Homeಚಳವಳಿದೆಹಲಿ | ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ

ದೆಹಲಿ | ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ

ಸಂಯುಕ್ತ ಕಿಸಾನ್ ಮೋರ್ಚಾ ದೆಹಲಿ ಸುತ್ತ ವರ್ಷಗಳ ಕಾಲ ಪ್ರತಿಭಟನೆ ನಡೆಸಿ ಬಿಜೆಪಿಯ ಮೋದಿ ಸರ್ಕಾರವನ್ನು ಮಂಡಿಯೂರಿಸಿತ್ತು

- Advertisement -
- Advertisement -

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿಸಿ ರೈತರು ದೇವನಹಳ್ಳಿಯಲ್ಲಿ ಬುಧವಾರ ನಡೆಸಿದ್ದ ಹೋರಾಟವನ್ನು ಪೊಲೀಸ್ ಬಲ ಪ್ರಯೋಗಿಸಿ ಹತ್ತಿಕ್ಕಿದ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ ಶುಕ್ರವಾರ ಖಂಡಿಸಿದ್ದು, ನ್ಯಾಯಕ್ಕಾಗಿ ನಡೆಸುತ್ತಿರುವ ರೈತರ ಹೋರಾಟಕ್ಕೆ ಅದು ಬೆಂಬಲ ವ್ಯಕ್ತಪಡಿಸಿದೆ. ದೆಹಲಿ | ಚನ್ನರಾಯಪಟ್ಟಣ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ದೇಶದಾದ್ಯಂತ ಇರುವ ಪ್ರಮುಖ ರೈತ ಸಂಘಟನೆಗಳ ಒಕ್ಕೂಟವಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕರಾಳ ರೈತ ವಿರೋಧಿ ಕಾಯ್ದೆ ವಿರೋಧಿಸಿ ವರ್ಷಗಳ ಕಾಲ ದೆಹಲಿಯ ಸುತ್ತ ನಡೆಸಲಾಗಿದ್ದ ರೈತ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವ ನೀಡಿತ್ತು. ಜೊತೆಗೆ ರೈತ ಸಂಘಟನೆಗಳ ಈ ಹೋರಾಟದ ಕಾರಣಕ್ಕೆ ಕೇಂದ್ರದ ಬಿಜೆಪಿ ಸರ್ಕಾರ ಮಣಿದು ಕಾಯ್ದೆಯನ್ನು ವಾಪಾಸು ಪಡೆಯಿತು.

ಶಾಂತಿಯುತವಾಗಿ ಪ್ರತಿಭಟಿಸಿದ ನೂರಾರು ರೈತರನ್ನು ಅಮಾನುಷವಾಗಿ ಎಳೆದಾಡಿ ಬಂಧಿಸಿ ಪೊಲೀಸರಿಂದ ದೌರ್ಜನ್ಯ ನಡೆಸಿದ್ದಕ್ಕಾಗಿ ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರವನ್ನು ಎಸ್‌ಕೆಎಂ ತೀವ್ರವಾಗಿ ಖಂಡಿಸಿದೆ.

ತಮ್ಮ ಪೂರ್ವಜರ ಭೂಮಿಯಲ್ಲಿ ಕೃಷಿಯನ್ನು ಅವಲಂಭಿಸಿ ಬದುಕುತ್ತಿರುವ ದೇವನಹಳ್ಳಿಯ ಚನ್ನರಾಯಪಟ್ಟಣದ 13 ಹಳ್ಳಿಗಳಿಗೆ ಸೇರಿದ ಸುಮಾರು 800 ಕುಟುಂಬಗಳು ಈಗ 1180 ದಿನಗಳಿಂದ (ಸುಮಾರು 3.5 ವರ್ಷಗಳು) ಅನಿರ್ದಿಷ್ಟ ಹೋರಾಟ ನಡೆಸುತ್ತಿವೆ.

2022ರ ಜನವರಿ ವೇಳೆಗೆ ಆಗಿನ ಬಿಜೆಪಿ ನೇತೃತ್ವದ ಬಸವರಾಜ ಬೊಮ್ಮಾಯಿ ಸರ್ಕಾರವು ಕಾರ್ಪೊರೇಟ್ ಕಂಪೆನಿಗಳ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಅನುಕೂಲವಾಗುವಂತೆ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಈ 13 ಗ್ರಾಮಗಳ ರೈತರ 1777 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿ ಅವರಿಗೆ ನೋಟಿಸ್ ನೀಡಿತ್ತು.

ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಹರಳೂರು ಕೈಗಾರಿಕಾ ಪ್ರದೇಶಕ್ಕಾಗಿ ಸುತ್ತಮುತ್ತಲಿನ ಹಳ್ಳಿಗಳಿಂದ 6000 ಎಕರೆಗಳನ್ನು ಈಗಾಗಲೇ ಸ್ವಾಧೀನಪಡಿಸಿಕೊಂಡಿತ್ತು. ಆ ಹಿಂದಿನ ಸ್ವಾಧೀನಗಳಲ್ಲಿ ಸಾವಿರಾರು ರೈತರು ಮತ್ತು ಗ್ರಾಮಸ್ಥರನ್ನು ಹೊರಹಾಕಲಾಯಿತು ಆದರೆ ಅವರಿಗೆ ಯಾವುದೇ ಸರಿಯಾದ ಪರಿಹಾರವನ್ನು ನೀಡಲಾಗಿಲ್ಲ.

ಈ ಸಂದರ್ಭದಲ್ಲಿ, ‘ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ಅಡಿಯಲ್ಲಿ ರೈತರು 1777 ಎಕರೆಗಳ ಸ್ವಾಧೀನ ಪ್ರಯತ್ನವನ್ನು ದೃಢವಾಗಿ ವಿರೋಧಿಸಿದ್ದರು. ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ವಿಧಾನಸಭೆಯಲ್ಲಿ ಈ ಭೂಸ್ವಾಧೀನ ಕ್ರಮವನ್ನು ಪ್ರಶ್ನಿಸಿತ್ತು ಮತ್ತು ಅಂದಿನ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಧಿಸೂಚನೆಯನ್ನು ಹಿಂಪಡೆಯಲಾಗುವುದು ಎಂದು ರೈತರಿಗೆ ಭರವಸೆ ನೀಡಿದ್ದರು.

ಅದಾಗ್ಯೂ, 2024ರ ಏಪ್ರಿಲ್ ತಿಂಗಳಲ್ಲಿ ಅಧಿಕಾರಕ್ಕೆ ಬಂದ ನಂತರ, ಸಿದ್ದರಾಮಯ್ಯ ಸರ್ಕಾರವು ಕಾಂಗ್ರೆಸ್ ತೆಗೆದುಕೊಂಡಿದ್ದ ಹಿಂದಿನ ನಿಲುವನ್ನು ಬದಲಾಯಿಸಿ ರೈತರ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಳ್ಳಲು ಬಿಜೆಪಿಯ ನೀತಿಯನ್ನು ಅನುಸರಿಸಿತ್ತು.

“ಇದು ಕಾಂಗ್ರೆಸ್ ನೇತೃತ್ವದ ಯುಪಿಎ 2 ಸರ್ಕಾರ ತಂದ “ಭೂಸ್ವಾಧೀನ ಮತ್ತು ಪುನರ್ವಸತಿ ಕಾಯ್ದೆ -2013″ ರ ಸಂಪೂರ್ಣ ಉಲ್ಲಂಘನೆಯಾಗಿದೆ.” ಎಂದು ಎಸ್‌ಕೆಎಂ ಆಕ್ರೋಶ ವ್ಯಕ್ತಪಡಿಸಿದೆ.

ದೊಡ್ಡ ಕಾರ್ಪೊರೇಟ್ ಶಕ್ತಿಗಳ ವಿರುದ್ಧ ಹೋರಾಟ ನಡೆಸುತ್ತಿರುವ 13 ಹಳ್ಳಿಗಳ ರೈತರ ಹೋರಾಟದ ಮನೋಭಾವಕ್ಕೆ ಹೆಮ್ಮೆ ವ್ಯಕ್ತಪಡಿಸಿರುವ ಎಸ್‌ಕೆಎಂ, ಪ್ರಸ್ತುತ ಹೋರಾಟದಲ್ಲಿ ರೈತರೊಂದಿಗೆ ದೃಢವಾಗಿ ನಿಂತಿದ್ದಕ್ಕಾಗಿ ಎಸ್‌ಕೆಎಂನ ಕರ್ನಾಟಕದ ಘಟಕವಾಗಿರುವ ‘ಸಂಯುಕ್ತ ಹೋರಾಟ ಕರ್ನಾಟಕ’ ಶ್ಲಾಘಿಸಿ, ಅಭಿನಂದನೆ ಸಲ್ಲಿಸಿದೆ. ದೆಹಲಿ | ಚನ್ನರಾಯಪಟ್ಟಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಯೋತ್ಪಾದನೆಗಿಂತ ಜಾತಿವಾದವೇ ಹೆಚ್ಚು ಅಪಾಯಕಾರಿ: ಎರಡು ಘಟನೆ ಉಲ್ಲೇಖಿಸಿದ ಗಾಯಕಿ ನೇಹಾ ಸಿಂಗ್ ರಾಥೋರ್

ಭಯೋತ್ಪಾದನೆಗಿಂತ ಜಾತಿವಾದವೇ ಹೆಚ್ಚು ಅಪಾಯಕಾರಿ: ಎರಡು ಘಟನೆ ಉಲ್ಲೇಖಿಸಿದ ಗಾಯಕಿ ನೇಹಾ ಸಿಂಗ್ ರಾಥೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...