Homeಮುಖಪುಟಎನ್‌ಎಸ್‌ಎ ಕಾಯ್ದೆಯಡಿ ಕಾನೂನು ವಿದ್ಯಾರ್ಥಿಯ ಬಂಧನ: ತಕ್ಷಣ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ಎನ್‌ಎಸ್‌ಎ ಕಾಯ್ದೆಯಡಿ ಕಾನೂನು ವಿದ್ಯಾರ್ಥಿಯ ಬಂಧನ: ತಕ್ಷಣ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್‌ಎಸ್‌ಎ) ಅಡಿ ಪ್ರಿವೆಂಟಿವ್ (ಮುಂಜಾಗೃತಿ ಬಂಧನ) ಬಂಧನ ಮಾಡಲಾಗಿರುವ ಕಾನೂನು ವಿದ್ಯಾರ್ಥಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ. ಈ ಬಂಧನ ‘ಸಂಪೂರ್ಣವಾಗಿ ಅಸಮರ್ಥನೀಯ’ ಎಂದು ಕೋರ್ಟ್ ಹೇಳಿದೆ.

ಮಧ್ಯ ಪ್ರದೇಶದ ಬೇತುಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಡಿಸಿರುವ ಜುಲೈ 11, 2024ರ ಬಂಧನ ಆದೇಶದಲ್ಲಿ ದೋಷ ಪತ್ತೆ ಹಚ್ಚಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು, ಪ್ರಕರಣದಲ್ಲಿ ವಿವರವಾದ ತಾರ್ಕಿಕ ಆದೇಶವನ್ನು ಹೊರಡಿಸುವುದಾಗಿ ತಿಳಿಸಿದೆ.

ಬೆತುಲ್‌ನ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರಾಧ್ಯಾಪಕರೊಂದಿಗಿನ ಘರ್ಷಣೆಯ ನಂತರ ನಂತರ ಪೊಲೀಸರು ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಕೊಲೆಯತ್ನ ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳನ್ನು ಆತನ ವಿರುದ್ಧ ಹಾಕಿದ್ದರು.

ವಿದ್ಯಾರ್ಥಿ ಜೈಲಿನಲ್ಲಿದ್ದಾಗ ಆತನ ವಿರುದ್ಧ ಎನ್‌ಎಸ್‌ಎ ನಿಬಂಧನೆಗಳ ಅಡಿಯಲ್ಲಿ ಪ್ರಿವೆಂಟಿವ್ ಬಂಧನ ಆದೇಶವನ್ನು ಹೊರಡಿಸಲಾಗಿತ್ತು. ನಂತರ ಈ ಆದೇಶವನ್ನು ದೃಢೀಕರಿಸಲಾಗಿತ್ತು. ಅಂದಿನಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಅದನ್ನು ವಿಸ್ತರಿಸಿಕೊಂಡು ಬರಲಾಗಿತ್ತು.

“ಜುಲೈ 11, 2024ರ ಮೊದಲ ಬಂಧನ ಆದೇಶವನ್ನು ಪರಿಶೀಲಿಸಿದ ನಂತರ, ಮೇಲ್ಮನವಿದಾರರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ, 1980ರ ಸೆಕ್ಷನ್ 3(2) ರ ಅಡಿಯಲ್ಲಿ ಪ್ರಿವೆಂಟಿವ್ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಆದಾಗ್ಯೂ, ಅವರನ್ನು ಪ್ರಿವೆಂಟಿವ್ ಬಂಧನಕ್ಕೆ ಒಳಪಡಿಸಿರುವ ಕಾರಣಗಳು ರಾಷ್ಟ್ರೀಯ ಭದ್ರತಾ ಕಾಯ್ದೆ, 1980ರ ಸೆಕ್ಷನ್ 3 ರ ಉಪವಿಭಾಗ (2) ರ ಅಗತ್ಯವನ್ನು ಪೂರೈಸುವುದಿಲ್ಲ ಎಂದು ನಾವು ಭಾವಿಸುತ್ತೇವೆ. ಆದ್ದರಿಂದ ಮೇಲ್ಮನವಿದಾರರ ಪ್ರಿವೆಂಟಿವ್ ಬಂಧನವು ಸಂಪೂರ್ಣವಾಗಿ ಅಸಮರ್ಥನೀಯವಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜೂನ್ 27, 2025) ರಂದು ನೀಡಿದ ಆದೇಶದಲ್ಲಿ ತಿಳಿಸಿದೆ.

ರಾಜ್ಯ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸದೆ ಜಿಲ್ಲಾಧಿಕಾರಿಗಳೇ ಸ್ವತಃ ನಿರ್ಧರಿಸಿರುವ ಮೇಲ್ಮನವಿ (ಕಾನೂನು ವಿದ್ಯಾರ್ಥಿ) ಪ್ರಾತಿನಿಧ್ಯವನ್ನು ಮತ್ತು ಇತರ ಕ್ರಿಮಿನಲ್ ಪ್ರಕರಣಗಳಲ್ಲಿ ಮೇಲ್ಮನವಿ ಸಲ್ಲಿಸಿದವರ ಬಂಧನದ ಸಂಗತಿಯನ್ನು ಮತ್ತು ನಿಯಮಿತ ಕ್ರಿಮಿನಲ್ ವಿಚಾರಣೆಯಲ್ಲಿ ಬಂಧನಕ್ಕೊಳಗಾಗಿದ್ದರೂ ಅವರನ್ನು ತಡೆಗಟ್ಟುವ ಬಂಧನಕ್ಕೆ ಏಕೆ ತೆಗೆದುಕೊಳ್ಳಲಾಯಿತು ಎಂಬುದನ್ನು ಗಣನೆಗೆ ತೆಗೆದುಕೊಳ್ಳದಿರುವುದು ಮುಂತಾದ ಇತರ ಕಾರಣಗಳಿಂದಾಗಿಯೂ ಸಹ ತಡೆಗಟ್ಟುವ ಬಂಧನವು ಅಸಮರ್ಥನೀಯವಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಇತರ ಹಲವು ಅಂಶಗಳನ್ನು ಉಲ್ಲೇಖಿಸಿರುವ ಸುಪ್ರೀಂ ಕೋರ್ಟ್, ಪ್ರಿವೆಂಟಿವ್ ಬಂಧನ ಅಸಮರ್ಥನೀಯ ಎಂದಿದೆ. ಪ್ರಸ್ತುತ ಭೋಪಾಲ್‌ನ ಕೇಂದ್ರ ಕಾರಾಗೃಹದಲ್ಲಿರುವ ವಿದ್ಯಾರ್ಥಿಯನ್ನು ಬೇರೆ ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಅಗತ್ಯವಿಲ್ಲದಿದ್ದರೆ ತಕ್ಷಣವೇ ಬಿಡುಗಡೆ ಮಾಡಬೇಕೆಂದು ಆದೇಶಿಸಿದೆ.

ಕಾನೂನು ವಿದ್ಯಾರ್ಥಿಯಾಗಿರುವ ಅನ್ನು ಅಲಿಯಾಸ್ ಅನಿಕೇತ್ ಅವರನ್ನು ಜುಲೈ 11, 2024ರ ಆದೇಶದ ಮೂಲಕ ಮೊದಲು ಪ್ರಿವೆಂಟಿವ್ ಬಂಧನಕ್ಕೆ ಒಳಪಡಿಸಲಾಗಿತ್ತು ಮತ್ತು ಈ ಬಂಧನ ಆದೇಶವನ್ನು ನಾಲ್ಕು ಬಾರಿ ವಿಸ್ತರಿಸಲಾಗಿತ್ತು. ಕೊನೆಯ ವಿಸ್ತರಣಾ ಆದೇಶದ ಪ್ರಕಾರ, ಅವರ ಪ್ರಿವೆಂಟಿವ್ ಬಂಧನ ಅವಧಿಯು ಜುಲೈ 12, 2025 ರವರೆಗೆ ಇರಲಿದೆ.

ರಾಜ್ಯ ಸರ್ಕಾರವು ಪ್ರಸ್ತುತಪಡಿಸಿರುವ ದಾಖಲೆಗಳ ಪ್ರಕಾರ, ರಾಷ್ಟ್ರೀಯ ಭದ್ರತಾ ಕಾಯ್ದೆ, 1980ರ ನಿಬಂಧನೆಗಳ ಅಡಿಯಲ್ಲಿ ಪ್ರಿವೆಂಟಿವ್ ಬಂಧನವನ್ನು ಸಮರ್ಥಿಸಲು ಕಾನೂನು ವಿದ್ಯಾರ್ಥಿಯ ವಿರುದ್ಧ ಪ್ರಸ್ತುತ ಕ್ರಿಮಿನಲ್ ಪ್ರಕರಣ ಸೇರಿದಂತೆ ಒಂಬತ್ತು ಕ್ರಿಮಿನಲ್ ಪೂರ್ವಾಪರಗಳನ್ನು ಉಲ್ಲೇಖಿಸಲಾಗಿದೆ ಎಂದು ನ್ಯಾಯಾಲಯವು ಕಂಡುಕೊಂಡಿದೆ ಎಂದು ನ್ಯಾಯಪೀಠ ಹೇಳಿದೆ.

ಆದಾಗ್ಯೂ, ವಿದ್ಯಾರ್ಥಿ ಪರ ವಕೀಲರು, ಅವರ ವಿರುದ್ದದ ಹಿಂದಿನ ಎಂಟು ಪ್ರಕರಣಗಳ ಪೈಕಿ ಐದು ಪ್ರಕರಣಗಳಲ್ಲಿ ಖುಲಾಸೆಗೊಳಿಸಲಾಗಿದೆ ಮತ್ತು ಒಂದು ಪ್ರಕರಣದಲ್ಲಿ, ಅವರು ತಪ್ಪಿತಸ್ಥರೆಂದು ಸಾಬೀತಾಗಿದೆ. ಆದರೆ ಶಿಕ್ಷೆ ಕೇವಲ ದಂಡ ವಿಧಿಸುವಿಕೆ ಎಂದು ತಿಳಿಸಿದ್ದಾರೆ.

ಉಳಿದ ಎರಡು ಪ್ರಕರಣಗಳು ಪ್ರಸ್ತುತ ಬಾಕಿ ಉಳಿದಿವೆ ಮತ್ತು ಕಾನೂನು ವಿದ್ಯಾರ್ಥಿ ಆ ವಿಷಯಗಳಲ್ಲಿ ಜಾಮೀನಿನ ಮೇಲೆ ಇದ್ದಾರೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಕಳೆದ ವರ್ಷ ವಿದ್ಯಾರ್ಥಿ ವಿರುದ್ಧ ದಾಖಲಾಗಿದ್ದ ಪ್ರಸ್ತುತ ಕ್ರಿಮಿನಲ್ ಪ್ರಕರಣದಲ್ಲಿ, ಜನವರಿ 28, 2025 ರಂದು ಅವರಿಗೆ ಜಾಮೀನು ನೀಡಲಾಗಿದೆ. ಪ್ರಸ್ತುತ ಅವರು ಪ್ರಿವೆಂಟಿವ್ ಬಂಧನದ ಕಾರಣಕ್ಕೆ ಮಾತ್ರ ಜೈಲಿನಲ್ಲಿದ್ದಾರೆ ಎಂಬುವುದನ್ನು ಸುಪ್ರೀಂ ಕೋರ್ಟ್ ಗಮನಿಸಿದೆ.

ಫೆಬ್ರವರಿ 25ರಂದು, ಮಧ್ಯಪ್ರದೇಶ ಹೈಕೋರ್ಟ್ ವಿದ್ಯಾರ್ಥಿಯ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಜಾಗೊಳಿಸಿತ್ತು. ವಿದ್ಯಾರ್ಥಿ ದೀರ್ಘ ಕ್ರಿಮಿನಲ್ ಪ್ರಕರಣಗಳ ಇತಿಹಾಸವನ್ನು ಹೊಂದಿದ್ದಾರೆ ಮತ್ತು ಸಾರ್ವಜನಿಕ ಶಾಂತಿಗೆ ಅಪಾಯವನ್ನುಂಟುಮಾಡುವ ನಿಯಮಿತ ಅಪರಾಧಿ ಎಂದು ಹೇಳಿತ್ತು.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ನಾಗರಿಕರ ಮತದಾನದ ಹಕ್ಕು ಕಸಿಯುವ ಬಿಜೆಪಿಯ ಹುನ್ನಾರ-ಟಿಎಂಸಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...