Homeಮುಖಪುಟತಮಿಳುನಾಡು| ಸೆಕ್ಯೂರಿಟಿ ಗಾರ್ಡ್‌ ಲಾಕಪ್ ಡೆತ್ ಪ್ರಕರಣ: ಐವರು ಪೊಲೀಸರ ಬಂಧನ

ತಮಿಳುನಾಡು| ಸೆಕ್ಯೂರಿಟಿ ಗಾರ್ಡ್‌ ಲಾಕಪ್ ಡೆತ್ ಪ್ರಕರಣ: ಐವರು ಪೊಲೀಸರ ಬಂಧನ

- Advertisement -
- Advertisement -

ತಮಿಳುನಾಡಿನ ಶಿವಗಂಗೆ ಜಿಲ್ಲೆಯಲ್ಲಿ ನಡೆದ ದೇವಾಲಯದ ಭದ್ರತಾ ಸಿಬ್ಬಂದಿಯ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ (ಜೂನ್‌.30) ತಡರಾತ್ರಿ ಐವರು ಪೊಲೀಸರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿದ ಬೆನ್ನಲ್ಲೇ ಪೊಲೀಸರ ಬಂಧನವಾಗಿದೆ.

ಬಿ. ಅಜಿತ್ ಕುಮಾರ್ (27) ಸಾವಿಗೀಡಾದ ಯುವಕ. ಜೂನ್ 27ರಂದು ತಿರುಪುವನಂ ಮಾದಾಪುರಂ ಭದ್ರಕಾಳಿಯಮ್ಮನ್ ದೇವಸ್ಥಾನದಲ್ಲಿ ತಮ್ಮ ಕಾರಿನಿಂದ 10 ಗ್ರಾಂ. ಚಿನ್ನ ಕಾಣೆಯಾಗಿದೆ ಎಂದು ತಾಯಿ-ಮಗಳು ದೂರು ನೀಡಿದ್ದರು. ಪ್ರಕರಣದ ತನಿಖೆಗೆ ರಚಿಸಿದ್ದ ವಿಶೇಷ ತಂಡದ 6 ಮಂದಿ ಪೊಲೀಸರು, ಪ್ರಕರಣದಲ್ಲಿ ಭದ್ರತಾ ಸಿಬ್ಬಂದಿ ಅಜಿತ್ ಅವರ ಪಾತ್ರದ ಬಗ್ಗೆ ವಿಚಾರಣೆ ನಡೆಸಲು ಕರೆದೊಯ್ದು ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ತಾಯಿ-ಮಗಳು ತಮ್ಮ ಕಾರು ನಿಲ್ಲಿಸಲು ಭದ್ರತಾ ಸಿಬ್ಬಂದಿ ಅಜಿತ್ ಅವರ ಸಹಾಯ ಕೋರಿದ್ದರು. ಆ ಬಳಿಕ ಅವರ ಕಾರಿನಲ್ಲಿದ್ದ ಚಿನ್ನ ಕಾಣೆಯಾಗಿದೆ ಎಂದು ಹೇಳಲಾಗ್ತಿದೆ. ಚಿನ್ನ ಕಳವಾಗಿರಬಹುದು ಎಂದು ಅಜಿತ್ ಮೇಲೆ ಸಂಶಯ ವ್ಯಕ್ತಪಡಿಸಿ ತಾಯಿ, ಮಗಳು ದೂರು ಕೊಟ್ಟಿದ್ದರು. ಪೊಲೀಸರು ಅಂದೇ ಅಜಿತ್, ಅವರ ಸಹೋದರ ನವೀನ್ ಮತ್ತು ಇತರ ಮೂವರನ್ನು ಬಂಧಿಸಿದ್ದರು. ಆದರೆ, ಜೂನ್ 27 ರಂದು ಸಂಜೆಯ ವೇಳೆಗೆ ಎಲ್ಲರನ್ನು ಬಿಡುಗಡೆ ಮಾಡಿದ್ದರು.

ನಂತರ, ಮತ್ತೊಮ್ಮೆ ಅಜಿತ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಬೇರೆ ಬೇರೆ ಕಡೆಗಳಿಗೆ ಕರೆದೊಯ್ದು ಥಳಿಸಿ ಅಜಿತ್ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಅಜಿತ್ ದೇಹದಲ್ಲಿ ಬಾಹ್ಯವಾಗಿ 15ಕ್ಕೂ ಹೆಚ್ಚು ಗಾಯದ ಗುರುತುಗಳು ಮತ್ತು ಆಂತರಿಕವಾಗಿ ಗಂಭೀರವಾದ ಗಾಯಗಳು ಪತ್ತೆಯಾಗಿವೆ ಎಂದು ಕೆಲ ಮಾಧ್ಯಮ ವರದಿಗಳು ಹೇಳಿವೆ. ಇನ್ನೂ ಕೆಲ ವರದಿಗಳು 30-40 ಗಾಯದ ಗುರುತುಗಳ ಬಗ್ಗೆ ವರದಿ ಮಾಡಿವೆ.

ವಿಶೇಷ ಪೊಲೀಸ್ ತಂಡ ಬಂಧಿಸಿ ಕರೆದೊಯ್ದು ನನ್ನ ಮುಂದೆಯೇ ನನ್ನ ಸಹೋದರನಿಗೆ ಕ್ರೂರವಾಗಿ ಥಳಿಸಿದ್ದಾರೆ. ಬಳಿಕ ಜೂನ್ 29ರಂದು ಖಾಸಗಿ ಆಸ್ಪತ್ರೆಯಲ್ಲಿ ಆತ ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ ಎಂದು ಅಜಿತ್ ಅವರ ಸಹೋದರ ನವೀನ್ ಕುಮಾರ್ ಹೇಳಿದ್ದಾರೆ.

ಕಸ್ಟಡಿ ಚಿತ್ರಹಿಂಸೆ ಮತ್ತು ಸಾವಿನ ಬಗ್ಗೆ ಸಬ್-ಮ್ಯಾಜಿಸ್ಟ್ರೇಟ್ ವೆಂಕಟೇಶ್ ಪ್ರಸಾದ್ ಅವರು ವಿಚಾರಣೆ ನಡೆಸುತ್ತಿದ್ದು, ನವೀನ್ ಕುಮಾರ್ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿ ಪೊಲೀಸರ ವಿರುದ್ಧ ಸಾಕ್ಷ್ಯ ನುಡಿದಿದ್ದಾರೆ.

ಶಿವಗಂಗೆ ಜಿಲ್ಲಾ ಪೊಲೀಸ್ ಇಲಾಖೆ ಪ್ರಭು, ಶಂಕರ ಮಣಿಕಂದನ್, ರಾಜ, ಆನಂದ್, ಕಣ್ಣನ್ ಮತ್ತು ರಾಮಚಂದ್ರನ್ ಎಂಬ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ಆದರೆ, ಇದು ಕಣ್ಣೊರೆಸುವ ತಂತ್ರ ಎಂದು ನವೀನ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಮಗೆ ಯಾವುದೇ ಹಣದ ಅಗತ್ಯವಿಲ್ಲ. ನನ್ನ ಸಹೋದರನಿಗೆ ನ್ಯಾಯ ಬೇಕು. ಅವನು ಯಾವುದೇ ತಪ್ಪು ಮಾಡಿಲ್ಲ, ಆದರೆ ಇಬ್ಬರು ಮಹಿಳೆಯರ ಮೌಖಿಕ ದೂರಿನ ಆಧಾರದ ಮೇಲೆ ಪೊಲೀಸರು ಅವನನ್ನು ಕೊಂದರು” ಎಂದು ನವೀನ್ ಕುಮಾರ್ ಸೋಮವಾರ ಕಣ್ಣೀರು ಹಾಕಿದ್ದಾರೆ.

ಅಜಿತ್ ಅವರ ಲಾಕಪ್‌ ಡೆತ್ ತಮಿಳುನಾಡಿನಲ್ಲಿ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷಗಳು ಮಾತ್ರವಲ್ಲದೆ, ಸ್ವಪಕ್ಷ ಡಿಎಂಕೆ ನಾಯಕರು ಕೂಡ ಘಟನೆಯನ್ನು ಖಂಡಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಡಿಎಂಕೆ ಪ್ರತಿಪಕ್ಷದಲ್ಲಿ ಇದ್ದಾಗ ಜನರ ಬಗ್ಗೆ ಅತಿ ಕಾಳಜಿ ಹೊಂದಿದ್ದ ಸಿಎಂ ಎಂ.ಕೆ ಸ್ಟಾಲಿನ್, ಈಗ ಏಕೆ ಮೌನವಾಗಿದ್ದಾರೆ? ಎಂದು ಪ್ರತಿಪಕ್ಷಗಳಾದ ಎಐಎಡಿಎಂಕೆ ಮತ್ತು ಬಿಜೆಪಿ ಪ್ರಶ್ನಿಸಿದೆ.

2020ರ ಜೂನ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ಸಾತಂಕುಲಂನ ತಂದೆ-ಮಗ ಪಿ ಜಯರಾಜ್ ಮತ್ತು ಎಮ್ಯಾನುಯೆಲ್ ಬೆನ್ನಿಕ್ಸ್ ಅವರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಡಿಎಂಕೆ ತೋರಿದ ಉತ್ಸಾಹದ ಬಗ್ಗೆ ಪ್ರತಿಪಕ್ಷಗಳು ಉಲ್ಲೇಖಿಸಿವೆ.

ಬಿಜೆಪಿಯ ಪ್ರಕಾರ, ಡಿಎಂಕೆ ಸರ್ಕಾರ ಅಧಿಕಾರ ವಹಿಸಿಕೊಂಡ ಮೇ 2021 ರಿಂದ ಅಜಿತ್ ಕುಮಾರ್ ಅವರದ್ದು ಸಾವು ಪೊಲೀಸ್ ಕಸ್ಟಡಿಯಲ್ಲಿ ಸಂಭವಿಸಿದ 24ನೇ ಪ್ರಕರಣವಾಗಿದೆ.

ಮೃತನ ಸಹೋದರ ಪೊಲೀಸ್ ಚಿತ್ರಹಿಂಸೆಗೆ ಪ್ರತ್ಯಕ್ಷದರ್ಶಿ ಎಂದು ಆರೋಪಿಸಿರುವುದರಿಂದ, ಮದ್ರಾಸ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ವಿವರವಾದ ತನಿಖೆ ನಡೆಯಬೇಕು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಒತ್ತಾಯಿಸಿದ್ದಾರೆ.

ಯುಪಿ: ಬಿಎಸ್‌ಎಫ್ ಯೋಧನ ಪತ್ನಿ ಮೇಲೆ ಮೈದುನರಿಂದಲೇ ಸರಣಿ ಅತ್ಯಾಚಾರ, ವಿಡಿಯೋ ಬ್ಲಾಕ್‌ಮೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...