Homeಕರ್ನಾಟಕದೇವನಹಳ್ಳಿ ಭೂಮಿ ಹೋರಾಟ: ಜು.4ರಂದು ಬೃಹತ್ 'ನಾಡ ಉಳಿಸಿ ಸಮಾವೇಶ'

ದೇವನಹಳ್ಳಿ ಭೂಮಿ ಹೋರಾಟ: ಜು.4ರಂದು ಬೃಹತ್ ‘ನಾಡ ಉಳಿಸಿ ಸಮಾವೇಶ’

- Advertisement -
- Advertisement -

ದೇವನಹಳ್ಳಿ ರೈತರ ಭೂ ಸ್ವಾಧೀನ ಕೈ ಬಿಡುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಸಲುವಾಗಿ ಜುಲೈ 4ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ‘ನಾಡ ಉಳಿಸಿ ಸಮಾವೇಶ’ ನಡೆಸಲು ನಿರ್ಧರಿಸಲಾಗಿದೆ.

ಭೂ ಸ್ವಾಧೀನ ವಿರೋಧಿಸಿ ‘ಭೂಮಿ ಸತ್ಯಾಗ್ರಹ’ ನಡೆಯುತ್ತಿರುವ ಫ್ರೀಡಂ ಪಾರ್ಕ್‌ನಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಂಯುಕ್ತ ಹೋರಾಟ ಕರ್ನಾಟ, ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳ ಮುಖಂಡರು,” ಸಮಾವೇಶದಲ್ಲಿ ರಾಜ್ಯದ ಎಲ್ಲಾ ತಾಲೂಕುಗಳಿಂದಲೂ ಸಮಾನ ಮನಸ್ಕರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ” ಎಂದು ತಿಳಿಸಿದರು.

ಜುಲೈ 4ರಂದು ಸರ್ಕಾರ ನಿಟ್ಟುಸಿರು ಬಿಡುವ ತೀರ್ಮಾನ ತೆಗೆದುಕೊಂಡರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸರ್ಕಾರವನ್ನು ಅಭಿನಂದಿಸಿ ಇಲ್ಲಿಂದ ಹೊರಡುತ್ತೇವೆ. ಒಂದು ವೇಳೆ ಮತ್ತೊಮ್ಮೆ ನ್ಯಾಯ ನಿರಾಕರಣೆ ನಡೆದಲ್ಲಿ ಇನ್ನಷ್ಟು ಕಠಿಣ ಹೋರಾಟದ ದಿಟ್ಟ ತೀರ್ಮಾನವನ್ನು ಅಂದು ತೆಗೆದುಕೊಳ್ಳುತ್ತೇವೆ ಎಂದರು.

ರಾಜ್ಯಾದ್ಯಂತ ದೇವನಹಳ್ಳಿಯ ರೈತರ ಪರ ಧ್ವನಿ ಕೇಳಿ ಬಂದಿದೆ. ಸಿಎಂ ಸಿದ್ದರಾಮಯ್ಯ ಅವರು ಜುಲೈ 4ರಂದು ಸಮಗ್ರ ಸಭೆ ನಡೆಸುವ ಆಶ್ವಾಸನೆ ನೀಡಿದ್ದಾರೆ. ಈ ನಡುವೆ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಪತ್ರಿಕೆಯಲ್ಲಿ ಲೇಖನ ಬರೆದು ಭೂ ಸ್ವಾಧೀನದ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ, ಜಾಹೀರಾತು ನೀಡಿ ಹಳೆ ಪ್ರಸ್ತಾಪವನ್ನೇ ಪುನರುಚ್ಚರಿಸಿದ್ದಾರೆ. ಇದನ್ನು ಗಮನಿಸಿದರೆ ಜುಲೈ4ರ ಸಭೆ ಮತ್ತೊಂದು ಮರೀಚಿಕೆಯಾಗುವ ಸಾಧ್ಯತೆ ಇದೆ ಎಂದು ಸಂಯುಕ್ತ ಹೋರಾಟದ ಮುಖಂಡರು ಹೇಳಿದರು.

ಜುಲೈ2ರಂದು ನಂದಿ ಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ದೇವನಹಳ್ಳಿ ಭೂ ಸಮಸ್ಯೆ ವಿಶೇಷ ಅಜೆಂಡಾ ಆಗಬೇಕು. ದೇವನಹಳ್ಳಿಯ ಮೂಲಕ ಬೆಟ್ಟಕ್ಕೆ ಹೋದವರು ಬರಿಗೈಯಲ್ಲಿ ಬಾರದಿರಲಿ ಎಂದು ಸಂಪುಟ ಸಚಿವರಲ್ಲಿ ಮನವಿ ಮಾಡಿದರು.

ದೇವನಹಳ್ಳಿ ವಿವಾದದ ನಿಜವಾದ ಚಿತ್ರಣ ಬಹುತೇಕ ಸಚಿವರು ಮತ್ತು ಶಾಸಕರುಗಳಿಗೆ ಸ್ಪಷ್ಟವಾಗಿಲ್ಲ. ಹಾಗಾಗಿ, ಹೋರಾಟಗಾರರು ಆಯಾ ಜಿಲ್ಲೆಗಳ ಸಚಿವರು ಮತ್ತು ಶಾಸಕರನ್ನು ಭೇಟಿಯಾಗಿ ಅವರಿಗೆ ಮಾಹಿತಿ ನೀಡಿ, ರೈತಪರ ನಿಲುವು ತೆಗೆದುಕೊಳ್ಳುವಂತೆ ಮನವೊಲಿಸಲು ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಹೋರಾಟ ಸಮಿತಿಯ ಪರವಾಗಿ ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ, ಎಸ್‌.ವರಲಕ್ಷ್ಮಿ, ನೂರ್ ಶ್ರೀಧರ್, ವಿ.ನಾಗರಾಜ್, ಡಿ.ಎಚ್‌ ಪೂಜಾರ್, ಕಾಮ್ರೇಡ್ ನಿರ್ಮಲ, ಶಿವಪ್ರಕಾಶ್, ಪಿ.ವಿ ಲೋಕೇಶ್, ಯು. ಬಸವರಾಜ್, ದೇವಿ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...