Homeಮುಖಪುಟಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

- Advertisement -
- Advertisement -

ದೇವನಹಳ್ಳಿಯ ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಇಂದೂಧರ ಹೊನ್ನಾಪುರ ಹೇಳಿದರು.

13 ಹಳ್ಳಿಗಳ ಬಲವಂತದ ಭೂಸ್ವಾಧೀನ ವಾಪಸ್ ಪಡೆಯುವಂತೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಯುಕ್ತ ಹೋರಾಟ-ಕರ್ನಾಟಕ ಮತ್ತು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ‘ಭೂಮಿ ಸತ್ಯಾಗ್ರಹ’ ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಬಂಡವಾಳಶಾಹಿಗಳ ಪರ ನಿಲ್ಲದೆ, ಬಲವಂತದ ಭೂಸ್ವಾಧೀನ ಹಿಂಪಡೆಬೇಕು” ಎಂದು ಆಗ್ರಹಿಸಿದರು.

“ನೆಲ ಜನ ಸಂಸ್ಕೃತಿಯನ್ನ ಉಳಿಸುವ ಹೋರಾಟವಿದು, ಚನ್ನರಾಯಪಟ್ಟಣ ರೈತ ಹೋರಾಟದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಈ ನಾಡಿನ ಭವಿಷ್ಯ ಕಟ್ಟಿಕೊಡುವ ರೈತರಪರ ಹೋರಾಟ ನಡೀತಿದೆ. ಈ ಸಮಸ್ಯೆ ಹುಟ್ಟುಹಾಕಿರುವ ಸರ್ಕಾರ ಸಮಸ್ಯೆಯನ್ನು ಪರಿಹರಿಸುವ ಬದಲು ಈ ವಿಷಯವನ್ನು ಮತ್ತಷ್ಟು ಸಂಕೀರ್ಣಗೊಳಿಸುತ್ತಿದೆ” ಎಂದರು.

“ಇವತ್ತು ರೈತರ ವಿರುದ್ಧ ನಿಂತಿರುವ ಇದೇ ಸಿದ್ದರಾಮಯ್ಯ ಅವರು, ಅಂದು ರೈತರ ಪರ ಮಾತಾಡಿದ್ರು. ಪದೇಪದೆ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೀವಿ ಎಂದು ಹೇಳ್ತಿದ್ದೀರಿ; ಈ ಮಾತನ್ನೂ ಉಳಿಸಿಕೊಳ್ಳಿ. ಕಾರ್ಪೊರೇಟ್‌ಗಳ ಪರ ನಿಂತು, ಸಾವಿರಾರು ಎಕರೆ ರೈತ ಭೂಮಿಯನ್ನ ಲಾಭಕೋರರಿಗೆ ಕೊಡಬೇಡಿ. ನೀವು ಜನಪರವಾಗಿಯೇ ಇರಿ. ಈ ಕಾರ್ಪೊರೇಟ್ ಸೆಕ್ಟರ್‌ಗಳು ನೊಂದವರನ್ನ ಬಳಸಿಕೊಳ್ತಿದೆ. ಅಭಿವೃದ್ಧಿ ಎಂದರೆ ಕಾರ್ಖಾನೆಗಳನ್ನ ಮಾತ್ರ ಕಟ್ಟೊದಲ್ಲ, ಜನರೆಲ್ಲರ ನೆಮ್ಮದಿ.. ಎಲ್ಲರ ಜೊತೆ ನ್ಯಾಯಯುತವಾಗಿ ನಡೆದುಕೊಳ್ಳಬೇಕು. ಅದು ಬಿಟ್ಟು ಸರ್ಕಾರ ಯಾಕೆ ಈ ದುಷ್ಟಕೂಟದ ಭಾಗವಾಗುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ಕಾರ್ಪೊರೇಟ್ ಕಂಪನಿಗಳು ಒಳ್ಳೆ ಭೂಮಿಯನ್ನ ಕೇಳ್ತಾರೆ ಎಂದು ಎಂ.ಬಿ ಪಾಟೀಲ್ ಗೆ ಹೇಳ್ತಿದ್ದಾರೆ, ಅವರು ಕೇಳಿದ ಭೂಮಿ ಕೊಡಬೇಕಾ ಎಂದು ನಾನು ಸಚಿವರನ್ನು ಕೇಳ್ತೀನಿ. ನಾಳೆ ಇದೇ ಕಾರ್ಪೊರೇಟ್ ಕಂಪನಿಗಳು ವಿಧಾನಸೌಧ ಕೇಳಿದ್ರೆ ಕೊಡ್ತೀರಾ? ಯಾಕೆ ಮೂರ್ಖ ಹೇಳಿಕೆಗಳನ್ನ ಕೊಡ್ತಿದ್ದೀರಿ. ಇಂದು ನೀವು ದುಷ್ಟಕೂಟದ ಭಾಗವಾಗಿ, ಕಾರ್ಪೊರೇಟ್ ಕಳ್ಳರ ಜೊತೆ ನಿಂತಿದ್ದೀರಾ.. ನೀವು ನಿಜಕ್ಕೂ ಹೊಟ್ಟೆಗೆ ಅನ್ನ ತಿಂತೀರಾ.. ನಮ್ಮನ್ನ ಉಳ್ಳವರ ಮನೆಗೆ ಜೀತಗಾರರನ್ನಾಗಿಸಬೇಡಿ, ಅವರ ಬಾಗಿಲು ಕಾಯುವ ಹಾಳುಗಳನ್ನಾಗಿಸಬೇಡಿ. ನಿಮಗೆ ಜನರ ಬಗ್ಗೆ ಕನಿಷ್ಠ ಕಾಳಜಿ ಇದ್ರೆ ಈ ನಿರ್ಧಾರದಿಂದ ಹಿಂದೆ ಸರಿಯಿರಿ” ಎಂದು ಅವರು ಇಂದೂಧರ ಅವರು ಆಗ್ರಹಿಸಿದರು.

“ಅಭಿವೃದ್ಧಿ ಎಂದರೆ ಎಲ್ಲ ಜನರ ಪರವಾಗಿರೋದು, ಕಾರ್ಖಾನೆಗಳ ಮಾಲೀಕರು ಯಾರಿಗೊ ಒಪ್ಪತ್ತಿನ ಅನ್ನ ಹಾಕಿದ್ದನ್ನ ನಾವು ನೋಡಿಲ್ಲ, ನೀವು ಈ ದುಷ್ಟಕೂಟದ ಭಾಗವಾಗಬೇಡಿ. ಸಿದ್ದರಾಮಯ್ಯ ಅವರೇ ನೀವು ವಿವೇಚನೆ ಹೊಂದಿರುವವರು ಎಂದು ನಾವು ನಂಬಿದ್ದೇವೆ.. ನೀವು ಸರ್ವರ ಒಳಿತು ಮತ್ತು ಈ ನೆಲ-ಜಲವನ್ನ ಉಳಿಸುವುದು ಅನಿವಾರ್ಯ. ನಿಮಗೆ ಒತ್ತಡ ಇದೆ ಎಂಬುದು ಗೊತ್ತು. ಆದರೂ, ನೀವು ನಿಮ್ಮ ಬದ್ಧತೆಯನ್ನು ಈ ಮೂಲಕ ತೋರಿಸಬೇಕು” ಎಂದರು.

ನಿಮ್ಮನ್ನು ಕಿತ್ತು ಎಸೆಯುವ ಹೋರಾಟದ ಮೊಳಕೆ ಹುಟ್ಟುತ್ತಿದೆ

“ಈ ಹೋರಾಟದ ಮೂಲಕ ನಾವು ಒಂದು ಎಚ್ಚರಿಕೆ ನೀಡುತ್ತಿದ್ದೇವೆ. ಎಲ್ಲ ಚಳವಳಿಗಳಿಗೂ ಪುನಃಚ್ಛೇತನ ಆಗುವಂತ ಹೋರಾಟಗಳ ಮೊಳಕೆ ಇವತ್ತು ಇಲ್ಲಿ ಚಿಗುರೊಡೆಯುತ್ತಿದೆ.
ನಿಮ್ಮೆಲ್ಲರನ್ನು ಕಿತ್ತು ಎಸೆಯುವ ಹೋರಾಟದ ಮೊಳಕೆ ಫ್ರೀಡಂ ಪಾರ್ಕಿನಲ್ಲಿ ಹುಟ್ಟುತ್ತಿದೆ.
ದಲಿತ ಸಂಘಟನೆ, ಕಾರ್ಮಿಕ ಸಂಘಟನೆ, ರೈತ ಸಂಘಟನೆಗಳು ಇಲ್ಲಿ ಮೊಳಕೆ ಹೊಡೆಯುತ್ತಿವೆ. ಕರ್ನಾಟಕದ ಎಲ್ಲ ಜನ ಚಳವಳಿಗಳು, ಕಾರ್ಮಿಕರು, ರೈತರು ಎಲ್ಲರೂ ಕರ್ನಾಟಕದ ಮೂಲೆ ಮೂಲೆಯಲ್ಲು ಈ ಹೋರಾಟಕ್ಕೆ ಜೊತೆಯಾಗ್ತಿದ್ದಾರೆ.. ಇದು ಎಚ್ಚರಿಕೆ, ಈ ವಿಚಾರದಲ್ಲಿ ನೀವು ರೈತಪರ ನಿಲುವನ್ನು ತೆಗೆದುಕೊಳ್ಳುತ್ತೀರಿ ಎಂದು ನಾವು ನಂಬಿದ್ದೇವೆ, ಆ ನಂಬಿಕೆಯನ್ನು ಉಳಿಸಿಕೊರ್ಳಳುವ ಮೂಲಕ ಒಳ್ಳೆ ತೀರ್ಮಾನವನ್ನು ತೆಗೆದುಕೊಂಡು ನಮಗೆ ಇಲ್ಲಿಂದ ಮುಕ್ತಿ ಕೊಡಿ” ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಯುಕ್ತ ಹೋರಾಟದ ನೂರ್ ಶ್ರೀಧರ್, ದಸಂಸ ಹಿರಿಯ ನಾಯಕರಾದ ವಿ.ನಾಗರಾಜ, ಸಿದ್ದನಗೌಡ ಪಾಟೀಲ್, ಡಿ.ಎಚ್. ಪೂಜಾರ್, ವರಲಕ್ಷ್ಮಿ, ಬಡಗಲಪುರ ನಾಗೇಂದ್ರ, ಯಶವಂತ್, ತಾರಾ ರಾವ್, ಕುಮಾರ್ ಸಮತಳ, ಬಸವರಾಜ್ ಕೌತಾಳ್, ಶಿವಾನಂದ ಕುಗ್ವೆ, ಚನ್ನರಾಯಪಟ್ಟಣ ರೈತರಾದ ನಲ್ಲಪ್ಪನಹಳ್ಳಿ ನಂಜಪ್ಪ, ಲಕ್ಷ್ಮಮ್ಮ, ಜಯಮ್ಮ, ಮಾರೇಗೌಡ, ರಮೇಶ್, ನಾಗನಾಯಕನಹಳ್ಳಿ ರಘು, ನಲ್ಲೂರು ಗೋಪಿನಾಥ್, ಮುಕುಂದ್ ಚೀಮಾಚನಹಳ್ಳಿ ಸೇರಿದಂತೆ ಹಲವರಿದ್ದರು.

ದೆಹಲಿ | ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...