Homeಮುಖಪುಟಮಹಾರಾಷ್ಟ್ರ | ಹಿಂದಿ ಹೇರಿಕೆಯ ವಿರುದ್ಧ ಒಂದಾಗಲಿರುವ ರಾಜ್, ಉದ್ಧವ್ ಠಾಕ್ರೆ!

ಮಹಾರಾಷ್ಟ್ರ | ಹಿಂದಿ ಹೇರಿಕೆಯ ವಿರುದ್ಧ ಒಂದಾಗಲಿರುವ ರಾಜ್, ಉದ್ಧವ್ ಠಾಕ್ರೆ!

- Advertisement -
- Advertisement -

ಮಹಾರಾಷ್ಟ್ರದ ಪ್ರಾಥಮಿಕ ಶಾಲೆಗಳಲ್ಲಿ ಹಿಂದಿಯನ್ನು ಮೂರನೇ ಭಾಷೆಯಾಗಿ ಪರಿಚಯಿಸುವ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ನಿರ್ಧಾರವು, ಬೇರ್ಪಟ್ಟ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಅವರನ್ನು ಮರಾಠಿ ರಕ್ಷಣೆ ಮತ್ತು ‘ಮರಾಠಿ ಮನೂಸ್’ ಹಿತಾಸಕ್ತಿಗಳಿಗಾಗಿ ಒಗ್ಗೂಡಿಸಲಿದೆ ಎಂದು ವರದಿಗಳು ಉಲ್ಲೇಖಿಸಿವೆ. ಮಹಾರಾಷ್ಟ್ರ | ಹಿಂದಿ ಹೇರಿಕೆಯ

ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥರಾಗಿರುವ ರಾಜ್ ಠಾಕ್ರೆ ಅವರು ಮಹಾರಾಷ್ಟ್ರ ಶಿಕ್ಷಣ ಸಚಿವ ದಾದಾ ಭೂಸೆ ಅವರನ್ನು ಭೇಟಿಯಾದ ನಂತರ ಬಿಜೆಪಿ ಸರ್ಕಾರದ ಕ್ರಮದ ಹಿಂದಿನ ತಾರ್ಕಿಕತೆಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ ಎಂದು ವರದಿಗಳು ಉಲ್ಲೇಖಸಿವೆ. ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಗುರಿಗಳನ್ನು ತಲುಪಲು ರಾಜ್ಯ ಸರ್ಕಾರ ನಿಜವಾಗಿಯೂ ಬದ್ಧವಾಗಿದ್ದರೆ, ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕ್ರೀಡೆ ಮತ್ತು ಕಲೆಗಳಂತಹ ವಿಷಯಗಳನ್ನು ಪರಿಚಯಿಸುವ ಬಗ್ಗೆ ಪರಿಗಣಿಸಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಜುಲೈ 6 ರಂದು ಗಿರ್ಗಾಮ್ ಚೌಪಟ್ಟಿಯಿಂದ ಪ್ರಾರಂಭವಾಗಿ ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಮುಕ್ತಾಯಗೊಳ್ಳಲಿರುವ ಮುಂಬರುವ ಮೆರವಣಿಗೆಯಲ್ಲಿ, ತಮ್ಮ ಸೋದರಸಂಬಂಧಿ ಮತ್ತು ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಮತ್ತು ಇತರ ರಾಜಕೀಯ ಪಕ್ಷಗಳ ನಾಯಕರನ್ನು ಸಂಪರ್ಕಿಸಲು ಉದ್ದೇಶಿಸಿರುವುದಾಗಿ ರಾಜ್ ಠಾಕ್ರೆ ಸುಳಿವು ನೀಡಿದ್ದಾರೆ.

“ವೈಯಕ್ತಿಕ ವಿವಾದಗಳು ಮತ್ತು ಭಿನ್ನಾಭಿಪ್ರಾಯಗಳಿಗಿಂತ ಹೆಚ್ಚಾಗಿ, ಮಹಾರಾಷ್ಟ್ರದ ವಿಚಾರ ಅತಿಮುಖ್ಯವಾಗಿದೆ. ಮರಾಠಿ ಮನೂಸ್ ನಮಗೆ ಮುಖ್ಯವಾಗಿದೆ” ಎಂದು ರಾಜ್ ಠಾಕ್ರೆ ಈ ಹಿಂದೆ ಹೇಳಿದ್ದರು.

ಉದ್ಧವ್ ಠಾಕ್ರೆ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಮತ್ತು ನಾಯಕರನ್ನು ಪ್ರತಿಭಟನೆಯಲ್ಲಿ ಭಾಗವಹಿಸಲು ವೈಯಕ್ತಿಕವಾಗಿ ಆಹ್ವಾನಿಸುವುದಾಗಿ ರಾಜ್ ಠಾಕ್ರೆ ಹೇಳಿದ್ದಾರೆ.

“ಇದು ನಮ್ಮ ಮೇಲೆ ಹಿಂದಿ ಹೇರಲು ಪ್ರಯತ್ನಿಸುತ್ತಿರುವ ಆಡಳಿತಾರೂಢ ಮಹಾಯುತಿ ಸರ್ಕಾರಕ್ಕೆ ಮಹಾರಾಷ್ಟ್ರ ಮತ್ತು ಮರಾಠಿ ಮನೂಸ್‌ನ ಶಕ್ತಿಯನ್ನು ತೋರಿಸುವ ವಿಚಾರವಾಗಿದೆ. ಮರಾಠಿ ಕಲಾವಿದರು ಮತ್ತು ಬರಹಗಾರರು ಪ್ರತಿಭಟನೆಯಲ್ಲಿ ಸೇರಲು ನಾವು ಮನವಿ ಮಾಡುತ್ತೇವೆ. ಜೊತೆಗೆ ಯಾರು ಭಾಗವಹಿಸುತ್ತಾರೆ ಮತ್ತು ಯಾರು ಭಾಗವಹಿಸುವುದಿಲ್ಲ ಎಂಬುದನ್ನು ನಾವು ಗಮನಿಸುತ್ತೇವೆ. ಅದು ನಮಗೆ ಸ್ಪಷ್ಟತೆಯನ್ನು ನೀಡುತ್ತದೆ” ಎಂದು ಅವರು ಹೇಳಿದ್ದಾರೆ.

ಜುಲೈ 6ರ ಪ್ರತಿಭಟನೆಗೆ ಭಾನುವಾರವನ್ನು ಆಯ್ಕೆ ಮಾಡುವುದರ ಹಿಂದಿನ ತಾರ್ಕಿಕತೆಯನ್ನು ವಿವರಿಸಿದ ರಾಜ್‌ ಠಾಕ್ರೆ, ಪೋಷಕರು ಮತ್ತು ವಿದ್ಯಾರ್ಥಿಗಳ ಭಾಗವಹಿಸುವಿಕೆಯನ್ನು ಸುಗಮಗೊಳಿಸಲು ಆ ದಿನವನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

“ಭಾನುವಾರ ರಜಾದಿನವಾಗಿರುವುದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಮೆರವಣಿಗೆಯಲ್ಲಿ ಸೇರಲು ಸುಲಭವಾಗುತ್ತದೆ. ನಾವು ಯಾವುದೇ ಭಾಷೆಯನ್ನು ವಿರೋಧಿಸುವುದಿಲ್ಲ, ಆದರೆ ಮಹಾರಾಷ್ಟ್ರದಲ್ಲಿ, 1 ನೇ ತರಗತಿಯಿಂದ ಮರಾಠಿಯನ್ನು ಮಾತ್ರ ಕಲಿಸಬೇಕು. ನಾವು ಈ ನಿಲುವಿನ ಬಗ್ಗೆ ಸ್ಪಷ್ಟವಾಗಿದ್ದೇವೆ. ನಾನು ಶಿಕ್ಷಣ ಸಚಿವರಿಗೆ ಅದನ್ನೇ ತಿಳಿಸಿದ್ದೇನೆ” ಎಂದು ರಾಜ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರ | ಹಿಂದಿ ಹೇರಿಕೆಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಯೋತ್ಪಾದನೆಗಿಂತ ಜಾತಿವಾದವೇ ಹೆಚ್ಚು ಅಪಾಯಕಾರಿ: ಎರಡು ಘಟನೆ ಉಲ್ಲೇಖಿಸಿದ ಗಾಯಕಿ ನೇಹಾ ಸಿಂಗ್ ರಾಥೋರ್

ಭಯೋತ್ಪಾದನೆಗಿಂತ ಜಾತಿವಾದವೇ ಹೆಚ್ಚು ಅಪಾಯಕಾರಿ: ಎರಡು ಘಟನೆ ಉಲ್ಲೇಖಿಸಿದ ಗಾಯಕಿ ನೇಹಾ ಸಿಂಗ್ ರಾಥೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...