Homeಅಂತರಾಷ್ಟ್ರೀಯಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ: 1 ಸಾವು, 11 ಮಂದಿಗೆ ಗಾಯ

ಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ: 1 ಸಾವು, 11 ಮಂದಿಗೆ ಗಾಯ

- Advertisement -
- Advertisement -

ನಬಾಟಿಯೆಹ್, ಲೆಬನಾನ್: ಶುಕ್ರವಾರ ಇಸ್ರೇಲ್‌ನ ವಾಯುಪಡೆಯು ಲೆಬನಾನ್‌ನ ದಕ್ಷಿಣ ಭಾಗದಲ್ಲಿರುವ ಪರ್ವತಗಳ ಮೇಲೆ ಭಾರಿ ವೈಮಾನಿಕ ದಾಳಿಗಳನ್ನು ನಡೆಸಿದೆ.

ಈ ದಾಳಿಗಳು ಹಿಜ್ಬುಲ್ಲಾ ಗುಂಪಿನ ಭೂಗತ ನೆಲೆಗಳನ್ನು ಗುರಿಯಾಗಿಸಿಕೊಂಡಿದ್ದವು ಎಂದು ಇಸ್ರೇಲಿ ಸೇನೆ ಹೇಳಿದೆ.

ಈ ದಾಳಿಯ ನಂತರ, ನಬಾಟಿಯೆಹ್ ನಗರದ ಸಮೀಪದ ಅಪಾರ್ಟ್‌ಮೆಂಟ್ ಕಟ್ಟಡವೊಂದಕ್ಕೆ ಹಾನಿಯಾಗಿದೆ. ಈ ದಾಳಿಯಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದು, 11 ಜನರು ಗಾಯಗೊಂಡಿದ್ದಾರೆ. ಕಟ್ಟಡದ ಮೇಲಿನ ಮಹಡಿ ಸಂಪೂರ್ಣವಾಗಿ ನಾಶವಾಗಿದೆ ಎಂದು ಲೆಬನಾನ್‌ನ ಸರ್ಕಾರಿ ಸುದ್ದಿ ಸಂಸ್ಥೆ ತಿಳಿಸಿದೆ.

ಸಾವನ್ನಪ್ಪಿದ ಮಹಿಳೆಯು ಜರ್ಮನಿಯಲ್ಲಿ ವಾಸಿಸುತ್ತಿದ್ದರು. ಅವರು ಕೇವಲ ಒಂದು ತಿಂಗಳ ಹಿಂದೆಯಷ್ಟೇ ಕುಟುಂಬವನ್ನು ಭೇಟಿ ಮಾಡಲು ಲೆಬನಾನ್‌ಗೆ ಮರಳಿದ್ದರು ಎಂದು ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸುದ್ದಿ ಸಂಸ್ಥೆ (NNA) ತಿಳಿಸಿದೆ. ಅವರು ಜರ್ಮನ್ ಪ್ರಜೆಯಾಗಿದ್ದಾರೆಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಮಹಿಳೆಯ ಇದ್ದ ಅಪಾರ್ಟ್‌ಮೆಂಟ್‌ ಇಸ್ರೇಲಿ ಡ್ರೋನ್ ದಾಳಿಗೆ ತುತ್ತಾಗಿದೆ ಎಂದು ವರದಿ ಹೇಳಿದೆ.

ಇಸ್ರೇಲಿ ಸೇನೆಯು ‘ಎಕ್ಸ್’ (ಹಿಂದಿನ ಟ್ವಿಟರ್) ನಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ತಾವು ನಾಗರಿಕ ಕಟ್ಟಡವನ್ನು ಗುರಿಯಾಗಿಸಿದ್ದನ್ನು ನಿರಾಕರಿಸಿದೆ.  ಬದಲಾಗಿ, ವಾಯುದಾಳಿಗೆ ಒಳಗಾದ ಸ್ಥಳದಲ್ಲಿ ಹಿಜ್ಬುಲ್ಲಾ ರಾಕೆಟ್‌ಗಳನ್ನು ಸಂಗ್ರಹಿಸಿಟ್ಟಿತ್ತು. ಇವು ಸ್ಫೋಟಗೊಂಡ ಕಾರಣ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಸೇನೆ ಹೇಳಿದೆ. ವಸತಿ ಪ್ರದೇಶಗಳ ಬಳಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ್ದಕ್ಕಾಗಿ ಹಿಜ್ಬುಲ್ಲಾವನ್ನೇ ದೂಷಿಸಿದೆ.

14 ತಿಂಗಳ ಇಸ್ರೇಲ್-ಹಿಜ್ಬುಲ್ಲಾ ಯುದ್ಧಕ್ಕೆ ಅಮೆರಿಕದ ಮಧ್ಯಸ್ಥಿಕೆಯಲ್ಲಿ ನವೆಂಬರ್‌ನಲ್ಲಿ ಕದನವಿರಾಮ ಘೋಷಿಸಲಾಯಿತು. ಹೀಗಿದ್ದೂ, ಇಸ್ರೇಲ್ ದಕ್ಷಿಣ ಲೆಬನಾನ್ ಮೇಲೆ ಬಹುತೇಕ ಪ್ರತಿದಿನವೂ ವೈಮಾನಿಕ ದಾಳಿಗಳನ್ನು ನಡೆಸುತ್ತಿದೆ. ಶುಕ್ರವಾರದ ದಾಳಿಗಳು ಸಾಮಾನ್ಯಕ್ಕಿಂತ ಹೆಚ್ಚು ತೀವ್ರವಾಗಿದ್ದವು.

ಇಸ್ರೇಲಿನ ಯುದ್ಧ ವಿಮಾನಗಳು ಮತ್ತು ಡ್ರೋನ್‌ಗಳಿಂದ ನಮ್ಮ ಮೇಲೆ ಎಷ್ಟೇ ಬಾಂಬ್ ದಾಳಿ ನಡೆಸಿದರೂ, ನಾವು ದೃಢವಾಗಿ ನಿಲ್ಲುತ್ತೇವೆ ಎಂದು ನಬಾಟಿಯೆಹ್‌ನ ಶಿಯಾ ಧರ್ಮಗುರು ಹಸನ್ ಗಂದೂರ್ ಅವರು ಘಟನಾ ಸ್ಥಳದಲ್ಲಿ ಅಸೋಸಿಯೇಟೆಡ್ ಪ್ರೆಸ್ (AP) ಗೆ ತಿಳಿಸಿದರು.

ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳು ಕದನವಿರಾಮ ಒಪ್ಪಂದವನ್ನು ಉಲ್ಲಂಘಿಸಿವೆ ಎಂದು ಲೆಬನಾನ್‌ನ ಅಧ್ಯಕ್ಷರು ಮತ್ತು ಪ್ರಧಾನ ಮಂತ್ರಿಗಳು ಖಂಡಿಸಿದ್ದಾರೆ.

ನಬಾಟಿಯೆಹ್‌ನ ಮೇಲಿರುವ ಪರ್ವತಗಳ ಮೇಲೆ ವೈಮಾನಿಕ ದಾಳಿಗಳು ಎರಡು ಹಂತಗಳಲ್ಲಿ ನಡೆದಿದ್ದು, ಬಂಕರ್ ಬಸ್ಟರ್‌ಗಳನ್ನು ಬಳಸಲಾಗಿದೆ ಎಂದು ಲೆಬನಾನ್‌ನ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸುದ್ದಿ ಸಂಸ್ಥೆ (NNA) ವರದಿ ಮಾಡಿದೆ. ನಗರದ ಹೊರಗಿನ ಈ ವೈಮಾನಿಕ ದಾಳಿಗಳಲ್ಲಿ ನಾಲ್ವರು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ ಎಂದು ಎನ್‌ಎನ್‌ಎ ತಿಳಿಸಿದೆ.

ಹಿಜ್ಬುಲ್ಲಾವು ದಾಳಿ ಮತ್ತು ರಕ್ಷಣಾ ವ್ಯವಸ್ಥೆಯನ್ನು ನಿರ್ವಹಿಸಲು ಬಳಸುತ್ತಿದ್ದ ಸ್ಥಳವನ್ನು ಗುರಿಯಾಗಿಸಿ ತಮ್ಮ ಯುದ್ಧ ವಿಮಾನಗಳು ದಾಳಿ ನಡೆಸಿವೆ ಎಂದು ಇಸ್ರೇಲಿ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ. ಈ ಸ್ಥಳವು ಹಿಜ್ಬುಲ್ಲಾದ ಮಹತ್ವದ ಭೂಗತ ಯೋಜನೆಯ ಭಾಗವಾಗಿದ್ದು, ಅದನ್ನು ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಲಾಗಿದೆ. ಆ ಪ್ರದೇಶದಲ್ಲಿ ಹಿಜ್ಬುಲ್ಲಾ ಮರುನಿರ್ಮಾಣದ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಮೊದಲೇ ಗುರುತಿಸಿದ್ದೇವೆ ಮತ್ತು ಹಾಗಾಗಿ ಅದರ ಮಿಲಿಟರಿ ಮೂಲಸೌಕರ್ಯ ತಾಣಗಳ ಮೇಲೆ ದಾಳಿ ನಡೆಸಿದ್ದೇವೆ ಎಂದು ಇಸ್ರೇಲಿ ಸೇನೆ ಹೇಳಿದೆ.

ಈ ದಾಳಿ ಕುರಿತು ಹಿಜ್ಬುಲ್ಲಾದಿಂದ ತಕ್ಷಣದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಈ ಹಿಂದೆ ನಡೆದ ಯುದ್ಧದಲ್ಲಿ, ಹಿಜ್ಬುಲ್ಲಾ ಯುದ್ಧಭೂಮಿಯಲ್ಲಿ ಭಾರಿ ನಷ್ಟವನ್ನು ಅನುಭವಿಸಿತ್ತು. ಆ ಯುದ್ಧದಲ್ಲಿ ಲೆಬನಾನ್‌ನಲ್ಲಿ 4,000 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು. ಲೆಬನಾನ್‌ಗೆ ಸುಮಾರು 11 ಶತಕೋಟಿ ಡಾಲರ್‌ಗಳಷ್ಟು ಹಾನಿಯಾಗಿತ್ತು. ಇಸ್ರೇಲ್‌ನಲ್ಲಿ 80 ಸೈನಿಕರು ಸೇರಿದಂತೆ 127 ಜನರು ಸಾವನ್ನಪ್ಪಿದ್ದರು.

ಕದನವಿರಾಮ ಒಪ್ಪಂದದ ಭಾಗವಾಗಿ, ಹಿಜ್ಬುಲ್ಲಾವನ್ನು ದಕ್ಷಿಣ ಲೆಬನಾನ್‌ನಲ್ಲಿರುವ ಇಸ್ರೇಲ್ ಗಡಿಯಿಂದ ಅಟ್ಟಲಾಗಿದೆ. ಲಿಟಾನಿ ನದಿಯ ದಕ್ಷಿಣಕ್ಕೆ ಶಸ್ತ್ರಾಸ್ತ್ರಗಳೊಂದಿಗೆ ಇರಲು ಅವರಿಗೆ ಅವಕಾಶ ನೀಡಲಾಗಿಲ್ಲ. ಆದರೆ, ಶುಕ್ರವಾರದ ವೈಮಾನಿಕ ದಾಳಿಗಳು ನದಿಯ ಉತ್ತರ ಭಾಗದಲ್ಲಿ ನಡೆದಿವೆ.

ಇರಾನ್-ಇಸ್ರೇಲ್ ಸಂಘರ್ಷ: ಕದನವಿರಾಮದ ನಂತರವೂ ಅನಿಶ್ಚಿತತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...