Homeರಾಜಕೀಯಸ್ಥಾಪನೆಯೇ ಆಗಿರದ ಜಿಯೋ ಭಾರತದ ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಂತೆ!

ಸ್ಥಾಪನೆಯೇ ಆಗಿರದ ಜಿಯೋ ಭಾರತದ ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಂತೆ!

- Advertisement -
- Advertisement -

ಕೇಂದ್ರ ಸರಕಾರ ಯುಜಿಸಿಯನ್ನು ಮುಚ್ಚಿ, ಭಾರತದ ಉನ್ನತ ಶಿಕ್ಷಣ ಸಂಸ್ಥೆಗಳನ್ನು ತಾನೇ ನೇರವಾಗಿ ನಿಯಂತ್ರಿಸುವ ಹುನ್ನಾರು ನಡೆಸುತ್ತಿರುವ ಸಂದರ್ಭದಲ್ಲೇ ದೇಶದ ಆರು ಶೈಕ್ಷಣಿಕ ಸಂಸ್ಥೆಗಳನ್ನು  Institution of Eminence ಎಂದು ಪಟ್ಟಿ ಮಾಡಿದೆ. ಹೀಗೆ ಪರಿಗಣಿಸಲ್ಪಟ್ಟ ಸಂಸ್ಥೆಗಳಲ್ಲಿ ಮೂರು ಸರಕಾರಿ ವಲಯಕ್ಕೆ ಸೇರಿದ್ದರೆ, ಉಳಿದ ಮೂರು ಖಾಸಗಿ ವಲಯಕ್ಕೆ ಸೇರಿವೆ.
ಮಾನವ ಸಂಪನ್ಮೂಲ ಸಚಿವಾಲಯ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ , ಐಐಟಿ ಬಾಂಬೆ ಮತ್ತು ಐಐಟಿ ದೆಹಲಿ ಸಂಸ್ಥೆಗಳನ್ನು ಸಾರ್ವಜನಿಕ ವಲಯದಿಂದ ಆಯ್ಕೆ ಮಾಡಿದೆ. ಇದಲ್ಲದೆ 1964ರಲ್ಲಿ ಪ್ರಾರಂಭವಾದ ರಾಜಾಸ್ಥಾನದ ಬಿರ್ಲಾ ಇನ್‍ಸ್ಟ್ಯೂಟ್ ಆಫ್ ಟೆಕ್ನಾಲಜಿ , 1953ರಲ್ಲಿ ಕರ್ನಾಟಕದಲ್ಲಿ ಪ್ರಾರಂಭವಾದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಮತ್ತು ರಿಲಯನ್ಸ್ ಸಂಸ್ಥೆಯ ಜಿಯೋ ಇನ್‍ಸ್ಟಿಟ್ಯೂಷನ್‍ಗಳನ್ನು ಆಯ್ಕೆ ಮಾಡಲಾಗಿದೆ.
ಹೀಗೆ ಖಾಸಗಿ ವಲಯದಿಂದ ಆಯ್ಕೆಯಾದ BITS Pilani ಸಂಸ್ಥೆ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಈಗಾಗಲೆ ಹಲವು ದಶಕಗಳ ಕಾಲ ಕಾರ್ಯನಿರ್ವಹಿಸಿ ಪ್ರಸಿದ್ಧಿಗೆ ಬಂದಿವೆ. ಆದರೆ ಈ ಎಮಿನೆನ್ಸ್ ಪಟ್ಟಕ್ಕೇರಿದ ಜಿಯೋ ಇನ್‍ಸ್ಟಿಟ್ಯೂಟ್ ಇನ್ನೂ ಅಸ್ತಿತ್ವಕ್ಕೆ ಬಂದೇ ಇಲ್ಲ ಎಂಬುದು ವಿಚಿತ್ರವಾದರೂ ಸತ್ಯ. ಇನ್ನೂ ಹೇಳಬೇಕೆಂದರೆ, ಜಿಯೋ ಇನ್‍ಸ್ಟಿಟ್ಯೂಟ್ ತನ್ನ ಕಾರ್ಪೋರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ  ಅಡಿ ತೆರಿಗೆ ವಿನಾಯಿತಿ ಪಡೆಯಲಿಕ್ಕಾಗಿಯೇ ಜಿಯೋ ಇನ್‍ಸ್ಟಿಟ್ಯೂಟ್‍ನ್ನು ತೆರೆದಿದೆ ಎಂಬ ಆರೋಪವಿದೆ. ಹೀಗೆ ‘ಅಸ್ತಿತ್ವದಲ್ಲಿಯೇ ಇಲ್ಲದ ಈ ಸಂಸ್ಥೆಯನ್ನು ಕೇಂದ್ರ ಸರಕಾರ ಭಾರತದ `ಶ್ರೇಷ್ಠ ಸಂಸ್ಥೆ’  ಎಂದು ಪಟ್ಟಿ ಮಾಡುವ ಜರಾರಾದರೂ ಏನಿತ್ತು?’ ಎಂದು ಖಾಸಗಿ ವಲಯದ ಉನ್ನತ ಶಿಕ್ಷಣ ಸಂಸ್ಥೆಗಳೇ ಪ್ರಶ್ನಿಸುತ್ತಿವೆ. ಕೇಂದ್ರ ಚುನಾವಣಾಧಿಕಾರಿಯಾಗಿದ್ದ ಗೋಪಾಲಸ್ವಾಮಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಆಯ್ಕೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಈ ಶೀರ್ಷಿಕೆಯಡಿ ಪಟ್ಟಿ ಮಾಡುವಾಗ ನಿರ್ದಿಷ್ಟ ಮಾನದಂಡಗಳನ್ನು ಅನುಸರಿಸಬೇಕು. ಸದರಿ ಸಂಸ್ಥೆಯು ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಈಗಾಗಲೆ ಉನ್ನತ ಸಾಧನೆ ಮಾಡಿರಬೇಕು. ತನ್ನ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಅಂತರ್‍ಶಿಸ್ತೀಯ ವಿಷಯಗಳನ್ನು ಅಳವಡಿಸಿಕೊಂಡಿರಬೇಕು. ಜೊತೆಗೆ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿದ್ಯಾರ್ಥಿಗಳನ್ನು ಮತ್ತು ಬೋಧಕ ಸಿಬ್ಬಂದಿಯನ್ನು ಹೊಂದಿರಬೇಕು. ಇದಲ್ಲದೆ, ಅಂತರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸವಲತ್ತು ಮತ್ತು ಬೋಧನಾ ವಿಧಾನಗಳನ್ನು ಹೊಂದಿರಬೇಕು. ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಯಲ್ಲಿ ಈ ಎಲ್ಲ ವಿಶೇಷಣಗಳನ್ನು ಕಂಡುಹಿಡಿದ ಪ್ರಭೃತಿಗಳ ಅಂಬಾನಿ ನಿಷ್ಠೆ ಮೆಚ್ಚಲೇಬೇಕು.
ಈ ಆಯ್ಕೆ ಕುರಿತು ಹರಿದು ಬಂದ ಪ್ರಶ್ನೆಗಳಿಗೆ ಎನ್ ಗೋಪಾಲಸ್ವಾಮಿ ಇದುವರೆಗೂ ಉತ್ತರಿಸಿಲ್ಲ. ಆದರೆ, ಮಾನವ ಸಂಪನ್ಮೂಲ ಸಚಿವಾಲಯವು `ದೇಶದ ಶೈಕ್ಷಣಿಕ ವಲಯದಲ್ಲಿ ಖಾಸಗಿ ಬಂಡವಾಳ ಹರಿದು ಬರಬೇಕು. ಆ ಮೂಲಕ ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಶೈಕ್ಷಣಿಕ ಸಂಸ್ಥೆಗಳು ಭಾರತದಲ್ಲಿ ಸ್ಥಾಪನೆಯಾಗುವಂತಾಗಬೇಕು’ ಎಂಬ ಕಾರಣದಿಂದ ಜಿಯೋ ಇನ್‍ಸ್ಟಿಟ್ಯೂಟ್‍ನ್ನು ಶ್ರೇಷ್ಠ ಸಂಸ್ಥೆ ಎಂದು ಪರಿಗಣಿಸಲಾಗಿದೆ ಎಂಬ ಸಮಾಜಾಯಿಷಿಯನ್ನು ನೀಡಿದೆ.
ಈ ಹಿಂದೆ ಜಿಯೋ ಮೊಬೈಲ್ ಸಂಸ್ಥೆಯನ್ನು ಆರಂಭಿಸಿ ಅದರ ಉದ್ಘಾಟನಾ ಸಮಾರಂಭಕ್ಕೆ ದೇಶದ ಪ್ರಧಾನಮಂತ್ರಿಯನ್ನೇ ಆಹ್ವಾನಿಸಿ ಜಿಯೋಗೆ ಅವರನ್ನು ಪ್ರಚಾರ ರಾಯಭಾರಿಯಂತೆ ರಿಲಯನ್ಸ್ ಸಂಸ್ಥೆ ಬಳಸಿತ್ತು. ಈಗ ಅಸ್ತಿತ್ವದಲ್ಲಿಯೇ ಇಲ್ಲದ ತನ್ನ ಸಂಸ್ಥೆಗೆ Institution of Eminence ಸ್ಥಾನಮಾನವನ್ನು ಪಡೆದಿರುವುದು ದೇಶದ ರಾಜಕಾರಣಕ್ಕೆ ಹಿಡಿದ ಕನ್ನಡಿಯಂತಿದೆ.

 

– ಅಲ್ಲಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....