Homeಕರ್ನಾಟಕದೇವನಹಳ್ಳಿ ಭೂ ಸತ್ಯಾಗ್ರಹ 4ನೇ ದಿನ: ಸರ್ಕಾರ ಪಾಂಡವರ ಬದಲು ಕೌರವರ ಪರ ಇದೆ -...

ದೇವನಹಳ್ಳಿ ಭೂ ಸತ್ಯಾಗ್ರಹ 4ನೇ ದಿನ: ಸರ್ಕಾರ ಪಾಂಡವರ ಬದಲು ಕೌರವರ ಪರ ಇದೆ – ಸಿಪಿಎಂ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್ ಆಕ್ರೋಶ

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ರೈತರ ಭೂ ಸತ್ಯಾಗ್ರಹ ಹೋರಾಟ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ಮಹತ್ವದ ಹೋರಾಟಕ್ಕೆ ನಾಡಿನ ಪ್ರಮುಖ ಚಿಂತಕರು, ಹೋರಾಟಗಾರರು ಮತ್ತು ವಿವಿಧ ಸಂಘಟನೆಗಳ ನಾಯಕರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಭೂ ಸತ್ಯಾಗ್ರಹದ ಕಾಂ. ಬಯ್ಯಾರೆಡ್ಡಿ ವೇದಿಕೆಯಲ್ಲಿ ಮಾತನಾಡಿದ ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಈ ಹೋರಾಟ ಮಹಾಭಾರತದ ಕುರುಕ್ಷೇತ್ರ ಯುದ್ಧದಂತಿದೆ. ಹಾಗಾದರೆ, ಸರ್ಕಾರ ಯಾರ ಪರ ನಿಲ್ಲಬೇಕು? ಪಾಂಡವರ ಪರವೋ, ಕೌರವರ ಪರವೋ? ದುರದೃಷ್ಟವಶಾತ್, ಸರ್ಕಾರ ಪಾಂಡವರ ಪರವಾಗಿ ಕಾಣಿಸುತ್ತಿಲ್ಲ, ಅದು ಕೌರವರ ವೇಷ ತೊಟ್ಟುಕೊಂಡು ಆಟವಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫ್ಯಾಕ್ಟರಿ ಉಳಿಯಬೇಕು ಎನ್ನುತ್ತಿದ್ದಾರೆ” ಎಂದು ನೇರವಾಗಿ ಕುಟುಕಿದರು.

ದೇವನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಫಾಕ್ಸ್‌ಕಾನ್ (Foxconn) ಕಂಪೆನಿ ಮೊಬೈಲ್ ಫೋನ್ ತಯಾರಿಕಾ ಘಟಕವನ್ನು ಸ್ಥಾಪಿಸುತ್ತಿದೆ. ಇಂತಹ ಕೈಗಾರಿಕೆಗಳಿಗೆ 6,000 ಕೋಟಿ ರೂ. ಸಬ್ಸಿಡಿ ನೀಡುವ ಸರ್ಕಾರದ ಘೋಷಣೆಯನ್ನು ಪ್ರಕಾಶ್ ಬಲವಾಗಿ ವಿರೋಧಿಸಿದರು. “ಸಾಮಾನ್ಯ ಜನರಿಗೆ ಒಂದು ಹೊತ್ತಿನ ಊಟಕ್ಕೂ ಸಂಕಷ್ಟವಿದೆ. ರೈತರು ತಮ್ಮ ಭೂಮಿಯನ್ನು ಉಳಿಸಿಕೊಡಿ ಎಂದು ಆಗ್ರಹಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ವಿದೇಶಿ ಕಂಪನಿಗಳಿಗೆ ಸಾವಿರಾರು ಕೋಟಿ ಸಬ್ಸಿಡಿ ನೀಡುವುದು ಯಾವ ರೀತಿಯ ಕೈಗಾರಿಕಾ ನೀತಿ? ರಾಜ್ಯದ ಜನರ ತೆರಿಗೆ ಹಣವನ್ನು ಬಂಡವಾಳಗಾರರಿಗೆ ಉಚಿತವಾಗಿ ನೀಡಲು ಫ್ಯಾಕ್ಟರಿಗಳು ಬೇಕೆ?” ಎಂದು ಕಿಡಿಕಾರಿದರು. “ಸಿದ್ದರಾಮಯ್ಯನವರೇ, ನೀವು ಮಾಡುತ್ತಿರುವ ಕೆಲಸವನ್ನು ರಾಜ್ಯದ ಜನತೆ ಕಣ್ಣುಮುಚ್ಚಿಕೊಂಡು ನೋಡುತ್ತಿಲ್ಲ. ಇಂತಹ ಫ್ಯಾಕ್ಟರಿಗಳು ನಮಗೆ ಬೇಕಾಗಿಲ್ಲ” ಎಂದು ಎಚ್ಚರಿಕೆ ನೀಡಿದರು.

ಕೋಲಾರದ ನರಸಾಪುರ ಬಳಿ ಇರುವ ವಿಸ್ಟ್ರಾನ್ ಕಂಪನಿಯು ಈಗ ಟಾಟಾ ಎಲೆಕ್ಟ್ರಾನಿಕ್ಸ್  ಒಡೆತನದಲ್ಲಿದೆ. ಈ ಘಟಕವನ್ನು ಉದಾಹರಿಸಿದ ಪ್ರಕಾಶ್, “ಅಲ್ಲಿ 30 ಸಾವಿರಕ್ಕೂ ಹೆಚ್ಚು ರೈತಾಪಿ ವರ್ಗದ ಯುವಕ-ಯುವತಿಯರು ಕೆಲಸ ಮಾಡುತ್ತಿದ್ದಾರೆ. ಆದರೆ, ಅದರಲ್ಲಿ ಕೇವಲ ಒಂದು ಸಾವಿರ ಮಂದಿಗೆ ಮಾತ್ರ ಖಾಯಂ ಉದ್ಯೋಗವಿದೆ. ಕೋಲಾರ, ಮಾಲೂರು, ಹೊಸಕೋಟೆ ಸುತ್ತಮುತ್ತಲಿನ ಮಕ್ಕಳಿಗೆ ಅರೆಕಾಲಿಕ, ಅಶ್ಲೀಲ ಕೆಲಸ, ಪುಕ್ಕಟೆ ಸಂಬಳಕ್ಕೆ ದುಡಿಸಿಕೊಳ್ಳುವ ನೀತಿಯನ್ನು ಸಿದ್ದರಾಮಯ್ಯ ಮತ್ತು ಎಂ.ಬಿ. ಪಾಟೀಲ್ ನೇತೃತ್ವದ ಸರ್ಕಾರ ಜಾರಿಗೆ ತಂದಿದೆ. ಸರ್ಕಾರವೇ 6-7 ಸಾವಿರ ಕೋಟಿ ರೂ. ಸಬ್ಸಿಡಿ ಕೊಟ್ಟು ಇಂತಹ ಕಂಪನಿಗಳಿಗೆ ಮತ್ತಷ್ಟು ಲೂಟಿ ಮಾಡಲು ಉತ್ತೇಜನ ನೀಡುತ್ತಿದೆ. ಇದನ್ನೇ ನಾವು ನಿಮ್ಮಿಂದ, ಕಾಂಗ್ರೆಸ್ ಸರ್ಕಾರದಿಂದ ನಿರೀಕ್ಷಿಸಿದ್ದು? ನೀವು ಯಾರ ಪರವಾಗಿ ಇದ್ದೀರಿ?” ಎಂದು ತೀವ್ರವಾಗಿ ಪ್ರಶ್ನಿಸಿದರು.

ಈ ಭೂ ಸತ್ಯಾಗ್ರಹ ವೇದಿಕೆಗೆ ಹಿರಿಯ ವಕೀಲರಾದ ಪ್ರೊ. ರವಿವರ್ಮಕುಮಾರ್, ಚಿಂತಕರಾದ ಡಾ.‌ಜಿ‌. ರಾಮಕೃಷ್ಣ, ಪ್ರೊ.‌ಮರುಳಸಿದ್ಧಪ್ಪ, ಜಾನಪದ ಅಕಾಡೆಮಿಯ ಅಧ್ಯಕ್ಷರೂ ಆಗಿದ್ದ ಹಿರಿಯ ಕಲಾವಿದ ಪಿಚ್ಚಳ್ಳಿ ಶ್ರೀನಿವಾಸ್, ಹಿರಿಯ ಚಿಂತಕ ಸುಬ್ಬು ಹೊಲೆಯಾರ್ ಮುಂತಾದ ಅನೇಕರು ಭೇಟಿ ನೀಡಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ರಾಜಕಾರಣಿಗಳಾದ ಮಹಿಮಾ ಪಟೇಲ್ ಮತ್ತು ಬಿ.ಆರ್. ಪಾಟೀಲ್ ಅವರೂ ಸಹ ರಾಜಕಾರಣಿಗಳಾಗಿರದೆ, ಹೋರಾಟಗಾರರಾಗಿ ರೈತರಿಗೆ ಬೆಂಬಲ ನೀಡಲು ಬಂದಿರುವುದಾಗಿ ಹೇಳಿದ್ದಾರೆ. ವಿವಿಧ ಚಳುವಳಿಗಳ ಮುಖಂಡರಾದ ಸಿದ್ಧನಗೌಡ ಪಾಟೀಲ್, ಮಾವಳ್ಳಿ ಶಂಕರ್, ಸಾತಿ ಸುಂದರೇಶ್, ಮೀನಾಕ್ಷಿ ಸುಂದರಂ, ಬಡಗಲಪುರ ನಾಗೇಂದ್ರ, ವರಲಕ್ಷ್ಮಿ, ಚುಕ್ಕಿ ನಂಜುಂಡಸ್ವಾಮಿ, ಕ್ಲಿಫ್ಟನ್ ರೊಜಾರಿಯೋ, ನಿರ್ಮಲ, ಕೆಜೆಎಸ್ ಮರಿಯಪ್ಪ ಮೊದಲಾದವರು ಹೋರಾಟದಲ್ಲಿ ಭಾಗವಹಿಸಿದ್ದರು.

ಜುಲೈ 4ಕ್ಕೆ ‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ಭೂಸ್ವಾಧೀನ ಕೈಬಿಡುವಂತೆ ರೈತರಿಂದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...