Homeಮುಖಪುಟಇರಾನ್ ಅಣು ಸ್ಥಾವರಗಳ ವಿಕಿರಣ ಮಟ್ಟಗಳ ಮೇಲೆ ಭಾರತದ ಸೂಕ್ಷ್ಮ ನಿಗಾ: ಇರಾನ್‌ನಿಂದ ಭಾರತಕ್ಕೆ ಕೃತಜ್ಞತೆ

ಇರಾನ್ ಅಣು ಸ್ಥಾವರಗಳ ವಿಕಿರಣ ಮಟ್ಟಗಳ ಮೇಲೆ ಭಾರತದ ಸೂಕ್ಷ್ಮ ನಿಗಾ: ಇರಾನ್‌ನಿಂದ ಭಾರತಕ್ಕೆ ಕೃತಜ್ಞತೆ

- Advertisement -
- Advertisement -

ಹೊಸದಿಲ್ಲಿ: ಇಸ್ರೇಲ್ ಮತ್ತು ಅಮೆರಿಕ ಇರಾನ್‌ನ ಅಣು ಸ್ಥಾವರಗಳ ಮೇಲೆ ದಾಳಿ ನಡೆಸಿದ ನಂತರ, ವಿಶ್ವಸಂಸ್ಥೆ ಸಂಬಂಧಿತ ಅಣು ನಿಗಾ ಸಂಸ್ಥೆ (IAEA) ಒದಗಿಸುತ್ತಿರುವ ಮಾಹಿತಿಗಳನ್ನು ಭಾರತ ಹತ್ತಿರದಿಂದ ಗಮನಿಸುತ್ತಿದೆ. ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಚರ್ಚೆ ಹಾಗೂ ರಾಜತಾಂತ್ರಿಕತೆಯ ಮೂಲಕ ಶೀಘ್ರವಾಗಿ ಮರುಸ್ಥಾಪಿಸಲು ಭಾರತ ಒತ್ತಾಯಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಗುರುವಾರ (ಜೂನ್ 26) ನಡೆದ ಸಚಿವಾಲಯದ ವಾರದ ಪತ್ರಿಕಾಗೋಷ್ಠಿಯಲ್ಲಿ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ಇರಾನ್‌ನಲ್ಲಿರುವ ಅಣು ವಿಜ್ಞಾನಿಗಳ ಮೇಲಿನ ಇಸ್ರೇಲ್ ದಾಳಿಯ ಬಗ್ಗೆ ಭಾರತದ ನಿಲುವಿನ ಪ್ರಶ್ನೆಗೆ  ಪ್ರತಿಕ್ರಿಯಿಸಿ, ಇಸ್ರೇಲ್ ಮತ್ತು ಅಮೆರಿಕ ದಾಳಿ ಮಾಡಿದ ತಾಣಗಳಲ್ಲಿನ ವಿಕಿರಣ ಮಟ್ಟಗಳ ಕುರಿತು ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (IAEA) ನೀಡುತ್ತಿರುವ ಮಾಹಿತಿಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಹೇಳಿದರು.

ಇರಾನ್‌ನಲ್ಲಿ ಗುರಿಯಾಗಿಸಿದ ಸ್ಥಾವರಗಳಲ್ಲಿ ಯಾವುದೇ ಅಣು ವಸ್ತುವಾಗಲಿ, ಅಥವಾ ಕಡಿಮೆ ಪ್ರಮಾಣದ ನೈಸರ್ಗಿಕ ಅಥವಾ ಕಡಿಮೆ ಸಮೃದ್ಧಗೊಳಿಸಿದ ಯುರೇನಿಯಂ ಆಗಲಿ ಇರಲಿಲ್ಲ ಎಂಬುದನ್ನು ನಾವು ಗಮನಿಸಿದ್ದೇವೆ. ದಾಳಿಗೊಳಗಾದ ಕಟ್ಟಡಗಳ ಹೊರಗೆ ಯಾವುದೇ ವಿಕಿರಣ ಮಾಲಿನ್ಯವಿಲ್ಲ ಎಂಬ ನಿಗಾ ಸಂಸ್ಥೆಯ ಅಂದಾಜನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಜೈಸ್ವಾಲ್ ಸ್ಪಷ್ಟಪಡಿಸಿದರು.

ಅಲ್ಲಿನ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಮರುಸ್ಥಾಪಿಸಲು, ಚರ್ಚೆ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳುವಂತೆ ನಾವು ಒತ್ತಾಯಿಸುತ್ತೇವೆ ಎಂದು ಜೈಸ್ವಾಲ್ ತಿಳಿಪಡಿಸಿದರು. ಅಮೆರಿಕದ ದಾಳಿಗಳ ನಂತರ ಪ್ರದೇಶದ ಸ್ಥಿರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ತಮ್ಮ ಸಚಿವಾಲಯದ ಹಿಂದಿನ ಹೇಳಿಕೆಯನ್ನು ಅವರು ಉಲ್ಲೇಖಿಸಿದರು. ಜೊತೆಗೆ, ಅಮೆರಿಕ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಕದನವಿರಾಮವನ್ನು ಸ್ವಾಗತಿಸಿದರು.

ಸಂಘರ್ಷದ ಆರಂಭ ಮತ್ತು ಅಂತರರಾಷ್ಟ್ರೀಯ ಪ್ರತಿಕ್ರಿಯೆ

ಜೂನ್ 13ರಂದು ತನ್ನ ‘ಆಪರೇಷನ್ ರೈಸಿಂಗ್ ಲಯನ್’ ಕಾರ್ಯಾಚರಣೆಯ ಭಾಗವಾಗಿ ಇರಾನ್‌ನ ಅಣು ಸ್ಥಾವರಗಳು ಸೇರಿದಂತೆ ಇತರ ಗುರಿಗಳ ಮೇಲೆ ಇಸ್ರೇಲ್ ದಾಳಿ ಮಾಡಲು ಪ್ರಾರಂಭಿಸಿತು. ಇರಾನ್ ಅಣುಬಾಂಬ್ ಪಡೆಯುವ ಅಂಚಿನಲ್ಲಿದೆ ಎಂಬ ಆರೋಪದ ಮೇಲೆ ಇದನ್ನು ಆರಂಭಿಸಲಾಯಿತು, ಆದರೆ ಟೆಹ್ರಾನ್ ತನ್ನ ಅಣು ಕಾರ್ಯಕ್ರಮ ಕೇವಲ ನಾಗರಿಕ ಉದ್ದೇಶಗಳಿಗಾಗಿ ಮಾತ್ರ ಎಂದು ಹೇಳುತ್ತಿದೆ.

ಇಸ್ರೇಲಿನ ದಾಳಿಯ ನಂತರ ಉಭಯ ದೇಶಗಳು ಪರಸ್ಪರ ಕ್ಷಿಪಣಿಗಳನ್ನು ಹಾರಿಸಿದವು. ಭಾನುವಾರ (ಜೂ.21) ಅಮೆರಿಕ ಸಂಘರ್ಷಕ್ಕೆ ಪ್ರವೇಶಿಸಿತು; ಅದರ ವಾಯುಪಡೆಯು ಫೋರ್ಡೋ, ನಟಾನ್ಜ್ ಮತ್ತು ಇಸ್ಫಹಾನ್‌ನಲ್ಲಿರುವ ಮೂರು ಪ್ರಮುಖ ಇರಾನಿನ ಅಣು ಸ್ಥಾವರಗಳ ಮೇಲೆ ಬಾಂಬ್ ದಾಳಿ ನಡೆಸಿತು. ಇರಾನ್ ಕತಾರ್‌ನಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ಒಂದು ದಿನದ ನಂತರ ಅಮೆರಿಕ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ ಕದನವಿರಾಮವು ಯುದ್ಧವನ್ನು ಕೊನೆಗೊಳಿಸಿತು.

ಸಂಘರ್ಷದ ಸಮಯದಲ್ಲಿ ಹಲವು ಬಾರಿ ಕಳವಳ ವ್ಯಕ್ತಪಡಿಸಿದ್ದ ಭಾರತ, ಇಸ್ರೇಲ್ ಅಥವಾ ಅಮೆರಿಕದ ವಿರುದ್ಧ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ. ಭಾರತ ಸದಸ್ಯನಾಗಿರುವ ಶಾಂಘೈ ಸಹಕಾರ ಸಂಘಟನೆ (SCO) ಇಸ್ರೇಲ್‌ನ ಇರಾನ್ ಮೇಲಿನ ದಾಳಿಗಳನ್ನು ಬಲವಾಗಿ ಖಂಡಿಸಿತ್ತು, ಆದರೆ ಭಾರತವು ಆ ಹೇಳಿಕೆಯಿಂದ ದೂರ ಉಳಿದಿತ್ತು.

ಆದಾಗ್ಯೂ, ಭಾರತವು ಸದಸ್ಯನಾಗಿರುವ ಬ್ರಿಕ್ಸ್ (BRICS) ಒಕ್ಕೂಟವು ಇರಾನ್ ಮೇಲಿನ ದಾಳಿಗಳ ಬಗ್ಗೆ “ತೀವ್ರ ಕಳವಳ” ವ್ಯಕ್ತಪಡಿಸಿ ಅವುಗಳನ್ನು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಎಂದು ಕರೆದಾಗ, ಭಾರತ ಅಂತಹ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಇರಾನ್‌ನಿಂದ ಭಾರತಕ್ಕೆ ಕೃತಜ್ಞತೆ

ಹೊಸದಿಲ್ಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯು ಬುಧವಾರ ಒಂದು ಹೇಳಿಕೆಯನ್ನು ಪೋಸ್ಟ್ ಮಾಡಿದ್ದು, “ಇರಾನ್‌ನೊಂದಿಗೆ ದೃಢವಾಗಿ ಮತ್ತು ಗಟ್ಟಿಯಾಗಿ ನಿಂತಿದ್ದ ಭಾರತದ ಎಲ್ಲಾ ಉದಾತ್ತ ಮತ್ತು ಸ್ವಾತಂತ್ರ್ಯ-ಪ್ರಿಯ ಜನರಿಗೆ ಹೃತ್ಪೂರ್ವಕ ಕೃತಜ್ಞತೆ” ವ್ಯಕ್ತಪಡಿಸಿದೆ.

ಭಾರತದ ಜನರು ಮತ್ತು ಸಂಸ್ಥೆಗಳು ತೋರಿಸಿದ ನೈಜ ಮತ್ತು ಅಮೂಲ್ಯ ಬೆಂಬಲಕ್ಕಾಗಿ ನಾವು ಮತ್ತೊಮ್ಮೆ ನಮ್ಮ ಪ್ರಾಮಾಣಿಕ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತೇವೆ” ಎಂದು ಅದು X (ಹಿಂದಿನ ಟ್ವಿಟರ್) ನಲ್ಲಿ ಹೇಳಿದೆ.

ಅಣು ಕಾರ್ಯಕ್ರಮದ ಹಾನಿ: IAEA ವರದಿ ಮತ್ತು ಅಮೆರಿಕದ ಪ್ರತಿಕ್ರಿಯೆ

ಇರಾನ್‌ನ ಅಣು ತಾಣಗಳ ಮೇಲಿನ ದಾಳಿಗಳು ವಿವಿಧ ಮಟ್ಟಗಳಲ್ಲಿ ಸಮೃದ್ಧಗೊಳಿಸಿದ ಯುರೇನಿಯಂ ಹೊಂದಿರುವ ಸ್ಥಾವರಗಳ ಒಳಗೆ ಕೆಲವು ಸ್ಥಳೀಯ ವಿಕಿರಣ ಮತ್ತು ರಾಸಾಯನಿಕ ಬಿಡುಗಡೆಗೆ ಕಾರಣವಾಗಿವೆ. ಆದರೆ, ಈ ಸ್ಥಳಗಳ ಹೊರಗೆ ವಿಕಿರಣ ಹೆಚ್ಚಳದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು IAEA ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

ಏತನ್ಮಧ್ಯೆ, IAEA ಸಂಸ್ಥೆಯ ಮಹಾನಿರ್ದೇಶಕ ರಫೆಲ್ ಗ್ರೋಸ್ಸಿ, ದಾಳಿಗಳ ಪರಿಣಾಮವಾಗಿ ಇರಾನ್‌ನ ಅಣು ಕಾರ್ಯಕ್ರಮ “ತೀವ್ರ ಹಾನಿ” ಅನುಭವಿಸಿದೆ ಎಂದು ಅಂದಾಜಿಸಿದ್ದಾರೆ.

ದಾಳಿಗಳು ದೇಶದ ಅಣು ಕಾರ್ಯಕ್ರಮವನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿವೆಯೇ ಎಂದು ಫ್ರೆಂಚ್ ಪ್ರಸಾರಕ RFI ಕೇಳಿದಾಗ, “ನಾನು ಅಮೆರಿಕ ಧ್ವಂಸಗೊಳಿಸಿದೆ ಎಂದು ಹೇಳುವುದು ಅತಿರೇಕವಾಗುತ್ತದೆ” ಎಂದು ಗ್ರೋಸ್ಸಿ ಹೇಳಿದರು. ಆದಾಗ್ಯೂ, ಇರಾನ್ ತನ್ನ ಹೆಚ್ಚಿನ ಯುರೇನಿಯಂ ಸಮೃದ್ಧಗೊಳಿಸುವಿಕೆ ಮತ್ತು ಪರಿವರ್ತನೆ ಚಟುವಟಿಕೆಗಳನ್ನು ಮೂರು ಪ್ರಮುಖ ತಾಣಗಳಲ್ಲಿ ಕೇಂದ್ರೀಕರಿಸಿದ್ದರಿಂದ ಕಾರ್ಯಕ್ರಮವು “ಅತ್ಯಂತ ತೀವ್ರ ಹಾನಿ” ಅನುಭವಿಸಿರುತ್ತದೆ ಎಂದು ಅವರು ಹೇಳಿದರು.

ಅಮೆರಿಕವು ‘ಬಂಕರ್ ಬಸ್ಟರ್’ ಬಾಂಬ್‌ಗಳಿಂದ ದಾಳಿ ನಡೆಸಿದೆ ಎಂದು ವರದಿಯಾಗಿರುವ ಫೋರ್ಡೋ ನೆಲದಡಿಯ ತಾಣದಲ್ಲಿನ ಸೆಂಟ್ರಿಫ್ಯೂಜ್‌ಗಳು ಇನ್ನು ಮುಂದೆ ಕಾರ್ಯನಿರ್ವಹಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಗ್ರೋಸ್ಸಿ ತಿಳಿಯಪಡಿಸಿದರು.

ದಾಳಿಗಳಿಂದಾಗಿ ಇರಾನ್‌ನ ಅಣು ಕಾರ್ಯಕ್ರಮಕ್ಕೆ ಎಷ್ಟು ದೊಡ್ಡ ನಷ್ಟವಾಗಿದೆ ಎಂಬ ಬಗ್ಗೆ ಪ್ರಶ್ನಾರ್ಥಕ ಚಿಹ್ನೆ ಇರುವುದರಿಂದ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ತಮ್ಮ ಸೇನೆಯ ‘ಬಂಕರ್ ಬಸ್ಟರ್’ ಬಾಂಬ್ ದಾಳಿಯಿಂದ ಇರಾನ್‌ನ ಮೂರು ಪ್ರಮುಖ ತಾಣಗಳು ಸಂಪೂರ್ಣವಾಗಿ ಮತ್ತು ಒಟ್ಟಾಗಿ ನಾಶವಾಗಿವೆ ಎಂದು ಹೇಳಿಕೊಂಡಿದ್ದರು. ಆದರೆ, ಇರಾನ್ ಈ ದಾಳಿಯಿಂದ ನಮ್ಮ ಪರಮಾಣು ಕಾರ್ಯಕ್ರಮವು ಕೇವಲ ಕೆಲವೇ ತಿಂಗಳುಗಳ ಹಿನ್ನಡೆ ಅನುಭವಿಸಿದೆ ಎಂಬ ಗುಪ್ತಚರ ವರದಿಗಳನ್ನು ನಿರಾಕರಿಸಿದೆ.

ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್‌ಸೆತ್ ಗುರುವಾರ, ತಮ್ಮ ದೇಶವು ಬಾಂಬ್ ದಾಳಿ ನಡೆಸುವ ಮೊದಲು ಇರಾನ್ ಯಾವುದೇ ಹೆಚ್ಚು ಸಮೃದ್ಧಗೊಳಿಸಿದ ಯುರೇನಿಯಂ ಅನ್ನು ಗುರಿಯಾಗಿಸಿದ ಸ್ಥಾವರಗಳಿಂದ ಸ್ಥಳಾಂತರಿಸಿದೆ ಎಂಬ ಬಗ್ಗೆ ತಮಗೆ ತಿಳಿದಿಲ್ಲ ಎಂದು ಹೇಳಿದರು.

ಇರಾನ್-ಇಸ್ರೇಲ್ ಸಂಘರ್ಷ: ಕದನವಿರಾಮದ ನಂತರವೂ ಅನಿಶ್ಚಿತತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...