Homeಕರ್ನಾಟಕಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

ಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

- Advertisement -
- Advertisement -

ಮಂಗಳೂರು ನಗರದ ಹೊರವಲಯ ಕುಡುಪುವಿನಲ್ಲಿ ಏಪ್ರಿಲ್ 27ರಂದು ನಡೆದ ಕೇರಳದ ಮುಸ್ಲಿಂ ಯುವಕ ಮೊಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆಯ ಕುರಿತ ಸತ್ಯಶೋಧನಾ ವರದಿಯನ್ನು ಶನಿವಾರ (ಜೂ.28) ಬೆಂಗಳೂರಿನ ಪ್ರೆಸ್‌ ಕ್ಷಬ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಸಾಮಾಜಿಕ ಹೋರಾಟಗಾರರ ತಂಡವು ಮಂಗಳೂರಿಗೆ ಭೇಟಿ ನೀಡಿ ಸಂಗ್ರಹಿಸಿದ ಮಾಹಿತಿಗಳ ವರದಿಯನ್ನು ‘ಮಂಗಳೂರು ಗುಂಪು ಹತ್ಯೆ ಪ್ರಕರಣ-ಸಂವಿಧಾನದ ಕಗ್ಗೊಲೆಯ ಬಗ್ಗೆ ಮೌನ ಮುರಿಯಬೇಕಿದೆ’ ಎಂಬ ಹೆಸರಿನಲ್ಲಿ ಪೀಪಲ್ಸ್ ಯೂನಿಯನ್‌ ಫಾರ್ ಸಿವಿಲ್ ಲಿಬರ್ಟೀಸ್ ಕರ್ನಾಟಕ (ಪಿಯುಸಿಎಲ್‌), ಅಸೋಸಿಯೇಷನ್ ಆಫ್ ಪ್ರೊಟೆಕ್ಷನ್‌ ಫಾರ್ ಸಿವಿಲ್ ರೈಟ್ಸ್‌ ಕರ್ನಾಟಕ (ಎಪಿಸಿಆರ್) ಮತ್ತು ಆಲ್ ಇಂಡಿಯಾ ಲಾಯರ್ಸ್‌ ಅಸೋಸಿಯೇಷನ್ ಫಾರ್ ಜಸ್ಟೀಸ್‌ ಕರ್ನಾಟಕ (ಎಐಎಲ್‌ಎಜೆ) ಜಂಟಿಯಾಗಿ ಬಿಡುಗಡೆ ಮಾಡಿದೆ.

ವರದಿ ಬಿಡುಗಡೆ ಮಾಡಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ “ರಾಜ್ಯದ ಆಡಳಿತವು ಶೋಷಿತ ಸಮುದಾಯಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸುವಲ್ಲಿ ವಿಫಲವಾಗಿದೆ. ಅಶ್ರಫ್ ಗುಂಪು ಹತ್ಯೆ, ಕತ್ತರಘಟ್ಟದ ದಲಿತ ಯುವಕನ ಹತ್ಯೆ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಂತ್ರಸ್ತರ ಮನೆಗಳಿಗೆ ಭೇಟಿ ನೀಡದಿರುವುದು ಕಾನೂನು ಮತ್ತು ಆಡಳಿತದ ಮೇಲಿನ ಜನರ ನಂಬಿಕೆ ಕುಂದಿಸಿದೆ ಎಂದು ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡದಲ್ಲಿ ದಶಕಗಳಿಂದಲೂ ಸೌಹಾರ್ದತೆ ಮತ್ತು ಮಾನವೀಯತೆ ಕುಂದುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು ಮಾವಳ್ಳಿ ಶಂಕರ್, ‘ಅಶ್ರಫ್ ಅವರ ಸಹೋದರ ಜಬ್ಬಾರ್ ಹೇಳಿದಂತೆ ಇದೇ ಕೊನೆಯ ಗುಂಪು ಹತ್ಯೆಯಾಗಬೇಕು’ ಎಂದರು.

ವರ್ಣಭೇದ ನೀತಿಗಳ ಸಮಕಾಲೀನ ಸ್ವರೂಪಗಳ ಕುರಿತ ವಿಶ್ವಸಂಸ್ಥೆಯ ವಿಶೇಷ ವರದಿಗಾರರಾಗಿರುವ ಅಶ್ವಿನಿ ಕೆ.ಪಿ ಮಾತನಾಡಿ, “ಎಲ್ಲಾ ರೀತಿಯ ಜನಾಂಗೀಯ ತಾರತಮ್ಯಗಳ ನಿರ್ಮೂಲನೆಗೆ ಸಂಬಂಧಿಸಿದ ಅಂತಾರಾಷ್ಟ್ರೀಯ ಒಪ್ಪಂದಗಳಿಗೆ ಭಾರತ ಸಹಿ ಹಾಕಿದೆ. ಆದ್ದರಿಂದ ಇಂತಹ ಹಿಂಸಾಚಾರಕ್ಕೆ ಕಾರಣವಾಗುವ ದ್ವೇಷವನ್ನು ತೊಡೆದು ಹಾಕಲು ಭಾರತ ಬದ್ಧವಾಗಿದೆ ಎಂಬುವುದನ್ನು ಒತ್ತಿ ಹೇಳಿದರು.

ಪಹಲ್ಗಾಮ್ ದಾಳಿಯ ನಂತರ ಮುಸ್ಲಿಮರನ್ನು ದುಷ್ಟರನ್ನಾಗಿ ಬಿಂಬಿಸಲಾಗಿದೆ. ಪಹಲ್ಗಾಮ್ ದಾಳಿಯನ್ನು ಕೋಮುವಾದಗೊಳಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸಿವೆ. ಅಶ್ರಫ್ ಹತ್ಯೆಯಂತಹ ಘಟನೆಗಳಿಗೆ ಮಾಧ್ಯಮಗಳೇ ಕಾರಣ. ಅವುಗಳೂ ಮತ್ತಷ್ಟೂ ಜವಾಬ್ದಾರಿಯುತವಾಗಿ ವರದಿ ಮಾಡಬೇಕು. ಕಾನೂನನ್ನು ಜಾರಿ ಮಾಡಬೇಕಾದ ಸಂಸ್ಥೆಗಳು ತಳಮಟ್ಟದ ಜನರ ಬಗ್ಗೆ ನಿರ್ಲಕ್ಷ್ಯ ಮತ್ತು ಪಕ್ಷಪಾತ ಪ್ರದರ್ಶಿಸುವುದು ಆಘಾತಕಾರಿಯಾಗಿದೆ ಎಂದರು.

ಆಲ್ ಇಂಡಿಯಾ ಅಸೋಸಿಯೇಷನ್ ಫಾರ್ ಜಸ್ಟೀಸ್‌ನ ಅಧ್ಯಕ್ಷೆ ಮೈತ್ರೇಯಿ ಕೃಷ್ಣನ್ ಅವರು ಮಾತನಾಡಿ, “ಅಶ್ರಫ್ ಅವರ ಗುಂಪು ಹತ್ಯೆಯನ್ನು 2018ರ ತಹಸೀನ್ ಪೂನಾವಾಲಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪಿನ ಹಿನ್ನೆಲೆಯಲ್ಲಿ ವಿವರಿಸಿದರು. ಇದು ಕೇವಲ ಕೊಲೆಯಲ್ಲ, ಬದಲಿಗೆ ದ್ವೇಷ ಅಪರಾಧ ಎಂದು ಒತ್ತಿ ಹೇಳಿದರು. ಇಂತಹ ದ್ವೇಷ ಅಪರಾಧಗಳು ಸಂವಿಧಾನದ ಮೌಲ್ಯಗಳ ಮೇಲಿನ ದಾಳಿಯಾಗಿದೆ ಎಂದು ವಿವರಿಸಿದರು. ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ ಮಾಡಿದ, ಸುಪ್ರೀಂ ಕೋರ್ಟ್‌ನ ಗುಂಪು ಹತ್ಯೆಯ ಮಾರ್ಗಸೂಚಿಗಳನ್ನು ಪಾಲಿಸದ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಪ್ರಕರಣದ ತನಿಖೆ ಮತ್ತು ದಾಖಲಾತಿಯಲ್ಲಿ ಪೊಲೀಸರು ತೋರಿದ ನಿರ್ಲಕ್ಷ್ಯದಿಂದಾಗಿ ಆರೋಪಿಗಳಿಗೆ ತಾಂತ್ರಿಕ ಕಾರಣಗಳ ಆಧಾರದ ಮೇಲೆ ಜಾಮೀನು ದೊರೆತಿವೆ ಎಂದು ವಕೀಲರಾಗಿರುವ ವಿನಯ್ ಶ್ರೀನಿವಾಸ್ ಹೇಳಿದರು. ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿಹಿಡಿಯಲು ವಿವಿಧ ನಾಗರಿಕ ಸಮಾಜ ಗುಂಪುಗಳೊಂದಿಗೆ ಸಭೆ ನಡೆಸುವಂತೆ ಅವರು ರಾಜ್ಯ ಸರ್ಕಾರಕ್ಕೆ ಕರೆ ನೀಡಿದರು.

ದ್ವೇಷ ಮತ್ತು ನಕಲಿ ಸುದ್ದಿಗಳ ವಿರುದ್ಧ ಹೊಸ ಕಾನೂನುಗಳನ್ನು ಪರಿಚಯಿಸುವ ಮತ್ತು ವಿಶೇಷ ಕಾರ್ಯಪಡೆಗಳನ್ನು ನೇಮಿಸುವ ಸರ್ಕಾರದ ಕ್ರಮಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಕಾರಣ, ಸರ್ಕಾರವು ಈಗಾಗಲೇ ಅಸ್ತಿತ್ವದಲ್ಲಿರುವ ಮೂಲಭೂತ ಕಾನೂನುಗಳನ್ನು ಜಾರಿಗೆ ತರಲು ವಿಫಲವಾಗಿದೆ ಎಂದು ಅವರು ವಿವರಿಸಿದರು.

ಪೊಲೀಸರ ಮತ್ತು ಸಾರ್ವಜನಿಕರ ಪ್ರತಿಕ್ರಿಯೆಯನ್ನು ಗಮನಿಸಿದರೆ, ತಮಗೆ ತೀವ್ರ ನಿರಾಶೆಯಾಗಿದೆ ಎಂದು ಎಸ್‌ಐಒ ಕರ್ನಾಟಕದ ಮೊಹಮ್ಮದ್ ಹಯ್ಯಾನ್, ಅಶ್ರಫ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವಂತೆ, ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸುವಂತೆ ಮತ್ತು ಸಂತ್ರಸ್ತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುಂಪು ದಾಳಿಗೆ ಬಲಿಯಾದ ಮೊಹಮ್ಮದ್ ಅಶ್ರಫ್ ಅವರ ಸಹೋದರ ಜಬ್ಬಾರ್ ಉಪಸ್ಥಿತರಿದ್ದರು.

ಸತ್ಯ ಶೋಧನೆಯ ಸಂಪೂರ್ಣ ವರದಿ ಓದಲು ಕೆಳಗಿನ ಲಿಂಕ್ ಒತ್ತಿ

ಅಶ್ರಫ್ ಗುಂಪು ಹತ್ಯೆ ಸತ್ಯ ಶೋಧನಾ ವರದಿ 

ಹೆಂಡತಿಯನ್ನು ಕೊಲೆಗೈದ ಸುಳ್ಳಾರೋಪದಲ್ಲಿ 2 ವರ್ಷ ಜೈಲು ಶಿಕ್ಷೆ: ರೂ. 5 ಕೋಟಿ ಪರಿಹಾರ ಕೋರಿ ಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...