Homeಮುಖಪುಟಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

ಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

- Advertisement -
- Advertisement -

ಅಕ್ಟೋಬರ್ 15, 2016ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರೊಂದಿಗಿನ ವಾಗ್ವಾದದ ನಂತರ ನಾಪತ್ತೆಯಾಗಿದ್ದ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ (ಜೂನ್.30) ಸ್ವೀಕರಿಸಿದೆ.

ಸಿಬಿಐ 2018ರಲ್ಲಿ ತನ್ನ ಮುಕ್ತಾಯ ವರದಿಯನ್ನು ಸಲ್ಲಿಸಿತ್ತು. ಆದರೆ, ನಜೀಬ್ ಅವರ ತಾಯಿ ಪ್ರತಿಭಟನಾ ಅರ್ಜಿಯೊಂದಿಗೆ ಅದನ್ನು ಪ್ರಶ್ನಿಸಿದ್ದರು. ಈ ವಿಷಯವನ್ನು ವಿಲೇವಾರಿ ಮಾಡುವಾಗ, ನಜೀಬ್ ಇರುವಿಕೆಯ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ದೊರೆತರೆ ತನಿಖೆಯನ್ನು ಪುನರಾರಂಭಿಸಲು ಸಿಬಿಐಗೆ ನ್ಯಾಯಾಲಯ ಸ್ವಾತಂತ್ರ್ಯ ನೀಡಿದೆ ಮತ್ತು ಅದಕ್ಕೆ ಅನುಗುಣವಾಗಿ ನ್ಯಾಯಾಲಯಕ್ಕೆ ತಿಳಿಸಲು ಸಂಸ್ಥೆಗೆ ನಿರ್ದೇಶನ ನೀಡಿದೆ.

“ಸಿಬಿಐ ಎಲ್ಲಾ ಸಂಭಾವ್ಯ ಮಾರ್ಗಗಳನ್ನು ಅನ್ವೇಷಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿದೆ ಎಂಬುವುದು ಸ್ಪಷ್ಟ. ಆದರೂ, ನಜೀಬ್ ಇರುವ ಸ್ಥಳದ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ” ಎಂದು ನ್ಯಾಯಾಲಯ ಹೇಳಿದೆ.

“ಪ್ರಸ್ತುತ ಪ್ರಕರಣದ ವಿಚಾರಣೆಯು ಈ ಮುಕ್ತಾಯ ವರದಿಯೊಂದಿಗೆ ಕೊನೆಗೊಂಡರೂ, ನಜೀಬ್ ಅವರ ತಾಯಿ ಮತ್ತು ಇತರ ಪ್ರೀತಿಪಾತ್ರರ ನಿರೀಕ್ಷೆ ಬಗ್ಗೆ ನಮಗೆ ಇನ್ನೂ ಅರ್ಥವಾಗಿಲ್ಲ ಎಂದು ನ್ಯಾಯಾಲಯ ವಿಷಾದ ವ್ಯಕ್ತಪಡಿಸಿದೆ. ಈ ಮೂಲಕ ನಜೀಬ್ ಅವರ ಕುಟುಂಬ ಹೊಂದಿರುವ ಭಾವನಾತ್ಮಕ ನೋವನ್ನು ನ್ಯಾಯಾಲಯವು ಒಪ್ಪಿಕೊಂಡಿದೆ. ತನಿಖಾ ಯಂತ್ರದ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ನಡೆಸಿದ ತನಿಖೆಯು ಅದರ ತಾರ್ಕಿಕ ತೀರ್ಮಾನವನ್ನು ಸಾಧಿಸಲು ಸಾಧ್ಯವಾಗದ ಪ್ರಕರಣಗಳಿವೆ” ಎಂದು ಹೇಳಿದೆ.

ಅಕ್ಟೋಬರ್ 14, 2016ರ ರಾತ್ರಿ ನಜೀಬ್ ವಿರುದ್ಧ ದೈಹಿಕ ಹಲ್ಲೆ ಮತ್ತು ಮೌಖಿಕ ಬೆದರಿಕೆ ಆರೋಪಗಳನ್ನು ಸಾಕ್ಷಿ, ಸಾಕ್ಷ್ಯಗಳು ಬೆಂಬಲಿಸುತ್ತದೆಯಾದರೂ, ಆ ಘಟನೆಗಳು ಮತ್ತು ಮರುದಿನ ಅವರ ಕಣ್ಮರೆಗೆ ಯಾವುದೇ ನೇರ ಅಥವಾ ಸಾಂದರ್ಭಿಕ ಪುರಾವೆಗಳು ಸಂಬಂಧವನ್ನು ಸ್ಥಾಪಿಸುವುದಿಲ್ಲ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಸಿಬಿಐ ತನಿಖೆಯಲ್ಲಿನ ಲೋಪಗಳ ಕುರಿತು ನಜೀಬ್ ಅವರ ತಾಯಿ ಎತ್ತಿದ ಎಲ್ಲಾ ಪ್ರಶ್ನೆಗಳನ್ನು ನ್ಯಾಯಾಲಯವು ಪರಿಶೀಲಿಸಿ ತಿರಸ್ಕರಿಸಿದೆ. ಸಂಸ್ಥೆಯು ಸಮಗ್ರ ತನಿಖೆಯನ್ನು ಕೈಗೊಂಡಿದೆ ಮತ್ತು ಎಲ್ಲಾ ತನಿಖಾ ಆಯ್ಕೆಗಳನ್ನು ಬಳಸಿಕೊಂಡಿದೆ ಎಂದಿದೆ.

ನ್ಯಾಯಾಲಯದ ಇತರ ಅವಲೋಕನಗಳು:

  • ನಜೀಬ್ ತನ್ನ ಹಾಸ್ಟೆಲ್ ಕೊಠಡಿಯಿಂದ ಹೊರಬಂದಾಗ, ತನ್ನ ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್ ಬಿಟ್ಟು ಹೋಗಿದ್ದರು.
  • ಅವರು ಎಲ್ಲಿದ್ದಾರೆಂದು ಖಚಿತಪಡಿಸಿಕೊಳ್ಳಲು ಸಹಾಯ ಮಾಡುವ ಯಾವುದೇ ಸುಳಿವು ಅಥವಾ ಮಾಹಿತಿ ಹೊರಬಂದಿಲ್ಲ.
  • ನಜೀಬ್ ಅವರ ತಾಯಿ ಮತ್ತು ಅವರ ವೈದ್ಯರ ಹೇಳಿಕೆಗಳು ಅವರು ಪುನರಾವರ್ತಿತ ಖಿನ್ನತೆ ಮತ್ತು ಚಿಂತೆಯಿಂದ ಬಳಲುತ್ತಿದ್ದಾರೆ ಎಂದು ದೃಢಪಡಿಸಿವೆ.
  • ಸಫ್ದರ್ಜಂಗ್ ಆಸ್ಪತ್ರೆಗೆ ಭೇಟಿ ನೀಡಿದ ನಂತರ ನಜೀಬ್ ಹಾಸ್ಟೆಲ್‌ಗೆ ಹಿಂತಿರುಗಲು ನಿರಾಕರಿಸಿದ್ದರು ಎಂಬ ಹೇಳಿಕೆಯು ಊಹಾಪೋಹವಾಗಿಯೇ ಉಳಿದಿದೆ. ಅವರು ಸ್ವಯಂ ಪ್ರೇರಣೆಯಿಂದ ಹಾಸ್ಟೆಲ್ ತೊರೆದಿರಬಹುದು ಎಂಬ ಸಾಧ್ಯತೆಯನ್ನು ಸೂಚಿಸುತ್ತದೆ.
  • ನಜೀಬ್ ಕಣ್ಮರೆಯಾಗುವ ಹಿಂದಿನ ರಾತ್ರಿ ‘ಆತಂಕಕಾರಿ ಘಟನೆ’ ನಡೆದಿದ್ದರೂ, ಶಂಕಿತರು ಅವರ ಕಣ್ಮರೆಯೊಂದಿಗೆ ಯಾವುದೇ ಪಾತ್ರ ಹೊಂದಿದ್ದಾರೆಂದು ತೀರ್ಮಾನಿಸಲು ಸಾಧ್ಯವಾಗಿಲ್ಲ.
  • ಜೆಎನ್‌ಯುನಂತಹ ಕ್ಯಾಂಪಸ್‌ಗಳ ಚುನಾವಣೆಗಳಲ್ಲಿ ವಿದ್ಯಾರ್ಥಿಗಳ ನಡುವೆ ಜಗಳಲು ಸಾಮಾನ್ಯ. ಆದರೆ, ಅದು ವಿದ್ಯಾರ್ಥಿಗಳು ಇನ್ನೊಬ್ಬ ವಿದ್ಯಾರ್ಥಿಯ ಕಣ್ಮರೆಗೆ ಕಾರಣವಾಗುವ ಮಟ್ಟಿಗೆ ಹೋಗುತ್ತಾರೆ ಎಂದು ತೀರ್ಮಾನಿಸಲು ಆ ಜಗಳಲು ಸರಿಯಾದ ಆಧಾರವಲ್ಲ, ವಿಶೇಷವಾಗಿ ದಾಖಲೆಗಳಲ್ಲಿ ಅದೇ ರೀತಿ ಸೂಚಿಸಲು ಯಾವುದೇ ಪುರಾವೆಗಳಿಲ್ಲದಿದ್ದಾಗ ಎಂದು ನ್ಯಾಯಾಲಯ ಹೇಳಿದೆ.
  • ಕೊನೆಯದಾಗಿ, ನಜೀಬ್ ಅಹ್ಮದ್ ಅವರನ್ನು ಶೀಘ್ರದಲ್ಲೇ ಪತ್ತೆಹಚ್ಚಲಾಗುವುದು ಎಂಬ ಆಶಾ ಭಾವನೆಯನ್ನು ನ್ಯಾಯಾಲಯ ವ್ಯಕ್ತಪಡಿಸಿದೆ.

27 ವರ್ಷದ ಎಂಎಸ್ಸಿ ಬಯೋಟೆಕ್ನಾಲಜಿ ವಿದ್ಯಾರ್ಥಿ ನಜೀಬ್ ಅಹ್ಮದ್, ಎಬಿವಿಪಿ ಸದಸ್ಯರೊಂದಿಗಿನ ವಾಗ್ವಾದದ ನಂತರ ನಾಪತ್ತೆಯಾಗಿದ್ದಾರೆ. ಆರಂಭದಲ್ಲಿ ದೆಹಲಿ ಪೊಲೀಸರು, ನಂತರ ಸಿಬಿಐ ತನಿಖೆ ನಡೆಸಿದರೂ, ಇಂದಿಗೂ ಅವರು ಎಲ್ಲಿ ಹೋದರೂ ಎಂಬುವುದನ್ನು ಕಂಡುಕೊಳ್ಳಲು ಸಾಧ್ಯವಾಗಿಲ್ಲ.

ನವ ವಿವಾಹಿತೆ ಆತ್ಮಹತ್ಯೆ: 800 ಗ್ರಾಂ. ಚಿನ್ನ, ವೋಲ್ವೋ ಕಾರು ಕೊಟ್ಟರೂ ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...