Homeಕರ್ನಾಟಕಜುಲೈ 4ಕ್ಕೆ 'ನಾಡ ಉಳಿಸಿ ಸಮಾವೇಶ': ದೇವನಹಳ್ಳಿ ಭೂಸ್ವಾಧೀನ ಕೈಬಿಡುವಂತೆ ರೈತರಿಂದ ಆಗ್ರಹ

ಜುಲೈ 4ಕ್ಕೆ ‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ಭೂಸ್ವಾಧೀನ ಕೈಬಿಡುವಂತೆ ರೈತರಿಂದ ಆಗ್ರಹ

- Advertisement -
- Advertisement -

ಬೆಂಗಳೂರು: ದೇವನಹಳ್ಳಿಯ ಚನ್ನರಾಯಪಟ್ಟಣದ ಫಲವತ್ತಾದ ಕೃಷಿ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಬಲವಂತವಾಗಿ ಭೂಸ್ವಾಧೀನಪಡಿಸಿಕೊಳ್ಳುತ್ತಿರುವುದನ್ನು ವಿರೋಧಿಸಿ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ರೈತ ಹೋರಾಟಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಂಯುಕ್ತ ಹೋರಾಟ ಕರ್ನಾಟಕ ಹಮ್ಮಿಕೊಂಡಿದ್ದ ‘ದೇವನಹಳ್ಳಿ ಚಲೋ’ ಸಂದರ್ಭದಲ್ಲಿ ನಡೆದ ಪೊಲೀಸ್ ದಾಳಿಯ ನಂತರ, ರೈತರು ಮತ್ತು ಹೋರಾಟಗಾರರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋರಾತ್ರಿ ಭೂ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇಂದು (ಭಾನುವಾರ) ಭೂ ಸತ್ಯಾಗ್ರಹದ ‘ಭೂಮಿ ಬಿಡಾರ’ದ ಕಾಂ. ಬಯ್ಯಾರೆಡ್ಡಿ ವೇದಿಕೆಯಲ್ಲಿ ರೈತ ಹೋರಾಟಗಾರರು ಹಾಗೂ ವಿವಿಧ ಚಳವಳಿಗಳ ಮುಖಂಡರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಜುಲೈ 4ರಂದು ಮುಖ್ಯಮಂತ್ರಿಗಳು ಕರೆದಿರುವ ಸಭೆಯಲ್ಲಿ ದೇವನಹಳ್ಳಿ ಭೂ ಸಮಸ್ಯೆಯನ್ನು ಸಂಪೂರ್ಣವಾಗಿ ಬಗೆಹರಿಸುವಂತಹ ನಿರ್ಧಾರ ಕೈಗೊಳ್ಳಬೇಕೆಂದು ಈ ವೇಳೆ ಸರ್ಕಾರವನ್ನು ಆಗ್ರಹಿಸಲಾಯಿತು.

ಸಚಿವರ ಮೇಲೆ ರೈತಪರ ನಿಲುವು ವಿಶ್ವಾಸ: ಬಡಗಲಪುರ ನಾಗೇಂದ್ರ

ಕರ್ನಾಟಕ ರಾಜ್ಯ ರೈತ ಸಂಘದ ನಾಯಕರು ಹಾಗೂ ಸಂಯುಕ್ತ ಹೋರಾಟದ ಸಂಚಾಲಕರೂ ಆದ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, “ಜುಲೈ 2ರಂದು ಕ್ಯಾಬಿನೆಟ್ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕ್ಯಾಬಿನೆಟ್‌ನ ಎಲ್ಲ ಸಚಿವರೂ ರೈತರ ಪರವಾದ ನಿರ್ಣಯಕ್ಕೆ ಬರುತ್ತಾರೆಂಬ ವಿಶ್ವಾಸವಿದೆ” ಎಂದರು.

“ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನೂ ಒಳಗೊಂಡಂತೆ, ಕ್ಯಾಬಿನೆಟ್‌ನ ಎಲ್ಲ ಸಚಿವರೂ ಚಳವಳಿಗಳ ಮಹತ್ವವೇನು ಎಂಬುದನ್ನು ಅರಿತವರೇ ಆಗಿದ್ದಾರೆ. ಒಂದು ವೇಳೆ ಸರ್ಕಾರದ ನಿರ್ಧಾರ ರೈತರ ವಿರುದ್ಧ ಬಂದರೆ ಈ ಚಳವಳಿ ಇನ್ನಷ್ಟು ತೀವ್ರವಾಗಿ ಮುಂದುವರೆಯಲಿದೆ. ಜುಲೈ 4ರಂದು ರೈತರು, ರೈತಮಹಿಳೆಯರು, ಕಾರ್ಮಿಕರು, ವಿದ್ಯಾರ್ಥಿಗಳು, ಚಿಂತಕರು ಸೇರಿದಂತೆ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಫ್ರೀಡಂ ಪಾರ್ಕ್‌ನಲ್ಲಿ ಸೇರಲಿದ್ದಾರೆ. ರಾಷ್ಟ್ರೀಯ ನಾಯಕರು ಅಂದು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ” ಎಂದು ಮಾಹಿತಿ ನೀಡಿದರು.

ಇದು ಭೂಮಿ ಉಳಿಸಿಕೊಳ್ಳಲು ರೈತರ ಬದುಕಿನ ಹೋರಾಟ: ನೂರ್ ಶ್ರೀಧರ್

ನಂತರ ಮಾತನಾಡಿದ ಹೋರಾಟಗಾರ ನೂರ್ ಶ್ರೀಧರ್ ಅವರು, “ಇಂದು ರಾಜ್ಯ ಸರ್ಕಾರದ ಮೇಲೆ ದೊಡ್ಡ ಚಾರಿತ್ರಿಕ ಹೊಣೆಗಾರಿಕೆಯಿದೆ. ಈಗಲೂ ಕ್ಯಾಬಿನೆಟ್‌ನ ಹಲವು ಸಚಿವರು ಈ ಹೋರಾಟದಲ್ಲಿರುವ ರೈತರನ್ನು ಹೆಚ್ಚಿನ ಬೆಲೆಗೆ ಭೂಮಿ ಮಾರಿಕೊಳ್ಳಲು ಕಾದಿರುವವರೆಂದು ಪರಿಗಣಿಸುತ್ತಿದ್ದಾರೆಯೇ ಹೊರತು, ಈ ರೈತ ಕುಟುಂಬಗಳ ನೈತಿಕ ಶಕ್ತಿಯನ್ನು ಅರ್ಥಮಾಡಿಕೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಇದು ಪ್ರಾಮಾಣಿಕವಾಗಿ ಭೂಮಿ ಉಳಿಸಿಕೊಳ್ಳಲಿಕ್ಕಾಗಿ ರೈತರು ನಡೆಸುತ್ತಿರುವ ಬದುಕಿನ ಹೋರಾಟ. ಈ ಹೋರಾಟದಲ್ಲಿ ಸತ್ವ ಇಲ್ಲದಿದ್ದಿದ್ದರೆ, ಒಟ್ಟು 13 ಹಳ್ಳಿಗಳಲ್ಲಿ 3 ಹಳ್ಳಿಗಳ ರೈತರ ಜಮೀನನ್ನು ನೀವು ಯೋಜನೆಯಿಂದ ಹೊರಗಿಟ್ಟಾಗ ಇವರಲ್ಲಿ ಬಿರುಕು ಬಂದಿರುತ್ತಿತ್ತು. ಆದರೆ ಇಂದಿನವರೆಗೂ ಆ ಹಳ್ಳಿಗಳ ರೈತರೂ ಕೂಡಾ ಪ್ರತಿದಿನ ಈ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದಾರೆ, ಯಾಕೆಂದು ನೀವು ಯೋಚಿಸಬೇಕು. ಇದನ್ನು ಅರ್ಥಮಾಡಿಕೊಂಡು, ಜುಲೈ 2ರಂದು ನಂದಿಬೆಟ್ಟದಲ್ಲಿ ನಡೆಯುತ್ತಿರುವ ಕ್ಯಾಬಿನೆಟ್‌ನಲ್ಲಿ ದೇವನಹಳ್ಳಿಯ ಮೂಲಕವೇ ಹೋಗಿ ಬರುತ್ತಾ ಅಲ್ಲಿನ ರೈತರ ಪರವಾದ ನಿರ್ಧಾರ ತೆಗೆದುಕೊಳ್ಳಿ, ಇಲ್ಲದಿದ್ದರೆ ನಾಡಿನ ಜನತೆಗೆ ಸರ್ಕಾರ ದೊಡ್ಡ ದ್ರೋಹ ಮಾಡಿದಂತಾಗುತ್ತದೆ” ಎಂದು ನೂರ್ ಶ್ರೀಧರ್ ಆಗ್ರಹಿಸಿದರು.

ಸರ್ಕಾರದ ಕೈಗಾರಿಕಾ ನೀತಿ ದೋಷಯುಕ್ತ: ಯು. ಬಸವರಾಜ್

ಕರ್ನಾಟಕ ಪ್ರಾಂತ ರೈತ ಸಂಘದ ಯು. ಬಸವರಾಜ್ ಅವರು ಮಾತನಾಡಿ, “ಸರ್ಕಾರದ ಕೈಗಾರಿಕಾ ನೀತಿ ದೋಷಯುಕ್ತವಾಗಿದೆ, ಇದು ನೈಜ ಅಭಿವೃದ್ಧಿಯ ಪರವಾಗಿಲ್ಲ, ಲೂಟಿಕೋರರ ಪರವಾಗಿದೆ. ಸರ್ಕಾರದ ಅಧೀನದ ಕೆಐಎಡಿಬಿ ಮತ್ತು ಅನೇಕ ಸಚಿವರು ಕೈಗಾರಿಕೆಗಳ ಹೆಸರಿನಲ್ಲಿ ವಶಪಡಿಸಿಕೊಂಡ ಭೂಮಿ ವೇದಾಂತದಂತಹ ಕಾರ್ಪೊರೇಟ್‌ಗಳ ಪಾಲಾಗುತ್ತಿದೆ. ಅಲ್ಲಿ ಯಾವುದೇ ದೊಡ್ಡ ಸಂಖ್ಯೆಯ ಉದ್ಯೋಗ ತರುವ ಯೋಜನೆಗಳು ಬರುತ್ತಿಲ್ಲ” ಎಂದು ಆರೋಪಿಸಿದರು.

“ಉತ್ತರ ಕರ್ನಾಟಕದಲ್ಲಿ ನೀರಾವರಿಯಿಲ್ಲದ, ವ್ಯವಸಾಯಕ್ಕೆ ಯೋಗ್ಯವಲ್ಲದ ಭೂಮಿಯಲ್ಲಿ ಕೈಗಾರಿಕೆ ಸ್ಥಾಪಿಸಿ. ಅಲ್ಲಿ ಈಗಾಗಲೇ ನೀವು ಸ್ವಾಧೀನಪಡಿಸಿಕೊಂಡಿರುವ 50,000 ಎಕರೆಗಿಂತ ಹೆಚ್ಚು ಭೂಮಿ, ರೈತರು ಒಪ್ಪಿಕೊಟ್ಟಿರುವಂಥದ್ದು ನಿಮ್ಮ ಕೈಯಲ್ಲಿದೆ, ಅಲ್ಲಿ ಕೈಗಾರಿಕೆ ಸ್ಥಾಪಿಸಿ” ಎಂದು ಅವರು ಒತ್ತಾಯಿಸಿದರು.

ಇದು ಜನರ ಹಿತಾಸಕ್ತಿಗೆ ವಿರುದ್ಧ: ವಿ. ನಾಗರಾಜ್

ದಲಿತ ಚಳವಳಿಯ ನಾಯಕರಾದ ವಿ. ನಾಗರಾಜ್‌ರವರು ಮಾತನಾಡಿ, “ರೈತರು ಮತ್ತು ಕರ್ನಾಟಕದ ಜನರ ಆಗ್ರಹವನ್ನು ನೀವು ಅರ್ಥಮಾಡಿಕೊಳ್ಳಬೇಕು, ನಾವು ಕೈಗಾರಿಕೆ ವಿರೋಧಿಗಳಲ್ಲ, ಆದರೆ ಇಲ್ಲಿ ಭೂಸ್ವಾಧೀನ ಜನರ ಹಿತಾಸಕ್ತಿಗೆ ವಿರುದ್ಧವಾಗಿದೆ. ಅವರ ಬದುಕಿನ ಪರವಾಗಿ ಭಾರೀ ಕೈಗಾರಿಕಾ ಸಚಿವರಾದ ಎಂ.ಬಿ ಪಾಟೀಲ್ ಅವರು ನಿರ್ಣಯ ಕೈಗೊಳ್ಳಬೇಕು. ಇಲ್ಲದಿದ್ದರೆ ಈ ಹುದ್ದೆಯಲ್ಲಿರಲು ಅನರ್ಹರೆಂದು ಒಪ್ಪಿಕೊಂಡು ರಾಜೀನಾಮೆ ನೀಡಬೇಕೆಂದು ನಾವು ಕೇಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಕಿಸಾನ್ ಸಭಾದ ಪರವಾಗಿ ಪಿ.ವಿ ಲೋಕೇಶ್, ಎಐಸಿಸಿಟಿಯು ಪರವಾಗಿ ನಿರ್ಮಲಾ ಮೊದಲಾದವರು ಮಾತನಾಡಿದರು. ಸಿಐಟಿಯುನ ವರಲಕ್ಷ್ಮಿ ಅವರು, “ಒಂದಲ್ಲಾ ಒಂದು ಕಾರಣ ನೀಡಿ, ನೋಟಿಫಿಕೇಶನ್‌ ಅನ್ನು ರದ್ದು ಮಾಡದೆ ಮುಂದೂಡಿದಲ್ಲಿ ಪರಿಣಾಮಗಳು ಗಂಭೀರವಾಗುವುದು ಶತಸಿದ್ಧ. ಇದನ್ನು ತಡೆಯಬೇಕಾದರೆ ಇಡೀ ರಾಜ್ಯ ಮತ್ತೊಮ್ಮೆ ಗಟ್ಟಿಯಾಗಿ ಕೂಗಿ ಹೇಳಬೇಕಿರುವ ಮತ್ತು ಇಡೀ ಸರ್ಕಾರ ಕಣ್ಣು ತೆರೆಯಲೇಬೇಕಾದ ವಾತಾವರಣ ನಿರ್ಮಿಸುವ ಅಗತ್ಯವಿದೆ. ಅಂತಿಮ ಗೆಲುವಂತೂ ನ್ಯಾಯದ್ದೇ ಆಗಲಿದೆ. ಅದಕ್ಕಾಗಿ ಹೋರಾಟ ಸಮಿತಿಯು ಈ ಕೆಳಕಂಡ ತೀರ್ಮಾನಗಳನ್ನು ತೆಗೆದುಕೊಂಡಿದೆ” ಎಂದು ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದರು:

  • ಜುಲೈ 2 ರಂದು ನಂದಿಬೆಟ್ಟದಲ್ಲಿ ನಡೆಯುತ್ತಿರುವ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ‘ದೇವನಹಳ್ಳಿ ಭೂ ಸಮಸ್ಯೆ’ ವಿಶೇಷ ಅಜೆಂಡಾ ಆಗಬೇಕು ಎಂದು ಒತ್ತಾಯಿಸುತ್ತಿದ್ದೇವೆ. ದೇವನಹಳ್ಳಿಯ ಮೂಲಕವೇ ಬೆಟ್ಟಕ್ಕೆ ಹೋದವರು ಬರಿಗೈಯಲ್ಲಿ ಬಾರದಿರಿ ಎಂದು ಕ್ಯಾಬಿನೆಟ್ ಸಚಿವರುಗಳಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇವೆ.
  • ದೇವನಹಳ್ಳಿ ವಿವಾದದ ನಿಜವಾದ ಚಿತ್ರಣ ಬಹುತೇಕ ಸಚಿವರುಗಳಿಗೆ ಹಾಗೂ ಶಾಸಕರುಗಳಿಗೆ ಸ್ಪಷ್ಟವಾಗಿಲ್ಲ. ನಿಮ್ಮ ನಿಮ್ಮ ಜಿಲ್ಲೆಯಲ್ಲಿರುವ ಶಾಸಕರು ಮತ್ತು ಸಚಿವರನ್ನು ಕಂಡು, ವಿಚಾರ ವಿವರಿಸಿ, ರೈತಪರ ನಿಲುವು ತೆಗೆದುಕೊಳ್ಳುವಂತೆ ಮನವೊಲಿಸಬೇಕು ಎಂದು ರಾಜ್ಯದ ಎಲ್ಲಾ ಹೋರಾಟಗಾರರಲ್ಲೂ ಮನವಿ ಮಾಡಿಕೊಳ್ಳುತ್ತಿದ್ದೇವೆ.
  • ಸರ್ಕಾರದ ಮೇಲೆ ಸಾತ್ವಿಕ ಒತ್ತಡ ಹೆಚ್ಚಿಸುವ ದೃಷ್ಟಿಯಿಂದ ಜುಲೈ 4 ರಂದು ಇದೇ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ‘ನಾಡ ಉಳಿಸಿ ಸಮಾವೇಶ’ವನ್ನು ಸಂಘಟಿಸಲಾಗುತ್ತಿದೆ. ರಾಜ್ಯದ ಎಲ್ಲಾ ತಾಲ್ಲೂಕುಗಳಿಂದಲೂ ಸಮಾನ ಮನಸ್ಕರು ದೊಡ್ಡ ಸಂಖ್ಯೆಯಲ್ಲಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
  • ಜುಲೈ 4 ರಂದು ಸರ್ಕಾರ ನಿಟ್ಟುಸಿರು ಬಿಡುವಂತಹ ತೀರ್ಮಾನ ತೆಗೆದುಕೊಂಡಲ್ಲಿ ಸಿದ್ಧರಾಮಯ್ಯನವರನ್ನು ಹಾಗೂ ಅವರ ಸರ್ಕಾರವನ್ನು ಅಭಿನಂದಿಸಿ ಇಲ್ಲಿಂದ ಹೊರಡುತ್ತೇವೆ. ಒಂದು ವೇಳೆ ಮತ್ತೊಮ್ಮೆ ನ್ಯಾಯ ನಿರಾಕರಣೆ ನಡೆದಲ್ಲಿ ಇನ್ನಷ್ಟು ಕಠಿಣ ಹೋರಾಟದ ದಿಟ್ಟ ತೀರ್ಮಾನವನ್ನು ಅಂದು ತೆಗೆದುಕೊಳ್ಳುತ್ತೇವೆ.

ಈ ಹೋರಾಟಕ್ಕೆ ನಾಡಿನ ಎಲ್ಲ ಚಳುವಳಿಗಳು ಮತ್ತು ಪ್ರಜ್ಞಾವಂತ ಜನತೆ ಬೆಂಬಲ ನೀಡಬೇಕೆಂದು   ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿಕೊಳ್ಳಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ಬಡಗಲಪುರ ನಾಗೇಂದ್ರ, ವರಲಕ್ಷ್ಮಿ, ಚಾಮರಸ ಮಾಲಿಪಾಟೀಲ್, ವಿ.ನಾಗರಾಜ್, ಯು.ಬಸವರಾಜ್, ಪಿ.ವಿ.ಲೋಕೇಶ್, ನಿರ್ವಾಣಪ್ಪ, ದೇವಿ, ಶ್ರೀನಿವಾಸ್ ಕಾರಹಳ್ಳಿ, ಪ್ರಭಾ ಬೆಳವಂಗಲ, ಕೆ.ವಿ. ಭಟ್, ನೂರ್ ಶ್ರೀಧರ್, ನಿರ್ಮಲ, ಶಿವಪ್ರಕಾಶ್, ಕುಮಾರ್ ಸಮತಳ, ಸುನಂದಾ ಮೊದಲಾದವರು ಹಾಜರಿದ್ದವರು.

ದೇವನಹಳ್ಳಿ ರೈತರ ಭೂಮಿ ಸತ್ಯಾಗ್ರಹ ಹೋರಾಟ: ಜು.2ರ ಸಂಪುಟ ಸಭೆಯಲ್ಲಿ ಭೂಸ್ವಾಧೀನ ಕೈಬಿಡುವ ತೀರ್ಮಾನ ತಗಿದುಕೊಳ್ಳಿ-ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...