Homeಕರ್ನಾಟಕಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

ಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

- Advertisement -
- Advertisement -

ಮಂಗಳೂರು ನಗರದ ಹೊರವಲಯ ಕುಡುಪುವಿನಲ್ಲಿ ಏಪ್ರಿಲ್ 27ರಂದು ನಡೆದ ಕೇರಳದ ಮುಸ್ಲಿಂ ಯುವಕ ಮೊಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆಯ ಕುರಿತ ಸತ್ಯಶೋಧನಾ ವರದಿಯನ್ನು ಶನಿವಾರ (ಜೂ.28) ಬೆಂಗಳೂರಿನ ಪ್ರೆಸ್‌ ಕ್ಷಬ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಸಾಮಾಜಿಕ ಹೋರಾಟಗಾರರ ತಂಡವು ಮಂಗಳೂರಿಗೆ ಭೇಟಿ ನೀಡಿ ಸಂಗ್ರಹಿಸಿದ ಮಾಹಿತಿಗಳ ವರದಿಯನ್ನು ‘ಮಂಗಳೂರು ಗುಂಪು ಹತ್ಯೆ ಪ್ರಕರಣ-ಸಂವಿಧಾನದ ಕಗ್ಗೊಲೆಯ ಬಗ್ಗೆ ಮೌನ ಮುರಿಯಬೇಕಿದೆ’ ಎಂಬ ಹೆಸರಿನಲ್ಲಿ ಪೀಪಲ್ಸ್ ಯೂನಿಯನ್‌ ಫಾರ್ ಸಿವಿಲ್ ಲಿಬರ್ಟೀಸ್ ಕರ್ನಾಟಕ (ಪಿಯುಸಿಎಲ್‌), ಅಸೋಸಿಯೇಷನ್ ಆಫ್ ಪ್ರೊಟೆಕ್ಷನ್‌ ಫಾರ್ ಸಿವಿಲ್ ರೈಟ್ಸ್‌ ಕರ್ನಾಟಕ (ಎಪಿಸಿಆರ್) ಮತ್ತು ಆಲ್ ಇಂಡಿಯಾ ಲಾಯರ್ಸ್‌ ಅಸೋಸಿಯೇಷನ್ ಫಾರ್ ಜಸ್ಟೀಸ್‌ ಕರ್ನಾಟಕ (ಎಐಎಲ್‌ಎಜೆ) ಜಂಟಿಯಾಗಿ ಬಿಡುಗಡೆ ಮಾಡಿದೆ.

ವರದಿ ಬಿಡುಗಡೆ ಮಾಡಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ “ರಾಜ್ಯದ ಆಡಳಿತವು ಶೋಷಿತ ಸಮುದಾಯಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸುವಲ್ಲಿ ವಿಫಲವಾಗಿದೆ. ಅಶ್ರಫ್ ಗುಂಪು ಹತ್ಯೆ, ಕತ್ತರಘಟ್ಟದ ದಲಿತ ಯುವಕನ ಹತ್ಯೆ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಂತ್ರಸ್ತರ ಮನೆಗಳಿಗೆ ಭೇಟಿ ನೀಡದಿರುವುದು ಕಾನೂನು ಮತ್ತು ಆಡಳಿತದ ಮೇಲಿನ ಜನರ ನಂಬಿಕೆ ಕುಂದಿಸಿದೆ ಎಂದು ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡದಲ್ಲಿ ದಶಕಗಳಿಂದಲೂ ಸೌಹಾರ್ದತೆ ಮತ್ತು ಮಾನವೀಯತೆ ಕುಂದುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು ಮಾವಳ್ಳಿ ಶಂಕರ್, ‘ಅಶ್ರಫ್ ಅವರ ಸಹೋದರ ಜಬ್ಬಾರ್ ಹೇಳಿದಂತೆ ಇದೇ ಕೊನೆಯ ಗುಂಪು ಹತ್ಯೆಯಾಗಬೇಕು’ ಎಂದರು.

ವರ್ಣಭೇದ ನೀತಿಗಳ ಸಮಕಾಲೀನ ಸ್ವರೂಪಗಳ ಕುರಿತ ವಿಶ್ವಸಂಸ್ಥೆಯ ವಿಶೇಷ ವರದಿಗಾರರಾಗಿರುವ ಅಶ್ವಿನಿ ಕೆ.ಪಿ ಮಾತನಾಡಿ, “ಎಲ್ಲಾ ರೀತಿಯ ಜನಾಂಗೀಯ ತಾರತಮ್ಯಗಳ ನಿರ್ಮೂಲನೆಗೆ ಸಂಬಂಧಿಸಿದ ಅಂತಾರಾಷ್ಟ್ರೀಯ ಒಪ್ಪಂದಗಳಿಗೆ ಭಾರತ ಸಹಿ ಹಾಕಿದೆ. ಆದ್ದರಿಂದ ಇಂತಹ ಹಿಂಸಾಚಾರಕ್ಕೆ ಕಾರಣವಾಗುವ ದ್ವೇಷವನ್ನು ತೊಡೆದು ಹಾಕಲು ಭಾರತ ಬದ್ಧವಾಗಿದೆ ಎಂಬುವುದನ್ನು ಒತ್ತಿ ಹೇಳಿದರು.

ಪಹಲ್ಗಾಮ್ ದಾಳಿಯ ನಂತರ ಮುಸ್ಲಿಮರನ್ನು ದುಷ್ಟರನ್ನಾಗಿ ಬಿಂಬಿಸಲಾಗಿದೆ. ಪಹಲ್ಗಾಮ್ ದಾಳಿಯನ್ನು ಕೋಮುವಾದಗೊಳಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸಿವೆ. ಅಶ್ರಫ್ ಹತ್ಯೆಯಂತಹ ಘಟನೆಗಳಿಗೆ ಮಾಧ್ಯಮಗಳೇ ಕಾರಣ. ಅವುಗಳೂ ಮತ್ತಷ್ಟೂ ಜವಾಬ್ದಾರಿಯುತವಾಗಿ ವರದಿ ಮಾಡಬೇಕು. ಕಾನೂನನ್ನು ಜಾರಿ ಮಾಡಬೇಕಾದ ಸಂಸ್ಥೆಗಳು ತಳಮಟ್ಟದ ಜನರ ಬಗ್ಗೆ ನಿರ್ಲಕ್ಷ್ಯ ಮತ್ತು ಪಕ್ಷಪಾತ ಪ್ರದರ್ಶಿಸುವುದು ಆಘಾತಕಾರಿಯಾಗಿದೆ ಎಂದರು.

ಆಲ್ ಇಂಡಿಯಾ ಅಸೋಸಿಯೇಷನ್ ಫಾರ್ ಜಸ್ಟೀಸ್‌ನ ಅಧ್ಯಕ್ಷೆ ಮೈತ್ರೇಯಿ ಕೃಷ್ಣನ್ ಅವರು ಮಾತನಾಡಿ, “ಅಶ್ರಫ್ ಅವರ ಗುಂಪು ಹತ್ಯೆಯನ್ನು 2018ರ ತಹಸೀನ್ ಪೂನಾವಾಲಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪಿನ ಹಿನ್ನೆಲೆಯಲ್ಲಿ ವಿವರಿಸಿದರು. ಇದು ಕೇವಲ ಕೊಲೆಯಲ್ಲ, ಬದಲಿಗೆ ದ್ವೇಷ ಅಪರಾಧ ಎಂದು ಒತ್ತಿ ಹೇಳಿದರು. ಇಂತಹ ದ್ವೇಷ ಅಪರಾಧಗಳು ಸಂವಿಧಾನದ ಮೌಲ್ಯಗಳ ಮೇಲಿನ ದಾಳಿಯಾಗಿದೆ ಎಂದು ವಿವರಿಸಿದರು. ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ ಮಾಡಿದ, ಸುಪ್ರೀಂ ಕೋರ್ಟ್‌ನ ಗುಂಪು ಹತ್ಯೆಯ ಮಾರ್ಗಸೂಚಿಗಳನ್ನು ಪಾಲಿಸದ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಪ್ರಕರಣದ ತನಿಖೆ ಮತ್ತು ದಾಖಲಾತಿಯಲ್ಲಿ ಪೊಲೀಸರು ತೋರಿದ ನಿರ್ಲಕ್ಷ್ಯದಿಂದಾಗಿ ಆರೋಪಿಗಳಿಗೆ ತಾಂತ್ರಿಕ ಕಾರಣಗಳ ಆಧಾರದ ಮೇಲೆ ಜಾಮೀನು ದೊರೆತಿವೆ ಎಂದು ವಕೀಲರಾಗಿರುವ ವಿನಯ್ ಶ್ರೀನಿವಾಸ್ ಹೇಳಿದರು. ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿಹಿಡಿಯಲು ವಿವಿಧ ನಾಗರಿಕ ಸಮಾಜ ಗುಂಪುಗಳೊಂದಿಗೆ ಸಭೆ ನಡೆಸುವಂತೆ ಅವರು ರಾಜ್ಯ ಸರ್ಕಾರಕ್ಕೆ ಕರೆ ನೀಡಿದರು.

ದ್ವೇಷ ಮತ್ತು ನಕಲಿ ಸುದ್ದಿಗಳ ವಿರುದ್ಧ ಹೊಸ ಕಾನೂನುಗಳನ್ನು ಪರಿಚಯಿಸುವ ಮತ್ತು ವಿಶೇಷ ಕಾರ್ಯಪಡೆಗಳನ್ನು ನೇಮಿಸುವ ಸರ್ಕಾರದ ಕ್ರಮಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಕಾರಣ, ಸರ್ಕಾರವು ಈಗಾಗಲೇ ಅಸ್ತಿತ್ವದಲ್ಲಿರುವ ಮೂಲಭೂತ ಕಾನೂನುಗಳನ್ನು ಜಾರಿಗೆ ತರಲು ವಿಫಲವಾಗಿದೆ ಎಂದು ಅವರು ವಿವರಿಸಿದರು.

ಪೊಲೀಸರ ಮತ್ತು ಸಾರ್ವಜನಿಕರ ಪ್ರತಿಕ್ರಿಯೆಯನ್ನು ಗಮನಿಸಿದರೆ, ತಮಗೆ ತೀವ್ರ ನಿರಾಶೆಯಾಗಿದೆ ಎಂದು ಎಸ್‌ಐಒ ಕರ್ನಾಟಕದ ಮೊಹಮ್ಮದ್ ಹಯ್ಯಾನ್, ಅಶ್ರಫ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವಂತೆ, ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸುವಂತೆ ಮತ್ತು ಸಂತ್ರಸ್ತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುಂಪು ದಾಳಿಗೆ ಬಲಿಯಾದ ಮೊಹಮ್ಮದ್ ಅಶ್ರಫ್ ಅವರ ಸಹೋದರ ಜಬ್ಬಾರ್ ಉಪಸ್ಥಿತರಿದ್ದರು.

ಸತ್ಯ ಶೋಧನೆಯ ಸಂಪೂರ್ಣ ವರದಿ ಓದಲು ಕೆಳಗಿನ ಲಿಂಕ್ ಒತ್ತಿ

ಅಶ್ರಫ್ ಗುಂಪು ಹತ್ಯೆ ಸತ್ಯ ಶೋಧನಾ ವರದಿ 

ಹೆಂಡತಿಯನ್ನು ಕೊಲೆಗೈದ ಸುಳ್ಳಾರೋಪದಲ್ಲಿ 2 ವರ್ಷ ಜೈಲು ಶಿಕ್ಷೆ: ರೂ. 5 ಕೋಟಿ ಪರಿಹಾರ ಕೋರಿ ಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...