Homeರಾಜಕೀಯಸ್ಥಾಪನೆಯೇ ಆಗಿರದ ಜಿಯೋ ಭಾರತದ ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಂತೆ!

ಸ್ಥಾಪನೆಯೇ ಆಗಿರದ ಜಿಯೋ ಭಾರತದ ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಂತೆ!

- Advertisement -
- Advertisement -

ಕೇಂದ್ರ ಸರಕಾರ ಯುಜಿಸಿಯನ್ನು ಮುಚ್ಚಿ, ಭಾರತದ ಉನ್ನತ ಶಿಕ್ಷಣ ಸಂಸ್ಥೆಗಳನ್ನು ತಾನೇ ನೇರವಾಗಿ ನಿಯಂತ್ರಿಸುವ ಹುನ್ನಾರು ನಡೆಸುತ್ತಿರುವ ಸಂದರ್ಭದಲ್ಲೇ ದೇಶದ ಆರು ಶೈಕ್ಷಣಿಕ ಸಂಸ್ಥೆಗಳನ್ನು  Institution of Eminence ಎಂದು ಪಟ್ಟಿ ಮಾಡಿದೆ. ಹೀಗೆ ಪರಿಗಣಿಸಲ್ಪಟ್ಟ ಸಂಸ್ಥೆಗಳಲ್ಲಿ ಮೂರು ಸರಕಾರಿ ವಲಯಕ್ಕೆ ಸೇರಿದ್ದರೆ, ಉಳಿದ ಮೂರು ಖಾಸಗಿ ವಲಯಕ್ಕೆ ಸೇರಿವೆ.
ಮಾನವ ಸಂಪನ್ಮೂಲ ಸಚಿವಾಲಯ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ , ಐಐಟಿ ಬಾಂಬೆ ಮತ್ತು ಐಐಟಿ ದೆಹಲಿ ಸಂಸ್ಥೆಗಳನ್ನು ಸಾರ್ವಜನಿಕ ವಲಯದಿಂದ ಆಯ್ಕೆ ಮಾಡಿದೆ. ಇದಲ್ಲದೆ 1964ರಲ್ಲಿ ಪ್ರಾರಂಭವಾದ ರಾಜಾಸ್ಥಾನದ ಬಿರ್ಲಾ ಇನ್‍ಸ್ಟ್ಯೂಟ್ ಆಫ್ ಟೆಕ್ನಾಲಜಿ , 1953ರಲ್ಲಿ ಕರ್ನಾಟಕದಲ್ಲಿ ಪ್ರಾರಂಭವಾದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಮತ್ತು ರಿಲಯನ್ಸ್ ಸಂಸ್ಥೆಯ ಜಿಯೋ ಇನ್‍ಸ್ಟಿಟ್ಯೂಷನ್‍ಗಳನ್ನು ಆಯ್ಕೆ ಮಾಡಲಾಗಿದೆ.
ಹೀಗೆ ಖಾಸಗಿ ವಲಯದಿಂದ ಆಯ್ಕೆಯಾದ BITS Pilani ಸಂಸ್ಥೆ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಈಗಾಗಲೆ ಹಲವು ದಶಕಗಳ ಕಾಲ ಕಾರ್ಯನಿರ್ವಹಿಸಿ ಪ್ರಸಿದ್ಧಿಗೆ ಬಂದಿವೆ. ಆದರೆ ಈ ಎಮಿನೆನ್ಸ್ ಪಟ್ಟಕ್ಕೇರಿದ ಜಿಯೋ ಇನ್‍ಸ್ಟಿಟ್ಯೂಟ್ ಇನ್ನೂ ಅಸ್ತಿತ್ವಕ್ಕೆ ಬಂದೇ ಇಲ್ಲ ಎಂಬುದು ವಿಚಿತ್ರವಾದರೂ ಸತ್ಯ. ಇನ್ನೂ ಹೇಳಬೇಕೆಂದರೆ, ಜಿಯೋ ಇನ್‍ಸ್ಟಿಟ್ಯೂಟ್ ತನ್ನ ಕಾರ್ಪೋರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ  ಅಡಿ ತೆರಿಗೆ ವಿನಾಯಿತಿ ಪಡೆಯಲಿಕ್ಕಾಗಿಯೇ ಜಿಯೋ ಇನ್‍ಸ್ಟಿಟ್ಯೂಟ್‍ನ್ನು ತೆರೆದಿದೆ ಎಂಬ ಆರೋಪವಿದೆ. ಹೀಗೆ ‘ಅಸ್ತಿತ್ವದಲ್ಲಿಯೇ ಇಲ್ಲದ ಈ ಸಂಸ್ಥೆಯನ್ನು ಕೇಂದ್ರ ಸರಕಾರ ಭಾರತದ `ಶ್ರೇಷ್ಠ ಸಂಸ್ಥೆ’  ಎಂದು ಪಟ್ಟಿ ಮಾಡುವ ಜರಾರಾದರೂ ಏನಿತ್ತು?’ ಎಂದು ಖಾಸಗಿ ವಲಯದ ಉನ್ನತ ಶಿಕ್ಷಣ ಸಂಸ್ಥೆಗಳೇ ಪ್ರಶ್ನಿಸುತ್ತಿವೆ. ಕೇಂದ್ರ ಚುನಾವಣಾಧಿಕಾರಿಯಾಗಿದ್ದ ಗೋಪಾಲಸ್ವಾಮಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಆಯ್ಕೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಈ ಶೀರ್ಷಿಕೆಯಡಿ ಪಟ್ಟಿ ಮಾಡುವಾಗ ನಿರ್ದಿಷ್ಟ ಮಾನದಂಡಗಳನ್ನು ಅನುಸರಿಸಬೇಕು. ಸದರಿ ಸಂಸ್ಥೆಯು ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಈಗಾಗಲೆ ಉನ್ನತ ಸಾಧನೆ ಮಾಡಿರಬೇಕು. ತನ್ನ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಅಂತರ್‍ಶಿಸ್ತೀಯ ವಿಷಯಗಳನ್ನು ಅಳವಡಿಸಿಕೊಂಡಿರಬೇಕು. ಜೊತೆಗೆ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿದ್ಯಾರ್ಥಿಗಳನ್ನು ಮತ್ತು ಬೋಧಕ ಸಿಬ್ಬಂದಿಯನ್ನು ಹೊಂದಿರಬೇಕು. ಇದಲ್ಲದೆ, ಅಂತರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸವಲತ್ತು ಮತ್ತು ಬೋಧನಾ ವಿಧಾನಗಳನ್ನು ಹೊಂದಿರಬೇಕು. ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಯಲ್ಲಿ ಈ ಎಲ್ಲ ವಿಶೇಷಣಗಳನ್ನು ಕಂಡುಹಿಡಿದ ಪ್ರಭೃತಿಗಳ ಅಂಬಾನಿ ನಿಷ್ಠೆ ಮೆಚ್ಚಲೇಬೇಕು.
ಈ ಆಯ್ಕೆ ಕುರಿತು ಹರಿದು ಬಂದ ಪ್ರಶ್ನೆಗಳಿಗೆ ಎನ್ ಗೋಪಾಲಸ್ವಾಮಿ ಇದುವರೆಗೂ ಉತ್ತರಿಸಿಲ್ಲ. ಆದರೆ, ಮಾನವ ಸಂಪನ್ಮೂಲ ಸಚಿವಾಲಯವು `ದೇಶದ ಶೈಕ್ಷಣಿಕ ವಲಯದಲ್ಲಿ ಖಾಸಗಿ ಬಂಡವಾಳ ಹರಿದು ಬರಬೇಕು. ಆ ಮೂಲಕ ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಶೈಕ್ಷಣಿಕ ಸಂಸ್ಥೆಗಳು ಭಾರತದಲ್ಲಿ ಸ್ಥಾಪನೆಯಾಗುವಂತಾಗಬೇಕು’ ಎಂಬ ಕಾರಣದಿಂದ ಜಿಯೋ ಇನ್‍ಸ್ಟಿಟ್ಯೂಟ್‍ನ್ನು ಶ್ರೇಷ್ಠ ಸಂಸ್ಥೆ ಎಂದು ಪರಿಗಣಿಸಲಾಗಿದೆ ಎಂಬ ಸಮಾಜಾಯಿಷಿಯನ್ನು ನೀಡಿದೆ.
ಈ ಹಿಂದೆ ಜಿಯೋ ಮೊಬೈಲ್ ಸಂಸ್ಥೆಯನ್ನು ಆರಂಭಿಸಿ ಅದರ ಉದ್ಘಾಟನಾ ಸಮಾರಂಭಕ್ಕೆ ದೇಶದ ಪ್ರಧಾನಮಂತ್ರಿಯನ್ನೇ ಆಹ್ವಾನಿಸಿ ಜಿಯೋಗೆ ಅವರನ್ನು ಪ್ರಚಾರ ರಾಯಭಾರಿಯಂತೆ ರಿಲಯನ್ಸ್ ಸಂಸ್ಥೆ ಬಳಸಿತ್ತು. ಈಗ ಅಸ್ತಿತ್ವದಲ್ಲಿಯೇ ಇಲ್ಲದ ತನ್ನ ಸಂಸ್ಥೆಗೆ Institution of Eminence ಸ್ಥಾನಮಾನವನ್ನು ಪಡೆದಿರುವುದು ದೇಶದ ರಾಜಕಾರಣಕ್ಕೆ ಹಿಡಿದ ಕನ್ನಡಿಯಂತಿದೆ.

 

– ಅಲ್ಲಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...