Homeಮುಖಪುಟ'ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ 'ಧಾರ್ಮಿಕ ಚಿತ್ರ': ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ...

‘ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ ‘ಧಾರ್ಮಿಕ ಚಿತ್ರ’: ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ ಶಿವನ್‌ಕುಟ್ಟಿ

- Advertisement -
- Advertisement -

ಕೇರಳದ ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಕೇಸರಿ ಧ್ವಜ ಹಿಡಿದ ಭಾರತ ಮಾತೆಯ ಫೋಟೋ ಇರಿಸಿದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ವಿರುದ್ದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಕಿಡಿಕಾರಿದ್ದು, “ಈ ನಡೆಯು ಸಾಂವಿಧಾನಿಕ ಮಾನದಂಡಗಳ ಸ್ಪಷ್ಟ ಉಲ್ಲಂಘನೆ” ಎಂದಿದ್ದಾರೆ.

ಭಾರತಮಾತೆ ಎನ್ನಲಾಗುವ ಕೇಸರಿ ಧ್ವಜ ಹಿಡಿದ ಮಹಿಳೆಯ ಭಾವಚಿತ್ರ ‘ಧಾರ್ಮಿಕ ಚಿತ್ರ’ ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಅಧಿಕೃತ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಂತಹ ಚಿತ್ರವನ್ನು ಪೂಜಿಸುವುದು ‘ಸಂವಿಧಾನದ ಮೂಲ ತತ್ವಗಳನ್ನು ಬುಡಮೇಲು ಮಾಡಿದಂತೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಶಿವನ್‌ಕುಟ್ಟಿ ಹೇಳಿದ್ದಾರೆ.

ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಕೇಸರಿ ಧ್ವಜ ಹೊತ್ತ ಭಾರತ ಮಾತೆಯ ಪೋಟೋ ಇರಿಸಿದ್ದಕ್ಕಾಗಿ ಎರಡು ಬಾರಿ ಸರ್ಕಾರ ಕಾರ್ಯಕ್ರಮವನ್ನು ಬಹಿಷ್ಕರಿಸಿತ್ತು. ಆರಂಭದಲ್ಲಿ ಸಿಎಂ ಪಿಣರಾಯಿ ವಿಜಯನ್‌ ಕಾರ್ಯಕ್ರಮವೊಂದಕ್ಕೆ ಗೈರಾಗದರೆ, ಎರಡನೇ ಬಾರಿ ಸಚಿವ ಶಿವನ್‌ಕುಟ್ಟಿ ಕಾರ್ಯಕ್ರಮದಿಂದ ಅರ್ಧದಲ್ಲಿ ನಿರ್ಗಮಿಸಿದ್ದರು.

ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ನಡೆ ಕುರಿತು ಎಲ್ಲೆಡೆ ಚರ್ಚೆಯಾಗುತ್ತಿದೆ. ರಾಜಕಾರಣಿಗಳ ನಡುವೆ ವಾಗ್ಯುದ್ಧ ಏರ್ಪಟ್ಟಿದೆ. ಬೀದಿಗಳಲ್ಲಿ ಪ್ರತಿಭಟನೆಗಳು ಆಯೋಜಿಸಲಾಗುತ್ತಿದೆ. ಈ ನಡುವೆ ಸಚಿವ ಶಿವನ್‌ಕುಟ್ಟಿ ರಾಜ್ಯಪಾಲರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸಂವಿಧಾನದ ವಿವಿಧ ವಿಧಿಗಳನ್ನು ಉಲ್ಲೇಖಿಸಿದ ಶಿವನ್‌ಕುಟ್ಟಿ, “ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಯಾವುದೇ ಧಾರ್ಮಿಕ ಆಚರಣೆಯನ್ನು ಉತ್ತೇಜಿಸುವುದನ್ನು ನಿಷೇಧಿಸಲಾಗಿದೆ. ಈ ವಿಧಿಗಳು ಧಾರ್ಮಿಕ ವಿಷಯಗಳಲ್ಲಿ ರಾಜ್ಯದ ತಟಸ್ಥತೆಯನ್ನು ಆದೇಶಿಸುತ್ತವೆ” ಎಂದಿದ್ದಾರೆ.

“ಆದ್ದರಿಂದ, ರಾಜ್ಯಪಾಲರ ನಡೆಯು ಭಾರತೀಯ ಸಂವಿಧಾನದ ಜಾತ್ಯತೀತ ಸ್ವರೂಪದ ಮೇಲಿನ ಸ್ಪಷ್ಟ ದಾಳಿಯಾಗಿದೆ. ಇದು ಶಿಷ್ಟಾಚಾರದ ಉಲ್ಲಂಘನೆ ಮಾತ್ರವಲ್ಲದೆ, ಸಂವಿಧಾನವು ಖಾತರಿಪಡಿಸಿದ ಜಾತ್ಯತೀತ ಮೌಲ್ಯಗಳನ್ನು ದುರ್ಬಲಗೊಳಿಸುವ ಕೃತ್ಯವಾಗಿದೆ” ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ.

ಭಾವಚಿತ್ರ ಪ್ರದರ್ಶನಕ್ಕೆ ಸಂಬಂಧಿಸಿದಂತೆ ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮವನ್ನು ಬಹಿಷ್ಕರಿಸಿದ ತಮ್ಮ ಇತ್ತೀಚಿನ ನಿರ್ಧಾರವನ್ನು ಸಚಿವರು ಸಮರ್ಥಿಸಿಕೊಂಡಿದ್ದಾರೆ.

“ಇಂತಹ ಸಾಂವಿಧಾನಿಕ ಉಲ್ಲಂಘನೆಗಳಿಗೆ ಸಾಕ್ಷಿಯಾಗಲು ಸಾಧ್ಯವಾಗದ ಕಾರಣ ನಾನು ಹೊರನಡೆದೆ. ಸಂವಿಧಾನವನ್ನು ಎತ್ತಿಹಿಡಿಯುವ ನನ್ನ ಜವಾಬ್ದಾರಿಯನ್ನು ನಾನು ಪೂರೈಸಿದ್ದೇನೆ. ಸಂವಿಧಾನದ ಜಾತ್ಯತೀತ ಸ್ವರೂಪವನ್ನು ರಕ್ಷಿಸಲು ನಾನು ಯಾವುದೇ ಹಂತಕ್ಕೆ ಹೋಗಲು ಬದ್ಧನಾಗಿದ್ದೇನೆ” ಎಂದಿದ್ದಾರೆ.

ವಿವಾದಿತ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ರಾಜ್ಯಪಾಲರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವನ್‌ಕುಟ್ಟಿ, “ರಾಜ್ಯಪಾಲರು ಸಂವಿಧಾನದ ಜಾತ್ಯತೀತ ಸ್ವರೂಪವನ್ನು ಅವಮಾನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಅಧಿಕೃತ ಸಮಾರಂಭದಲ್ಲಿ ಕೇಸರಿ ಧ್ವಜ ಹೊತ್ತ ಭಾರತ ಮಾತೆಯ ಚಿತ್ರವನ್ನು ಪ್ರದರ್ಶಿಸುವುದು ಮತ್ತು ಪೂಜಿಸುವುದು ದೇಶದ ಜಾತ್ಯತೀತ ಸ್ವರೂಪಕ್ಕೆ ವಿರುದ್ಧವಾಗಿ ನಿರ್ದಿಷ್ಟ ಧಾರ್ಮಿಕ ಚಿಹ್ನೆಯನ್ನು ‘ಅಧಿಕೃತವಾಗಿ ಅನುಮೋದಿಸಿದಂತೆ’ ಎಂದಿದ್ದಾರೆ.

ಅಧಿಕೃತ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಚಿಹ್ನೆಗಳನ್ನು ಹೊರತುಪಡಿಸಿ ಬೇರೆ ಯಾವುದನ್ನಾದರೂ ಬಳಸುವ ಬಗ್ಗೆ ಸರ್ಕಾರದ ಭಿನ್ನಾಭಿಪ್ರಾಯದ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯಪಾಲರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಭಾರತಕ್ಕೆ ಸಮಾಜವಾದ ಅಗತ್ಯವಿಲ್ಲ, ಜಾತ್ಯತೀತತೆ ಸಂಸ್ಕೃತಿಯ ಭಾಗವಲ್ಲ: ಕೇಂದ್ರ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...