Homeಮುಖಪುಟಬಿಹಾರ: ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್– ಕನ್ಹಯ್ಯಾ ಕುಮಾರ್ ಸ್ಪಷ್ಟನೆ

ಬಿಹಾರ: ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್– ಕನ್ಹಯ್ಯಾ ಕುಮಾರ್ ಸ್ಪಷ್ಟನೆ

- Advertisement -
- Advertisement -

ಹೊಸದಿಲ್ಲಿ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ‘ಮಹಾಘಟಬಂಧನ’ (ಮೈತ್ರಿಕೂಟ) ಬಹುಮತ ಗಳಿಸಿದರೆ, ರಾಷ್ಟ್ರೀಯ ಜನತಾದಳ (RJD)ದ ತೇಜಸ್ವಿ ಯಾದವ್ ಅವರೇ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ತೇಜಸ್ವಿ ಯಾದವ್ ಅವರೇ ಸಿಎಂ ಸ್ಥಾನಕ್ಕೆ ನಮ್ಮ ಮೈತ್ರಿಕೂಟದ ಪ್ರಮುಖ ನಾಯಕರು. ಈ ಬಗ್ಗೆ “ಯಾವುದೇ ಗೊಂದಲ ಅಥವಾ ವಿವಾದ” ಇಲ್ಲ ಎಂದು ಕನ್ಹಯ್ಯಾ ಕುಮಾರ್ ಸ್ಪಷ್ಟಪಡಿಸಿದರು. ಚುನಾವಣೆಯಲ್ಲಿ ಜನರ ಸಮಸ್ಯೆಗಳೇ ಮುಖ್ಯ ಎಂದು ಒತ್ತಿ ಹೇಳಿದ ಅವರು, ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಪದೇ ಪದೇ ಪ್ರಶ್ನೆಗಳನ್ನು ಎತ್ತುವ ಮೂಲಕ ವಿರೋಧಿಗಳು “ಷಡ್ಯಂತ್ರ” ಮಾಡುತ್ತಿದ್ದಾರೆ, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಗೆ ಅಧಿಕಾರ ಸಿಕ್ಕ ತಕ್ಷಣ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಕೆಳಗಿಳಿಸಿ, ತಮ್ಮದೇ ನಾಯಕರನ್ನು ಬಿಹಾರದ ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೆ ಎಂದು ಕನ್ಹಯ್ಯಾ ಕುಮಾರ್ ಗಂಭೀರವಾಗಿ ಆರೋಪಿಸಿದ್ದಾರೆ. “ಬಿಜೆಪಿ ತನ್ನ ಹಳೆಯ ತಂತ್ರವನ್ನೇ ಇಲ್ಲಿಯೂ ಅನುಸರಿಸುತ್ತಿದೆ. ಮೊದಲು ಚಿಕ್ಕ ಪಕ್ಷಗಳ ಬೆಂಬಲ ಪಡೆದು, ನಂತರ ನಿಧಾನವಾಗಿ ಅವುಗಳನ್ನು ನುಂಗಿಹಾಕುತ್ತದೆ” ಎಂದು ಅವರು ದೂರಿದರು. ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ, ನಂತರ ತಮ್ಮದೇ ನಾಯಕರನ್ನು ಅಧಿಕಾರಕ್ಕೆ ತಂದ ಉದಾಹರಣೆಯನ್ನು ಅವರು ಈ ಸಂದರ್ಭದಲ್ಲಿ ನೀಡಿದರು. “ಬಿಹಾರದಲ್ಲಿ ಬಿಜೆಪಿ ಹಲವು ವರ್ಷಗಳಿಂದ ಇದನ್ನೇ ಮಾಡಲು ಪ್ರಯತ್ನಿಸುತ್ತಿದೆಯಾದರೂ, ಯಶಸ್ವಿಯಾಗಿಲ್ಲ” ಎಂದು ಕುಮಾರ್ ಸ್ಪಷ್ಟಪಡಿಸಿದರು.

ಬಿಹಾರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಿಗಿಂತಲೂ “ಬದಲಾವಣೆಯ ಗಾಳಿ” ಈಗ ಹೆಚ್ಚು ಬಲವಾಗಿದೆ. ಬಿಜೆಪಿ ‘ಆಪರೇಷನ್ ಸಿಂಧೂರ್’ ಅನ್ನು ಚುನಾವಣಾ ಅಸ್ತ್ರವಾಗಿ ಬಳಸುತ್ತಿಲ್ಲ, ಏಕೆಂದರೆ ಬಿಹಾರದ ಜನರು ಇದಕ್ಕೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತಾರೆ ಎಂಬುದು ಅವರಿಗೆ ತಿಳಿದಿದೆ. ಜನರು ಇದನ್ನು ದೇಶದ ಗೌರವದ ವಿಷಯ ಎಂದು ನಂಬುತ್ತಾರೆ ಮತ್ತು ಯಾವುದೇ ಪಕ್ಷವು ಇದನ್ನು ರಾಜಕೀಯಗೊಳಿಸಬಾರದು ಎಂಬುದು ಅವರ ಅಭಿಪ್ರಾಯವಾಗಿದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಕುಮಾರ್‌ ಹೇಳಿದರು.

‘ಮಹಾಘಟಬಂಧನ’ದ ಆಂತರಿಕ ನಡೆಗಳನ್ನು ವಿವರಿಸಿದ ಕನ್ಹಯ್ಯಾ ಕುಮಾರ್, ಮೈತ್ರಿಕೂಟದಲ್ಲಿ ದೊಡ್ಡ ಅಥವಾ ಚಿಕ್ಕ ಪಾಲುದಾರರು ಎಂಬ ವಿಚಾರವನ್ನು ತಳ್ಳಿಹಾಕಿದರು. “ನೀವು ಕಾರನ್ನು ನೋಡಿದರೆ, ಕ್ಲಚ್ ಎಷ್ಟು ಮುಖ್ಯವೋ, ಬ್ರೇಕ್ ಮತ್ತು ಮಿರರ್ ಕೂಡ ಅಷ್ಟೇ ಮುಖ್ಯ” ಎಂದು ಉದಾಹರಣೆ ನೀಡುವ ಮೂಲಕ ಮೈತ್ರಿಕೂಟದ ಎಲ್ಲಾ ಪಕ್ಷಗಳ ಸಮಾನ ಪ್ರಾಮುಖ್ಯತೆಯನ್ನು ಅವರು ಸ್ಪಷ್ಟಪಡಿಸಿದರು.

“ಆರ್‌ಜೆಡಿ (RJD) ದೊಡ್ಡ ಪಕ್ಷವಾಗಿದ್ದು, ಹೆಚ್ಚು ಶಾಸಕರನ್ನು ಹೊಂದಿದೆ. ಇದು ನಮ್ಮ ಮೈತ್ರಿಕೂಟಕ್ಕೆ ನಾಯಕತ್ವ ನೀಡುತ್ತದೆ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನವೂ ಅವರಿಗಿದೆ” ಎಂದು ಕನ್ಹಯ್ಯಾ ಕುಮಾರ್ ಸ್ಪಷ್ಟಪಡಿಸಿದರು. ಆದರೆ, ವಿಕಾಸ್ಶೀಲ್ ಇನ್ಸಾನ್ ಪಾರ್ಟಿಯ ಮುಖೇಶ್ ಸಹಾನಿ ಸೇರಿದಂತೆ ಮೈತ್ರಿಕೂಟದ ಎಲ್ಲಾ ಪಕ್ಷಗಳಿಗೂ ತಮ್ಮದೇ ಆದ ಪ್ರಮುಖ ಪಾತ್ರವಿದೆ ಎಂದು ಅವರು ಒತ್ತಿ ಹೇಳಿದರು.

ಕಾಂಗ್ರೆಸ್ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಕನ್ಹಯ್ಯಾ ಕುಮಾರ್ ಅವರು, ಕಾಂಗ್ರೆಸ್ ಸೇರಿದಂತೆ ಮಹಾಘಟಬಂಧನದ’ ಎಲ್ಲಾ ಪಕ್ಷಗಳೂ ಒಟ್ಟಾಗಿ ಎಲ್ಲಾ 243 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ನಮ್ಮ ಮೈತ್ರಿ ನಿಜವಾಗಿಯೂ ಸಮಸ್ಯೆಗಳ ಆಧಾರದ ಮೇಲೆ ರೂಪುಗೊಂಡಿದ್ದರೆ, ಯಾರು ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಮುಖ್ಯವಾಗುವುದಿಲ್ಲ. ನಾವೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಊಟದಲ್ಲಿ ಒಂದು ಚಿಟಿಕೆ ಉಪ್ಪು ಕಡಿಮೆಯಾದರೂ ರುಚಿ ತಪ್ಪುತ್ತದೆ, ಹೆಚ್ಚಾದರೂ ಚೆನ್ನಾಗಿರುವುದಿಲ್ಲ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ನಿರ್ವಹಿಸುವುದು ಮುಖ್ಯ ಎಂದು ಅವರು ಉದಾಹರಣೆ ನೀಡಿ ವಿವರಿಸಿದರು.

‘ಮಹಾಘಟಬಂಧನ’ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನಕ್ಕೆ ತೇಜಸ್ವಿ ಯಾದವ್ ಪ್ರಮುಖರಾಗುತ್ತಾರೆಯೇ ಎಂಬ ಪ್ರಶ್ನೆಗೆ, “ಇದರಲ್ಲಿ ಯಾವುದೇ ಅನುಮಾನವಿಲ್ಲ. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಜನರೇ ನಿರ್ಧರಿಸುತ್ತಾರೆ. ಹೆಚ್ಚು ಶಾಸಕರು ಇರುವವರೇ ಮುಖ್ಯಮಂತ್ರಿಯಾಗುತ್ತಾರೆ. ಆರ್‌ಜೆಡಿ (RJD) ಹೆಚ್ಚು ಸ್ಥಾನಗಳನ್ನು ಗೆಲ್ಲುವುದರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಅವರೇ ಅರ್ಹರು” ಎಂದು ಕನ್ಹಯ್ಯಾ ಕುಮಾರ್ ಉತ್ತರಿಸಿದರು.

ಈ ಆಯ್ಕೆ ತಾನಾಗಿಯೇ ನಡೆಯುತ್ತದೆ. ನಮ್ಮ ಮೈತ್ರಿಕೂಟದಲ್ಲಿ ಈ ಬಗ್ಗೆ ಯಾವುದೇ ಗೊಂದಲವಿಲ್ಲ. ಆದರೆ, ಎನ್‌ಡಿಎ (ಬಿಜೆಪಿ ಮೈತ್ರಿಕೂಟ)ದಲ್ಲಿ ನಿತೀಶ್ ಕುಮಾರ್ ಸಿಎಂ ಆಗುತ್ತಾರೆಯೇ ಅಥವಾ ಇಲ್ಲವೇ, ಮತ್ತು ಯಾವ ಪಕ್ಷ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬ ಬಗ್ಗೆ ಗೊಂದಲವಿದೆ ಎಂದು ಅವರು ಟೀಕಿಸಿದರು.

ಇದು ಕೇವಲ ಒಂದು ತಂತ್ರ. ಮುಖ್ಯಮಂತ್ರಿ ದೊಡ್ಡ ಪಕ್ಷದಿಂದಲೇ ಆಗುತ್ತಾರೆ ಎಂಬುದರಲ್ಲಿ ಯಾವುದೇ ಗೊಂದಲ ಅಥವಾ ಅನುಮಾನವಿಲ್ಲ. ಇದು ಒಂದು ಸ್ವಾಭಾವಿಕ ಬೆಳವಣಿಗೆಯ ಭಾಗವಾಗಿ ತಾನಾಗಿಯೇ ನಡೆಯುತ್ತದೆ. ಆದರೆ ಚುನಾವಣೆಯಲ್ಲಿ ಮುಖ್ಯವಾದುದು ಸಮಸ್ಯೆಗಳು, ಅಭ್ಯರ್ಥಿಯ ಮುಖ ಅಲ್ಲ. ತೇಜಸ್ವಿ ಯಾದವ್ ಅವರೇ ಮಹಾಘಟಬಂಧನದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಬಗ್ಗೆ ಯಾವುದೇ ಅನುಮಾನ ಅಥವಾ ವಿವಾದ ಇಲ್ಲ ಎಂದು ಕನ್ಹಯ್ಯಾ ಕುಮಾರ್ ಪಿಟಿಐಗೆ ತಿಳಿಸಿದರು.

‘ಮಹಾಘಟಬಂಧನ’ ಸ್ಪಷ್ಟ ಬಹುಮತ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಕುಮಾರ್, ನಿರುದ್ಯೋಗ, ವಲಸೆ, ಶಿಕ್ಷಣ, ರೈತರ ಸಮಸ್ಯೆಗಳು, ಪರೀಕ್ಷೆಗಳಲ್ಲಿನ ಅಕ್ರಮಗಳು ಮತ್ತು ಕಳಪೆ ಆರೋಗ್ಯ ಸೇವೆಗಳಂತಹ ವಿಷಯಗಳೇ ಚುನಾವಣೆಯಲ್ಲಿ ಪ್ರಮುಖವಾಗಿವೆ ಎಂದು ಹೇಳಿದರು. ಈಗ ಸರ್ಕಾರವನ್ನು ಅಧಿಕಾರಿಗಳು “ನಿರ್ದಯವಾಗಿ” ನಡೆಸುತ್ತಿರುವುದರಿಂದ ಜನರು ಬದಲಾವಣೆಗಾಗಿ ಮತ ಚಲಾಯಿಸುತ್ತಾರೆ ಎಂದು ತಾವು ನಿರೀಕ್ಷಿಸುವುದಾಗಿ ಕನ್ಹಯ್ಯಾ ಕುಮಾರ್ ತಿಳಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ, ‘ಮಹಾಘಟಬಂಧನದ’ ಅತಿದೊಡ್ಡ ಪಕ್ಷವಾದ ಆರ್‌ಜೆಡಿ (RJD) 144 ಸ್ಥಾನಗಳಲ್ಲಿ ಸ್ಪರ್ಧಿಸಿ 75ರಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ, ಕೇವಲ 19 ಸ್ಥಾನಗಳಿಗೆ ತೃಪ್ತಿಪಟ್ಟಿತ್ತು. ಮೈತ್ರಿಕೂಟದ ಭಾಗವಾಗಿದ್ದ ಸಿಪಿಐ (ಎಂ.ಎಲ್.) ಲಿಬರೇಷನ್ 19 ಸ್ಥಾನಗಳಲ್ಲಿ ಸ್ಪರ್ಧಿಸಿ 12ರಲ್ಲಿ ಜಯಗಳಿಸಿತ್ತು. ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯು 2025ರ ಅಕ್ಟೋಬರ್-ನವೆಂಬರ್ ಸುಮಾರಿಗೆ ನಡೆಯುವ ಸಾಧ್ಯತೆ ಇದೆ.

ಪಶ್ಚಿಮ ಬಂಗಾಳ | ಕಾನೂನು ಕಾಲೇಜಿನೊಳಗೆ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...