Homeಚಳವಳಿಛತ್ತೀಸ್‌ಗಢ | ಅದಾನಿ ಗಣಿಗಾಗಿ ಬಿಜೆಪಿ ಸರ್ಕಾರದಿಂದ 5,000 ಮರಗಳ ಮಾರಣಹೋಮ

ಛತ್ತೀಸ್‌ಗಢ | ಅದಾನಿ ಗಣಿಗಾಗಿ ಬಿಜೆಪಿ ಸರ್ಕಾರದಿಂದ 5,000 ಮರಗಳ ಮಾರಣಹೋಮ

- Advertisement -
- Advertisement -

ಕಲ್ಲಿದ್ದಲು ಗಣಿಗಾರಿಕೆ ನಡೆಸಲು ಅದಾನಿ ಕಂಪನಿಯ ಎಂಡಿಒಗೆ ನೆರವಾಗಲು ಛತ್ತೀಸ್‌ಗಢದ ಬಿಜೆಪಿ ಸರ್ಕಾರ 5,000 ಮರಗಳ ಮಾರಣಹೋಮ ನಡೆಸಿದೆ ಎಂದು ವರದಿಯಾಗಿದೆ. ಮರಗಳ ಮಾರಣಹೋಮ ವಿರೋಧಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಶಾಸಕಿ ಮತ್ತು ಗ್ರಾಮಸ್ಥರನ್ನು ಬಂಧಿಸಿದೆ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದ ರಾಯಗಢ ಜಿಲ್ಲೆಯ ಲೈಲುಂಗಾ ಮತ್ತು ತಮ್ನಾರ್ ಪ್ರದೇಶದ ಗರೆ ಪಾಲ್ಮಾ II ಕಲ್ಲಿದ್ದಲು ಗಣಿಯಲ್ಲಿ ಗಣಿಗಾರಿಕೆಗಾಗಿ ಸಾವಿರಾರು ಬೃಹತ್ ಮರಗಳನ್ನು ಕಡಿಯಲಾಗುತ್ತಿದೆ ಎಂದು ವರದಿ ಹೇಳಿದೆ. ಛತ್ತೀಸ್‌ಗಢ | ಅದಾನಿ

ಪ್ರಸ್ತುತ ರಾಜ್ಯದ ಲೈಲುಂಗಾ ಪ್ರದೇಶದಲ್ಲಿ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದ್ದು, ಗ್ರಾಮಸ್ಥರನ್ನು ಸ್ಥಳದಿಂದ ಬಲವಂತವಾಗಿ ಓಡಿಸಲಾಗಿದೆ. ಆದರೆ, ತೀವ್ರವಾಗಿ ಪ್ರತಿಭಟಿಸಿದವರನ್ನು ವಶಕ್ಕೆ ಪಡೆದು ಸ್ಥಳೀಯ ಪೊಲೀಸ್ ಠಾಣೆ ಮತ್ತು ಸರ್ಕ್ಯೂಟ್ ಹೌಸ್‌ಗೆ ಕರೆದೊಯ್ಯಲಾಗಿದೆ ಎಂದು ವರದಿ ಹೇಳಿದೆ.

ಗುರುವಾರ, ಈ ಪ್ರದೇಶದಲ್ಲಿ ಮರ ಕಡಿಯಲು ಎಂಡಿಒ ಕಂಪನಿಯ ಕಾರ್ಮಿಕರು ಹಾಗೂ ಜೆಸಿಬಿಗಳು ಗ್ರಾಮಗಳಿಗೆ ನುಗ್ಗಿವೆ. ಮರ ಕಡಿಯುವಿಕೆಯನ್ನು ಆರಂಭಿಸುತ್ತಿದ್ದಂತೆಯೇ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಶಾಸಕಿ ವಿದ್ಯಾವತಿ ಸಿದರ್ ಕೂಡ ಸ್ಥಳಕ್ಕೆ ಧಾವಿಸಿ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಅವರೆಲ್ಲರನ್ನೂ ಪೊಲೀಸರು ಬಂಧಿಸಿದ್ದಾರೆ.

ಮಾಹಿತಿಯ ಪ್ರಕಾರ, ಉದ್ದೇಶಿತ ಗಣಿಗಾರಿಕೆ ಪ್ರದೇಶದಲ್ಲಿ 9 ಗ್ರಾಮ ಪಂಚಾಯತಿಗಳು, 14 ಹಳ್ಳಿಗಳು ಹಾಗೂ ಒಟ್ಟು 9,500 ಜನರು ವಾಸಿಸುತ್ತಿದ್ದಾರೆ. ಗೇರ್ ಪಾಲ್ಮಾ ಸೆಕ್ಟರ್ II ಕಲ್ಲಿದ್ದಲು ಗಣಿಯಲ್ಲಿ ಗಣಿಗಾರಿಕೆ ನಡೆಸಲು 2019ರಲ್ಲಿ ಗ್ರಾಮ ಸಭೆಗಳನ್ನು ನಡೆಸಲಾಗಿತ್ತು. ಆಗಲೂ ಗಣಿಗಾರಿಕೆಗೆ ವಿರೋಧ ವ್ಯಕ್ತವಾಗಿದ್ದವು.


ಆದಾಗ್ಯೂ, 2022ರಲ್ಲಿ ಗಣಿಗಾರಿಕೆಗೆ ಅರಣ್ಯ ಇಲಾಖೆಯೂ ಅನುಮತಿ ಮಂಜೂರು ಮಾಡಿತು. ಬಳಿಕ, ಗ್ರಾಮದ ಪ್ರತಿನಿಧಿಗಳು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (NGT) ದೂರು ದಾಖಲಿಸಿದ್ದರು. ಅರಣ್ಯ ಇಲಾಖೆ ನೀಡಿದ್ದ ಅಮತಿಯನ್ನು ಎನ್‌ಜಿಟಿ ರದ್ದುಗೊಳಿಸಿತ್ತು. ಆದರೆ, 2024ರಲ್ಲಿ ಪರಿಸರ ಸಚಿವಾಲಯ ಮತ್ತೊಮ್ಮೆ ಗಣಿಗಾರಿಕೆಗೆ ಅನುಮತಿ ನೀಡಿತು.

“ಛತ್ತೀಸ್‌ಗಢದ ಹಣಕಾಸು ಮತ್ತು ಪರಿಸರ ಸಚಿವ, ರಾಯ್‌ಗಢ ಶಾಸಕ ಒ.ಪಿ ಚೌಧರಿ ಅವರು ತಮ್ನಾರ್ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅವರ ಭೇಟಿಯ ಸಂದರ್ಭದಲ್ಲೇ ಮುದಗಾಂವ್‌ನಲ್ಲಿ ದೊಡ್ಡ ಪ್ರಮಾಣದ ಅರಣ್ಯನಾಶ ಪ್ರಾರಂಭವಾಯಿತು ಎಂದು ರಾಯ್‌ಗಢದ ಪರಿಸರವಾದಿ ರಾಜೇಶ್ ತ್ರಿಪಾಠಿ ಹೇಳಿದ್ದಾರೆ.


ಜೂನ್ 25 ರಂದು, ಸಚಿವ ಚೌಧರಿ ಅವರು ‘ತಾಯಿಯ ಹೆಸರಿನಲ್ಲಿ ಒಂದು ಮರ ನೆಡಿ’ ಅಭಿಯಾನವನ್ನು ಪ್ರಾರಂಭಿಸಿದರು. “ನಾಗರಿಕರು ತಮ್ಮ ತಾಯಂದಿರಿಗೆ ಗೌರವವಾಗಿ ಮತ್ತು ಪರಿಸರವನ್ನು ರಕ್ಷಿಸುವ ಹೆಜ್ಜೆಯಾಗಿ ಮರಗಳನ್ನು ನೆಡಬೇಕು” ಎಂದು ಚೌಧರಿ ಒತ್ತಾಯಿಸಿದ್ದರು.

ಆದರೆ, “ಚೌಧರಿ ತಮ್ನಾರ್‌ಗೆ ಭೇಟಿ ನೀಡಿ ಹೋದ 24 ಗಂಟೆಗಳ ಒಳಗೆಯೇ ಮರಗಳನ್ನು ಉರುಳಿಸುವ ಭಾರೀ ಯಂತ್ರೋಪಕರಣಗಳು ಮುದಗಾಂವ್‌ಗೆ ನುಗ್ಗಿದವು. ದೊಡ್ಡ ಅರಣ್ಯ ಪ್ರದೇಶಗಳನ್ನು ನಾಶಗೊಳಿಸಲು ಆರಂಭಿಸಿದವು” ಎಂದು ತ್ರಿಪಾಠಿ ಆರೋಪಿಸಿದ್ದಾರೆ. ಛತ್ತೀಸ್‌ಗಢ | ಅದಾನಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ‘NRC’ಗಿಂತ ಅಪಾಯಕಾರಿ: ಮಮತಾ ಬ್ಯಾನರ್ಜಿ

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ‘NRC’ಗಿಂತ ಅಪಾಯಕಾರಿ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...