Homeಕರ್ನಾಟಕಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

ಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

- Advertisement -
- Advertisement -

ಮಂಗಳೂರು ನಗರದ ಹೊರವಲಯ ಕುಡುಪುವಿನಲ್ಲಿ ಏಪ್ರಿಲ್ 27ರಂದು ನಡೆದ ಕೇರಳದ ಮುಸ್ಲಿಂ ಯುವಕ ಮೊಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆಯ ಕುರಿತ ಸತ್ಯಶೋಧನಾ ವರದಿಯನ್ನು ಶನಿವಾರ (ಜೂ.28) ಬೆಂಗಳೂರಿನ ಪ್ರೆಸ್‌ ಕ್ಷಬ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಸಾಮಾಜಿಕ ಹೋರಾಟಗಾರರ ತಂಡವು ಮಂಗಳೂರಿಗೆ ಭೇಟಿ ನೀಡಿ ಸಂಗ್ರಹಿಸಿದ ಮಾಹಿತಿಗಳ ವರದಿಯನ್ನು ‘ಮಂಗಳೂರು ಗುಂಪು ಹತ್ಯೆ ಪ್ರಕರಣ-ಸಂವಿಧಾನದ ಕಗ್ಗೊಲೆಯ ಬಗ್ಗೆ ಮೌನ ಮುರಿಯಬೇಕಿದೆ’ ಎಂಬ ಹೆಸರಿನಲ್ಲಿ ಪೀಪಲ್ಸ್ ಯೂನಿಯನ್‌ ಫಾರ್ ಸಿವಿಲ್ ಲಿಬರ್ಟೀಸ್ ಕರ್ನಾಟಕ (ಪಿಯುಸಿಎಲ್‌), ಅಸೋಸಿಯೇಷನ್ ಆಫ್ ಪ್ರೊಟೆಕ್ಷನ್‌ ಫಾರ್ ಸಿವಿಲ್ ರೈಟ್ಸ್‌ ಕರ್ನಾಟಕ (ಎಪಿಸಿಆರ್) ಮತ್ತು ಆಲ್ ಇಂಡಿಯಾ ಲಾಯರ್ಸ್‌ ಅಸೋಸಿಯೇಷನ್ ಫಾರ್ ಜಸ್ಟೀಸ್‌ ಕರ್ನಾಟಕ (ಎಐಎಲ್‌ಎಜೆ) ಜಂಟಿಯಾಗಿ ಬಿಡುಗಡೆ ಮಾಡಿದೆ.

ವರದಿ ಬಿಡುಗಡೆ ಮಾಡಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ “ರಾಜ್ಯದ ಆಡಳಿತವು ಶೋಷಿತ ಸಮುದಾಯಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸುವಲ್ಲಿ ವಿಫಲವಾಗಿದೆ. ಅಶ್ರಫ್ ಗುಂಪು ಹತ್ಯೆ, ಕತ್ತರಘಟ್ಟದ ದಲಿತ ಯುವಕನ ಹತ್ಯೆ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಂತ್ರಸ್ತರ ಮನೆಗಳಿಗೆ ಭೇಟಿ ನೀಡದಿರುವುದು ಕಾನೂನು ಮತ್ತು ಆಡಳಿತದ ಮೇಲಿನ ಜನರ ನಂಬಿಕೆ ಕುಂದಿಸಿದೆ ಎಂದು ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡದಲ್ಲಿ ದಶಕಗಳಿಂದಲೂ ಸೌಹಾರ್ದತೆ ಮತ್ತು ಮಾನವೀಯತೆ ಕುಂದುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು ಮಾವಳ್ಳಿ ಶಂಕರ್, ‘ಅಶ್ರಫ್ ಅವರ ಸಹೋದರ ಜಬ್ಬಾರ್ ಹೇಳಿದಂತೆ ಇದೇ ಕೊನೆಯ ಗುಂಪು ಹತ್ಯೆಯಾಗಬೇಕು’ ಎಂದರು.

ವರ್ಣಭೇದ ನೀತಿಗಳ ಸಮಕಾಲೀನ ಸ್ವರೂಪಗಳ ಕುರಿತ ವಿಶ್ವಸಂಸ್ಥೆಯ ವಿಶೇಷ ವರದಿಗಾರರಾಗಿರುವ ಅಶ್ವಿನಿ ಕೆ.ಪಿ ಮಾತನಾಡಿ, “ಎಲ್ಲಾ ರೀತಿಯ ಜನಾಂಗೀಯ ತಾರತಮ್ಯಗಳ ನಿರ್ಮೂಲನೆಗೆ ಸಂಬಂಧಿಸಿದ ಅಂತಾರಾಷ್ಟ್ರೀಯ ಒಪ್ಪಂದಗಳಿಗೆ ಭಾರತ ಸಹಿ ಹಾಕಿದೆ. ಆದ್ದರಿಂದ ಇಂತಹ ಹಿಂಸಾಚಾರಕ್ಕೆ ಕಾರಣವಾಗುವ ದ್ವೇಷವನ್ನು ತೊಡೆದು ಹಾಕಲು ಭಾರತ ಬದ್ಧವಾಗಿದೆ ಎಂಬುವುದನ್ನು ಒತ್ತಿ ಹೇಳಿದರು.

ಪಹಲ್ಗಾಮ್ ದಾಳಿಯ ನಂತರ ಮುಸ್ಲಿಮರನ್ನು ದುಷ್ಟರನ್ನಾಗಿ ಬಿಂಬಿಸಲಾಗಿದೆ. ಪಹಲ್ಗಾಮ್ ದಾಳಿಯನ್ನು ಕೋಮುವಾದಗೊಳಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸಿವೆ. ಅಶ್ರಫ್ ಹತ್ಯೆಯಂತಹ ಘಟನೆಗಳಿಗೆ ಮಾಧ್ಯಮಗಳೇ ಕಾರಣ. ಅವುಗಳೂ ಮತ್ತಷ್ಟೂ ಜವಾಬ್ದಾರಿಯುತವಾಗಿ ವರದಿ ಮಾಡಬೇಕು. ಕಾನೂನನ್ನು ಜಾರಿ ಮಾಡಬೇಕಾದ ಸಂಸ್ಥೆಗಳು ತಳಮಟ್ಟದ ಜನರ ಬಗ್ಗೆ ನಿರ್ಲಕ್ಷ್ಯ ಮತ್ತು ಪಕ್ಷಪಾತ ಪ್ರದರ್ಶಿಸುವುದು ಆಘಾತಕಾರಿಯಾಗಿದೆ ಎಂದರು.

ಆಲ್ ಇಂಡಿಯಾ ಅಸೋಸಿಯೇಷನ್ ಫಾರ್ ಜಸ್ಟೀಸ್‌ನ ಅಧ್ಯಕ್ಷೆ ಮೈತ್ರೇಯಿ ಕೃಷ್ಣನ್ ಅವರು ಮಾತನಾಡಿ, “ಅಶ್ರಫ್ ಅವರ ಗುಂಪು ಹತ್ಯೆಯನ್ನು 2018ರ ತಹಸೀನ್ ಪೂನಾವಾಲಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪಿನ ಹಿನ್ನೆಲೆಯಲ್ಲಿ ವಿವರಿಸಿದರು. ಇದು ಕೇವಲ ಕೊಲೆಯಲ್ಲ, ಬದಲಿಗೆ ದ್ವೇಷ ಅಪರಾಧ ಎಂದು ಒತ್ತಿ ಹೇಳಿದರು. ಇಂತಹ ದ್ವೇಷ ಅಪರಾಧಗಳು ಸಂವಿಧಾನದ ಮೌಲ್ಯಗಳ ಮೇಲಿನ ದಾಳಿಯಾಗಿದೆ ಎಂದು ವಿವರಿಸಿದರು. ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ ಮಾಡಿದ, ಸುಪ್ರೀಂ ಕೋರ್ಟ್‌ನ ಗುಂಪು ಹತ್ಯೆಯ ಮಾರ್ಗಸೂಚಿಗಳನ್ನು ಪಾಲಿಸದ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಪ್ರಕರಣದ ತನಿಖೆ ಮತ್ತು ದಾಖಲಾತಿಯಲ್ಲಿ ಪೊಲೀಸರು ತೋರಿದ ನಿರ್ಲಕ್ಷ್ಯದಿಂದಾಗಿ ಆರೋಪಿಗಳಿಗೆ ತಾಂತ್ರಿಕ ಕಾರಣಗಳ ಆಧಾರದ ಮೇಲೆ ಜಾಮೀನು ದೊರೆತಿವೆ ಎಂದು ವಕೀಲರಾಗಿರುವ ವಿನಯ್ ಶ್ರೀನಿವಾಸ್ ಹೇಳಿದರು. ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿಹಿಡಿಯಲು ವಿವಿಧ ನಾಗರಿಕ ಸಮಾಜ ಗುಂಪುಗಳೊಂದಿಗೆ ಸಭೆ ನಡೆಸುವಂತೆ ಅವರು ರಾಜ್ಯ ಸರ್ಕಾರಕ್ಕೆ ಕರೆ ನೀಡಿದರು.

ದ್ವೇಷ ಮತ್ತು ನಕಲಿ ಸುದ್ದಿಗಳ ವಿರುದ್ಧ ಹೊಸ ಕಾನೂನುಗಳನ್ನು ಪರಿಚಯಿಸುವ ಮತ್ತು ವಿಶೇಷ ಕಾರ್ಯಪಡೆಗಳನ್ನು ನೇಮಿಸುವ ಸರ್ಕಾರದ ಕ್ರಮಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಕಾರಣ, ಸರ್ಕಾರವು ಈಗಾಗಲೇ ಅಸ್ತಿತ್ವದಲ್ಲಿರುವ ಮೂಲಭೂತ ಕಾನೂನುಗಳನ್ನು ಜಾರಿಗೆ ತರಲು ವಿಫಲವಾಗಿದೆ ಎಂದು ಅವರು ವಿವರಿಸಿದರು.

ಪೊಲೀಸರ ಮತ್ತು ಸಾರ್ವಜನಿಕರ ಪ್ರತಿಕ್ರಿಯೆಯನ್ನು ಗಮನಿಸಿದರೆ, ತಮಗೆ ತೀವ್ರ ನಿರಾಶೆಯಾಗಿದೆ ಎಂದು ಎಸ್‌ಐಒ ಕರ್ನಾಟಕದ ಮೊಹಮ್ಮದ್ ಹಯ್ಯಾನ್, ಅಶ್ರಫ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವಂತೆ, ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸುವಂತೆ ಮತ್ತು ಸಂತ್ರಸ್ತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುಂಪು ದಾಳಿಗೆ ಬಲಿಯಾದ ಮೊಹಮ್ಮದ್ ಅಶ್ರಫ್ ಅವರ ಸಹೋದರ ಜಬ್ಬಾರ್ ಉಪಸ್ಥಿತರಿದ್ದರು.

ಸತ್ಯ ಶೋಧನೆಯ ಸಂಪೂರ್ಣ ವರದಿ ಓದಲು ಕೆಳಗಿನ ಲಿಂಕ್ ಒತ್ತಿ

ಅಶ್ರಫ್ ಗುಂಪು ಹತ್ಯೆ ಸತ್ಯ ಶೋಧನಾ ವರದಿ 

ಹೆಂಡತಿಯನ್ನು ಕೊಲೆಗೈದ ಸುಳ್ಳಾರೋಪದಲ್ಲಿ 2 ವರ್ಷ ಜೈಲು ಶಿಕ್ಷೆ: ರೂ. 5 ಕೋಟಿ ಪರಿಹಾರ ಕೋರಿ ಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...