Homeಮುಖಪುಟತಮಿಳುನಾಡು| ಸೆಕ್ಯೂರಿಟಿ ಗಾರ್ಡ್‌ ಲಾಕಪ್ ಡೆತ್ ಪ್ರಕರಣ: ಐವರು ಪೊಲೀಸರ ಬಂಧನ

ತಮಿಳುನಾಡು| ಸೆಕ್ಯೂರಿಟಿ ಗಾರ್ಡ್‌ ಲಾಕಪ್ ಡೆತ್ ಪ್ರಕರಣ: ಐವರು ಪೊಲೀಸರ ಬಂಧನ

- Advertisement -
- Advertisement -

ತಮಿಳುನಾಡಿನ ಶಿವಗಂಗೆ ಜಿಲ್ಲೆಯಲ್ಲಿ ನಡೆದ ದೇವಾಲಯದ ಭದ್ರತಾ ಸಿಬ್ಬಂದಿಯ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ (ಜೂನ್‌.30) ತಡರಾತ್ರಿ ಐವರು ಪೊಲೀಸರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿದ ಬೆನ್ನಲ್ಲೇ ಪೊಲೀಸರ ಬಂಧನವಾಗಿದೆ.

ಬಿ. ಅಜಿತ್ ಕುಮಾರ್ (27) ಸಾವಿಗೀಡಾದ ಯುವಕ. ಜೂನ್ 27ರಂದು ತಿರುಪುವನಂ ಮಾದಾಪುರಂ ಭದ್ರಕಾಳಿಯಮ್ಮನ್ ದೇವಸ್ಥಾನದಲ್ಲಿ ತಮ್ಮ ಕಾರಿನಿಂದ 10 ಗ್ರಾಂ. ಚಿನ್ನ ಕಾಣೆಯಾಗಿದೆ ಎಂದು ತಾಯಿ-ಮಗಳು ದೂರು ನೀಡಿದ್ದರು. ಪ್ರಕರಣದ ತನಿಖೆಗೆ ರಚಿಸಿದ್ದ ವಿಶೇಷ ತಂಡದ 6 ಮಂದಿ ಪೊಲೀಸರು, ಪ್ರಕರಣದಲ್ಲಿ ಭದ್ರತಾ ಸಿಬ್ಬಂದಿ ಅಜಿತ್ ಅವರ ಪಾತ್ರದ ಬಗ್ಗೆ ವಿಚಾರಣೆ ನಡೆಸಲು ಕರೆದೊಯ್ದು ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ತಾಯಿ-ಮಗಳು ತಮ್ಮ ಕಾರು ನಿಲ್ಲಿಸಲು ಭದ್ರತಾ ಸಿಬ್ಬಂದಿ ಅಜಿತ್ ಅವರ ಸಹಾಯ ಕೋರಿದ್ದರು. ಆ ಬಳಿಕ ಅವರ ಕಾರಿನಲ್ಲಿದ್ದ ಚಿನ್ನ ಕಾಣೆಯಾಗಿದೆ ಎಂದು ಹೇಳಲಾಗ್ತಿದೆ. ಚಿನ್ನ ಕಳವಾಗಿರಬಹುದು ಎಂದು ಅಜಿತ್ ಮೇಲೆ ಸಂಶಯ ವ್ಯಕ್ತಪಡಿಸಿ ತಾಯಿ, ಮಗಳು ದೂರು ಕೊಟ್ಟಿದ್ದರು. ಪೊಲೀಸರು ಅಂದೇ ಅಜಿತ್, ಅವರ ಸಹೋದರ ನವೀನ್ ಮತ್ತು ಇತರ ಮೂವರನ್ನು ಬಂಧಿಸಿದ್ದರು. ಆದರೆ, ಜೂನ್ 27 ರಂದು ಸಂಜೆಯ ವೇಳೆಗೆ ಎಲ್ಲರನ್ನು ಬಿಡುಗಡೆ ಮಾಡಿದ್ದರು.

ನಂತರ, ಮತ್ತೊಮ್ಮೆ ಅಜಿತ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಬೇರೆ ಬೇರೆ ಕಡೆಗಳಿಗೆ ಕರೆದೊಯ್ದು ಥಳಿಸಿ ಅಜಿತ್ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಅಜಿತ್ ದೇಹದಲ್ಲಿ ಬಾಹ್ಯವಾಗಿ 15ಕ್ಕೂ ಹೆಚ್ಚು ಗಾಯದ ಗುರುತುಗಳು ಮತ್ತು ಆಂತರಿಕವಾಗಿ ಗಂಭೀರವಾದ ಗಾಯಗಳು ಪತ್ತೆಯಾಗಿವೆ ಎಂದು ಕೆಲ ಮಾಧ್ಯಮ ವರದಿಗಳು ಹೇಳಿವೆ. ಇನ್ನೂ ಕೆಲ ವರದಿಗಳು 30-40 ಗಾಯದ ಗುರುತುಗಳ ಬಗ್ಗೆ ವರದಿ ಮಾಡಿವೆ.

ವಿಶೇಷ ಪೊಲೀಸ್ ತಂಡ ಬಂಧಿಸಿ ಕರೆದೊಯ್ದು ನನ್ನ ಮುಂದೆಯೇ ನನ್ನ ಸಹೋದರನಿಗೆ ಕ್ರೂರವಾಗಿ ಥಳಿಸಿದ್ದಾರೆ. ಬಳಿಕ ಜೂನ್ 29ರಂದು ಖಾಸಗಿ ಆಸ್ಪತ್ರೆಯಲ್ಲಿ ಆತ ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ ಎಂದು ಅಜಿತ್ ಅವರ ಸಹೋದರ ನವೀನ್ ಕುಮಾರ್ ಹೇಳಿದ್ದಾರೆ.

ಕಸ್ಟಡಿ ಚಿತ್ರಹಿಂಸೆ ಮತ್ತು ಸಾವಿನ ಬಗ್ಗೆ ಸಬ್-ಮ್ಯಾಜಿಸ್ಟ್ರೇಟ್ ವೆಂಕಟೇಶ್ ಪ್ರಸಾದ್ ಅವರು ವಿಚಾರಣೆ ನಡೆಸುತ್ತಿದ್ದು, ನವೀನ್ ಕುಮಾರ್ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿ ಪೊಲೀಸರ ವಿರುದ್ಧ ಸಾಕ್ಷ್ಯ ನುಡಿದಿದ್ದಾರೆ.

ಶಿವಗಂಗೆ ಜಿಲ್ಲಾ ಪೊಲೀಸ್ ಇಲಾಖೆ ಪ್ರಭು, ಶಂಕರ ಮಣಿಕಂದನ್, ರಾಜ, ಆನಂದ್, ಕಣ್ಣನ್ ಮತ್ತು ರಾಮಚಂದ್ರನ್ ಎಂಬ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ಆದರೆ, ಇದು ಕಣ್ಣೊರೆಸುವ ತಂತ್ರ ಎಂದು ನವೀನ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಮಗೆ ಯಾವುದೇ ಹಣದ ಅಗತ್ಯವಿಲ್ಲ. ನನ್ನ ಸಹೋದರನಿಗೆ ನ್ಯಾಯ ಬೇಕು. ಅವನು ಯಾವುದೇ ತಪ್ಪು ಮಾಡಿಲ್ಲ, ಆದರೆ ಇಬ್ಬರು ಮಹಿಳೆಯರ ಮೌಖಿಕ ದೂರಿನ ಆಧಾರದ ಮೇಲೆ ಪೊಲೀಸರು ಅವನನ್ನು ಕೊಂದರು” ಎಂದು ನವೀನ್ ಕುಮಾರ್ ಸೋಮವಾರ ಕಣ್ಣೀರು ಹಾಕಿದ್ದಾರೆ.

ಅಜಿತ್ ಅವರ ಲಾಕಪ್‌ ಡೆತ್ ತಮಿಳುನಾಡಿನಲ್ಲಿ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷಗಳು ಮಾತ್ರವಲ್ಲದೆ, ಸ್ವಪಕ್ಷ ಡಿಎಂಕೆ ನಾಯಕರು ಕೂಡ ಘಟನೆಯನ್ನು ಖಂಡಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಡಿಎಂಕೆ ಪ್ರತಿಪಕ್ಷದಲ್ಲಿ ಇದ್ದಾಗ ಜನರ ಬಗ್ಗೆ ಅತಿ ಕಾಳಜಿ ಹೊಂದಿದ್ದ ಸಿಎಂ ಎಂ.ಕೆ ಸ್ಟಾಲಿನ್, ಈಗ ಏಕೆ ಮೌನವಾಗಿದ್ದಾರೆ? ಎಂದು ಪ್ರತಿಪಕ್ಷಗಳಾದ ಎಐಎಡಿಎಂಕೆ ಮತ್ತು ಬಿಜೆಪಿ ಪ್ರಶ್ನಿಸಿದೆ.

2020ರ ಜೂನ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ಸಾತಂಕುಲಂನ ತಂದೆ-ಮಗ ಪಿ ಜಯರಾಜ್ ಮತ್ತು ಎಮ್ಯಾನುಯೆಲ್ ಬೆನ್ನಿಕ್ಸ್ ಅವರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಡಿಎಂಕೆ ತೋರಿದ ಉತ್ಸಾಹದ ಬಗ್ಗೆ ಪ್ರತಿಪಕ್ಷಗಳು ಉಲ್ಲೇಖಿಸಿವೆ.

ಬಿಜೆಪಿಯ ಪ್ರಕಾರ, ಡಿಎಂಕೆ ಸರ್ಕಾರ ಅಧಿಕಾರ ವಹಿಸಿಕೊಂಡ ಮೇ 2021 ರಿಂದ ಅಜಿತ್ ಕುಮಾರ್ ಅವರದ್ದು ಸಾವು ಪೊಲೀಸ್ ಕಸ್ಟಡಿಯಲ್ಲಿ ಸಂಭವಿಸಿದ 24ನೇ ಪ್ರಕರಣವಾಗಿದೆ.

ಮೃತನ ಸಹೋದರ ಪೊಲೀಸ್ ಚಿತ್ರಹಿಂಸೆಗೆ ಪ್ರತ್ಯಕ್ಷದರ್ಶಿ ಎಂದು ಆರೋಪಿಸಿರುವುದರಿಂದ, ಮದ್ರಾಸ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ವಿವರವಾದ ತನಿಖೆ ನಡೆಯಬೇಕು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಒತ್ತಾಯಿಸಿದ್ದಾರೆ.

ಯುಪಿ: ಬಿಎಸ್‌ಎಫ್ ಯೋಧನ ಪತ್ನಿ ಮೇಲೆ ಮೈದುನರಿಂದಲೇ ಸರಣಿ ಅತ್ಯಾಚಾರ, ವಿಡಿಯೋ ಬ್ಲಾಕ್‌ಮೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...