Homeಮುಖಪುಟಹಿರಿಯ ಅಧಿಕಾರಿಯನ್ನು ಕಚೇರಿಯಿಂದ ಎಳೆದೊಯ್ದು ಥಳಿಸಿದ ದುಷ್ಕರ್ಮಿಗಳು!

ಹಿರಿಯ ಅಧಿಕಾರಿಯನ್ನು ಕಚೇರಿಯಿಂದ ಎಳೆದೊಯ್ದು ಥಳಿಸಿದ ದುಷ್ಕರ್ಮಿಗಳು!

ಹಲ್ಲೆ ನಡೆಸಿದವರು ಬಿಜೆಪಿ ಮುಖಂಡನ ಕಡೆಯವರು ಎಂಬ ಆರೋಪವಿದೆ

- Advertisement -
- Advertisement -

ಒಡಿಶಾ ಆಡಳಿತ ಸೇವೆಯ (ಒಎಎಸ್‌) ಹಿರಿಯ ಅಧಿಕಾರಿಯೊಬ್ಬರನ್ನು ಕಚೇರಿಯಿಂದ ಎಳೆದೊಯ್ದು ಕ್ರೂರವಾಗಿ ಥಳಿಸಿರುವ ಘಟನೆ ಭುವನೇಶ್ವರ ಮಹಾನಗರ ಪಾಲಿಕೆಯಲ್ಲಿ (ಬಿಎಂಸಿ) ಸೋಮವಾರ (ಜೂನ್ 30, 2025) ನಡೆದಿದೆ.

ಅಧಿಕಾರಿ ವರ್ಗ, ವಿರೋಧ ಪಕ್ಷಗಳ ನಾಯಕರು ಮತ್ತು ಸಾರ್ವಜನಿಕರು ಈ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಬಿಎಂಸಿಯ ಹೆಚ್ಚುವರಿ ಆಯುಕ್ತ ರತ್ನಾಕರ್ ಸಾಹೂ ಅವರು ಪಾಲಿಕೆ ಕಟ್ಟಡದಲ್ಲಿ ಸಾರ್ವಜನಿಕರ ಕುಂದುಕೊರತೆ ಕುರಿತಂತೆ ಸಭೆ ನಡೆಸುತ್ತಿದ್ದರು. ಈ ವೇಳೆ 2024ರ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಪರಾಜಯಗೊಂಡ ಬಿಜೆಪಿ ಅಭ್ಯರ್ಥಿಯ ಬೆಂಬಲಿಗರು ಎನ್ನಲಾದ ವ್ಯಕ್ತಿಗಳ ಗುಂಪೊಂದು ಅವರನ್ನು ಎಳೆದೊಯ್ದು ಹಲ್ಲೆ ನಡೆಸಿದೆ ಎಂದು ವರದಿಯಾಗಿದೆ.

ಹಲ್ಲೆಯಿಂದ ಅಧಿಕಾರಿ ಗಾಯಗೊಂಡಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ಹಿರಿಯ ಅಧಿಕಾರಿಯನ್ನು ಕಚೇರಿಯಿಂದ ಎಳೆದೊಯ್ದು ಬಿಜೆಪಿ ಕಾರ್ಪೋರೇಟರ್ ಮುಂದೆಯೇ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ. ಈ ಘಟನೆಗೂ ಸೋತ ಬಿಜೆಪಿ ಅಭ್ಯರ್ಥಿಗೂ ಸಂಬಂಧವಿದೆ ಎಂಬ ಆರೋಪವಿದೆ ಎಂದು” ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ರಾಜಧಾನಿ ಭುವನೇಶ್ವರದ ಹೃದಯಭಾಗದಲ್ಲಿ ಹಿರಿಯ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿ ಜನರ ಕುಂದುಕೊರತೆಗಳನ್ನು ಆಲಿಸುತ್ತಿದ್ದಾಗ ಹಾಡಹಗಲೇ ಈ ಘಟನೆ ಸಂಭವಿಸಿದೆ ಎಂಬುದು ಹೆಚ್ಚು ಭಯಾನಕವಾಗಿದೆ” ಎಂದು ಪಟ್ನಾಯಕ್ ಹೇಳಿದ್ದಾರೆ.

“ಈ ನಾಚಿಕೆಗೇಡಿನ ದಾಳಿ ನಡೆಸಿದವರ ವಿರುದ್ಧ ಮಾತ್ರವಲ್ಲದೆ, ಅದರ ಹಿಂದೆ ಇರುವ ರಾಜಕೀಯ ನಾಯಕರ ವಿರುದ್ಧವೂ ತಕ್ಷಣದ ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾನು ಮುಖ್ಯಮಂತ್ರಿ ಮೋಹನ್ ಮಾಝಿ ಅವರಲ್ಲಿ ವಿನಂತಿಸುತ್ತೇನೆ” ಎಂದು ಬಿಜೆಡಿ ಅಧ್ಯಕ್ಷರೂ ಆಗಿರುವ ನವೀನ್ ಪಟ್ನಾಯಕ್ ಬರೆದುಕೊಂಡಿದ್ದಾರೆ.

“ಅಧಿಕಾರಿ ತನ್ನ ಎಫ್‌ಐಆರ್‌ನಲ್ಲಿ ಹೆಸರಿಸಿರುವ ಜನರು ಕ್ರಿಮಿನಲ್‌ಗಳಂತೆ ವರ್ತಿಸಿದ್ದಾರೆ. ಒಬ್ಬ ಹಿರಿಯ ಅಧಿಕಾರಿ ತನ್ನ ಸ್ವಂತ ಕಚೇರಿಯಲ್ಲಿ ಸುರಕ್ಷಿತವಾಗಿಲ್ಲದಿದ್ದರೆ, ಸಾಮಾನ್ಯ ನಾಗರಿಕರು ಸರ್ಕಾರದಿಂದ ಯಾವ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರೀಕ್ಷಿಸಬಹುದು?” ಎಂದು ನವೀನ್ ಪಟ್ನಾಯಕ್ ಪ್ರಶ್ನಿಸಿದ್ದಾರೆ.

“ಮಾಜಿ ರಾಜ್ಯಪಾಲರ ಪುತ್ರ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದಂತೆ, ಈ ಹೇಯ ಕೃತ್ಯಕ್ಕೆ ಶಿಕ್ಷೆಯಾಗದಂತೆ ತಡೆಯಲು ಪ್ರಯತ್ನಿಸದೆ ಮುಖ್ಯಮಂತ್ರಿ ಮೋಹನ್ ಮಾಝಿ ಅವರು ತಕ್ಷಣ ಕ್ರಮ ಕೈಗೊಳ್ಳಲು ಸೂಚಿಸುವ ಮೂಲಕ ತಮ್ಮ ಸರ್ಕಾರದ ಮೇಲಿನ ಜನರ ನಂಬಿಕೆಯನ್ನು ಪುನಃಸ್ಥಾಪಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ಒಡಿಶಾದ ಜನರು ಇದನ್ನು ಕ್ಷಮಿಸುವುದಿಲ್ಲ” ಎಂದು ನವೀನ್ ಪಟ್ನಾಯಕ್ ಹೇಳಿದ್ದಾರೆ.

ಅಧಿಕಾರಿಯ ಮೇಲಿನ ಹಲ್ಲೆಯನ್ನು ಖಂಡಿಸಿ ಸೋಮವಾರ ಸಂಜೆ, ಮೇಯರ್ ಸುಲೋಚನಾ ದಾಸ್ ನೇತೃತ್ವದಲ್ಲಿ ಬಿಜೆಡಿ ಕಾರ್ಪೊರೇಟರ್‌ಗಳು ಭುವನೇಶ್ವರದ ಜನನಿಬಿಡ ರಸ್ತೆಯಾದ ಜನಪಥ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಗಳು ಹೇಳಿವೆ.

ಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...