Homeಮುಖಪುಟಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

ಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ವೇಳೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಮೇಲೆ ಝೀ ನ್ಯೂಸ್ ಮತ್ತು ನ್ಯೂಸ್ 18 ಇಂಡಿಯಾ ವಿರುದ್ದ ಎಫ್‌ಐಆರ್ ದಾಖಲಿಸುವಂತೆ ಕಾಶ್ಮೀರದ ಪೂಂಚ್ ನ್ಯಾಯಾಲಯ ಶನಿವಾರ (ಜೂ.28) ನಿರ್ದೇಶಿಸಿದೆ.

ಮೇ 7ರಂದು ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಸ್ಥಳೀಯ ಶಿಕ್ಷಕ ಖಾರಿ ಮೊಹಮ್ಮದ್ ಇಕ್ಬಾಲ್ ಅವರನ್ನು ಎರಡೂ ರಾಷ್ಟ್ರೀಯ ಚಾನೆಲ್‌ಗಳು ಲಷ್ಕರ್-ಎ-ತೋಯ್ಬಾ ಜೊತೆ ಸಂಬಂಧ ಹೊಂದಿರುವ ಮತ್ತು ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿರುವ “ಪಾಕಿಸ್ತಾನಿ ಭಯೋತ್ಪಾದಕ” ಎಂದು ತಪ್ಪಾಗಿ ಹೇಳಿವೆ ಎಂದು ಆರೋಪಿಸಿ ವಕೀಲ ಶೇಖ್ ಮೊಹಮ್ಮದ್ ಸಲೀಮ್ ಸಲ್ಲಿಸಿದ ದೂರಿನ ಮೇರೆಗೆ ಸಬ್-ನ್ಯಾಯಾಧೀಶ/ವಿಶೇಷ ಮೊಬೈಲ್ ಮ್ಯಾಜಿಸ್ಟ್ರೇಟ್ ಪೂಂಚ್ ಶಫೀಕ್ ಅಹ್ಮದ್ ಆದೇಶ ಹೊರಡಿಸಿದ್ದಾರೆ ಎಂದು barandbench.com ವರದಿ ಮಾಡಿದೆ.

ಮೃತ ಖಾರಿ ಇಕ್ಬಾಲ್ ಅವರು ಪೂಂಚ್‌ನ ಜಾಮಿಯಾ ಝಿಯಾ-ಉಲ್-ಉಲೂಮ್‌ನಲ್ಲಿ ಧಾರ್ಮಿಕ ಶಿಕ್ಷಕರಾಗಿದ್ದರು ಮತ್ತು ಪಾಕಿಸ್ತಾನದ ಶೆಲ್ ದಾಳಿಗೆ ಬಲಿಯಾದ ಭಾರತ ನಾಗರಿಕ ಎಂದು ವಕೀಲ ಸಲೀಮ್ ನ್ಯಾಯಾಲಯಕ್ಕೆ ಸಲ್ಲಿಸಿರುವ ದೂರಿನಲ್ಲಿ ಹೇಳಿದ್ದಾರೆ.

ಝೀ ನ್ಯೂಸ್ ಮತ್ತು ನ್ಯೂಸ್ 18 ಇಂಡಿಯಾ ಆಪರೇಷನ್ ಸಿಂಧೂರ್‌ ಕುರಿತು ನೇರ ಪ್ರಸಾರ ವರದಿಗಳನ್ನು ಮಾಡುವಾಗ ಖಾರಿ ಇಕ್ಬಾಲ್ ಅವರನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕೊಲ್ಲಲ್ಪಟ್ಟ ‘ಕುಖ್ಯಾತ ಕಮಾಂಡರ್’ ಎಂದು ಬ್ರಾಂಡ್ ಮಾಡುವ ಕಥೆಗಳನ್ನು ಪ್ರಸಾರ ಮಾಡಿದೆ. ಯಾವುದೇ ಅಧಿಕೃತ ಮೂಲಗಳ ಮಾಹಿತಿ ಪಡೆಯದೆ ಖಾರಿ ಇಕ್ಬಾಲ್ ಅವರಿಗೆ ಭಯೋತ್ಪಾದನೆಯೊಂದಿಗೆ ಸಂಬಂಧ ಕಲ್ಪಿಸಿವೆ ಎಂದಿದ್ದಾರೆ.

ಖಾರಿ ಇಕ್ಬಾಲ್ ಅವರ ಹೆಸರು ಮತ್ತು ಫೋಟೋಗಳು ಇರುವ ವರದಿಯನ್ನು ನಂತರ ಹಿಂಪಡೆಯಲಾಗಿದೆ. ಆದರೆ, ಅವರ ಕುರಿತ ಸುಳ್ಳು ಸುದ್ದಿಯು ಅವರ ಕುಟುಂಬದ ಹೆಸರಿಗೆ ಕಳಂಕ ತಂದಿದೆ ಎಂದು ವಕೀಲ ಸಲೀಮ್ ಹೇಳಿದ್ದಾರೆ.

ವಿಚಾರಣೆ ವೇಳೆ, ವರದಿಯು ದೆಹಲಿಯಿಂದ ಪ್ರಸಾರಗೊಂಡಿರುವ ಕಾರಣ, ಈ ವಿಷಯ ಪೂಂಚ್ ನ್ಯಾಯಾಲಯದ ಪ್ರಾದೇಶಿಕ ವ್ಯಾಪ್ತಿಗೆ ಬರುವುದಿಲ್ಲ ಎಂದು ಪೊಲೀಸರು ವಾದಿಸಿದ್ದರು.

ಆದರೆ, ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ನ ಸೆಕ್ಷನ್ 199ರ ಅಡಿಯಲ್ಲಿ, ಮಾನನಷ್ಟದಂತಹ ಕೃತ್ಯದ ಪರಿಣಾಮವು ಬೇರೆ ಸ್ಥಳದಲ್ಲಿ ಸಂಭವಿಸಿದಾಗ, ನ್ಯಾಯವ್ಯಾಪ್ತಿಯು ಎರಡೂ ಸ್ಥಳಗಳಲ್ಲಿ ಮಾನ್ಯವಾಗಿರುತ್ತದೆ ಎಂದು ಹೇಳಿ ಪೊಲೀಸರ ಆಕ್ಷೇಪಣೆಯನ್ನು ತಿರಸ್ಕರಿಸಿದೆ. ಮೃತರು ವಾಸಿಸುತ್ತಿದ್ದ, ಕೆಲಸ ಮಾಡುತ್ತಿದ್ದ ಮತ್ತು ಹುತಾತ್ಮರಾದ ಪೂಂಚ್‌ನಲ್ಲಿ ಹಾನಿ ಸಂಭವಿಸಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಮಾಧ್ಯಮಗಳ ಜವಾಬ್ದಾರಿಯ ಬಗ್ಗೆಯೂ ನ್ಯಾಯಾಲಯ ಅವಲೋಕನಗಳನ್ನು ಮಾಡಿದೆ. ಸಂವಿಧಾನದ 19(1)(a)ವಿಧಿಯ ಅಡಿಯಲ್ಲಿ ಪತ್ರಿಕಾ ರಕ್ಷಣೆ ಇದೆಯಾದರೂ, ಈ ಹಕ್ಕು 19(2) ವಿಧಿಯ ಅಡಿಯಲ್ಲಿ ಸಮಂಜಸವಾದ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ. ವಿಶೇಷವಾಗಿ ಮಾನನಷ್ಟ, ಸಾರ್ವಜನಿಕ ಸುವ್ಯವಸ್ಥೆ ಮತ್ತು ಸಭ್ಯತೆಯನ್ನು ಒಳಗೊಂಡ ಪ್ರಕರಣಗಳಲ್ಲಿ ಎಂದು ನ್ಯಾಯಾಲಯ ಹೇಳಿದೆ.

“ಯಾವುದೇ ಪರಿಶೀಲನೆ ಇಲ್ಲದೆ” ಮೃತ ನಾಗರಿಕ ಶಿಕ್ಷಕನನ್ನು ಭಯೋತ್ಪಾದಕ ಎಂದು ಬ್ರಾಂಡ್ ಮಾಡುವುದನ್ನು ನ್ಯಾಯಾಧೀಶರು ಪತ್ರಿಕೋದ್ಯಮ ಗಂಭೀರ ದುಷ್ಕೃತ್ಯ ಎಂದು ಕರೆದಿದ್ದು, ಇದು ಸಾರ್ವಜನಿಕ ಅಶಾಂತಿಗೆ ಉತ್ತೇಜನ ನೀಡುವ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಹಾನಿ ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ.

ಸುದ್ದಿ ವಾಹಿನಿಗಳು ನಂತರ ಕ್ಷಮೆಯಾಚಿಸಿದ್ದರೂ, 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯೊಂದಿಗೆ ಖಾರಿ ಇಕ್ಬಾಲ್ ಅವರಿಗೆ ಸಂಬಂಧ ಕಲ್ಪಿಸಿದ ಅವರ ಆರಂಭಿಕ ಪ್ರಸಾರವು ವಾಸ್ತವಿಕ ಪರಿಶೀಲನೆಯಿಲ್ಲದೆ ಮಾಡಲಾಗಿದೆ. ಇದು ಮಾನನಷ್ಟ ಉಂಟು ಮಾಡಿದೆ. ಸಾರ್ವಜನಿಕ ಅಶಾಂತಿ ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸಿದೆ ಎಂದು ನ್ಯಾಯಾಲಯವು ಹೇಳಿದೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 353(2),356, ಮತ್ತು 196 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ, 2000ರ ಸೆಕ್ಷನ್ 66 ರ ಅಡಿಯಲ್ಲಿ ಇದು ಶಿಕ್ಷಾರ್ಹ ಅಪರಾಧಗಳಾಗಿವೆ ಎಂದಿದೆ.

ಸುಳ್ಳು ಸುದ್ದಿ ಪ್ರಸಾರಕ್ಕೆ ಕ್ಷಮೆಯಾಚನೆ ಸಾಕಾಗುವುದಿಲ್ಲ ಎಂದಿರುವ ನ್ಯಾಯಾಲಯ, ಗುರುತಿಸಬಹುದಾದ ಅಪರಾಧ ಬಹಿರಂಗವಾದ ನಂತರ ಕ್ರಮ ಕೈಗೊಳ್ಳುವುದು ಪೊಲೀಸರ ಕರ್ತವ್ಯ ಎಂದು ಒತ್ತಿ ಹೇಳಿದೆ.

ಅದರಂತೆ, ಸಂಬಂಧಪಟ್ಟ ಸ್ಟೇಷನ್ ಹೌಸ್ ಅಧಿಕಾರಿಗೆ ಏಳು ದಿನಗಳಲ್ಲಿ ಎಫ್‌ಐಆರ್ ದಾಖಲಿಸಿ ಅನುಸರಣಾ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ.

Courtesy : barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...