Homeಮುಖಪುಟಕೋಲ್ಕತ್ತಾ| ಕಾನೂನು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ; ಟಿಎಂಸಿ ನಾಯಕ ಸೇರಿದಂತೆ ಮೂವರ ಬಂಧನ

ಕೋಲ್ಕತ್ತಾ| ಕಾನೂನು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ; ಟಿಎಂಸಿ ನಾಯಕ ಸೇರಿದಂತೆ ಮೂವರ ಬಂಧನ

- Advertisement -
- Advertisement -

ಈ ವಾರದ ಆರಂಭದಲ್ಲಿ ಕೋಲ್ಕತ್ತಾದ ಕಾನೂನು ಕಾಲೇಜಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪುರುಷರನ್ನು ಬಂಧಿಸಲಾಗಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ವರ್ಷ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇದೇ ರೀತಿಯ ಅಪರಾಧ ನಡೆದಿತ್ತು. ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆದಿದ್ದವು.

ಆಡಳಿತ ಪಕ್ಷವಾದ ತೃಣಮೂಲ ಕಾಂಗ್ರೆಸ್‌ನ ಪ್ರಸ್ತುತ ವಿದ್ಯಾರ್ಥಿ ವಿಭಾಗದ ನಾಯಕರಾಗಿರುವ ಮೂವರು ಆರೋಪಿಗಳನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅವರನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ದೂರಿನ ಪ್ರಕಾರ, ಬುಧವಾರ ಸಂಜೆ 7.30 ರಿಂದ ರಾತ್ರಿ 10.50 ರ ನಡುವೆ ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನ ಕ್ಯಾಂಪಸ್‌ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮಹಿಳೆಯ ದೂರಿನ ಆಧಾರದ ಮೇಲೆ ನಡೆಸಿದ ತನಿಖೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಮೂವರು ಪುರುಷರು ಮತ್ತು ಓರ್ವ ಸಿಬ್ಬಂದಿಯನ್ನು ಬಂಧಿಸಲಾಯಿತು. ಸಿಬ್ಬಂದಿ ಕಾಲೇಜಿನ ಮಾಜಿ ವಿದ್ಯಾರ್ಥಿ ಮತ್ತು ತೃಣಮೂಲ ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗದ ನಾಯಕಿಯಾಗಿದ್ದರು.

24 ವರ್ಷದ ವಿದ್ಯಾರ್ಥಿನಿ ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಪರೀಕ್ಷೆಗೆ ಸಂಬಂಧಿಸಿದ ನಮೂನೆಗಳನ್ನು ಭರ್ತಿ ಮಾಡಲು ಕಾಲೇಜಿಗೆ ಬಂದಿದ್ದರು. ಆಕೆಯ ದೂರಿನ ಪ್ರಕಾರ, ಆಕೆ ಆರಂಭದಲ್ಲಿ ಕಾಲೇಜು ಯೂನಿಯನ್ ಕೋಣೆಯೊಳಗೆ ಕುಳಿತಿದ್ದರು. ನಂತರ, ಪ್ರಾಥಮಿಕ ಆರೋಪಿ ಕಾಲೇಜಿನ ಮುಖ್ಯ ಗೇಟ್ ಅನ್ನು ಲಾಕ್ ಮಾಡಲು ಸೂಚಿಸಿ, ಕ್ಯಾಂಪಸ್‌ನಲ್ಲಿರುವ ಭದ್ರತಾ ಸಿಬ್ಬಂದಿಯ ಕೋಣೆಯೊಳಗೆ ಮಹಿಳೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಮಹಿಳೆಯ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿದ್ದು, ಪ್ರಮುಖ ಆರೋಪಿಗಳು ತೃಣಮೂಲ ಕಾಂಗ್ರೆಸ್ ಛತ್ರ ಪರಿಷತ್ (ಟಿಎಂಸಿಪಿ) ನ ದಕ್ಷಿಣ ಕೋಲ್ಕತ್ತಾ ಜಿಲ್ಲೆಯ ಮಾಜಿ ವಿದ್ಯಾರ್ಥಿ ಮತ್ತು ಪ್ರಸ್ತುತ ಪ್ರಧಾನ ಕಾರ್ಯದರ್ಶಿ ಮೋನೋಜಿತ್ ಮಿಶ್ರಾ (31); ಜೈಬ್ ಅಹ್ಮದ್ (19), ಪ್ರಥಮ ವರ್ಷದ ವಿದ್ಯಾರ್ಥಿ ಮತ್ತು 20 ವರ್ಷದ ಪ್ರಮಿತ್ ಮುಖರ್ಜಿ (20) ಸೇರಿದ್ದಾರೆ.

ಪ್ರಮುಖ ಆರೋಪಿ ಮಿಶ್ರಾ ನನ್ನನ್ನು ಮದುವೆಯಾಗುವುದಾಗಿ ಹೇಳಿದ. ಆದರೆ ತನಗೆ ಈಗಾಗಲೇ ಗೆಳೆಯನಿದ್ದಾನೆ ಎಂದು ಹೇಳಿ ಅದನ್ನು ನಿರಾಕರಿಸಿದಾಗ ಆತ ಕೋಪಗೊಂಡ. ಪೊಲೀಸರಿಗೆ ತನ್ನ ಮೇಲಿನ ದೌರ್ಜನ್ಯವನ್ನು ವಿವರಿಸುತ್ತಾ, ಆರೋಪಿಗಳು ತನ್ನನ್ನು ಬಲವಂತವಾಗಿ ಕೋಣೆಯೊಳಗೆ ಕೂಡಿ ಹಾಕಿ, ತನ್ನನ್ನು ಮತ್ತು ತನ್ನ ಗೆಳೆಯನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ತನ್ನ ಪೋಷಕರನ್ನು ಬಂಧಿಸುವಂತೆ ಬೆದರಿಕೆ ಹಾಕಿದರು ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

“ನಾನು ಅವನ ಪಾದಗಳನ್ನು ಮುಟ್ಟಿದೆ, ಆದರೆ ಅವನು ನನ್ನನ್ನು ಆಚೆಗೆ ಹೋಗಲು ಬಿಡಲಿಲ್ಲ. ಅವರು ನನ್ನನ್ನು ಬಲವಂತವಾಗಿ ಗಾರ್ಡ್ ರೂಂಗೆ ಕರೆದೊಯ್ದು, ನನ್ನ ಬಟ್ಟೆ ಬಿಚ್ಚಿ, ನನ್ನ ಮೇಲೆ ಅತ್ಯಾಚಾರ ಮಾಡಲು ಪ್ರಾರಂಭಿಸಿದರು” ಎಂದು ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಆರೋಪಿಗಳು ಕೃತ್ಯದ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ. ಸಹಕರಿಸದಿದ್ದರೆ ಅವುಗಳನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದಾರೆ. ತಾನು ಪ್ರತಿದಾಳಿ ನಡೆಸಲು ಪ್ರಯತ್ನಿಸಿದೆ, ತಪ್ಪಿಸಿಕೊಳ್ಳಲು ಪ್ರಯತ್ನಿಸಿದೆ ಎಂದು ಅವರು ಹೇಳಿದರು. ಆದರೆ, ಆರೋಪಿಗಳು ಹಾಕಿ ಸ್ಟಿಕ್‌ನಿಂದ ಹೊಡೆಯಲು ಪ್ರಯತ್ನಿಸಿದಾಗ ನಾನು ಗಾಯಗೊಂಡೆ ಎಂದು ತಿಳಿಸಿದ್ದಾರೆ.

ಆರೋಪಿಗಳಲ್ಲಿ ಇಬ್ಬರಾದ ಮಿಶ್ರಾ ಮತ್ತು ಅಹ್ಮದ್ ಅವರನ್ನು ಗುರುವಾರ ಸಂಜೆ ದಕ್ಷಿಣ ಕೋಲ್ಕತ್ತಾದ ಕಸ್ಬಾದಲ್ಲಿ ಸಿಗ್ನಲ್ ಕ್ರಾಸಿಂಗ್‌ನಿಂದ ಬಂಧಿಸಲಾಯಿತು. ಬಂಧನದ ಸಮಯದಲ್ಲಿ ಅವರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂರನೇ ಆರೋಪಿ ಮುಖರ್ಜಿ ಅವರನ್ನು ಗುರುವಾರ ಬೆಳಗಿನ ಜಾವ 12.30 ರ ಸುಮಾರಿಗೆ ಅವರ ನಿವಾಸದಿಂದ ಬಂಧಿಸಲಾಯಿತು. ಅವರ ಮೊಬೈಲ್ ಫೋನ್ ಅನ್ನು ಸಹ ವಶಪಡಿಸಿಕೊಳ್ಳಲಾಯಿತು.

ದೆಹಲಿ | ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...