Homeಕರ್ನಾಟಕದೇವನಹಳ್ಳಿಯಲ್ಲಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಭುಗಿಲೆದ್ದ ಆಕ್ರೋಶ

ದೇವನಹಳ್ಳಿಯಲ್ಲಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಭುಗಿಲೆದ್ದ ಆಕ್ರೋಶ

- Advertisement -
- Advertisement -

ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ಭೂಸ್ವಾಧೀನ ವಿರೋಧಿಸಿ, ಸಂಯುಕ್ತ ಹೋರಾಟ-ಕರ್ನಾಟಕ ನೇತೃತ್ವದಲ್ಲಿ ಬುಧವಾರ ನಡೆದ ‘ದೇವನಹಳ್ಳಿ ಚಲೋ’ ಪ್ರತಿಭಟನೆಯನ್ನು ಪೊಲೀಸರು ಹತ್ತಿಕ್ಕಿದ್ದು, ಪ್ರತಿಭಟನಾನಿರತ ಹೋರಾಟಗಾರರು ಮತ್ತು ರೈತರನ್ನು ಅಮಾನವೀಯವಾಗಿ ಎಳೆದಾಡಿ ಬಂಧಿಸಿದ್ದರು. ಸರ್ಕಾರದ ಈ ನಡೆ ಖಂಡಿಸಿ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾ ಕೇಂದ್ರಗಳಲ್ಲಿ ಇಂದು ಸರ್ಕಾರದ ವಿರುದ್ಧ ಜನಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚಪ್ಪರದಕಲ್ಲಿನ ಬಳಿಯಿರುವ ಜಿಲ್ಲಾಧಿಕಾರಿ ಕಚೇರಿ ಮುಂದೆ ದಲಿತ, ಕಾರ್ಮಿಕ, ಪ್ರಗತಿಪರ ಮತ್ತು ರೈತ ಸಂಘಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಬಲವಂತದ ಭೂಸ್ವಾಧೀನ ವಾಪಸ್‌ ಪಡೆಯಬೇಕು ಹಾಗೂ ಪ್ರತಿಭಟನಾನಿರತರನ್ನು ಬಂಧಿಸಲು ಹಿಂಸಾತ್ಮಕ ದಾರಿ ಬಳಸಿದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಮುಖಂಡರು ಒತ್ತಾಯಿಸಿದ್ದರು.

ಪೊಲೀಸರಿಂದ ನಿನ್ನೆ ದೌರ್ಜನ್ಯಕ್ಕೆ ಒಳಗಾಗಿದ್ದ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಕಾರಳ್ಳಿ ಶ್ರೀನಿವಾಸ್, ನಂಜಪ್ಪ, ರಮೇಶ್ ಚೀಮಾಚನಹಳ್ಳಿ, ಮಾರೇಗೌಡ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕರಾದ ಕೊರಳೂರು ಶ್ರೀನಿವಾಸ್ ಸೇರಿದಂತೆ ಹಲವರು ಇದ್ದರು.

ಬಳ್ಳಾರಿ

ದೇವನಹಳ್ಳಿಯಲ್ಲಿ ಶಾಂತಿಯುತ ಧರಣಿ ನಡೆಸುತ್ತಿದ್ದ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿಗಳು ದಬ್ಬಾಳಿಕೆಯಿಂದ ಹೋರಾಟಗಾರರನ್ನು ಬಂಧಿಸಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ( ಸಮಿತಿ ಅಂಬೇಡ್ಕರ್ ವಾದ) ಬಳ್ಳಾರಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ

ದೇವನಹಳ್ಳಿಯಲ್ಲಿ ಶಾಂತಿಯುತವಾಗಿ ನಡೆಸುತ್ತಿದ್ದ ಹೋರಾಟದಲ್ಲಿ ರೈತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿ ಬಂಧಿಸಿರುವ ಕ್ರಮವನ್ನು ವಿರೋಧಿಸಿ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಬಂಧಿಸಿರುವ ಮುಖಂಡರು ಹಾಗೂ ಹೋರಾಟಗಾರರನ್ನು ಬೇಷರತ್ ಆಗಿ ಬಿಡುಗಡೆ ಮಾಡಬೇಕು. ಡಿಸಿಪಿ ಸಜಿತ್‌ರವರ ಮೇಲೆ‌ ಕಾನೂನು ಕ್ರಮ ತೆಗೆದುಕೊಳ್ಳಬೇಕು, ಚನ್ನರಾಯಪಟ್ಟಣ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯಲ್ಲಿ ಬಲವಂತದ ಭೂಸ್ವಾದೀನದ ವಿರುದ್ಧ ಹಮ್ಮಿಕೊಂಡಿದ್ದ ದೇವನಹಳ್ಳಿ ಚಲೋ ಹೋರಾಟದಲ್ಲಿ ರೈತರು ಮತ್ತು ಹೋರಾಟಗಾರರ ಮೇಲೆ ದೌರ್ಜನ್ಯ ನಡೆಸಿ ಬಂಧಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ ಸಿಪಿಐ(ಎಂ)ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿತ್ತು. ಸಿಪಿಐ(ಎಂ) ಬೆಂಗಳೂರು ಉತ್ತರ-ದಕ್ಷಿಣ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ.ಕೆ.ಪ್ರಕಾಶ್, ಸಿಪಿಐಎಂ ರಾಜ್ಯ ನಾಯಕರಾದ ಯು.ಬಸವರಾಜ, ಗೋಪಾಲಕೃಷ್ಣ ಅರಳಹಳ್ಳಿ, ಕೆ.ಮಹಾಂತೇಶ್, ಉತ್ತರ ಜಿಲ್ಲಾ ಕಾರ್ಯದರ್ಶಿ ಎನ್.ಪ್ರತಾಪ್ ಸಿಂಹ, ರಾಜ್ಯ ಸಮಿತಿ ಸದಸ್ಯರಾದ ಯಶವಂತ್ ಹಾಗೂ ಇತರರು ಭಾಗವಹಿಸಿ ಮಾತನಾಡಿದರು.

ಹೊಸಕೋಟೆ

ದಾವಣಗೆರೆ

ಮಂಡ್ಯ

ಹಾಗಲಗಂಚಿ-ಶೃಂಗೇರಿ

ಆಳಂದ

ಕಂಪ್ಲಿ

ಕುಡತಿನಿ

ಕುರಗೋಡು

ಚಿಕ್ಕಬಳ್ಳಾಪುರ

ತುಮಕೂರು

ಪಾವಗಡ

ಬಾಗೇಪಲ್ಲಿ

ಹಾಸನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕೆ ಸ್ಥಾಪನೆಗಾಗಿ ಸ್ವಾಧೀನಕ್ಕೆ ತೆಗೆದುಕೊಳ್ಳಲು ಮುಂದಾಗಿರುವ ಸರ್ಕಾರದ ನಿರ್ಧಾರ ವಿರೋಧಿಸಿ ಮೂರೂವರೆ ವರ್ಷಗಳಿಂದ ರೈತರು ಹೋರಾಟ ನಡೆಸಿತ್ತಿದ್ದಾರೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಮತ್ತು ಕೆಐಎಡಿಬಿ ನಡುವಿನ ಸಂಘರ್ಷ ನಿರ್ಣಾಯ ಹಂತಕ್ಕೆ ತಲುಪಿದ್ದು, ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆ ಬುಧವಾರ (ಜೂ.25) ದೇವನಹಳ್ಳಿ ಚಲೋ ಹೋರಾಟಕ್ಕೆ ಕರೆ ನೀಡಿತ್ತು.

ಚನ್ನರಾಯಪಟ್ಟಣ ರೈತರ ಬಂಧನ: ಸಿಎಂ ಭೇಟಿಗೆ ಆಗಮಿಸಿದ್ದ ನಟ ಪ್ರಕಾಶ್‌ ರಾಜ್‌ ಅವರನ್ನು ತಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...