Homeಮುಖಪುಟತೆಲಂಗಾಣ ಔ‍ಷಧ ಘಟಕದಲ್ಲಿ ಸ್ಪೋಟ ಪ್ರಕರಣ: 35 ದಾಟಿದ ಸಾವಿನ ಸಂಖ್ಯೆ

ತೆಲಂಗಾಣ ಔ‍ಷಧ ಘಟಕದಲ್ಲಿ ಸ್ಪೋಟ ಪ್ರಕರಣ: 35 ದಾಟಿದ ಸಾವಿನ ಸಂಖ್ಯೆ

- Advertisement -
- Advertisement -

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ಘಟಕದಲ್ಲಿ ಸೋಮವಾರ (ಜೂನ್.30) ಸಂಭವಿಸಿದ ರಿಯಾಕ್ಟರ್ ಸ್ಪೋಟದಲ್ಲಿ ಸಾವಿಗೀಡಾದವರ ಸಂಖ್ಯೆ 35 ದಾಟಿದೆ. ಕೆಲ ಮಾಧ್ಯಮಗಳು 42 ಜನರು ಸಾವನ್ನಪ್ಪಿರುವ ಬಗ್ಗೆ ವರದಿ ಮಾಡಿವೆ.

ರಾತ್ರಿಯಿಡೀ ಸ್ಥಳೀಯ ಪಟ್ಟಂಚೆರುವು ಆಸ್ಪತ್ರೆಗೆ ದುರಂತ ಸ್ಥಳದಿಂದ ಮೃತದೇಹಗಳು ಬರುತ್ತಿತ್ತು. ಆಸ್ಪತ್ರೆಯ ಅಧಿಕಾರಿಗಳು ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ವ್ಯಕ್ತಪಡಿಸಿದ್ದಾರೆ. ರಾತ್ರಿ ಭಾರೀ ಮಳೆಯಿಂದ ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ಅಡಚಣೆಯಾಯಿತು ಎಂದು ದಿ ಹಿಂದೂ ವರದಿ ಹೇಳಿದೆ.

ಮೃತದೇಹಗಳ ಡಿಎನ್‌ಎ ಮಾದರಿ ಸಂಗ್ರಹಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭಿಸಲಾಗಿದೆ. ರಾತ್ರಿ ಸುಮಾರು 20 ಶವಗಳ ಡಿಎನ್‌ಎ ಸಂಗ್ರಹಿಸಲಾಗಿದೆ. ಅವುಗಳು ಮೃತರ ಸಂಬಂಧಿಕರೊಂದಿಗೆ ಹೊಂದಾಣಿಕೆಯಾದ ನಂತರ ಮೃತದೇಹಗಳನ್ನು ಹಸ್ತಾಂತರಿಸುತ್ತೇವೆ ಎಂದು ಪಟ್ಟಂಚೆರುವು ಪ್ರದೇಶ ಆಸ್ಪತ್ರೆಯ ಮೇಲ್ವಿಚಾರಕ ಡಾ. ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆ ಮತ್ತು ಡಿಎನ್‌ಎ ಮಾದರಿ ಸಂಗ್ರಹಕ್ಕೆ ಸಹಾಯ ಮಾಡಲು ಉಸ್ಮಾನಿಯಾ ಜನರಲ್ ಆಸ್ಪತ್ರೆಯಿಂದ ವಿಶೇಷ ವಿಧಿವಿಜ್ಞಾನ ತಂಡವನ್ನು ಕರೆಸಲಾಗಿದೆ. ಇದುವರೆಗೆ 15 ಶವಗಳ ಶವಪರೀಕ್ಷೆ ಪೂರ್ಣಗೊಂಡಿದ್ದು, ಕೇವಲ ನಾಲ್ಕು ಶವಗಳನ್ನು ಮಾತ್ರ ಗುರುತಿಸಲಾಗಿದೆ. ಉಳಿದ ಶವಗಳನ್ನು ಡಿಎನ್‌ಎ ಪ್ರೊಫೈಲಿಂಗ್‌ಗೆ ಒಳಪಡಿಸಲಾಗುತ್ತಿದೆ ಎಂದಿದ್ದಾರೆ.

ತೆಲಂಗಾಣ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ (ಡಿಎಂಇ) ಡಾ. ಎ. ನರೇಂದ್ರ ಕುಮಾರ್ ಮತ್ತು ತೆಲಂಗಾಣ ವೈದ್ಯ ವಿಧಾನ ಪರಿಷತ್ (ಟಿವಿವಿಪಿ) ಆಯುಕ್ತ ಡಾ. ಅಜಯ ಕುಮಾರ್ ಸೇರಿದಂತೆ ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾತ್ರಿಯಿಡೀ ಆಸ್ಪತ್ರೆಯಲ್ಲಿ ಹಾಜರಿದ್ದರು. ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಸಂಗಾರೆಡ್ಡಿ ಜಿಲ್ಲೆಯ ಪಾಶಮಿಲರಾಮ್ ಕೈಗಾರಿಕಾ ಪ್ರದೇಶದ ಔಷಧೀಯ ಘಟಕ ಸಿಗಾಚಿ ಇಂಡಸ್ಟ್ರೀಸ್ ಪ್ರೈ. ಲಿಮಿಟೆಡ್‌ನಲ್ಲಿ ಸೋಮವಾರ (ಜೂ.30) ಬೆಳಿಗ್ಗೆ 9.30ರ ಸುಮಾರಿಗೆ ಸ್ಪೋಟ ಸಂಭವಿಸಿದೆ.

ಮೈಕ್ರೋಕ್ರಿಸ್ಟಲಿನ್ ಸೆಲ್ಯುಲೋಸ್ ಅನ್ನು ನಿರ್ವಹಿಸುವಾಗ ಸ್ಪ್ರೇ ಡ್ರೈಯರ್‌ನಲ್ಲಿ ಒತ್ತಡ ಹೆಚ್ಚಾದ ಕಾರಣ ಸ್ಫೋಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಸ್ಪೋಟದಿಂದ ಕಾರ್ಖಾನೆಯಲ್ಲಿ ದೊಡ್ಡ ಮಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕನಿಷ್ಠ 35 ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನೂ 34 ಜನರು ಗಾಯಗೊಂಡಿದ್ದಾರೆ.

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳಗಳನ್ನು ಒಳಗೊಂಡ ರಕ್ಷಣಾ ತಂಡಗಳ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನೂ ಯಾರದರು ಕಾರ್ಮಿಕರು ಅಪಾಯದಲ್ಲಿ ಸಿಲುಕಿದ್ದಾರಾ? ಎಂದು ಪರಿಶೀಲಿಸಲಾಗುತ್ತಿದೆ, ಜೊತೆಗೆ ಮೃತದೇಹಗಳ ವಿಲೇವಾರಿ ನಡೆಯುತ್ತಿದೆ.

ಹಿರಿಯ ಅಧಿಕಾರಿಯನ್ನು ಕಚೇರಿಯಿಂದ ಎಳೆದೊಯ್ದು ಥಳಿಸಿದ ದುಷ್ಕರ್ಮಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...