Homeಮುಖಪುಟಸಂವಿಧಾನ ಪೀಠಿಕೆಯ 'ಜಾತ್ಯತೀತ', 'ಸಮಾಜವಾದಿ' ಪದಗಳು ಇನ್ನೂ ಇರಬೇಕೆ ಎಂದ ಆರೆಸ್ಸೆಸ್‌!

ಸಂವಿಧಾನ ಪೀಠಿಕೆಯ ‘ಜಾತ್ಯತೀತ’, ‘ಸಮಾಜವಾದಿ’ ಪದಗಳು ಇನ್ನೂ ಇರಬೇಕೆ ಎಂದ ಆರೆಸ್ಸೆಸ್‌!

- Advertisement -
- Advertisement -

ಸಂವಿಧಾನದ ಪೀಠಿಕೆಯಲ್ಲಿ ಸೇರ್ಪಡೆ ಮಾಡಲಾದ “ಜಾತ್ಯತೀತ” ಮತ್ತು “ಸಮಾಜವಾದಿ” ಪದಗಳನ್ನು ಪರಿಶೀಲಿಸಬೇಕು ಎಂದು ಆರೆಸ್ಸೆಸ್‌ ಗುರುವಾರ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ. “ತುರ್ತು ಪರಿಸ್ಥಿತಿಯಲ್ಲಿ ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿದಾಗ, ಸಂಸತ್ತು ಕಾರ್ಯನಿರ್ವಹಿಸದಿದ್ದಾಗ ಮತ್ತು ನ್ಯಾಯಾಂಗವು ಕುಂಟುತ್ತಾ ಹೋದಾಗ ಈ ಪದಗಳನ್ನು ಸೇರಿಸಲಾಯಿತು” ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಸಂವಿಧಾನ ಪೀಠಿಕೆಯ

“ಹಾಗಾದರೆ, ಅವು ಪೀಠಿಕೆಯಲ್ಲಿ ಉಳಿಯಬೇಕೆ ಎಂಬುವುದನ್ನು ಪರಿಗಣಿಸಬೇಕಿದೆ. ಪೀಠಿಕೆ ಶಾಶ್ವತವಾಗಿದೆ. ಆದರೆ ಭಾರತಕ್ಕೆ ಸಿದ್ಧಾಂತವಾಗಿ ಸಮಾಜವಾದದ ಚಿಂತನೆಗಳು ಶಾಶ್ವತವೇ?” ಎಂದು ಅವರು ಕೇಳಿದ್ದಾರೆ. ಆರ್‌ಎಸ್‌ಎಸ್ ಸಂಘಟನೆಯು ಬಿಜೆಪಿಯ ಮಾತೃ ಸಂಘಟನೆಯಾಗಿದೆ.

1975 ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಸರ್ಕಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿ 50 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಸಬಾಳೆ ಈ ಹೇಳಿಕೆಗಳನ್ನು ನೀಡಿದ್ದಾರೆ.

ತುರ್ತು ಪರಿಸ್ಥಿತಿಯ ಸಮಯದಲ್ಲಿ ಉಂಟಾದ “ಹಲವಾರು ಅನ್ಯಾಯಗಳ” ಬಗ್ಗೆ ಮಾತನಾಡಿದ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ, “ಕ್ರೂರ” ಕ್ರಮಗಳಿಗಾಗಿ ಕಾಂಗ್ರೆಸ್ ಕ್ಷಮೆಯಾಚಿಸಬೇಕೆಂದು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಈ ಅವಧಿಯಲ್ಲಿ 250 ಪತ್ರಕರ್ತರು ಸೇರಿದಂತೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಜೈಲಿಗೆ ಹಾಕಲಾಯಿತು ಎಂದು ಹೊಸಬಾಳೆ ಹೇಳಿದ್ದಾರೆ. ಆಗಿನ ಸರ್ಕಾರವು 60 ಲಕ್ಷಕ್ಕೂ ಹೆಚ್ಚು ಜನರನ್ನು ಬಲವಂತವಾಗಿ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಪಡಿಸುವ ಮೂಲಕ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದೆ ಎಂದು ಅವರು ಹೇಳಿದ್ದಾರೆ.

ಹೊಸಬಾಳೆ ಅವರ ಹೇಳಿಕೆಗಳನ್ನು ಕಾಂಗ್ರೆಸ್ ಟೀಕಿಸಿದ್ದು, “ಆರ್‌ಎಸ್‌ಎಸ್-ಬಿಜೆಪಿಯ ಸಿದ್ಧಾಂತವೇ ಭಾರತೀಯ ಸಂವಿಧಾನಕ್ಕೆ ನೇರ ವಿರುದ್ಧವಾಗಿದೆ. ಈ ಹೇಳಿಕೆಗಳು ಕೇವಲ ಸಲಹೆಯಲ್ಲ, ಬದಲಾಗಿ ನಮ್ಮ ಸಂವಿಧಾನದ ಆತ್ಮದ ಮೇಲೆ ಉದ್ದೇಶಪೂರ್ವಕ ದಾಳಿ” ಎಂದು ಆರೋಪಿಸಿದೆ.

“ಇದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ನ್ಯಾಯಯುತ, ಎಲ್ಲರನ್ನೂ ಒಳಗೊಂಡ ಮತ್ತು ಪ್ರಜಾಪ್ರಭುತ್ವ ಭಾರತಕ್ಕಾಗಿನ ದೃಷ್ಟಿಕೋನವನ್ನು ಕೆಡವಲು ದೀರ್ಘಕಾಲದಿಂದ ನಡೆಸಲಾಗುತ್ತಿರುವ ಪಿತೂರಿಯ ಭಾಗವಾಗಿದೆ. ಈ ಸಂಚನ್ನು ಆರ್‌ಎಸ್‌ಎಸ್-ಬಿಜೆಪಿ ಯಾವಾಗಿನಿಂದಲೂ ರೂಪಿಸುತ್ತಿದೆ” ಎಂದು ಪಕ್ಷ ಹೇಳಿದೆ.

“ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳು 1950 ರಲ್ಲಿ ಅಂಗೀಕರಿಸಲ್ಪಟ್ಟ ಸಂವಿಧಾನದ ಭಾಗವಾಗಿರಲಿಲ್ಲ ಮತ್ತು 1976 ರಲ್ಲಿ 42 ನೇ ಸಾಂವಿಧಾನಿಕ ತಿದ್ದುಪಡಿಯ ಮೂಲಕ ಸೇರಿಸಲ್ಪಟ್ಟವು.

ನವೆಂಬರ್‌ನಲ್ಲಿ, ಸಂವಿಧಾನದ ಪೀಠಿಕೆಯಿಂದ ಎರಡು ಪದಗಳನ್ನು ಅಳಿಸಲು ಕೋರಿ ಸಲ್ಲಿಸಲಾದ ಅರ್ಜಿಗಳ ಗುಂಪನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತು. ಸುಮಾರು 44 ವರ್ಷಗಳ ನಂತರ ಸಾಂವಿಧಾನಿಕ ತಿದ್ದುಪಡಿಯನ್ನು ಪ್ರಶ್ನಿಸಲು ಯಾವುದೇ ಕಾನೂನುಬದ್ಧ ಸಮರ್ಥನೆ ಇಲ್ಲ ಎಂದು ನ್ಯಾಯಾಲಯ ಹೇಳಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 2015 ರ ಗಣರಾಜ್ಯೋತ್ಸವದಂದು ನೀಡಿದ್ದ ಪತ್ರಿಕೆ ಜಾಹೀರಾತುಗಳಲ್ಲಿ ಎರಡು ಪದಗಳನ್ನು ಬಿಟ್ಟು ಸಂವಿಧಾನದ ಪೀಠಿಕೆ ಕಾಣಿಸಿಕೊಂಡಿತ್ತು. ಇದರ ನಂತರ ವಿವಾದ ಭುಗಿಲೆದ್ದಿತು. ಸೆಪ್ಟೆಂಬರ್ 2023 ರಲ್ಲಿ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಹೊಸ ಸಂಸತ್ತಿನ ಕಟ್ಟಡದಲ್ಲಿ ಸಂಸದರಿಗೆ ವಿತರಿಸಲಾದ ಸಂವಿಧಾನದ ಪ್ರತಿಗಳಲ್ಲಿ ಪೀಠಿಕೆಯಿಂದ ಎರಡು ಪದಗಳು ಕಾಣೆಯಾಗಿವೆ ಎಂದು ಹೇಳಿಕೊಂಡಿದ್ದರು. ಸಂವಿಧಾನ ಪೀಠಿಕೆಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಾಜಾ: ಹೆಚ್ಚಿನ ಕುಟುಂಬಗಳಿಗೆ ದಿನಕ್ಕೆ ಒಂದು ಹೊತ್ತು ಮಾತ್ರ ಊಟ – ವಿಶ್ವ ಆಹಾರ ಕಾರ್ಯಕ್ರಮದ ಆತಂಕಕಾರಿ ವರದಿ

ಗಾಜಾ: ಹೆಚ್ಚಿನ ಕುಟುಂಬಗಳಿಗೆ ದಿನಕ್ಕೆ ಒಂದು ಹೊತ್ತು ಮಾತ್ರ ಊಟ – ವಿಶ್ವ ಆಹಾರ ಕಾರ್ಯಕ್ರಮದ ಆತಂಕಕಾರಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...