Homeಮುಖಪುಟಕೋಲ್ಕತ್ತಾ| ಕಾನೂನು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ; ಟಿಎಂಸಿ ನಾಯಕ ಸೇರಿದಂತೆ ಮೂವರ ಬಂಧನ

ಕೋಲ್ಕತ್ತಾ| ಕಾನೂನು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ; ಟಿಎಂಸಿ ನಾಯಕ ಸೇರಿದಂತೆ ಮೂವರ ಬಂಧನ

- Advertisement -
- Advertisement -

ಈ ವಾರದ ಆರಂಭದಲ್ಲಿ ಕೋಲ್ಕತ್ತಾದ ಕಾನೂನು ಕಾಲೇಜಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪುರುಷರನ್ನು ಬಂಧಿಸಲಾಗಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ವರ್ಷ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇದೇ ರೀತಿಯ ಅಪರಾಧ ನಡೆದಿತ್ತು. ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆದಿದ್ದವು.

ಆಡಳಿತ ಪಕ್ಷವಾದ ತೃಣಮೂಲ ಕಾಂಗ್ರೆಸ್‌ನ ಪ್ರಸ್ತುತ ವಿದ್ಯಾರ್ಥಿ ವಿಭಾಗದ ನಾಯಕರಾಗಿರುವ ಮೂವರು ಆರೋಪಿಗಳನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅವರನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ದೂರಿನ ಪ್ರಕಾರ, ಬುಧವಾರ ಸಂಜೆ 7.30 ರಿಂದ ರಾತ್ರಿ 10.50 ರ ನಡುವೆ ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನ ಕ್ಯಾಂಪಸ್‌ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮಹಿಳೆಯ ದೂರಿನ ಆಧಾರದ ಮೇಲೆ ನಡೆಸಿದ ತನಿಖೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಮೂವರು ಪುರುಷರು ಮತ್ತು ಓರ್ವ ಸಿಬ್ಬಂದಿಯನ್ನು ಬಂಧಿಸಲಾಯಿತು. ಸಿಬ್ಬಂದಿ ಕಾಲೇಜಿನ ಮಾಜಿ ವಿದ್ಯಾರ್ಥಿ ಮತ್ತು ತೃಣಮೂಲ ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗದ ನಾಯಕಿಯಾಗಿದ್ದರು.

24 ವರ್ಷದ ವಿದ್ಯಾರ್ಥಿನಿ ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಪರೀಕ್ಷೆಗೆ ಸಂಬಂಧಿಸಿದ ನಮೂನೆಗಳನ್ನು ಭರ್ತಿ ಮಾಡಲು ಕಾಲೇಜಿಗೆ ಬಂದಿದ್ದರು. ಆಕೆಯ ದೂರಿನ ಪ್ರಕಾರ, ಆಕೆ ಆರಂಭದಲ್ಲಿ ಕಾಲೇಜು ಯೂನಿಯನ್ ಕೋಣೆಯೊಳಗೆ ಕುಳಿತಿದ್ದರು. ನಂತರ, ಪ್ರಾಥಮಿಕ ಆರೋಪಿ ಕಾಲೇಜಿನ ಮುಖ್ಯ ಗೇಟ್ ಅನ್ನು ಲಾಕ್ ಮಾಡಲು ಸೂಚಿಸಿ, ಕ್ಯಾಂಪಸ್‌ನಲ್ಲಿರುವ ಭದ್ರತಾ ಸಿಬ್ಬಂದಿಯ ಕೋಣೆಯೊಳಗೆ ಮಹಿಳೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಮಹಿಳೆಯ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿದ್ದು, ಪ್ರಮುಖ ಆರೋಪಿಗಳು ತೃಣಮೂಲ ಕಾಂಗ್ರೆಸ್ ಛತ್ರ ಪರಿಷತ್ (ಟಿಎಂಸಿಪಿ) ನ ದಕ್ಷಿಣ ಕೋಲ್ಕತ್ತಾ ಜಿಲ್ಲೆಯ ಮಾಜಿ ವಿದ್ಯಾರ್ಥಿ ಮತ್ತು ಪ್ರಸ್ತುತ ಪ್ರಧಾನ ಕಾರ್ಯದರ್ಶಿ ಮೋನೋಜಿತ್ ಮಿಶ್ರಾ (31); ಜೈಬ್ ಅಹ್ಮದ್ (19), ಪ್ರಥಮ ವರ್ಷದ ವಿದ್ಯಾರ್ಥಿ ಮತ್ತು 20 ವರ್ಷದ ಪ್ರಮಿತ್ ಮುಖರ್ಜಿ (20) ಸೇರಿದ್ದಾರೆ.

ಪ್ರಮುಖ ಆರೋಪಿ ಮಿಶ್ರಾ ನನ್ನನ್ನು ಮದುವೆಯಾಗುವುದಾಗಿ ಹೇಳಿದ. ಆದರೆ ತನಗೆ ಈಗಾಗಲೇ ಗೆಳೆಯನಿದ್ದಾನೆ ಎಂದು ಹೇಳಿ ಅದನ್ನು ನಿರಾಕರಿಸಿದಾಗ ಆತ ಕೋಪಗೊಂಡ. ಪೊಲೀಸರಿಗೆ ತನ್ನ ಮೇಲಿನ ದೌರ್ಜನ್ಯವನ್ನು ವಿವರಿಸುತ್ತಾ, ಆರೋಪಿಗಳು ತನ್ನನ್ನು ಬಲವಂತವಾಗಿ ಕೋಣೆಯೊಳಗೆ ಕೂಡಿ ಹಾಕಿ, ತನ್ನನ್ನು ಮತ್ತು ತನ್ನ ಗೆಳೆಯನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ತನ್ನ ಪೋಷಕರನ್ನು ಬಂಧಿಸುವಂತೆ ಬೆದರಿಕೆ ಹಾಕಿದರು ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

“ನಾನು ಅವನ ಪಾದಗಳನ್ನು ಮುಟ್ಟಿದೆ, ಆದರೆ ಅವನು ನನ್ನನ್ನು ಆಚೆಗೆ ಹೋಗಲು ಬಿಡಲಿಲ್ಲ. ಅವರು ನನ್ನನ್ನು ಬಲವಂತವಾಗಿ ಗಾರ್ಡ್ ರೂಂಗೆ ಕರೆದೊಯ್ದು, ನನ್ನ ಬಟ್ಟೆ ಬಿಚ್ಚಿ, ನನ್ನ ಮೇಲೆ ಅತ್ಯಾಚಾರ ಮಾಡಲು ಪ್ರಾರಂಭಿಸಿದರು” ಎಂದು ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಆರೋಪಿಗಳು ಕೃತ್ಯದ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ. ಸಹಕರಿಸದಿದ್ದರೆ ಅವುಗಳನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದಾರೆ. ತಾನು ಪ್ರತಿದಾಳಿ ನಡೆಸಲು ಪ್ರಯತ್ನಿಸಿದೆ, ತಪ್ಪಿಸಿಕೊಳ್ಳಲು ಪ್ರಯತ್ನಿಸಿದೆ ಎಂದು ಅವರು ಹೇಳಿದರು. ಆದರೆ, ಆರೋಪಿಗಳು ಹಾಕಿ ಸ್ಟಿಕ್‌ನಿಂದ ಹೊಡೆಯಲು ಪ್ರಯತ್ನಿಸಿದಾಗ ನಾನು ಗಾಯಗೊಂಡೆ ಎಂದು ತಿಳಿಸಿದ್ದಾರೆ.

ಆರೋಪಿಗಳಲ್ಲಿ ಇಬ್ಬರಾದ ಮಿಶ್ರಾ ಮತ್ತು ಅಹ್ಮದ್ ಅವರನ್ನು ಗುರುವಾರ ಸಂಜೆ ದಕ್ಷಿಣ ಕೋಲ್ಕತ್ತಾದ ಕಸ್ಬಾದಲ್ಲಿ ಸಿಗ್ನಲ್ ಕ್ರಾಸಿಂಗ್‌ನಿಂದ ಬಂಧಿಸಲಾಯಿತು. ಬಂಧನದ ಸಮಯದಲ್ಲಿ ಅವರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂರನೇ ಆರೋಪಿ ಮುಖರ್ಜಿ ಅವರನ್ನು ಗುರುವಾರ ಬೆಳಗಿನ ಜಾವ 12.30 ರ ಸುಮಾರಿಗೆ ಅವರ ನಿವಾಸದಿಂದ ಬಂಧಿಸಲಾಯಿತು. ಅವರ ಮೊಬೈಲ್ ಫೋನ್ ಅನ್ನು ಸಹ ವಶಪಡಿಸಿಕೊಳ್ಳಲಾಯಿತು.

ದೆಹಲಿ | ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...