Homeಮುಖಪುಟಗುಜರಾತ್‌| ಜಾತಿ ತಾರತಮ್ಯ ಆರೋಪ ಮಾಡಿದ ಕೋಲಿ ಸಮುದಾಯದ ಶಾಸಕ ಆಪ್‌ನಿಂದ ಅಮಾನತು

ಗುಜರಾತ್‌| ಜಾತಿ ತಾರತಮ್ಯ ಆರೋಪ ಮಾಡಿದ ಕೋಲಿ ಸಮುದಾಯದ ಶಾಸಕ ಆಪ್‌ನಿಂದ ಅಮಾನತು

- Advertisement -
- Advertisement -

ಗುಜರಾತ್‌ನ ಸೌರಾಷ್ಟ್ರ ಪ್ರದೇಶದ ಬೊಟಾಡ್‌ನ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಉಮೇಶ್ ಮಕ್ವಾನಾ, ಜಾತಿ ಆಧಾರಿತ ತಾರತಮ್ಯವನ್ನು ಉಲ್ಲೇಖಿಸಿ ಗುರುವಾರ (ಜೂನ್ 26) ಪಕ್ಷದಲ್ಲಿನ ತಮ್ಮ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದರು.

ಇತರ ಹಿಂದುಳಿದ ವರ್ಗ (ಒಬಿಸಿ) ವರ್ಗದ ಅಡಿಯಲ್ಲಿ ವರ್ಗೀಕರಿಸಲಾದ ಕೋಲಿ ಸಮುದಾಯದ ಸದಸ್ಯ ಮಕ್ವಾನಾ ಗಾಂಧಿನಗರದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ರಾಜೀನಾಮೆ ನಿರ್ಧಾರ ಘೋಷಣೆ ಮಾಡಿದರು. “ಪಕ್ಷವು ಪ್ರಮುಖ ನೇಮಕಾತಿಗಳಲ್ಲಿ ಸ್ವರ್ಣ ಸಮಾಜ”(ಪ್ರಮುಖ ಪ್ರಬಲ ಜಾತಿ) ಕ್ಕೆ ಒಲವು ತೋರುತ್ತಿದೆ” ಎಂದು ಆರೋಪಿಸಿದರು.

ಒಬಿಸಿ ನಾಯಕರನ್ನು ಆಪ್ ‘ಮತ ಬ್ಯಾಂಕ್’ಗಳಾಗಿ ಮಾತ್ರ ಬಳಸಲಾಗುತ್ತಿತ್ತು ಎಂದು ಮಕ್ವಾನಾ ಗಂಭೀರ ಆರೋಪ ಮಾಡಿದ್ದಾರೆ.

ಹಿಂದುಳಿದ ಸಮುದಾಯಗಳನ್ನು ಬೆಂಬಲಿಸುವಲ್ಲಿ ಎಎಪಿ ವಿಫಲವಾಗಿದೆ, ಚುನಾವಣೆಯ ಸಮಯದಲ್ಲಿ ಒಬಿಸಿ ನಾಯಕರನ್ನು ಕೇವಲ ಮತ ಬ್ಯಾಂಕ್‌ಗಳಾಗಿ ಬಳಸಿಕೊಂಡಿದೆ ಎಂದು ಅವರು ಆರೋಪಿಸಿದರು.

“ಚುನಾವಣೆ ಬಂದಾಗ, ಹಿಂದುಳಿದ ಅಥವಾ ಒಬಿಸಿ ಸಮುದಾಯಗಳನ್ನು ಮತ ಬ್ಯಾಂಕ್‌ಗಳಾಗಿ ಮಾತ್ರ ಬಳಸಲಾಗುತ್ತದೆ. ಕೋಲಿ ಸಮುದಾಯದ ನಾಯಕರನ್ನು ಚುನಾವಣೆ ನಡೆಯುವವರೆಗೆ ಮಾತ್ರ ಬಳಸಲಾಗುತ್ತದೆ. ಚುನಾವಣೆಯ ಸಮಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಹಿಂದುಳಿದ ಸಮುದಾಯಗಳ ನಾಯಕರನ್ನು ಬಳಸುತ್ತವೆ. ಚುನಾವಣೆ ಮುಗಿದ ತಕ್ಷಣ ಅವರೆಲ್ಲರನ್ನೂ ಅಂಚಿನಲ್ಲಿ ಇರಿಸಲಾಗುತ್ತದೆ” ಎಂದು ಹೇಳಿದ್ದಾರೆ.

ಗುಜರಾತ್ ವಿಧಾನಸಭೆಯಲ್ಲಿ ಎಎಪಿಯ ವಿಪ್ ಮತ್ತು ಅದರ ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಮಕ್ವಾನಾ, ತಮ್ಮ ಮತದಾರರೊಂದಿಗೆ ಸಮಾಲೋಚಿಸಿದ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ನಿರ್ಧರಿಸುವುದಾಗಿ ಹೇಳಿದರು.

ಜಾತಿ ಆಧಾರಿತ ಪಕ್ಷಪಾತದ ತಮ್ಮ ಹೇಳಿಕೆಗಳನ್ನು ಬೆಂಬಲಿಸಲು, ಮಕ್ವಾನಾ, ಕಡಿ ಮತ್ತು ವಿಸಾವದರ್‌ನಲ್ಲಿ ಇತ್ತೀಚೆಗೆ ನಡೆದ ಉಪಚುನಾವಣೆಗಳಲ್ಲಿ ಅಭ್ಯರ್ಥಿಗಳ ಬಗ್ಗೆ ಎಎಪಿಯ ವ್ಯತಿರಿಕ್ತ ವರ್ತನೆಯನ್ನು ಉಲ್ಲೇಖಿಸಿದರು. “ಕಡಿಯಲ್ಲಿ, ನಮ್ಮ ಅಭ್ಯರ್ಥಿ ಜಗದೀಶ್ ಚಾವ್ಡಾ ದಲಿತ ಸಮುದಾಯಕ್ಕೆ ಸೇರಿದವರು. ಅವರು 10 ಲಕ್ಷ ರೂ. ಸಾಲ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸಬೇಕಾಯಿತು. ಪಕ್ಷವು ಅವರನ್ನು ಬೆಂಬಲಿಸಲು ಸಾಧ್ಯವಾಗಲಿಲ್ಲ. ಮತ್ತೊಂದೆಡೆ, ಅಭ್ಯರ್ಥಿ ಗೋಪಾಲ್ ಇಟಾಲಿಯಾ ಪಾಟಿದಾರ್ ಸಮುದಾಯಕ್ಕೆ ಸೇರಿದ ವಿಸಾವದರ್‌ನಲ್ಲಿ, ಇಡೀ ರಾಜ್ಯ ತಂಡ ಭಾಗಿಯಾಗಿತ್ತು ಮತ್ತು ಕೋಟಿಗಟ್ಟಲೆ ಮೌಲ್ಯದ ಸಂಪನ್ಮೂಲಗಳನ್ನು ನಿಯೋಜಿಸಲಾಗಿತ್ತು” ಎಂದು ಅವರು ಹೇಳಿದರು.

“ಕಾಡಿಯಲ್ಲಿ ನಮ್ಮ ಅಭ್ಯರ್ಥಿ ಸೋತರು, ಎಎಪಿ ಬಡ ದಲಿತ ಎಂಬ ಕಾರಣಕ್ಕೆ ಅವರನ್ನು ಏಕಾಂಗಿಯಾಗಿ ಹೋರಾಡಲು ಬಿಟ್ಟಿತು. ಆದರೆ ವಿಸಾವದರ್‌ನಲ್ಲಿ, ಅಭ್ಯರ್ಥಿ ಮೇಲ್ಜಾತಿಯವನಾಗಿದ್ದರಿಂದ, ಪಕ್ಷವು ಅವರ ಹಿಂದೆ ತನ್ನ ಸಂಪೂರ್ಣ ತೂಕವನ್ನು ಇರಿಸಿ ಅವರ ಗೆಲುವನ್ನು ಖಚಿತಪಡಿಸಿತು. ಈ ರೀತಿಯ ತಾರತಮ್ಯ ಸ್ವೀಕಾರಾರ್ಹವಲ್ಲ” ಎಂದು ಮಕ್ವಾನಾ ಹೇಳಿದರು.

“ನೀವು ನಿಮ್ಮ ಕಚೇರಿಗಳಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಫೋಟೋವನ್ನು ಇಟ್ಟುಕೊಳ್ಳುತ್ತೀರಿ. ಆದರೆ, ಅವರ ಆದರ್ಶಗಳು ನಿಮ್ಮ ಹೃದಯದಲ್ಲಿ ಇಲ್ಲದಿದ್ದರೆ, ನೀವು ಅವರ ಹೆಸರಿನಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು.

ಅವರು ಆರೋಪ ಮಾಡಿದ ಕೆಲವೇ ಗಂಟೆಗಳ ನಂತರ, ಎಎಪಿ ಗುಜರಾತ್ ಅಧ್ಯಕ್ಷ ಇಸುದನ್ ಗಧ್ವಿ, “ಪಕ್ಷ ವಿರೋಧಿ ಮತ್ತು ಗುಜರಾತ್ ವಿರೋಧಿ ಚಟುವಟಿಕೆಗಳನ್ನು ಉಲ್ಲೇಖಿಸಿ ಮಕ್ವಾನಾ ಅವರನ್ನು ಪಕ್ಷದಿಂದ ಐದು ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ” ಎಂದು ಘೋಷಿಸಿದರು.

ಬಿಜೆಪಿ ಮಕ್ವಾನಾ ಅವರ ಮೇಲೆ ಪ್ರಭಾವ ಬೀರುವ ಮೂಲಕ ಎಎಪಿಯನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ. ಬಿಜೆಪಿ ಕೊಳಕು ರಾಜಕೀಯ ಮಾಡುತ್ತಿದೆ. ಮಕ್ವಾನಾ ಅವರನ್ನು ಗೆಲ್ಲಿಸುವ ಮೂಲಕ ಎಎಪಿಗೆ ಹಾನಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಗಧ್ವಿ ಹೇಳಿಕೊಂಡರು.

ಮಕ್ವಾನಾ ರಾಜೀನಾಮೆ ನೀಡಿ ಮರು ಸ್ಪರ್ಧಿಸುವಂತೆ ಅವರು ಸವಾಲು ಹಾಕಿದರು. “ಉಮೇಶ್ ಮಕ್ವಾನಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ ಗೆಲ್ಲುವಂತೆ ನಾನು ಸವಾಲು ಹಾಕುತ್ತೇನೆ” ಎಂದರು.

ಆರೋಪಗಳಿಗೆ ಪ್ರತಿಕ್ರಿಯಿಸಿದ ಎಎಪಿ ವಕ್ತಾರ ಯೋಗೇಶ್ ಜಾಡ್ವಾನಿ, “ಉಮೇಶ್‌ಭಾಯ್ ತಮ್ಮನ್ನು ಹಿಂದುಳಿದ ಸಮುದಾಯಗಳವರು ಎಂದು ಪರಿಗಣಿಸಿದರೆ, ಎಎಪಿಗೆ ಸೇರಿದ 15 ದಿನಗಳಲ್ಲಿ ಅವರನ್ನು ಪಕ್ಷದ ಒಬಿಸಿ/ಎಸ್‌ಸಿ/ಎಸ್‌ಟಿ ಸೆಲ್‌ನ ಮುಖ್ಯಸ್ಥರನ್ನಾಗಿ ಮಾಡಲಾಯಿತು ಎಂದು ನಾನು ನಿಮಗೆ ನೆನಪಿಸುತ್ತೇನೆ. ಅವರನ್ನು ರಾಜ್ಯ ವಕ್ತಾರರನ್ನಾಗಿಯೂ ನೇಮಿಸಲಾಯಿತು” ಎಂದರು.

“ಪಕ್ಷವು ಮಕ್ವಾನಾ ಅವರನ್ನು ನಿರಂತರವಾಗಿ ಬೆಂಬಲಿಸಿದೆ. 2022 ರ ವಿಧಾನಸಭಾ ಚುನಾವಣೆಯಲ್ಲಿ, ಅವರಿಗೆ ಪಕ್ಷದ ಟಿಕೆಟ್ ನೀಡಿದ ನಂತರ ಶಾಸಕರಾದರು. ಬಳಿ ಅವರನ್ನು ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಮತ್ತು ಗುಜರಾತ್ ವಿಧಾನಸಭೆಯಲ್ಲಿ ವಿಪ್ ಆಗಿ ನೇಮಿಸಲಾಯಿತು. 2024 ರ ಲೋಕಸಭಾ ಚುನಾವಣೆಯಲ್ಲಿ, ಅವರಿಗೆ ಮತ್ತೆ ಭಾವನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಯಿತು. ಎಎಪಿ ಉಮೇಶ್‌ಭಾಯ್‌ಗೆ ಅವರ ಪ್ರಸ್ತುತ ಗುರುತನ್ನು ನೀಡಿದೆ” ಎಂದು ವಿವರಿಸಿದರು.

ಮಕ್ವಾನಾ ತಮ್ಮದೇ ಸಮುದಾಯವನ್ನು ಬೆಂಬಲಿಸುವಲ್ಲಿ ಸಕ್ರಿಯವಾಗಿರಲಿಲ್ಲ ಎಂದು ಜಾಡ್ವಾನಿ ಆರೋಪಿಸಿದ್ದಾರೆ. “ರಾಜ್ಯದಲ್ಲಿ ಕೋಲಿ ಸಮುದಾಯವು ಉಮೇಶ್‌ಭಾಯ್ ಅವರ ಉಪಸ್ಥಿತಿಯನ್ನು ಬಯಸಿದ ಹಲವಾರು ಘಟನೆಗಳು ನಡೆದವು. ಆದರೆ, ಅವರು ಅಲ್ಲಿ ಇರಲಿಲ್ಲ. ಬದಲಾಗಿ, ಮೇಲ್ಜಾತಿ ಮತ್ತು ಹಿಂದುಳಿದ ಸಮುದಾಯಗಳ ಇತರ ಎಎಪಿ ನಾಯಕರು ಮಧ್ಯಪ್ರವೇಶಿಸಿದರು. ಮೂಲತಃ, ಅವರು ಬಿಜೆಪಿಯ ಭಾಷೆಯನ್ನು ಮಾತನಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಕೋಲ್ಕತ್ತಾ| ಕಾನೂನು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ; ಟಿಎಂಸಿ ನಾಯಕ ಸೇರಿದಂತೆ ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...