Homeಮುಖಪುಟಇರಾನ್ ಅಣು ಸ್ಥಾವರಗಳ ವಿಕಿರಣ ಮಟ್ಟಗಳ ಮೇಲೆ ಭಾರತದ ಸೂಕ್ಷ್ಮ ನಿಗಾ: ಇರಾನ್‌ನಿಂದ ಭಾರತಕ್ಕೆ ಕೃತಜ್ಞತೆ

ಇರಾನ್ ಅಣು ಸ್ಥಾವರಗಳ ವಿಕಿರಣ ಮಟ್ಟಗಳ ಮೇಲೆ ಭಾರತದ ಸೂಕ್ಷ್ಮ ನಿಗಾ: ಇರಾನ್‌ನಿಂದ ಭಾರತಕ್ಕೆ ಕೃತಜ್ಞತೆ

- Advertisement -
- Advertisement -

ಹೊಸದಿಲ್ಲಿ: ಇಸ್ರೇಲ್ ಮತ್ತು ಅಮೆರಿಕ ಇರಾನ್‌ನ ಅಣು ಸ್ಥಾವರಗಳ ಮೇಲೆ ದಾಳಿ ನಡೆಸಿದ ನಂತರ, ವಿಶ್ವಸಂಸ್ಥೆ ಸಂಬಂಧಿತ ಅಣು ನಿಗಾ ಸಂಸ್ಥೆ (IAEA) ಒದಗಿಸುತ್ತಿರುವ ಮಾಹಿತಿಗಳನ್ನು ಭಾರತ ಹತ್ತಿರದಿಂದ ಗಮನಿಸುತ್ತಿದೆ. ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಚರ್ಚೆ ಹಾಗೂ ರಾಜತಾಂತ್ರಿಕತೆಯ ಮೂಲಕ ಶೀಘ್ರವಾಗಿ ಮರುಸ್ಥಾಪಿಸಲು ಭಾರತ ಒತ್ತಾಯಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಗುರುವಾರ (ಜೂನ್ 26) ನಡೆದ ಸಚಿವಾಲಯದ ವಾರದ ಪತ್ರಿಕಾಗೋಷ್ಠಿಯಲ್ಲಿ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ಇರಾನ್‌ನಲ್ಲಿರುವ ಅಣು ವಿಜ್ಞಾನಿಗಳ ಮೇಲಿನ ಇಸ್ರೇಲ್ ದಾಳಿಯ ಬಗ್ಗೆ ಭಾರತದ ನಿಲುವಿನ ಪ್ರಶ್ನೆಗೆ  ಪ್ರತಿಕ್ರಿಯಿಸಿ, ಇಸ್ರೇಲ್ ಮತ್ತು ಅಮೆರಿಕ ದಾಳಿ ಮಾಡಿದ ತಾಣಗಳಲ್ಲಿನ ವಿಕಿರಣ ಮಟ್ಟಗಳ ಕುರಿತು ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (IAEA) ನೀಡುತ್ತಿರುವ ಮಾಹಿತಿಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಹೇಳಿದರು.

ಇರಾನ್‌ನಲ್ಲಿ ಗುರಿಯಾಗಿಸಿದ ಸ್ಥಾವರಗಳಲ್ಲಿ ಯಾವುದೇ ಅಣು ವಸ್ತುವಾಗಲಿ, ಅಥವಾ ಕಡಿಮೆ ಪ್ರಮಾಣದ ನೈಸರ್ಗಿಕ ಅಥವಾ ಕಡಿಮೆ ಸಮೃದ್ಧಗೊಳಿಸಿದ ಯುರೇನಿಯಂ ಆಗಲಿ ಇರಲಿಲ್ಲ ಎಂಬುದನ್ನು ನಾವು ಗಮನಿಸಿದ್ದೇವೆ. ದಾಳಿಗೊಳಗಾದ ಕಟ್ಟಡಗಳ ಹೊರಗೆ ಯಾವುದೇ ವಿಕಿರಣ ಮಾಲಿನ್ಯವಿಲ್ಲ ಎಂಬ ನಿಗಾ ಸಂಸ್ಥೆಯ ಅಂದಾಜನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಜೈಸ್ವಾಲ್ ಸ್ಪಷ್ಟಪಡಿಸಿದರು.

ಅಲ್ಲಿನ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಮರುಸ್ಥಾಪಿಸಲು, ಚರ್ಚೆ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳುವಂತೆ ನಾವು ಒತ್ತಾಯಿಸುತ್ತೇವೆ ಎಂದು ಜೈಸ್ವಾಲ್ ತಿಳಿಪಡಿಸಿದರು. ಅಮೆರಿಕದ ದಾಳಿಗಳ ನಂತರ ಪ್ರದೇಶದ ಸ್ಥಿರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ತಮ್ಮ ಸಚಿವಾಲಯದ ಹಿಂದಿನ ಹೇಳಿಕೆಯನ್ನು ಅವರು ಉಲ್ಲೇಖಿಸಿದರು. ಜೊತೆಗೆ, ಅಮೆರಿಕ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಕದನವಿರಾಮವನ್ನು ಸ್ವಾಗತಿಸಿದರು.

ಸಂಘರ್ಷದ ಆರಂಭ ಮತ್ತು ಅಂತರರಾಷ್ಟ್ರೀಯ ಪ್ರತಿಕ್ರಿಯೆ

ಜೂನ್ 13ರಂದು ತನ್ನ ‘ಆಪರೇಷನ್ ರೈಸಿಂಗ್ ಲಯನ್’ ಕಾರ್ಯಾಚರಣೆಯ ಭಾಗವಾಗಿ ಇರಾನ್‌ನ ಅಣು ಸ್ಥಾವರಗಳು ಸೇರಿದಂತೆ ಇತರ ಗುರಿಗಳ ಮೇಲೆ ಇಸ್ರೇಲ್ ದಾಳಿ ಮಾಡಲು ಪ್ರಾರಂಭಿಸಿತು. ಇರಾನ್ ಅಣುಬಾಂಬ್ ಪಡೆಯುವ ಅಂಚಿನಲ್ಲಿದೆ ಎಂಬ ಆರೋಪದ ಮೇಲೆ ಇದನ್ನು ಆರಂಭಿಸಲಾಯಿತು, ಆದರೆ ಟೆಹ್ರಾನ್ ತನ್ನ ಅಣು ಕಾರ್ಯಕ್ರಮ ಕೇವಲ ನಾಗರಿಕ ಉದ್ದೇಶಗಳಿಗಾಗಿ ಮಾತ್ರ ಎಂದು ಹೇಳುತ್ತಿದೆ.

ಇಸ್ರೇಲಿನ ದಾಳಿಯ ನಂತರ ಉಭಯ ದೇಶಗಳು ಪರಸ್ಪರ ಕ್ಷಿಪಣಿಗಳನ್ನು ಹಾರಿಸಿದವು. ಭಾನುವಾರ (ಜೂ.21) ಅಮೆರಿಕ ಸಂಘರ್ಷಕ್ಕೆ ಪ್ರವೇಶಿಸಿತು; ಅದರ ವಾಯುಪಡೆಯು ಫೋರ್ಡೋ, ನಟಾನ್ಜ್ ಮತ್ತು ಇಸ್ಫಹಾನ್‌ನಲ್ಲಿರುವ ಮೂರು ಪ್ರಮುಖ ಇರಾನಿನ ಅಣು ಸ್ಥಾವರಗಳ ಮೇಲೆ ಬಾಂಬ್ ದಾಳಿ ನಡೆಸಿತು. ಇರಾನ್ ಕತಾರ್‌ನಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ಒಂದು ದಿನದ ನಂತರ ಅಮೆರಿಕ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ ಕದನವಿರಾಮವು ಯುದ್ಧವನ್ನು ಕೊನೆಗೊಳಿಸಿತು.

ಸಂಘರ್ಷದ ಸಮಯದಲ್ಲಿ ಹಲವು ಬಾರಿ ಕಳವಳ ವ್ಯಕ್ತಪಡಿಸಿದ್ದ ಭಾರತ, ಇಸ್ರೇಲ್ ಅಥವಾ ಅಮೆರಿಕದ ವಿರುದ್ಧ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ. ಭಾರತ ಸದಸ್ಯನಾಗಿರುವ ಶಾಂಘೈ ಸಹಕಾರ ಸಂಘಟನೆ (SCO) ಇಸ್ರೇಲ್‌ನ ಇರಾನ್ ಮೇಲಿನ ದಾಳಿಗಳನ್ನು ಬಲವಾಗಿ ಖಂಡಿಸಿತ್ತು, ಆದರೆ ಭಾರತವು ಆ ಹೇಳಿಕೆಯಿಂದ ದೂರ ಉಳಿದಿತ್ತು.

ಆದಾಗ್ಯೂ, ಭಾರತವು ಸದಸ್ಯನಾಗಿರುವ ಬ್ರಿಕ್ಸ್ (BRICS) ಒಕ್ಕೂಟವು ಇರಾನ್ ಮೇಲಿನ ದಾಳಿಗಳ ಬಗ್ಗೆ “ತೀವ್ರ ಕಳವಳ” ವ್ಯಕ್ತಪಡಿಸಿ ಅವುಗಳನ್ನು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಎಂದು ಕರೆದಾಗ, ಭಾರತ ಅಂತಹ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಇರಾನ್‌ನಿಂದ ಭಾರತಕ್ಕೆ ಕೃತಜ್ಞತೆ

ಹೊಸದಿಲ್ಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯು ಬುಧವಾರ ಒಂದು ಹೇಳಿಕೆಯನ್ನು ಪೋಸ್ಟ್ ಮಾಡಿದ್ದು, “ಇರಾನ್‌ನೊಂದಿಗೆ ದೃಢವಾಗಿ ಮತ್ತು ಗಟ್ಟಿಯಾಗಿ ನಿಂತಿದ್ದ ಭಾರತದ ಎಲ್ಲಾ ಉದಾತ್ತ ಮತ್ತು ಸ್ವಾತಂತ್ರ್ಯ-ಪ್ರಿಯ ಜನರಿಗೆ ಹೃತ್ಪೂರ್ವಕ ಕೃತಜ್ಞತೆ” ವ್ಯಕ್ತಪಡಿಸಿದೆ.

ಭಾರತದ ಜನರು ಮತ್ತು ಸಂಸ್ಥೆಗಳು ತೋರಿಸಿದ ನೈಜ ಮತ್ತು ಅಮೂಲ್ಯ ಬೆಂಬಲಕ್ಕಾಗಿ ನಾವು ಮತ್ತೊಮ್ಮೆ ನಮ್ಮ ಪ್ರಾಮಾಣಿಕ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತೇವೆ” ಎಂದು ಅದು X (ಹಿಂದಿನ ಟ್ವಿಟರ್) ನಲ್ಲಿ ಹೇಳಿದೆ.

ಅಣು ಕಾರ್ಯಕ್ರಮದ ಹಾನಿ: IAEA ವರದಿ ಮತ್ತು ಅಮೆರಿಕದ ಪ್ರತಿಕ್ರಿಯೆ

ಇರಾನ್‌ನ ಅಣು ತಾಣಗಳ ಮೇಲಿನ ದಾಳಿಗಳು ವಿವಿಧ ಮಟ್ಟಗಳಲ್ಲಿ ಸಮೃದ್ಧಗೊಳಿಸಿದ ಯುರೇನಿಯಂ ಹೊಂದಿರುವ ಸ್ಥಾವರಗಳ ಒಳಗೆ ಕೆಲವು ಸ್ಥಳೀಯ ವಿಕಿರಣ ಮತ್ತು ರಾಸಾಯನಿಕ ಬಿಡುಗಡೆಗೆ ಕಾರಣವಾಗಿವೆ. ಆದರೆ, ಈ ಸ್ಥಳಗಳ ಹೊರಗೆ ವಿಕಿರಣ ಹೆಚ್ಚಳದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು IAEA ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

ಏತನ್ಮಧ್ಯೆ, IAEA ಸಂಸ್ಥೆಯ ಮಹಾನಿರ್ದೇಶಕ ರಫೆಲ್ ಗ್ರೋಸ್ಸಿ, ದಾಳಿಗಳ ಪರಿಣಾಮವಾಗಿ ಇರಾನ್‌ನ ಅಣು ಕಾರ್ಯಕ್ರಮ “ತೀವ್ರ ಹಾನಿ” ಅನುಭವಿಸಿದೆ ಎಂದು ಅಂದಾಜಿಸಿದ್ದಾರೆ.

ದಾಳಿಗಳು ದೇಶದ ಅಣು ಕಾರ್ಯಕ್ರಮವನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿವೆಯೇ ಎಂದು ಫ್ರೆಂಚ್ ಪ್ರಸಾರಕ RFI ಕೇಳಿದಾಗ, “ನಾನು ಅಮೆರಿಕ ಧ್ವಂಸಗೊಳಿಸಿದೆ ಎಂದು ಹೇಳುವುದು ಅತಿರೇಕವಾಗುತ್ತದೆ” ಎಂದು ಗ್ರೋಸ್ಸಿ ಹೇಳಿದರು. ಆದಾಗ್ಯೂ, ಇರಾನ್ ತನ್ನ ಹೆಚ್ಚಿನ ಯುರೇನಿಯಂ ಸಮೃದ್ಧಗೊಳಿಸುವಿಕೆ ಮತ್ತು ಪರಿವರ್ತನೆ ಚಟುವಟಿಕೆಗಳನ್ನು ಮೂರು ಪ್ರಮುಖ ತಾಣಗಳಲ್ಲಿ ಕೇಂದ್ರೀಕರಿಸಿದ್ದರಿಂದ ಕಾರ್ಯಕ್ರಮವು “ಅತ್ಯಂತ ತೀವ್ರ ಹಾನಿ” ಅನುಭವಿಸಿರುತ್ತದೆ ಎಂದು ಅವರು ಹೇಳಿದರು.

ಅಮೆರಿಕವು ‘ಬಂಕರ್ ಬಸ್ಟರ್’ ಬಾಂಬ್‌ಗಳಿಂದ ದಾಳಿ ನಡೆಸಿದೆ ಎಂದು ವರದಿಯಾಗಿರುವ ಫೋರ್ಡೋ ನೆಲದಡಿಯ ತಾಣದಲ್ಲಿನ ಸೆಂಟ್ರಿಫ್ಯೂಜ್‌ಗಳು ಇನ್ನು ಮುಂದೆ ಕಾರ್ಯನಿರ್ವಹಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಗ್ರೋಸ್ಸಿ ತಿಳಿಯಪಡಿಸಿದರು.

ದಾಳಿಗಳಿಂದಾಗಿ ಇರಾನ್‌ನ ಅಣು ಕಾರ್ಯಕ್ರಮಕ್ಕೆ ಎಷ್ಟು ದೊಡ್ಡ ನಷ್ಟವಾಗಿದೆ ಎಂಬ ಬಗ್ಗೆ ಪ್ರಶ್ನಾರ್ಥಕ ಚಿಹ್ನೆ ಇರುವುದರಿಂದ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ತಮ್ಮ ಸೇನೆಯ ‘ಬಂಕರ್ ಬಸ್ಟರ್’ ಬಾಂಬ್ ದಾಳಿಯಿಂದ ಇರಾನ್‌ನ ಮೂರು ಪ್ರಮುಖ ತಾಣಗಳು ಸಂಪೂರ್ಣವಾಗಿ ಮತ್ತು ಒಟ್ಟಾಗಿ ನಾಶವಾಗಿವೆ ಎಂದು ಹೇಳಿಕೊಂಡಿದ್ದರು. ಆದರೆ, ಇರಾನ್ ಈ ದಾಳಿಯಿಂದ ನಮ್ಮ ಪರಮಾಣು ಕಾರ್ಯಕ್ರಮವು ಕೇವಲ ಕೆಲವೇ ತಿಂಗಳುಗಳ ಹಿನ್ನಡೆ ಅನುಭವಿಸಿದೆ ಎಂಬ ಗುಪ್ತಚರ ವರದಿಗಳನ್ನು ನಿರಾಕರಿಸಿದೆ.

ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್‌ಸೆತ್ ಗುರುವಾರ, ತಮ್ಮ ದೇಶವು ಬಾಂಬ್ ದಾಳಿ ನಡೆಸುವ ಮೊದಲು ಇರಾನ್ ಯಾವುದೇ ಹೆಚ್ಚು ಸಮೃದ್ಧಗೊಳಿಸಿದ ಯುರೇನಿಯಂ ಅನ್ನು ಗುರಿಯಾಗಿಸಿದ ಸ್ಥಾವರಗಳಿಂದ ಸ್ಥಳಾಂತರಿಸಿದೆ ಎಂಬ ಬಗ್ಗೆ ತಮಗೆ ತಿಳಿದಿಲ್ಲ ಎಂದು ಹೇಳಿದರು.

ಇರಾನ್-ಇಸ್ರೇಲ್ ಸಂಘರ್ಷ: ಕದನವಿರಾಮದ ನಂತರವೂ ಅನಿಶ್ಚಿತತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...