Homeಮುಖಪುಟಮುರ್ಷಿದಾಬಾದ್ ಕೋಮು ಹಿಂಸಾಚಾರ: ಪೊಲೀಸ್ ನಿರ್ಲಕ್ಷ್ಯ, ಕೋಮು ತಾರತಮ್ಯದ ಆರೋಪ ಮಾಡಿದ ಸತ್ಯಶೋಧನಾ ಸಮಿತಿ

ಮುರ್ಷಿದಾಬಾದ್ ಕೋಮು ಹಿಂಸಾಚಾರ: ಪೊಲೀಸ್ ನಿರ್ಲಕ್ಷ್ಯ, ಕೋಮು ತಾರತಮ್ಯದ ಆರೋಪ ಮಾಡಿದ ಸತ್ಯಶೋಧನಾ ಸಮಿತಿ

- Advertisement -
- Advertisement -

ಮುರ್ಷಿದಾಬಾದ್: ಏಪ್ರಿಲ್ 11 ಮತ್ತು 12 ರಂದು ಮುರ್ಷಿದಾಬಾದ್‌ನ ಸಮ್‌ಶೇರ್‌ಗಂಜ್‌ನಲ್ಲಿ ನಡೆದ ಕೋಮು ಹಿಂಸಾಚಾರದ ನಂತರ ಭಾರೀ ಪೊಲೀಸ್ ನಿರ್ಲಕ್ಷ್ಯ, ಕೋಮು ತಾರತಮ್ಯ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಳು ನಡೆದಿವೆ ಎಂದು  ನಾಗರಿಕ ಹಕ್ಕುಗಳ ರಕ್ಷಣಾ ಸಂಘ (APCR) ಮತ್ತು ಬಂದಿ ಮುಕ್ತಿ ಸಮಿತಿ ಜಂಟಿಯಾಗಿ ನಡೆಸಿದ ಸತ್ಯಶೋಧನಾ ಸಮಿತಿಯು ಆರೋಪಿಸಿದೆ.

ವಕ್ಫ್ ಚಳುವಳಿಯ ಸುತ್ತಲಿನ ವಿವಾದದಿಂದ ಈ ಹಿಂಸಾಚಾರ ಹುಟ್ಟಿಕೊಂಡಿತು ಎನ್ನಲಾಗಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಗಲಭೆ ಸಂದರ್ಭದಲ್ಲಿ ಅಂಗಡಿ ಮುಗ್ಗಟ್ಟುಗಳಿಗೆ, ವಾಹನಗಳಿಗೆ ವ್ಯಾಪಕವಾಗಿ ಬೆಂಕಿ ಹಚ್ಚುವಿಕೆ, ಲೂಟಿ, ಮತ್ತು ಹಲವರಿಗೆ ಗಾಯಗಳಾಗಿವೆ ಎಂದು ಈ ಸತ್ಯಶೋಧನಾ ಸಮಿತಿಯು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಈ ಸಂದರ್ಭದಲ್ಲಿ ಪೊಲೀಸರು ಸಮಯಕ್ಕೆ ಸರಿಯಾಗಿ ಮಧ್ಯಪ್ರವೇಶಿಸಿದ್ದರೆ ಹಿಂಸಾಚಾರದ ವಿಸ್ತರಣೆಯನ್ನು ತಡೆಯಬಹುದಿತ್ತು ಎಂದು ಕಂಡುಬಂದಿದೆ. ಎಲ್ಲಾ ಸಮುದಾಯಗಳ ಸಂತ್ರಸ್ತರು, ಪೊಲೀಸರ ಆರಂಭಿಕ ಕ್ರಮವು ಹಿಂಸಾಚಾರವನ್ನು ತಡೆಯಬಹುದಿತ್ತು ಎಂದು ಒಕ್ಕೊರಲಿನಿಂದ ಹೇಳಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹರ್ಗೋಬಿಂದ್ ದಾಸ್ ಮತ್ತು ಚಂದನ್ ದಾಸ್ ಎಂಬ ಇಬ್ಬರು ಸಂತ್ರಸ್ತರು ಮೂರು ಗಂಟೆಗಳಿಗೂ ಹೆಚ್ಚು ಕಾಲ ವೈದ್ಯಕೀಯ ನೆರವು ಸಿಗದೆ ಜಾಫರಾಬಾದ್‌ನಲ್ಲಿ ಮೃತಪಟ್ಟಿದ್ದಾರೆ ಎಂಬ ಆರೋಪವೂ ಇದೆ ಎಂದು ಸಮಿತಿ ಹೇಳಿದೆ.

ಗಡಿ ಭದ್ರತಾ ಪಡೆ (BSF) ಸಿಬ್ಬಂದಿಯ ಭಾಗವಹಿಸುವಿಕೆಯ ಬಗ್ಗೆಯೂ ಸಮಿತಿಯು ಗಂಭೀರ ಕಳವಳ ವ್ಯಕ್ತಪಡಿಸಿದೆ. ಇಜಾಜ್ ಅಹ್ಮದ್ ಎಂಬುವವರು ಈ ಗಲಭೆಯಲ್ಲಿ ಕೊಲ್ಲಲ್ಪಟ್ಟರು ಮತ್ತು ಕನಿಷ್ಠ 13  ಮುಸ್ಲಿಂ ನಿವಾಸಿಗಳು ಗುಂಡೇಟುಗಳಿಂದ ಗಾಯಗೊಂಡಿದ್ದಾರೆ ಎಂದು ಅದು ಹೇಳಿದೆ. ಕೆಲವು ಬಿಎಸ್‌ಎಫ್ ಪಡೆಗಳು ಚಪ್ಪಲಿಗಳನ್ನು ಧರಿಸಿದ್ದವು. ಇದು ಅಸಾಮಾನ್ಯ ದೃಶ್ಯವಾಗಿತ್ತು  ಮತ್ತು ಈ ರೀತಿ ಚಪ್ಪಲಿ ಧರಿಸಿದವರು ಬಲಪಂಥೀಯ ಉಗ್ರಗಾಮಿ ಸದಸ್ಯರಾಗಿದ್ದು ಅವರು ಬಿಎಸ್‌ಎಫ್ ಸಿಬ್ಬಂದಿಯಂತೆ ನಟಿಸಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

ಮುಸ್ಲಿಂ ನಾಗರಿಕರನ್ನು ಮತ್ತು ಅಪ್ರಾಪ್ತ ವಯಸ್ಕರರನ್ನು ಸರಿಯಾದ ಕಾನೂನು ಪ್ರಕ್ರಿಯೆ ಇಲ್ಲದೆ ಅಕ್ರಮವಾಗಿ ಪೊಲೀಸರು ಬಂಧಿಸಿದ್ದಾರೆ ಎಂದು ಸತ್ಯಶೋಧನಾ ಸಮಿತಿ ಆರೋಪಿಸಿದೆ. ರಾತ್ರಿ ವೇಳೆ ದಾಳಿಗಳನ್ನು ನಡೆಸಲಾಗಿದ್ದು ಆರೆಸ್ಟ್ ವಾರೆಂಟ್ ಗಳನ್ನು ನೀಡಲಾಗಿಲ್ಲ ಮತ್ತು ಬಂಧಿತರನ್ನು 24 ಗಂಟೆಗಳ ಕಾನೂನು ಮಿತಿಗಿಂತ ಹೆಚ್ಚು ಕಾಲ ಪೊಲೀಸ್ ವಶದಲ್ಲಿ ಇರಿಸಿ,  ಹಿಂಸಾಚಾರಕ್ಕೆ ಒಳಪಡಿಸಲಾಗಿದೆ ಎಂದೂ ಆರೋಪಿಸಲಾಗಿದೆ.

ಸುಮಾರು 300 ದೂರುಗಳ (FIRs) ಪರಿಶೀಲನೆ ಮಾಡಿದಾಗ ಪ್ರತಿ ದೂರಿನಲ್ಲಿ “ಕಾಪಿ-ಪೇಸ್ಟ್” ಮಾಡಲಾಗಿದೆ. ಕೇವಲ ಹೆಸರುಗಳನ್ನು ಮಾತ್ರ ಬದಲಾಯಿಸಲಾಗಿದೆ ಎಂದು ಸಮಿತಿ ಹೇಳಿದೆ.  ಇದು ಸುಳ್ಳು ಮತ್ತು ಇಸ್ಲಾಮೋಫೋಬಿಕ್ ದೂರುಗಳ ಸೂಚನೆಯಾಗಿದೆ ಎಂದು ಅದು ಹೇಳಿದೆ. ಎಫ್‌ಐಆರ್‌ನಲ್ಲಿನ ನಿರೂಪಣೆಗಳು ದಲಿತರು ಮತ್ತು ಮುಸ್ಲಿಮರ ನಡುವೆ ಭಿನ್ನಾಭಿಪ್ರಾಯ ಮೂಡಿಸುವ ಉದ್ದೇಶವನ್ನು ಸೂಚಿಸಿವೆ. ಇದು ಹಿಂದೂ ರಾಷ್ಟ್ರೀಯವಾದಿ ಸಂಘಟನೆಗಳ ತಂತ್ರ ಎಂದು ಸಮಿತಿಯು ಆರೋಪಿಸಿದೆ.

ಸತ್ಯಶೋಧನಾ ವರದಿಯು ಈ ಕೆಳಗಿನಂತೆ  ಶಿಫಾರಸ್ಸು ಮಾಡಿದೆ

1.ನಿಷ್ಪಕ್ಷಪಾತ ನ್ಯಾಯಾಂಗ ತನಿಖೆ

2.ಬಿಎಸ್‌ಎಫ್ ಗುಂಡಿನ ದಾಳಿಗೆ ಬಲಿಯಾದವರಿಗೆ ಪರಿಹಾರ

3.ಸುಳ್ಳು ಆರೋಪಗಳ ಅಡಿಯಲ್ಲಿ ಬಂಧಿತರಾದವರ ಬಿಡುಗಡೆ

4.ಅನಿಯಂತ್ರಿತ ಪೊಲೀಸ್ ದಾಳಿಗಳನ್ನು ಕೊನೆಗೊಳಿಸುವುದು. ಜಿಲ್ಲಾಡಳಿತವು ಪ್ರಜಾಪ್ರಭುತ್ವ ಸಭೆಗಳ ಮೇಲಿನ ನಿಷೇಧವನ್ನು ತೆಗೆದುಹಾಕಬೇಕು ಮತ್ತು ವಕೀಲರನ್ನು ನೇಮಿಸಿಕೊಳ್ಳಲು ಸಾಧ್ಯವಾಗದ ವಿಚಾರಣಾಧೀನ ಕೈದಿಗಳಿಗೆ ಕಾನೂನು ನೆರವು ಖಚಿತಪಡಿಸಬೇಕು ಎಂದು ಅದು ಒತ್ತಾಯಿಸಿದೆ.

ಇರಾನ್ ಅಣು ಸ್ಥಾವರಗಳ ವಿಕಿರಣ ಮಟ್ಟಗಳ ಮೇಲೆ ಭಾರತದ ಸೂಕ್ಷ್ಮ ನಿಗಾ: ಇರಾನ್‌ನಿಂದ ಭಾರತಕ್ಕೆ ಕೃತಜ್ಞತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...