Homeಮುಖಪುಟವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ನಾಗರಿಕರ ಮತದಾನದ ಹಕ್ಕು ಕಸಿಯುವ ಬಿಜೆಪಿಯ ಹುನ್ನಾರ-ಟಿಎಂಸಿ ಆರೋಪ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ನಾಗರಿಕರ ಮತದಾನದ ಹಕ್ಕು ಕಸಿಯುವ ಬಿಜೆಪಿಯ ಹುನ್ನಾರ-ಟಿಎಂಸಿ ಆರೋಪ

- Advertisement -
- Advertisement -

ನವದೆಹಲಿ: ಚುನಾವಣಾ ಆಯೋಗವು ಬಿಹಾರ ಹಾಗೂ ನಂತರ ಪಶ್ಚಿಮ ಬಂಗಾಳ ಸೇರಿದಂತೆ ಇತರ ರಾಜ್ಯಗಳಲ್ಲಿ ಜಾರಿಗೆ ತರುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision) (SIR)ಯು ನಾಜಿ ಜರ್ಮನಿಯ ‘ಪೂರ್ವಜರ ಪಾಸ್‌ಪೋರ್ಟ್‌ಗಳ’ ವಿತರಣೆಯನ್ನು ಹೋಲುತ್ತದೆ ಎಂದು ತೃಣಮೂಲ ಕಾಂಗ್ರೆಸ್ ಶನಿವಾರ ಆರೋಪಿಸಿದೆ. ಈ ಪರಿಷ್ಕರಣೆಯು ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಜೆಪಿಯ ಹುನ್ನಾರವಾಗಿದೆ ಎಂದು ಟಿಎಂಸಿ ಹೇಳಿದೆ.

ಈ ವಿಷಯವನ್ನು ‘ಇಂಡಿಯಾ’ ಒಕ್ಕೂಟದ ಎಲ್ಲಾ ಪಕ್ಷಗಳು ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರಸ್ತಾಪಿಸಲಿವೆ ಎಂದು ಟಿಎಂಸಿ ತಿಳಿಸಿದೆ. ಅಷ್ಟೇ ಅಲ್ಲದೆ, ಎಲ್ಲಾ ಪಕ್ಷಗಳೊಂದಿಗೆ ಸಭೆ ನಡೆಸುವವರೆಗೂ ಚುನಾವಣಾ ಆಯೋಗವು ಈ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದೂ ಅದು ಒತ್ತಾಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತೃಣಮೂಲ ರಾಜ್ಯಸಭೆಯ ಸದನ ನಾಯಕ ಡೆರೆಕ್ ಓ’ಬ್ರಿಯಾನ್, ಚುನಾವಣಾ ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿದ್ದು, ತನ್ನ ಇಚ್ಛೆಯಂತೆ ವರ್ತಿಸುವ ತಾತ್ಕಾಲಿಕ ಘಟಕವಲ್ಲ ಎಂದು ಹೇಳಿದರು. “ಅದು ಸಂವಿಧಾನವನ್ನು ಅನುಸರಿಸಬೇಕು. ಇದು ನಿಜಕ್ಕೂ ಭಾರತೀಯ ಚುನಾವಣಾ ಆಯೋಗದ ಅಸಲೀಯತ್ತೇ? ನಾವು ಇದನ್ನು ಗೌರವದಿಂದಲೇ ಹೇಳುತ್ತಿದ್ದೇವೆ. ಅದು ಬಿಜೆಪಿಯ ಶಾಖಾ ಕಚೇರಿಯಾಗಬಾರದು” ಎಂದು ಅವರು ಟೀಕಿಸಿದರು.

ಬಿಹಾರದ ನಂತರ ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿ ಈ ಪರಿಷ್ಕರಣೆ ನಡೆಯಲಿದೆ. ಈಗಲೇ ಈ ಪ್ರಕ್ರಿಯೆಯನ್ನು ಏಕೆ ನಡೆಸಲಾಗುತ್ತಿದೆ. ಇದು ಈಗ ಏಕೆ ನಡೆಯುತ್ತಿದೆ ಎಂಬುದನ್ನು ವಿವರಿಸಲು ನಮ್ಮ ಬಳಿ ಪುರಾವೆಗಳಿವೆ. ಬಿಜೆಪಿಯ ಇತ್ತೀಚಿನ ಆಂತರಿಕ ಸಮೀಕ್ಷೆಯು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆದರೆ ಬಿಜೆಪಿಯು ಕೇವಲ 46-49 ಸ್ಥಾನಗಳನ್ನು ಪಡೆಯುತ್ತದೆ ಎಂದು ಹೇಳಿದೆ. ಇದನ್ನು ಬದಲಾಯಿಸುವ ಅಥವಾ ಬದಲಾಯಿಸಲು ಪ್ರಯತ್ನಿಸುವ ಹತಾಶೆಯಲ್ಲಿ ಅವರು ಇದನ್ನು ಮಾಡುತ್ತಿದ್ದಾರೆ ಎಂದು ಓ’ಬ್ರಿಯಾನ್  ಆರೋಪಿಸಿದರು.

ಈ SIR (ವಿಶೇಷ ತೀವ್ರ ಪರಿಷ್ಕರಣೆ) NRC (ರಾಷ್ಟ್ರೀಯ ನಾಗರಿಕರ ನೋಂದಣಿ) ಗೆ ಹಿಂಬಾಗಿಲಿನ ಪ್ರವೇಶವಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದು ಸರಿಯಾಗಿದೆ. ಇದು ದುಷ್ಟ ನಡೆ. 1935ರಲ್ಲಿ ನಾಜಿಗಳ ಆಡಳಿತದಲ್ಲಿ ಜನರು ಪೂರ್ವಜರ ಪಾಸ್‌ಗಳನ್ನು, ಅಂದರೆ ಗುರುತಿನ ಪುರಾವೆಗಳನ್ನು ಒದಗಿಸಬೇಕಾಗಿತ್ತು. ಇದು ನಾಜಿ ಪೂರ್ವಜರ ಪಾಸ್‌ನ ಹೊಸ ಆವೃತ್ತಿಯೇ? ನಾವು ಇಲ್ಲಿಂದ ಎಲ್ಲಿಗೆ ಹೋಗಬೇಕು?” ಎಂದು ಓ’ಬ್ರಿಯಾನ್ ಪ್ರಶ್ನಿಸಿದರು.

‘ಪೂರ್ವಜರ ಪಾಸ್‌ಪೋರ್ಟ್’ (Ahnenpass) ನಾಜಿ ಜರ್ಮನಿಯ ಆರ್ಯನ್ ಪ್ರಮಾಣಪತ್ರದ ಒಂದು ರೂಪವಾಗಿತ್ತು. ಇದು ಜರ್ಮನ್ ಜನರ ಆರ್ಯನ್ ವಂಶಾವಳಿಯನ್ನು ದಾಖಲಿಸಲು ಬಳಸಲಾಗುತ್ತಿತ್ತು.

ಬಿಜೆಪಿ ಕೇಂದ್ರ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಳ್ಳುವ ‘ಹವ್ಯಾಸವನ್ನು’ ಹೊಂದಿದೆ. ಚುನಾವಣಾ ಆಯೋಗದ ಮೂಲಕವೂ ಬಿಜೆಪಿ ವಿರೋಧ ಪಕ್ಷಗಳನ್ನು ಗುರಿಯಾಗಿಸುತ್ತಿದೆ. ಜೂನ್ 26ರಂದು, ಚುನಾವಣಾ ಆಯೋಗವು ಬಿಹಾರ ವಿಧಾನಸಭಾ ಚುನಾವಣೆಗಳಿಗೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುವುದಾಗಿ ಘೋಷಿಸಿತು, ಆದರೆ ನಿಜವಾದ ಗುರಿ ಬಂಗಾಳವಾಗಿದೆ ಎಂದು ತೃಣಮೂಲ ರಾಜ್ಯಸಭೆಯ ಉಪ ನಾಯಕಿ ಸಾಗರಿಕಾ ಘೋಷ್ ತಿಳಿಸಿದರು.

ನಾವೆಲ್ಲರೂ ನಮ್ಮ ಪೋಷಕರ ಜನನ ಪ್ರಮಾಣಪತ್ರಗಳನ್ನು ಇಟ್ಟುಕೊಂಡಿದ್ದೇವೆಯೇ? ಬಡವರು ಮತ್ತು ವಲಸೆ ಕಾರ್ಮಿಕರಿಗೆ ಪೋಷಕರ ಜನನ ಪ್ರಮಾಣಪತ್ರಗಳು ಹೇಗೆ ಸಿಗುತ್ತವೆ? ಈ ಮತದಾರರ ಪಟ್ಟಿ ಪರಿಷ್ಕರಣೆ ಒಂದು ದೊಡ್ಡ ಪಿತೂರಿ. ಇದು ಬಿಜೆಪಿಯ ತಂತ್ರ. ಈ ಮೂಲಕ ಅದು ತಮ್ಮ ಅಜೆಂಡಾ ಜಾರಿಗೆ ತರಲು ಪ್ರಯತ್ನಿಸುತ್ತಿದೆ. ಮತದಾರರ ಪಟ್ಟಿ ಪರಿಷ್ಕರಣೆ ಮೂಲಕ ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ನಾಗರಿಕರ ಮತದಾನದ ಹಕ್ಕುಗಳನ್ನು ಕಸಿದುಕೊಳ್ಳುತ್ತವೆ. ಇದನ್ನು ಈಗ ಏಕೆ ತರಲಾಗಿದೆ? ಎಂದು ಸಾಗರಿಕಾ ಪ್ರಶ್ನಿಸಿದರು.

ಬಿಜೆಪಿಗೆ ಬಂಗಾಳ ಚುನಾವಣೆಗಳನ್ನು ಕುಶಲತೆಯಿಂದ ನಿರ್ವಹಿಸುವುದು ಮತ್ತು ನಂತರ ಈ ಮಾದರಿಯನ್ನು ಭಾರತದಾದ್ಯಂತ ಪುನರಾವರ್ತಿಸುವುದು ಈ ಹೊಸ ಮತದಾರರ ಪಟ್ಟಿ ಪರಿಷ್ಕರಣೆಯ ಉದ್ದೇಶವಾಗಿದೆ. ಮತದಾರರನ್ನು ತೆಗೆದುಹಾಕಲು ಮತ್ತು ಅವರ ಪೌರತ್ವವನ್ನು ಕಸಿದುಕೊಳ್ಳಲು ಬಳಸಲಾಗುವ ಈ ಅಪಾಯಕಾರಿ ಮತ್ತು ದುಷ್ಟ ಕಾರ್ಯಕ್ರಮವನ್ನು ಚುನಾವಣಾ ಆಯೋಗವು ತಕ್ಷಣವೇ ಹಿಂತೆಗೆದುಕೊಳ್ಳಬೇಕು ಮತ್ತು ರದ್ದುಪಡಿಸಬೇಕು ಎಂದು ಹಿರಿಯ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಒತ್ತಾಯಿಸಿದರು.

‘ಭಾರತ-ಪಾಕ್ ಯುದ್ಧ ತಡೆದಿದ್ದು ನಾನೇ’: ಶ್ವೇತಭವನದಲ್ಲಿ ಪುನರುಚ್ಚರಿಸಿದ ಟ್ರಂಪ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...