Homeರಾಜಕೀಯಸ್ಥಾಪನೆಯೇ ಆಗಿರದ ಜಿಯೋ ಭಾರತದ ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಂತೆ!

ಸ್ಥಾಪನೆಯೇ ಆಗಿರದ ಜಿಯೋ ಭಾರತದ ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಂತೆ!

- Advertisement -
- Advertisement -

ಕೇಂದ್ರ ಸರಕಾರ ಯುಜಿಸಿಯನ್ನು ಮುಚ್ಚಿ, ಭಾರತದ ಉನ್ನತ ಶಿಕ್ಷಣ ಸಂಸ್ಥೆಗಳನ್ನು ತಾನೇ ನೇರವಾಗಿ ನಿಯಂತ್ರಿಸುವ ಹುನ್ನಾರು ನಡೆಸುತ್ತಿರುವ ಸಂದರ್ಭದಲ್ಲೇ ದೇಶದ ಆರು ಶೈಕ್ಷಣಿಕ ಸಂಸ್ಥೆಗಳನ್ನು  Institution of Eminence ಎಂದು ಪಟ್ಟಿ ಮಾಡಿದೆ. ಹೀಗೆ ಪರಿಗಣಿಸಲ್ಪಟ್ಟ ಸಂಸ್ಥೆಗಳಲ್ಲಿ ಮೂರು ಸರಕಾರಿ ವಲಯಕ್ಕೆ ಸೇರಿದ್ದರೆ, ಉಳಿದ ಮೂರು ಖಾಸಗಿ ವಲಯಕ್ಕೆ ಸೇರಿವೆ.
ಮಾನವ ಸಂಪನ್ಮೂಲ ಸಚಿವಾಲಯ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ , ಐಐಟಿ ಬಾಂಬೆ ಮತ್ತು ಐಐಟಿ ದೆಹಲಿ ಸಂಸ್ಥೆಗಳನ್ನು ಸಾರ್ವಜನಿಕ ವಲಯದಿಂದ ಆಯ್ಕೆ ಮಾಡಿದೆ. ಇದಲ್ಲದೆ 1964ರಲ್ಲಿ ಪ್ರಾರಂಭವಾದ ರಾಜಾಸ್ಥಾನದ ಬಿರ್ಲಾ ಇನ್‍ಸ್ಟ್ಯೂಟ್ ಆಫ್ ಟೆಕ್ನಾಲಜಿ , 1953ರಲ್ಲಿ ಕರ್ನಾಟಕದಲ್ಲಿ ಪ್ರಾರಂಭವಾದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಮತ್ತು ರಿಲಯನ್ಸ್ ಸಂಸ್ಥೆಯ ಜಿಯೋ ಇನ್‍ಸ್ಟಿಟ್ಯೂಷನ್‍ಗಳನ್ನು ಆಯ್ಕೆ ಮಾಡಲಾಗಿದೆ.
ಹೀಗೆ ಖಾಸಗಿ ವಲಯದಿಂದ ಆಯ್ಕೆಯಾದ BITS Pilani ಸಂಸ್ಥೆ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಈಗಾಗಲೆ ಹಲವು ದಶಕಗಳ ಕಾಲ ಕಾರ್ಯನಿರ್ವಹಿಸಿ ಪ್ರಸಿದ್ಧಿಗೆ ಬಂದಿವೆ. ಆದರೆ ಈ ಎಮಿನೆನ್ಸ್ ಪಟ್ಟಕ್ಕೇರಿದ ಜಿಯೋ ಇನ್‍ಸ್ಟಿಟ್ಯೂಟ್ ಇನ್ನೂ ಅಸ್ತಿತ್ವಕ್ಕೆ ಬಂದೇ ಇಲ್ಲ ಎಂಬುದು ವಿಚಿತ್ರವಾದರೂ ಸತ್ಯ. ಇನ್ನೂ ಹೇಳಬೇಕೆಂದರೆ, ಜಿಯೋ ಇನ್‍ಸ್ಟಿಟ್ಯೂಟ್ ತನ್ನ ಕಾರ್ಪೋರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ  ಅಡಿ ತೆರಿಗೆ ವಿನಾಯಿತಿ ಪಡೆಯಲಿಕ್ಕಾಗಿಯೇ ಜಿಯೋ ಇನ್‍ಸ್ಟಿಟ್ಯೂಟ್‍ನ್ನು ತೆರೆದಿದೆ ಎಂಬ ಆರೋಪವಿದೆ. ಹೀಗೆ ‘ಅಸ್ತಿತ್ವದಲ್ಲಿಯೇ ಇಲ್ಲದ ಈ ಸಂಸ್ಥೆಯನ್ನು ಕೇಂದ್ರ ಸರಕಾರ ಭಾರತದ `ಶ್ರೇಷ್ಠ ಸಂಸ್ಥೆ’  ಎಂದು ಪಟ್ಟಿ ಮಾಡುವ ಜರಾರಾದರೂ ಏನಿತ್ತು?’ ಎಂದು ಖಾಸಗಿ ವಲಯದ ಉನ್ನತ ಶಿಕ್ಷಣ ಸಂಸ್ಥೆಗಳೇ ಪ್ರಶ್ನಿಸುತ್ತಿವೆ. ಕೇಂದ್ರ ಚುನಾವಣಾಧಿಕಾರಿಯಾಗಿದ್ದ ಗೋಪಾಲಸ್ವಾಮಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಆಯ್ಕೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಈ ಶೀರ್ಷಿಕೆಯಡಿ ಪಟ್ಟಿ ಮಾಡುವಾಗ ನಿರ್ದಿಷ್ಟ ಮಾನದಂಡಗಳನ್ನು ಅನುಸರಿಸಬೇಕು. ಸದರಿ ಸಂಸ್ಥೆಯು ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಈಗಾಗಲೆ ಉನ್ನತ ಸಾಧನೆ ಮಾಡಿರಬೇಕು. ತನ್ನ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಅಂತರ್‍ಶಿಸ್ತೀಯ ವಿಷಯಗಳನ್ನು ಅಳವಡಿಸಿಕೊಂಡಿರಬೇಕು. ಜೊತೆಗೆ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿದ್ಯಾರ್ಥಿಗಳನ್ನು ಮತ್ತು ಬೋಧಕ ಸಿಬ್ಬಂದಿಯನ್ನು ಹೊಂದಿರಬೇಕು. ಇದಲ್ಲದೆ, ಅಂತರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸವಲತ್ತು ಮತ್ತು ಬೋಧನಾ ವಿಧಾನಗಳನ್ನು ಹೊಂದಿರಬೇಕು. ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಯಲ್ಲಿ ಈ ಎಲ್ಲ ವಿಶೇಷಣಗಳನ್ನು ಕಂಡುಹಿಡಿದ ಪ್ರಭೃತಿಗಳ ಅಂಬಾನಿ ನಿಷ್ಠೆ ಮೆಚ್ಚಲೇಬೇಕು.
ಈ ಆಯ್ಕೆ ಕುರಿತು ಹರಿದು ಬಂದ ಪ್ರಶ್ನೆಗಳಿಗೆ ಎನ್ ಗೋಪಾಲಸ್ವಾಮಿ ಇದುವರೆಗೂ ಉತ್ತರಿಸಿಲ್ಲ. ಆದರೆ, ಮಾನವ ಸಂಪನ್ಮೂಲ ಸಚಿವಾಲಯವು `ದೇಶದ ಶೈಕ್ಷಣಿಕ ವಲಯದಲ್ಲಿ ಖಾಸಗಿ ಬಂಡವಾಳ ಹರಿದು ಬರಬೇಕು. ಆ ಮೂಲಕ ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಶೈಕ್ಷಣಿಕ ಸಂಸ್ಥೆಗಳು ಭಾರತದಲ್ಲಿ ಸ್ಥಾಪನೆಯಾಗುವಂತಾಗಬೇಕು’ ಎಂಬ ಕಾರಣದಿಂದ ಜಿಯೋ ಇನ್‍ಸ್ಟಿಟ್ಯೂಟ್‍ನ್ನು ಶ್ರೇಷ್ಠ ಸಂಸ್ಥೆ ಎಂದು ಪರಿಗಣಿಸಲಾಗಿದೆ ಎಂಬ ಸಮಾಜಾಯಿಷಿಯನ್ನು ನೀಡಿದೆ.
ಈ ಹಿಂದೆ ಜಿಯೋ ಮೊಬೈಲ್ ಸಂಸ್ಥೆಯನ್ನು ಆರಂಭಿಸಿ ಅದರ ಉದ್ಘಾಟನಾ ಸಮಾರಂಭಕ್ಕೆ ದೇಶದ ಪ್ರಧಾನಮಂತ್ರಿಯನ್ನೇ ಆಹ್ವಾನಿಸಿ ಜಿಯೋಗೆ ಅವರನ್ನು ಪ್ರಚಾರ ರಾಯಭಾರಿಯಂತೆ ರಿಲಯನ್ಸ್ ಸಂಸ್ಥೆ ಬಳಸಿತ್ತು. ಈಗ ಅಸ್ತಿತ್ವದಲ್ಲಿಯೇ ಇಲ್ಲದ ತನ್ನ ಸಂಸ್ಥೆಗೆ Institution of Eminence ಸ್ಥಾನಮಾನವನ್ನು ಪಡೆದಿರುವುದು ದೇಶದ ರಾಜಕಾರಣಕ್ಕೆ ಹಿಡಿದ ಕನ್ನಡಿಯಂತಿದೆ.

 

– ಅಲ್ಲಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...