಳು ತಿರುಚಿ ಮಹರ್ ಸಮುದಾಯವನ್ನು ವತನ ಪದ್ಧತಿಯಿಂದ ಬಲವಂತವಾಗಿ ಬಿಡುಗಡೆಗೊಳಿಸುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ನಮ್ಮ ವಿವರಣೆ ಕೊಡುತ್ತಿದ್ದೇವೆ. ನಮ್ಮ ಅಭಿಪ್ರಾಯದಲ್ಲಿ ‘ಮಹರ್ ವತನ’ ಎನ್ನುವುದು ತುಂಬಾ ಅಪಾಯಕಾರಿ ಮತ್ತು ಆದಷ್ಟು ಬೇಗ ರದ್ದಾಗುವುದು ಒಳಿತು. ಅವರ ವತನ ಪದ್ಧತಿಯಿಂದ ಮಹರ್ ಸಮುದಾಯವನ್ನು ಬೇರ್ಪಡಿಸಲು ನಾವು ಒತ್ತಡವನ್ನು ಹೇರಬೇಕಾಗಿ ಬಂದರೂ ಸಹ ಅದು ತಪ್ಪಲ್ಲ ಎಂದು ನಮ್ಮ ಅಭಿಪ್ರಾಯ.

ಮಹರ್ ಸಮುದಾಯದ ಗುಲಾಮಗಿರಿಯನ್ನು ಅವರಿಗೆ ವಿವರಿಸಲು ಅವರಿಗೆ ಸೂಕ್ತ ಮತ್ತು ಕಡ್ಡಾಯ ಶಿಕ್ಷಣವನ್ನು ಕೊಡಬೇಕೆಂದು ನಾವು ಒತ್ತಾಯಿಸುತ್ತೇವೆ. ಶಾಹು ಮಹಾರಾಜ ಅವರು ಮಹರ್ ಸಮುದಾಯದ ಶತೃಗಳಲ್ಲ. ಅಸ್ಪಶ್ಯರ ಹಕ್ಕುಗಳ ಪರವಾಗಿ ಬದುಕಿದ ಶಾಹು ಮಹಾರಾಜ್ ‘ಮಹರ್ ಸಮುದಾಯವು ಈ ವತನ ಪದ್ಧತಿಯ ಕಾರಣದಿಂದಾಗಿಯೇ ಇಂದು ಅತ್ಯಂತ ದುಸ್ಥಿಯಲ್ಲಿದ್ದಾರೆ ಎಂದು ನಂಬಿದ್ದಾರೆ’. ಹೀಗಾಗಿ ತಮ್ಮ ಅಧಿಕಾರವನ್ನು ಬಳಸಿಕೊಂಡು ಶಾಹು ಮಹಾರಾಜ್ ಅವರು ಕೊಲ್ಹಾಪುರ ಪ್ರಾಂತದಲ್ಲಿ ಮಹರ್ ಸಮುದಾಯದ ವತನ್ ಅನ್ನು ರದ್ದು ಪಡಿಸಿದ್ದಾರೆ. ಇದನ್ನು ವಿರೋಧಿಸಲು ಮಹರ್ ಸಮುದಾಯಕ್ಕೆ ಕಾರಣಗಳೇ ಇರಲಿಲ್ಲ. ಈ ಕಾನೂನು ತಮ್ಮ ಒಳಿತಿಗಾಗಿ ಇದೆ ಎಂದು ಮಹರ್ ಸಮುದಾಯಕ್ಕೆ ಬಲುಬೇಗನೆ ಅರಿವಾಗತೊಡಗಿದೆ. ಅವರು ಸ್ವಯಂಪ್ರೇರಿತರಾಗಿ ಸರ್ಕಾರಕ್ಕೆ ಇದರಿಂದ ತಮ್ಮನ್ನು ಬಿಡುಗಡೆಗೊಳಿಸಬೇಕೆಂದು ಮನವಿ ಮಾಡಿಕೊಳ್ಳತೊಡಗಿದ್ದಾರೆ. ಕೊಲ್ಹಾಪುರ ಪ್ರಾಂತದ ಮಹರ್ ಸಮುದಾಯ ಇಂದು ಹೊಸ ಗಾಳಿಯನ್ನು ಉಸಿರಾಡುತ್ತಿದ್ದಾರೆ. (ಬಾಂಬೆ ವಿಧಾನ ಸಭೆಯಲ್ಲಿ ಡಾ.ಅಂಬೇಡ್ಕರ್ ಮಂಡಿಸಿದ ‘ಮಹರ್ ವತನ ಮಸೂದೆ’ ಕುರಿತಾದ ಪ್ರತಿಕಾ ವರದಿ: ಹಂಟರ್ 11.11.1927)

ತಮಿಳುನಾಡಿನ ಬ್ರಾಹ್ಮಣೇತರ ಚಳುವಳಿಗಳ ಬಗ್ಗೆ ಅಪಾರ ಒಲವಿದ್ದ ಶಾಹು ಮಹಾರಾಜರು ಸತ್ಯಶೋಧಕ ಸಮಾಜದ ಸಭೆಗಳಿಗೆ ಜಸ್ಟೀಸ್ ಪಾರ್ಟಿಯ ನೇತಾರರಾಗಿದ್ದ ಡಾ.ಟಿ.ಎಂ.ನಾಯರ್, ಸರ್.ಪಿ.ಟಿ.ಚೆಟ್ಟಿಯಾರ್, ರಾಮಸ್ವಾಮಿ ಮೊದಲಿಯಾರ್ ಮುಂತಾದವರನ್ನು ಆಹ್ವಾನಿಸುತ್ತಿದ್ದರು. ಎರಡು ಚಳುವಳಿಗಳು ಒಂದೇ ದೃಷ್ಟೀಕೋನಗಳನ್ನು ಇಟ್ಟುಕೊಂಡಿದ್ದರಿಂದ ಸ್ವತಃ ಶಾಹು ಮಹಾರಾಜರು ಜಸ್ಟೀಸ್ ಪಾರ್ಟಿಗೆ ಅನೇಕ ಸಲ ಕಾಗದ ಪತ್ರಗಳನ್ನು ಬರೆದು ವಿಚಾರ ವಿನಿಮಯ ನಡೆಸುತ್ತಿದ್ದರು. 1920 ಏಪ್ರಿಲ್ 15ರಂದು ನಾಸಿಕ್‍ನಲ್ಲಿ ನಡೆದ ಸತ್ಯಶೋಧಕ ಸಮಾಜದದ ಅಧಿವೇಶನದಲ್ಲಿ ಮದ್ರಾಸಿನ ಪನಗಲ್ ಮಹಾರಾಜರು ಭಾಗವಹಿಸಿದ್ದರು. 1919-20ರಲ್ಲಿ ನಡೆದ ದಸರಾ ಉತ್ಸವದ ಸಂದರ್ಭದಲ್ಲಿ ಅಖಿಲ ಭಾರತ ಕಾಸ್ಟ್ ಕಾನ್ಫರೆನ್ಸ್ ನಡೆದಿತ್ತು. ಆಗ ನಾಲ್ವಡಿ ಕೃಷ್ಣರಾಜ ಒಡೆಯರ್ ಶಾಹು ಮಹಾರಾಜರಿಗೆ ಆಮಂತ್ರಣ ನೀಡಿ, ಈ ಅಧಿವೇಶನದಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದರು. ಆದರೆ ಶಾಹು ಮಹಾರಾಜರು ಅದರಲ್ಲಿ ತಾವು ಭಾಗವಹಿಸದ ಕಾರಣದಿಂದ ವಿ.ಆರ್.ಶಿಂದೆ ಎಂಬ ಸತ್ಯಶೋಧಕ ಸಮಾಜದ ಮುಖಂಡರನ್ನು ಮೈಸೂರಿಗೆ ಕಳುಹಿಸಿದ್ದರು.

ಶಾಹು ಮಹಾರಾಜರ ಶಿಕ್ಷಣ ಸೇವೆಯನ್ನು ಗಮನಿಸಿದ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯವು 1902ರ ಜೂನ್ 10ರಂದು ಇವರಿಗೆ ಎಲ್.ಎಲ್.ಡಿ ಪದವಿ ನೀಡಿ ಗೌರವಿಸಿದೆ. ಹಿಂದುಳಿದವರಿಗೆ, ದಮನಿತರಿಗೆ ಆಶಾಕಿರಣವಾಗಿದ್ದು, ಸಾಮಾಜಿಕ ಕ್ರಾಂತಿಯಲ್ಲಿ ತಮ್ಮದೇ ಆದ ಛಾಪನ್ನೊತ್ತಿ, ಸಮಾಜದ ಪ್ರಮುಖ ಆಧಾರ ಸ್ತಂಭಗಳಲ್ಲಿ ಒಬ್ಬರಾಗಿದ್ದ ಶಾಹು ಮಹಾರಾಜರು, ಕೆಲವು ಕಾಲ ಸಕ್ಕರೆ ಕಾಯಿಲೆಯಲ್ಲಿ ಬಳಲಿ, ಮೇ 6, 1922ರಲ್ಲಿ ನಿಧನರಾದರು.

ದೇವನಹಳ್ಳಿ | ಹೋರಾಟ ನಿರತ ರೈತರ ಬಂಧನ ಖಂಡಿಸಿ ನಾಳೆ ಸಿಎಂ ಮನೆಗೆ ಮುತ್ತಿಗೆ; ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...