Homeಕರ್ನಾಟಕಚನ್ನರಾಯಪಟ್ಟಣ ರೈತರಿಗಾಗಿ ಅಹೋರಾತ್ರಿ ಹೋರಾಟ: 'ಸಂಯುಕ್ತ ಹೋರಾಟ ಕರ್ನಾಟಕ' ಘೋಷಣೆ

ಚನ್ನರಾಯಪಟ್ಟಣ ರೈತರಿಗಾಗಿ ಅಹೋರಾತ್ರಿ ಹೋರಾಟ: ‘ಸಂಯುಕ್ತ ಹೋರಾಟ ಕರ್ನಾಟಕ’ ಘೋಷಣೆ

ಡಿಸಿಪಿ ಸಚಿತ್ ಕುಮಾರ್ ಹೋರಾಟ ಒಡೆಯಲು ಬ್ರಿಟಿಷರ ರೀತಿಯಲ್ಲಿ ನಡೆದುಕೊಂಡಿದ್ದು, ಅವರನ್ನು ಅಮಾನತು ಮಾಡಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹ ವ್ಯಕ್ತವಾಗಿದೆ

- Advertisement -
- Advertisement -

ಬುಧವಾರ ದೇವನಹಳ್ಳಿಯಲ್ಲಿ ನಡೆದ ಚನ್ನರಾಯಪಟ್ಟಣ ರೈತರ ಹೋರಾಟಗಾರರ ಮೇಲಿನ ಪೊಲೀಸರ ದೌರ್ಜನ್ಯದ ಹಿಂದೆ ಕೈಗಾರಿಕ ಸಚಿವ ಎಂ.ಬಿ. ಪಾಟೀಲ್ ಇದ್ದಾರೆ ಎಂದು ‘ಸಂಯುಕ್ತ ಹೋರಾಟ – ಕರ್ನಾಟಕ’ ಆರೋಪಿಸಿದ್ದು, ರೈತರ ಭೂಮಿ ವಾಪಾಸು ಆಗುವವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಠಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಶುಕ್ರವಾರ ಪ್ರಾರಂಭಿಸುವುದಾಗಿ ಹೇಳಿದೆ. ಗುರುವಾರ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಸಂಯುಕ್ತ ಹೋರಾಟ – ಕರ್ನಾಟಕ’ ಈ ತೀರ್ಮಾನ ತಿಳಿಸಿದೆ. ಚನ್ನರಾಯಪಟ್ಟಣ ರೈತರಿಗಾಗಿ

ದೇವನಹಳ್ಳಿ ಚಲೋ ಹೋರಾಟದಲ್ಲಿ ನಡೆದ ಬೆಳವಣಿಗೆ ಮತ್ತು ರೈತ ಹೋರಾಟದ ಮುಂದಿನ ನಡೆಗಳ ಬಗ್ಗೆ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ‘ಸಂಯುಕ್ತ ಹೋರಾಟ – ಕರ್ನಾಟಕ’ದ ಮುಖಂಡ, ರೈತ ನಾಯಕ ಬಡಗಲಪುರ ನಾಗೇಂದ್ರ, “ಡಿಸಿಪಿ ಸಚಿತ್ ಕುಮಾರ್ ಹೋರಾಟ ಒಡೆಯಲು ಬ್ರಿಟಿಷರ ರೀತಿಯಲ್ಲಿ ನಡೆದುಕೊಂಡರು. ಹೋರಾಟಗಾರರ ಬಂಧನದ ವೇಳೆ ಮಹಿಳೆ, ಮಕ್ಕಳು ಮತ್ತು ವೃದ್ಧರ ಜೊತೆಗೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಅವರನ್ನು ಅಮಾನುತುಗೊಳಿಸಿ ತನಿಖೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದರು.

ಹೋರಾಟವನ್ನು ಹತ್ತಿಕ್ಕಲು ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಸರ್ಕಾರಗಳು ಇಂತಹ ಪ್ರಯತ್ನಗಳು ಮಾಡುತ್ತಲೇ ಬಂದಿದೆ. ಆದರೆ ಹೋರಾಟಗಾರರನ್ನು ಈ ರೀತಿ ಅನಾನುಷವಾಗಿ ಪೊಲೀಸರು ಎಲ್ಲೂ ನಡೆಸಿಕೊಂಡಿಲ್ಲ ಎಂದು ಬಡಗಲಪುರ ನಾಗೇಂದ್ರ ಅವರು ಹೇಳಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕು ಎಂದು ಜನರ ಮೂಲಭೂತ ಹಕ್ಕಾಗದ ಪ್ರತಿಭಟನೆಯ ಹಕ್ಕನ್ನು ಕಿತ್ತುಕೊಳ್ಳುವ ತಪ್ಪನ್ನು ಹೈಕೋರ್ಟ್‌ ಕೂಡಾ ಮಾಡಿದೆ ಎಂದು ಅವರು ಕರ್ನಾಟಕ ಹೈಕೋರ್ಟ್ ಆದೇಶವನ್ನು ಆಕ್ಷೇಪ ಮಾಡಿದರು.

“ವಿಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯ ಅವರು ಹೋರಾಟಗಾರರ ಪರವಾಗಿ ನಿಂತು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅಧಿಸೂಚನೆ ವಾಪಾಸು ಪಡೆಯುತ್ತೇವೆ ಎಂದು ಹೇಳಿದ್ದರು. ಆದರೆ ಸರ್ಕಾರ ಬಂದ ನಂತರ ಅವರ ಸರ್ಕಾರವೆ ರೈತರ ಭೂಮಿಯನ್ನು ಕಿತ್ತುಕೊಳ್ಳುವ ಅಂತಿಮ ಅಧಿಸೂಚನೆ ಹೊರಡಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದೇವನಹಳ್ಳಿಯ ಹೊರಾಟವನ್ನು ಹತ್ತಿಕ್ಕಲು ಸರ್ಕಾರ ಪೊಲೀಸ್‌ ಬಲವನ್ನು ಬಳಸಿ ರಾಕ್ಷಸ ರೂಪದಲ್ಲಿ ವರ್ತಿಸಿತು. ಇಷ್ಟು ದೊಡ್ಡ ಪ್ರತಿಭಟನೆ ನಡೆದರೂ ಸರ್ಕಾರ ಯಾವುದೇ ಹೇಳಿಕೆ ನೀಡಿರಲಿಲ್ಲ. ನಮ್ಮನ್ನು ಬಂಧಿಸಿದ ನಂತರ ಕರೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅವರು ಒಂದು ವಾರ ಸಮಯ ಕೇಳಿದ್ದರು. ಹಾಗಾಗಿಯೆ ಬಂಧನಕ್ಕೆ ಒಳಗಾಗಿದ್ದ ನಾವು ಬಿಡುಗಡೆ ಹೊಂದಿದ್ದೇವೆ” ಎಂದು ಹೇಳಿದರು.

“ಅದಾಗ್ಯೂ, ನಮ್ಮ ಹೋರಾಟವನ್ನು ಯಾವುದೇ ಕಾರಣಕ್ಕೂ ನಾವು ಕೈಬಿಡೊಲ್ಲ. ನಾಳೆಯಿಂದ ಸಂಯುಕ್ತ ಹೋರಾಟ ಕರ್ನಾಟಕ ಅಹೋರಾತ್ರಿ ಧರಣಿ ಸತ್ಯಾಗ್ರಹ ಪ್ರಾರಂಭ ಮಾಡುತ್ತದೆ. ಭೂಮಿ ವಾಪಾಸು ಪಡೆಯುವರೆಗೆ ಈ ಹೋರಾಟ ಮುಂದುವರೆಯಲಿದ್ದು, ಭೂಮಿ ತಂಟೆಗೆ ಬಂದ ಯಾವುದೇ ಸರ್ಕಾರಕ್ಕೂ, ಪಕ್ಷಕ್ಕೂ ಉಳಿಗಾಲವಿಲ್ಲ” ಎಂದು ಕಿಡಿ ಕಾರಿದರು.

ಸಂಯುಕ್ತ ಹೋರಾಟ ಕರ್ನಾಟಕ ಇದರ ನಾಯಕಿ ಎಸ್. ವರಲಕ್ಷ್ಮಿ ಮಾತನಾಡಿ, ವಿಧಾನಸಭಾ ಚುನಾವಣೆ ಮುಂಚೆ ಹೋರಾಟಕ್ಕೆ ಭೇಟಿ ಕೊಟ್ಟು ರೈತರ ಪರವಾಗಿ ಮಾತನಾಡಿದ್ದ ಸಿದ್ದರಾಮಯ್ಯ, ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಬೇಡಿಕೆ ಪರಿಗಣಿಸುತ್ತೇವೆ ಎಂದು ಹೇಳಿದ್ದರು. ಅದರಂತೆ ಅವರ ಈ ವೈಯಕ್ತಿಕ ಬದ್ಧತೆಯನ್ನು ಅವರು ಈಡೇರಿಸಬೇಕಿದೆ ಎಂದು ಆಗ್ರಹಿಸಿದರು.

“ರೈತ ಹೋರಾಟದ ಬಗ್ಗೆ ನಾಲ್ಕೈದು ಸುತ್ತಿನ ಚರ್ಚೆ ಆಗಿವೆ. ಹೋರಾಟದ ಹಿಂದಿನ ದಿನ ಇಬ್ಬರು ಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿ 500 ಎಕರೆ ಭೂಮಿಯನ್ನು ಬಿಡಲು ಸಾಧ್ಯ ಎಂದು ಹೇಳುತ್ತಾರೆ. ಮುಖ್ಯಮಂತ್ರಿ ಹೇಳಿಕೆ ನೀಡುವುದಕ್ಕಿಂತ ಮುಂಚೆ ತರಾತುರಿಯಲ್ಲಿ ಅವರ ಪತ್ರಿಕಾಗೋಷ್ಠಿ ಮಾಡಿದ್ದು ಏಕೆ?” ಎಂದು ವರಲಕ್ಷ್ಮಿ ಅವರು ಪ್ರಶ್ನಿಸಿದರು.

“ನಿನ್ನೆಯ ಹೋರಾಟದ ವೇಳೆ ಪೊಲೀಸರು ಅತ್ಯಂತ ಅಮಾನುಷವಾಗಿ ನಡೆದುಕೊಂಡಿದ್ದಾರೆ. ಹೋರಾಟದ ಕನ್ವಿನರ್ ಅವರನ್ನು ವೇದಿಕೆಗೆ ಹತ್ತಿ ಕುತ್ತಿಗೆ ಹಿಡಿದು ಕೆಳಗಡೆ ದಬ್ಬಿದ್ದಾರೆ. ಕಾಂಗ್ರೆಸ್‌ನ ಸಿದ್ದರಾಮಯ್ಯ ಸರ್ಕಾರ ಹೀಗೆ ನಡೆದುಕೊಳ್ಳುತ್ತದೆ ಎಂದು ನಾವು ಭಾವಿಸಿರಲಿಲ್ಲ. ನಿಮ್ಮ ಮಾತನ್ನು ನಡೆಸಿಕೊಡಿ ಎಂದಷ್ಟೇ ನಾವು ಹೇಳಿದ್ದೇವೆ. ನಾವು ಅವರ ನಿಮ್ಮ ಮೇಲೆ ನಂಬಿಕೆ ಇಟ್ಟಿದ್ದೆವು‌, ಆದರೆ ಅವರು ನಮ್ಮನ್ನು ನಡೆಸಿಕೊಂಡಿದ್ದು ಸರಿಯಲ್ಲ. ಆದರೂ, ಸಭೆ ಕರೆಯುತ್ತೇವೆ ಎಂದು ಒಂದು ವಾರ ಸಮಯ ಕೇಳಿದ್ದಾರೆ. ಕಾದು ನೋಡೋಣ, ನಮ್ಮ ಬೇಡಿಕೆಯನ್ನು ಈಡೇರಿಸಿ ಎಂದಷ್ಟೆ ಮಾತ್ರ ನಾವು ಕೇಳಿಕೊಳ್ಳುತ್ತೇವೆ” ಎಂದು ಹೇಳಿದರು.

ಹೋರಾಟಗಾರ ನೂರ್ ಶ್ರೀಧರ್ ಮಾತನಾಡಿ, ನಿನ್ನೆಯ ಪೊಲೀಸರ ನಡೆಗೆ ಕಾರಣ ಯಾರು? ಪೊಲೀಸರಿಗೆ ಹೀಗೆ ಆದೇಶ ನೀಡಿದವರು ಯಾರು? ಇದರ ಹಿಂದೆ ದೊಡ್ಡ ಲಾಭಿ, ಡೀಲ್ ಇದೆ ಎಂದ ಅವರು, “ನಿನ್ನೆಯ ಪೊಲೀಸರ ನಡೆಯ ಹಿಂದೆ ಸಚಿವ ಎಂ.ಬಿ. ಪಾಟೀಲ್ ಇದ್ದಾರೆ. ಸಿದ್ದರಾಮಯ್ಯ ಅವರು ಒಪ್ಪಿದರೂ, ಸಚಿವ ಎಂ.ಬಿ. ಪಾಟೀಲ್ ಅವರು ರೈತರ ಭೂಮಿಯನ್ನು ಬಿಡುವಂತೆ ಕಾಣುತ್ತಿಲ್ಲ” ಎಂದು ನೇರವಾಗಿ ಆರೋಪಿಸಿದರು.

ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, “ಸರ್ಕಾರ ಹೆಸರಿಗಷ್ಟೇ ಇರೋದು. ಇದೊಂದು ಭ್ರಮೆ. ಆಡಳಿತ ಕಾರ್ಪೊರೇಟ್ ಕಂಪೆನಿಗಳ ಕೈಯ್ಯಲ್ಲಿದೆ. ಸಿದ್ದರಾಮಯ್ಯ ಅವರ ಮೇಲಿನ ನಂಬಿಕೆಯನ್ನು ಮತ್ತೊಮ್ಮೆ ನಾವು ಪರಿಶೀಲನೆ ಮಾಡಬೇಕಿದೆ.‌ ಎಂ.ಬಿ. ಪಾಟೀಲ್ ಅವರು ಕೈಗಾರಿಕಾ ಸಚಿವರಂತೆ ನಡೆದುಕೊಳ್ಳುತ್ತಿಲ್ಲ, ಬದಲಾಗಿ ಕೈಗಾರಿಕೆಗಳ ಗುತ್ತಿಗೆಗಾರರಂತೆ ನಡೆದುಕೊಳ್ಳುತ್ತಿದ್ದಾರೆ” ಎಂದು ಹೇಳಿದರು.

ಕೆಐಎಡಿಬಿ ಎನ್ನುವ ಕಾಯ್ದೆಯ ತಂದು, ರಿಯಲ್ ಎಸ್ಟೇಟ್‌ ಕುಳಗಳ ದುಷ್ಟ ಕೂಟವನ್ನು ಸರ್ಕಾರ ರಚನೆ ಮಾಡಿದೆ. ಕೆಐಎಡಿಬಿ ಈಗ ಒಂದು ದಳ್ಳಾಲಿ ಕೇಂದ್ರದಾಗಿದ್ದು, ಅದನ್ನು ಮುಚ್ಚಬೇಕಿದೆ ಎಂದು ಅವರು ಆಗ್ರಹಿಸಿದರು. ಚನ್ನರಾಯಪಟ್ಟಣ ರೈತರಿಗಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜುಲೈ 4ರಂದು ಚನ್ನರಾಯಪಟ್ಟಣ ರೈತರ ಜೊತೆ ಸಭೆ : ಸಿಎಂ ಸಿದ್ದರಾಮಯ್ಯ ಭರವಸೆ

ಜುಲೈ 4ರಂದು ಚನ್ನರಾಯಪಟ್ಟಣ ರೈತರ ಜೊತೆ ಸಭೆ : ಸಿಎಂ ಸಿದ್ದರಾಮಯ್ಯ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...