Homeಮುಖಪುಟ'ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ 'ಧಾರ್ಮಿಕ ಚಿತ್ರ': ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ...

‘ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ ‘ಧಾರ್ಮಿಕ ಚಿತ್ರ’: ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ ಶಿವನ್‌ಕುಟ್ಟಿ

- Advertisement -
- Advertisement -

ಕೇರಳದ ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಕೇಸರಿ ಧ್ವಜ ಹಿಡಿದ ಭಾರತ ಮಾತೆಯ ಫೋಟೋ ಇರಿಸಿದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ವಿರುದ್ದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಕಿಡಿಕಾರಿದ್ದು, “ಈ ನಡೆಯು ಸಾಂವಿಧಾನಿಕ ಮಾನದಂಡಗಳ ಸ್ಪಷ್ಟ ಉಲ್ಲಂಘನೆ” ಎಂದಿದ್ದಾರೆ.

ಭಾರತಮಾತೆ ಎನ್ನಲಾಗುವ ಕೇಸರಿ ಧ್ವಜ ಹಿಡಿದ ಮಹಿಳೆಯ ಭಾವಚಿತ್ರ ‘ಧಾರ್ಮಿಕ ಚಿತ್ರ’ ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಅಧಿಕೃತ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಂತಹ ಚಿತ್ರವನ್ನು ಪೂಜಿಸುವುದು ‘ಸಂವಿಧಾನದ ಮೂಲ ತತ್ವಗಳನ್ನು ಬುಡಮೇಲು ಮಾಡಿದಂತೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಶಿವನ್‌ಕುಟ್ಟಿ ಹೇಳಿದ್ದಾರೆ.

ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಕೇಸರಿ ಧ್ವಜ ಹೊತ್ತ ಭಾರತ ಮಾತೆಯ ಪೋಟೋ ಇರಿಸಿದ್ದಕ್ಕಾಗಿ ಎರಡು ಬಾರಿ ಸರ್ಕಾರ ಕಾರ್ಯಕ್ರಮವನ್ನು ಬಹಿಷ್ಕರಿಸಿತ್ತು. ಆರಂಭದಲ್ಲಿ ಸಿಎಂ ಪಿಣರಾಯಿ ವಿಜಯನ್‌ ಕಾರ್ಯಕ್ರಮವೊಂದಕ್ಕೆ ಗೈರಾಗದರೆ, ಎರಡನೇ ಬಾರಿ ಸಚಿವ ಶಿವನ್‌ಕುಟ್ಟಿ ಕಾರ್ಯಕ್ರಮದಿಂದ ಅರ್ಧದಲ್ಲಿ ನಿರ್ಗಮಿಸಿದ್ದರು.

ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ನಡೆ ಕುರಿತು ಎಲ್ಲೆಡೆ ಚರ್ಚೆಯಾಗುತ್ತಿದೆ. ರಾಜಕಾರಣಿಗಳ ನಡುವೆ ವಾಗ್ಯುದ್ಧ ಏರ್ಪಟ್ಟಿದೆ. ಬೀದಿಗಳಲ್ಲಿ ಪ್ರತಿಭಟನೆಗಳು ಆಯೋಜಿಸಲಾಗುತ್ತಿದೆ. ಈ ನಡುವೆ ಸಚಿವ ಶಿವನ್‌ಕುಟ್ಟಿ ರಾಜ್ಯಪಾಲರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸಂವಿಧಾನದ ವಿವಿಧ ವಿಧಿಗಳನ್ನು ಉಲ್ಲೇಖಿಸಿದ ಶಿವನ್‌ಕುಟ್ಟಿ, “ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಯಾವುದೇ ಧಾರ್ಮಿಕ ಆಚರಣೆಯನ್ನು ಉತ್ತೇಜಿಸುವುದನ್ನು ನಿಷೇಧಿಸಲಾಗಿದೆ. ಈ ವಿಧಿಗಳು ಧಾರ್ಮಿಕ ವಿಷಯಗಳಲ್ಲಿ ರಾಜ್ಯದ ತಟಸ್ಥತೆಯನ್ನು ಆದೇಶಿಸುತ್ತವೆ” ಎಂದಿದ್ದಾರೆ.

“ಆದ್ದರಿಂದ, ರಾಜ್ಯಪಾಲರ ನಡೆಯು ಭಾರತೀಯ ಸಂವಿಧಾನದ ಜಾತ್ಯತೀತ ಸ್ವರೂಪದ ಮೇಲಿನ ಸ್ಪಷ್ಟ ದಾಳಿಯಾಗಿದೆ. ಇದು ಶಿಷ್ಟಾಚಾರದ ಉಲ್ಲಂಘನೆ ಮಾತ್ರವಲ್ಲದೆ, ಸಂವಿಧಾನವು ಖಾತರಿಪಡಿಸಿದ ಜಾತ್ಯತೀತ ಮೌಲ್ಯಗಳನ್ನು ದುರ್ಬಲಗೊಳಿಸುವ ಕೃತ್ಯವಾಗಿದೆ” ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ.

ಭಾವಚಿತ್ರ ಪ್ರದರ್ಶನಕ್ಕೆ ಸಂಬಂಧಿಸಿದಂತೆ ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮವನ್ನು ಬಹಿಷ್ಕರಿಸಿದ ತಮ್ಮ ಇತ್ತೀಚಿನ ನಿರ್ಧಾರವನ್ನು ಸಚಿವರು ಸಮರ್ಥಿಸಿಕೊಂಡಿದ್ದಾರೆ.

“ಇಂತಹ ಸಾಂವಿಧಾನಿಕ ಉಲ್ಲಂಘನೆಗಳಿಗೆ ಸಾಕ್ಷಿಯಾಗಲು ಸಾಧ್ಯವಾಗದ ಕಾರಣ ನಾನು ಹೊರನಡೆದೆ. ಸಂವಿಧಾನವನ್ನು ಎತ್ತಿಹಿಡಿಯುವ ನನ್ನ ಜವಾಬ್ದಾರಿಯನ್ನು ನಾನು ಪೂರೈಸಿದ್ದೇನೆ. ಸಂವಿಧಾನದ ಜಾತ್ಯತೀತ ಸ್ವರೂಪವನ್ನು ರಕ್ಷಿಸಲು ನಾನು ಯಾವುದೇ ಹಂತಕ್ಕೆ ಹೋಗಲು ಬದ್ಧನಾಗಿದ್ದೇನೆ” ಎಂದಿದ್ದಾರೆ.

ವಿವಾದಿತ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ರಾಜ್ಯಪಾಲರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವನ್‌ಕುಟ್ಟಿ, “ರಾಜ್ಯಪಾಲರು ಸಂವಿಧಾನದ ಜಾತ್ಯತೀತ ಸ್ವರೂಪವನ್ನು ಅವಮಾನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಅಧಿಕೃತ ಸಮಾರಂಭದಲ್ಲಿ ಕೇಸರಿ ಧ್ವಜ ಹೊತ್ತ ಭಾರತ ಮಾತೆಯ ಚಿತ್ರವನ್ನು ಪ್ರದರ್ಶಿಸುವುದು ಮತ್ತು ಪೂಜಿಸುವುದು ದೇಶದ ಜಾತ್ಯತೀತ ಸ್ವರೂಪಕ್ಕೆ ವಿರುದ್ಧವಾಗಿ ನಿರ್ದಿಷ್ಟ ಧಾರ್ಮಿಕ ಚಿಹ್ನೆಯನ್ನು ‘ಅಧಿಕೃತವಾಗಿ ಅನುಮೋದಿಸಿದಂತೆ’ ಎಂದಿದ್ದಾರೆ.

ಅಧಿಕೃತ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಚಿಹ್ನೆಗಳನ್ನು ಹೊರತುಪಡಿಸಿ ಬೇರೆ ಯಾವುದನ್ನಾದರೂ ಬಳಸುವ ಬಗ್ಗೆ ಸರ್ಕಾರದ ಭಿನ್ನಾಭಿಪ್ರಾಯದ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯಪಾಲರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಭಾರತಕ್ಕೆ ಸಮಾಜವಾದ ಅಗತ್ಯವಿಲ್ಲ, ಜಾತ್ಯತೀತತೆ ಸಂಸ್ಕೃತಿಯ ಭಾಗವಲ್ಲ: ಕೇಂದ್ರ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...