Homeಮುಖಪುಟನವ ವಿವಾಹಿತೆ ಆತ್ಮಹತ್ಯೆ: 800 ಗ್ರಾಂ. ಚಿನ್ನ, ವೋಲ್ವೋ ಕಾರು ಕೊಟ್ಟರೂ ಗಂಡನ ಮನೆಯವರಿಂದ ವರದಕ್ಷಿಣೆ...

ನವ ವಿವಾಹಿತೆ ಆತ್ಮಹತ್ಯೆ: 800 ಗ್ರಾಂ. ಚಿನ್ನ, ವೋಲ್ವೋ ಕಾರು ಕೊಟ್ಟರೂ ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ

- Advertisement -
- Advertisement -

ತಮಿಳುನಾಡಿನ ತಿರುಪ್ಪೂರಿನಲ್ಲಿ 27 ವರ್ಷದ ನವವಿವಾಹಿತೆ ವರದಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಗಾರ್ಮೆಂಟ್ಸ್ ಕಂಪನಿ ನಡೆಸುತ್ತಿರುವ ಅಣ್ಣಾದೊರೈ ಎಂಬವರ ಮಗಳು ರಿಧನ್ಯಾ ಸಾವಿಗೆ ಶರಣಾದ ಯುವತಿ ಎಂದು ತಿಳಿದು ಬಂದಿದೆ. ರಿಧನ್ಯಾ ಅವರ ಮದುವೆ ಈ ವರ್ಷದ ಏಪ್ರಿಲ್‌ನಲ್ಲಿ 28 ವರ್ಷದ ಕವಿನ್ ಕುಮಾರ್ ಎಂಬಾತನ ಜೊತೆ ನಡೆದಿತ್ತು. ವರದಿಗಳ ಪ್ರಕಾರ, ಮದುವೆ ಸಮಯದಲ್ಲಿ 100 ಸವರನ್ (800 ಗ್ರಾಂ.) ಚಿನ್ನಾಭರಣ ಮತ್ತು 70 ಲಕ್ಷ ರೂಪಾಯಿ ಮೌಲ್ಯದ ವೋಲ್ವೋ ಕಾರು ವರದಕ್ಷಿಣೆಯಾಗಿ ನೀಡಲಾಗಿತ್ತು.

ಭಾನುವಾರ, ಮೊಂಡಿಪಾಳ್ಯಂನಲ್ಲಿರುವ ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ರಿಧನ್ಯಾ, ಮಾರ್ಗ ಮಧ್ಯೆ ತನ್ನ ಕಾರನ್ನು ನಿಲ್ಲಿಸಿ ಕೀಟನಾಶಕದ ಮಾತ್ರೆಗಳನ್ನು ಸೇವಿಸಿದ್ದಾರೆ ಎಂದು ವರದಿಯಾಗಿದೆ. ತುಂಬಾ ಹೊತ್ತು ರಸ್ತೆ ಬದಿ ಕಾರು ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಪರಿಶೀಲಿಸಿದಾಗ ರಿಧನ್ಯಾ ಶವ ಕಂಡು ಬಂದಿದೆ. ಆಕೆಯ ಬಾಯಲ್ಲಿ ನೊರೆ ಬಂದಿತ್ತು ಎಂದು ವರದಿ ವಿವರಿಸಿದೆ.

ಮೂಲಗಳ ಪ್ರಕಾರ, ರಿಧನ್ಯಾ ಸಾಯುವ ಮೊದಲು ತಮ್ಮ ತಂದೆಗೆ ವಾಟ್ಸಾಪ್‌ನಲ್ಲಿ ಏಳು ಆಡಿಯೋ ಸಂದೇಶಗಳನ್ನು ಕಳುಹಿಸಿದ್ದರು. ಅದರಲ್ಲಿ ಅವರು ತಮ್ಮ ನಿರ್ಧಾರಕ್ಕೆ ಕ್ಷಮೆಯಾಚಿಸಿದ್ದು, ಆಪಾದಿತ ವರದಕ್ಷಿಣೆ ಕಿರುಕುಳ ಸಹಿಸಲಾಗದ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ.

ಒಂದು ಆಡಿಯೋ ಮೆಸೇಜ್‌ನಲ್ಲಿ ಆಕೆ, ಕವಿನ್ ಜೊತೆಗಿನ ತನ್ನ ಮದುವೆಯು ಆತ ಮತ್ತು ಆತನ ಪೋಷಕರು ರೂಪಿಸಿದ ಯೋಜನೆಯ ಭಾಗವಾಗಿದೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

“ನಾನು ಪ್ರತಿದಿನ ಅವರ ಮಾನಸಿಕ ಹಿಂಸೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಇದರ ಬಗ್ಗೆ ಯಾರಿಗೆ ಹೇಳಬೇಕೆಂದು ನನಗೆ ತಿಳಿದಿಲ್ಲ. ಹೇಳಿದರೆ ಜೀವನ ಅಂದ್ರೆ ಹೀಗೆ ಸುಧಾರಿಸುಕೊಂಡು ಹೋಗು ಎಂದು ಹೇಳುತ್ತಾರೆ. ನನ್ನ ನೋವನ್ನು ಅರ್ಥಮಾಡಿಕೊಳ್ಳಲು ಯಾರಿಗೂ ಸಾಧ್ಯವಾಗುತ್ತಿಲ್ಲ” ಎಂದು ರಿಧನ್ಯಾ ಮೆಸೇಜ್‌ನಲ್ಲಿ ಅಳಲು ತೋಡಿಕೊಂಡಿದ್ದಾರೆ.

ಪೋಷಕರು ತನ್ನನ್ನು ಅನುಮಾನಿಸಬಹುದು. ಆದರೆ ತಾನು ಸುಳ್ಳು ಹೇಳುತ್ತಿಲ್ಲ. ನನ್ನ ಸುತ್ತಲಿನ ಎಲ್ಲರೂ ನಟಿಸುತ್ತಿದ್ದಾರೆ. ನಾನು ಯಾಕೆ ಮೌನವಾಗಿದ್ದೇನೆ ಅಥವಾ ಹೀಗೆ ಆಗಿದ್ದೇನೆ ಎಂದು ನನಗೆ ಅರ್ಥವಾಗುತ್ತಿಲ್ಲ. ಈ ರೀತಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಮತ್ತೊಂದು ಮಸೇಜ್‌ನಲ್ಲಿ ರಿಧನ್ಯಾ ಹೇಳಿದ್ದಾರೆ.

“ನನ್ನ ಜೀವನದುದ್ದಕ್ಕೂ ನಾನು ನಿಮಗೆ ಹೊರೆಯಾಗಿರಲು ಬಯಸುವುದಿಲ್ಲ. ಈ ಬಾರಿ ನಾನು ಯಾವುದೇ ತಪ್ಪು ಮಾಡಿಲ್ಲ. ನನಗೆ ಈ ಜೀವನ ಇಷ್ಟವಿಲ್ಲ. ಅವರು ನನ್ನ ಮೇಲೆ ಮಾನಸಿಕವಾಗಿ ಹಲ್ಲೆ ಮಾಡುತ್ತಿದ್ದಾರೆ. ಅವನು ನನ್ನನ್ನು ದೈಹಿಕವಾಗಿ ಹಿಂಸಿಸುತ್ತಿದ್ದಾನೆ. ನನಗೆ ಜೀವನ ಮುಂದುವರಿಸಲು ಸಾಧ್ಯವಾಗುತ್ತಿಲ್ಲ” ಎಂದಿದ್ದಾರೆ.

“ನೀನು ಮತ್ತು ಅಮ್ಮ ನನ್ನ ಪ್ರಪಂಚ. ನನ್ನ ಕೊನೆಯ ಉಸಿರಿನವರೆಗೂ ನೀನು ನನ್ನ ಭರವಸೆಯಾಗಿದ್ದೆ. ಆದರೆ, ನಾನು ನಿನ್ನನ್ನು ತುಂಬಾ ನೋಯಿಸಿದೆ. ನೀನು ಇದನ್ನು ಬಹಿರಂಗವಾಗಿ ಹೇಳಲು ಸಾಧ್ಯವಾಗುತ್ತಿಲ್ಲ, ಆದರೂ, ನೀನು ನನ್ನನ್ನು ಹೀಗೆ ನೋಡಲು ಸಾಧ್ಯವಾಗುತ್ತಿಲ್ಲ. ನಿನ್ನ ನೋವನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಕ್ಷಮಿಸಿ ಅಪ್ಪಾ, ಎಲ್ಲವೂ ಮುಗಿದುಹೋಗಿದೆ. ನಾನು ಹೊರಡುತ್ತಿದ್ದೇನೆ” ರಿಧನ್ಯಾ ಆಡಿಯೋ ಮೆಸೇಜ್‌ನಲ್ಲಿ ಹೇಳಿದ್ದಾಗಿ ವರದಿಗಳು ವಿವರಿಸಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಕೆಯ ಪತಿ ಕವಿನ್ ಕುಮಾರ್, ಮಾವ ಈಶ್ವರಮೂರ್ತಿ ಮತ್ತು ಅತ್ತೆ ಚಿತ್ರಾದೇವಿಯನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಅತ್ಯಾಚಾರ ಸಂತ್ರಸ್ತೆ ಕುರಿತು ವಿವಾದಾತ್ಮಕ ಹೇಳಿಕೆ: ಶಾಸಕನಿಗೆ ಶೋಕಾಸ್ ನೋಟಿಸ್ ಕೊಟ್ಟ ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...