Homeಮುಖಪುಟಸಂವಿಧಾನವೇ ಸುಪ್ರೀಂ, ಸಂಸತ್ತಲ್ಲ: ಸಿಜೆಐ ಬಿ.ಆರ್ ಗವಾಯಿ

ಸಂವಿಧಾನವೇ ಸುಪ್ರೀಂ, ಸಂಸತ್ತಲ್ಲ: ಸಿಜೆಐ ಬಿ.ಆರ್ ಗವಾಯಿ

- Advertisement -
- Advertisement -

ಭಾರತದಲ್ಲಿ ಸಂವಿಧಾನ ಸರ್ವೋಚ್ಚವಾಗಿದೆ. ಪ್ರಜಾಪ್ರಭುತ್ವದ ಮೂರು ಅಂಗಗಳು ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತವೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಬುಧವಾರ (ಜೂ.25) ಹೇಳಿದ್ದಾರೆ.

“ಕೆಲವರು ಸಂಸತ್ತು ಸರ್ವೋಚ್ಚ ಎನ್ನುತ್ತಿದ್ದಾರೆ. ಆದರೆ, ಸಂವಿಧಾನವೇ ಸರ್ವೋಚ್ಚ ಎಂಬುವುದು ನನ್ನ ಅಭಿಪ್ರಾಯ ಎಂದಿದ್ದಾರೆ.

ಕಳೆದ ತಿಂಗಳು 52ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ನ್ಯಾಯಮೂರ್ತಿ ಗವಾಯಿ, ತಮ್ಮ ಹುಟ್ಟೂರು ಪೂರ್ವ ಮಹಾರಾಷ್ಟ್ರದ ಅಮರಾವತಿ ನಗರದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಹೇಳಿಕೆ ನೀಡಿದ್ದಾರೆ.

ಪ್ರಜಾಪ್ರಭುತ್ವದ ಅಂಗಳಾದ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದಲ್ಲಿ ಯಾವುದ ಸರ್ವೋಚ್ಚ ಎಂಬುದರ ಕುರಿತು ಯಾವಾಗಲೂ ಚರ್ಚೆ ನಡೆಯುತ್ತದೆ. ಸಂಸತ್ತು ಸರ್ವೋಚ್ಚ ಎಂದು ಹಲವರು ಹೇಳುತ್ತಾರೆ ಮತ್ತು ನಂಬುತ್ತಾರೆ. ಆದರೆ, ನನ್ನ ಪ್ರಕಾರ, ಭಾರತದ ಸಂವಿಧಾನವೇ ಸರ್ವೋಚ್ಚ. ಪ್ರಜಾಪ್ರಭುತ್ವದ ಮೂರು ಅಂಗಗಳು ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತವೆ” ಎಂದು ಸಿಜೆಐ ಹೇಳಿದ್ದಾರೆ.

ಸಂವಿಧಾನದ ‘ಮೂಲ ರಚನೆ’ ಸಿದ್ಧಾಂತದ ಅಡಿಪಾಯದ ಮೇಲೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಉಲ್ಲೇಖಿಸಿದ ಸಿಜೆಐ ಗವಾಯಿ, ಸಂಸತ್ತಿಗೆ ಸಂವಿಧಾನ ತಿದ್ದುಪಡಿ ಮಾಡುವ ಅಧಿಕಾರವಿದೆ. ಆದರೆ, ಅದು ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಸರ್ಕಾರದ ವಿರುದ್ಧ ಆದೇಶಗಳನ್ನು ಹೊರಡಿಸುವುದರಿಂದ ನ್ಯಾಯಾಧೀಶರು ಸ್ವತಂತ್ರರಾಗುವುದಿಲ್ಲ. ನ್ಯಾಯಾಧೀಶರು ಯಾವಾಗಲೂ ನಮಗೆ ಒಂದು ಕರ್ತವ್ಯವಿದೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ನಾವು ನಾಗರಿಕರ ಹಕ್ಕುಗಳು, ಸಾಂವಿಧಾನಿಕ ಮೌಲ್ಯಗಳು ಮತ್ತು ತತ್ವಗಳ ರಕ್ಷಕರು. ನಮಗೆ ಕೇವಲ ಅಧಿಕಾರವಿಲ್ಲ, ಬದಲಾಗಿ ನಮ್ಮ ಮೇಲೆ ಕರ್ತವ್ಯವನ್ನು ಹೊರಿಸಲಾಗಿದೆ” ಎಂದು ಸಿಜೆಐ ಹೇಳಿದ್ದಾರೆ.

ಜನರು ತಮ್ಮ ತೀರ್ಪಿನ ಬಗ್ಗೆ ಏನು ಹೇಳುತ್ತಾರೆ ಅಥವಾ ಏನು ಅನುಭವಿಸುತ್ತಾರೆ ಎಂಬುದರ ಮೇಲೆ ನ್ಯಾಯಾಧೀಶರು ಮಾರ್ಗದರ್ಶನ ಪಡೆಯಬಾರದು. ನಾವು ಸ್ವತಂತ್ರವಾಗಿ ಯೋಚಿಸಬೇಕು. ಜನರು ಏನು ಹೇಳುತ್ತಾರೆ ಎಂಬುದು ನಮ್ಮ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯ ಭಾಗವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ನಾನು ಯಾವಾಗಲೂ ನನ್ನ ತೀರ್ಪುಗಳು ಮತ್ತು ಕೆಲಸಗಳು ಮಾತನಾಡಲು ಬಿಡುತ್ತೇನೆ. ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೂಲಭೂತ ಹಕ್ಕುಗಳ ಪರವಾಗಿ ಯಾವಾಗಲೂ ನಿಲ್ಲುತ್ತೇನೆ ಎಂದು ಸಿಜೆಐ ಹೇಳಿದ್ದಾರೆ. ಭಾಷಣದಲ್ಲಿ ಅವರು ತಮ್ಮ ಕೆಲವು ತೀರ್ಪುಗಳನ್ನು ಉಲ್ಲೇಖಿಸಿದ್ದಾರೆ.

‘ಬುಲ್ಡೋಜರ್ ನ್ಯಾಯ’ದ ವಿರುದ್ಧದ ತಮ್ಮ ತೀರ್ಪಿನ ಬಗ್ಗೆ ಉಲ್ಲೇಖಿಸಿದ ಅವರು, ಆಶ್ರಯ ಪಡೆಯುವ ಹಕ್ಕು ಸರ್ವೋಚ್ಚವಾಗಿದೆ ಎಂದು ಹೇಳಿದ್ದಾರೆ.

ತನ್ನ ಬಾಲ್ಯದ ದಿನಗಳನ್ನು ಮೆಲುಕು ಹಾಕಿದ ಸಿಜೆಐ, “ನಾನು ವಾಸ್ತುಶಿಲ್ಪಿಯಾಗಬೇಕೆಂದು ಬಯಸಿದ್ದೆ. ಆದರೆ, ನನ್ನ ತಂದೆ ನಾನು ವಕೀಲನಾಗಬೇಕೆಂದು ಬಯಸಿದ್ದರು. ನನ್ನ ತಂದೆಯೂ ವಕೀಲರಾಗಬೇಕೆಂದು ಬಯಸಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಏಕೆಂದರೆ ಆ ಸಮಯದಲ್ಲಿ ಅವರನ್ನು ಸ್ವಾತಂತ್ರ್ಯ ಚಳವಳಿಯ ಭಾಗವಾಗಿ ಬಂಧಿಸಲಾಗಿತ್ತು ಎಂದಿದ್ದಾರೆ.

ವಿದೇಶಿ ಎಂದು ಘೋಷಿಸಲಾದ ಮಹಿಳೆಯ ಗಡಿಪಾರಿಗೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...