Homeಮುಖಪುಟಆರ್‌ಜಿ ಕರ್ ಅತ್ಯಾಚಾರ-ಕೊಲೆ ಪ್ರಕರಣ | ಅಪರಾಧ ಸ್ಥಳಕ್ಕೆ ಭೇಟಿ ನೀಡಲು ಸಂತ್ರಸ್ತೆಯ ಪೋಷಕರಿಂದ ಮನವಿ

ಆರ್‌ಜಿ ಕರ್ ಅತ್ಯಾಚಾರ-ಕೊಲೆ ಪ್ರಕರಣ | ಅಪರಾಧ ಸ್ಥಳಕ್ಕೆ ಭೇಟಿ ನೀಡಲು ಸಂತ್ರಸ್ತೆಯ ಪೋಷಕರಿಂದ ಮನವಿ

- Advertisement -
- Advertisement -

ಪಶ್ಚಿಮ ಬಂಗಾಳದ ಆರ್‌ಜಿ ಕರ್‌ ಆಸ್ಪತ್ರೆ ಆವರಣದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಮಹಿಳಾ ವೈದ್ಯೆಯ ಪೋಷಕರಿಗೆ ಅಪರಾಧ ಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ (ಎಸಿಜೆಎಂ ಸೀಲ್ಡಾ) ಗುರುವಾರ ಕೈಗೆತ್ತಿಕೊಳ್ಳಲಿದೆ ಎಂದು ಕಲ್ಕತ್ತಾ ಹೈಕೋರ್ಟ್ ಗುರುವಾರ ತಿಳಿಸಿದೆ. ಆರ್‌ಜಿ ಕರ್ ಅತ್ಯಾಚಾರ

ಸಂತ್ರಸ್ತ ವೈದ್ಯೆಯ ಪೋಷಕರು ತಮ್ಮ ವಕೀಲ ಫಿರೋಜ್ ಎಡುಲ್ಜಿ ಮೂಲಕ ಸಲ್ಲಿಸಿದ್ದ ಅರ್ಜಿಯಲ್ಲಿ, ತಾವು ಆ ಪ್ರದೇಶಕ್ಕೆ ಭೇಟಿ ನೀಡಲು ಬಯಸಿದ್ದು, ಆದರೆ ಆಗಸ್ಟ್ 9, 2024 ರಂದು ತಮ್ಮ ಮಗಳ ಶವ ಪತ್ತೆಯಾದ ಸೆಮಿನಾರ್ ಹಾಲ್‌ಗೆ ಭೇಟಿ ನೀಡಲು ಉದ್ದೇಶಿಸಿಲ್ಲ ಎಂದು ಮಂಗಳವಾರ ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ತೀರ್ಥಂಕರ ಘೋಷ್ ಅವರ ಪೀಠಕ್ಕೆ ಮೊದಲು ತಿಳಿಸಿದ್ದರು.

ಆರ್‌ಜಿ ಕರ್ ಆಸ್ಪತ್ರೆಯ ಭದ್ರತೆ ಕೇಂದ್ರ ಪಡೆಗಳ ಉಸ್ತುವಾರಿಯಲ್ಲಿರುವುದರಿಂದ, ಅಪರಾಧ ಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಲು ಹೈಕೋರ್ಟ್‌ನಿಂದ ಅನುಮತಿ ಪಡೆಯುತ್ತಿದ್ದೇವೆ ಎಂದು ಎಡುಲ್ಜಿ ಹೇಳಿದ್ದರು.

ನ್ಯಾಯಮೂರ್ತಿ ಘೋಷ್ ಅವರು ಗುರುವಾರ ಸಂತ್ರಸ್ತೆಯ ಪೋಷಕರು ಎಸಿಜೆಎಂ ಸೀಲ್ಡಾ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಕೇಳಿಕೊಂಡರು. ಈ ವೇಳೆ ಕೆಳ ನ್ಯಾಯಾಲಯವು 48 ಗಂಟೆಗಳ ಒಳಗೆ ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಆದೇಶಿಸಿದ್ದರು.

ಆದಾಗ್ಯೂ, ರಾಜ್ಯ ಸರ್ಕಾರವು ಪ್ರಕರಣದ ನ್ಯಾಯಸಮ್ಮತತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರತಿನಿಧಿಸುವ ಹಿರಿಯ ವಕೀಲ ಕಲ್ಯಾಣ್ ಬ್ಯಾನರ್ಜಿ, ಸಂತ್ರಸ್ತೆಯ ಕುಟುಂಬವು ಈ ಹಿಂದೆ ನ್ಯಾಯಾಲಯವನ್ನು ಹೆಚ್ಚು ವಿವರವಾದ ತನಿಖೆಗಾಗಿ ಕೋರಿತ್ತು ಎಂದು ವಾದಿಸಿದ್ದಾರೆ.

ಅವರ ಹಿಂದಿನ ಅರ್ಜಿಯೆ ಇನ್ನೂ ವಿಲೇವಾರಿಯಾಗಿಲ್ಲ. ಇದೀಗ ಈ ಹೊಸ ಅರ್ಜಿಯು ಮಾಧ್ಯಮಗಳ ಗಮನ ಸೆಳೆಯುವ ಪ್ರಯತ್ನವಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರ ಬಯಸಿದರೆ, ಕೆಳ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣದಲ್ಲಿ ಪಕ್ಷವಾಗಿ ಸೇರಿಕೊಂಡು ತನ್ನ ಹೇಳಿಕೆಯನ್ನು ನೀಡಬಹುದು ಎಂದು ನ್ಯಾಯಮೂರ್ತಿ ಘೋಷ್ ಹೇಳಿದರು. ಆದಾಗ್ಯೂ, ಸಂತ್ರಸ್ತೆಯ ಕುಟುಂಬವು ಅಪರಾಧ ಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಲು ಬಯಸಿದರೆ ನಮಗೆ ಯಾವುದೇ ಅಭ್ಯಂತರವಿಲ್ಲ ಎಂದು ತನಿಖಾ ಸಂಸ್ಥೆ ಸಿಬಿಐ ಹೇಳಿದೆ.

ಕಳೆದ ಆಗಸ್ಟ್‌ನಲ್ಲಿ, ಆರ್‌ಜಿ ಕರ್ ಆಸ್ಪತ್ರೆಯ ತುರ್ತು ಕಟ್ಟಡದಲ್ಲಿ ಯುವ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಯಿತು. ಈ ಘಟನೆಯಲ್ಲಿ ಕೋಲ್ಕತ್ತಾ ಪೊಲೀಸರ ನಾಗರಿಕ ಸ್ವಯಂಸೇವಕ ಸಂಜಯ್ ರಾಯ್ ಅವರನ್ನು ಬಂಧಿಸಲಾಯಿತು. ಕಲ್ಕತ್ತಾ ಹೈಕೋರ್ಟ್ ಆದೇಶದ ಮೇರೆಗೆ ಸಿಬಿಐ ಘಟನೆಯ ತನಿಖೆಯನ್ನು ವಹಿಸಿಕೊಂಡಿತು.

ಇದರ ನಂತರ ಕೋಲ್ಕತ್ತಾ ಪೊಲೀಸರು ಬಂಧಿಸಿದ ನಾಗರಿಕ ಸ್ವಯಂಸೇವಕನನ್ನು ಸಿಬಿಐ ವಶಕ್ಕೆ ಪಡೆದರು. ಎಸಿಜೆಎಂ ಸೀಲ್ಡಾ ನ್ಯಾಯಾಲಯದಲ್ಲಿ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿದ್ದು, ಈ ಚಾರ್ಜ್‌ಶೀಟ್‌ನಲ್ಲಿ ಸಂಜಯ್ ಹೆಸರು ಆರೋಪಿಯಾಗಿ ಮಾತ್ರ ಕಾಣಿಸಿಕೊಂಡಿದೆ. ಎಸಿಜೆಎಂ ಸೀಲ್ಡಾ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ಆರ್‌ಜಿ ಕರ್ ಅತ್ಯಾಚಾರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಟ್ರಾನ್ಸ್‌ಜೆಂಡರ್‌ಗಳಿಗೆ ಶೇ 0.5 ಮೀಸಲಾತಿ: ಮೇಲ್ಮನವಿ ವಿಚಾರಣೆಯಿಂದ ಹಿಂದೆ ಸರಿದ ಹಂಗಾಮಿ ಸಿಜೆ ಕಾಮೇಶ್ವರ ರಾವ್‌

ಟ್ರಾನ್ಸ್‌ಜೆಂಡರ್‌ಗಳಿಗೆ ಶೇ 0.5 ಮೀಸಲಾತಿ: ಮೇಲ್ಮನವಿ ವಿಚಾರಣೆಯಿಂದ ಹಿಂದೆ ಸರಿದ ಹಂಗಾಮಿ ಸಿಜೆ ಕಾಮೇಶ್ವರ ರಾವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...