Homeಅಂತರಾಷ್ಟ್ರೀಯಥಾಯ್ಲೆಂಡ್ ಪ್ರಧಾನಿಯ ಅಮಾನತಿಗೆ ಕಾರಣವಾದ ಫೋನ್ ಕಾಲ್: ಅದರಲ್ಲಿ ಅಂತದ್ದೇನಿದೆ?

ಥಾಯ್ಲೆಂಡ್ ಪ್ರಧಾನಿಯ ಅಮಾನತಿಗೆ ಕಾರಣವಾದ ಫೋನ್ ಕಾಲ್: ಅದರಲ್ಲಿ ಅಂತದ್ದೇನಿದೆ?

- Advertisement -
- Advertisement -

ಮಂಗಳವಾರ ಸಾಂವಿಧಾನಿಕ ನ್ಯಾಯಾಲಯವು ಪ್ರಧಾನಿ ಪೇಟೊಂಗ್ಟಾರ್ನ್ ಶಿನವಾತ್ರ ಅವರನ್ನು ಅಮಾನತುಗೊಳಿಸಿರುವುದು ಥಾಯ್ಲೆಂಡ್ ರಾಜಕೀಯ ಮತ್ತು ರಾಜತಾಂತ್ರಿಕ ವ್ಯವಸ್ಥೆಯಲ್ಲಿ ಸಂಚಲನ ಮೂಡಿಸಿದೆ.

ಮಾರಕ ಗಡಿ ಘರ್ಷಣೆಯ ನಂತರ ಕಾಂಬೋಡಿಯನ್ ಸೆನೆಟ್ ಅಧ್ಯಕ್ಷ ಹುನ್ ಸೇನ್ ಅವರೊಂದಿಗಿನ ಫೋನ್ ಕರೆ ಸೋರಿಕೆಯಾದ ಕುರಿತ ತನಿಖೆಯ ಮಧ್ಯೆ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ಹುನ್ ಸೇನ್ ಅವರೊಂದಿಗಿನ ಫೋನ್ ಸಂಭಾಷಣೆಯ ಸಮಯದಲ್ಲಿ ನೈತಿಕ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುವವರೆಗೆ ಪೇಟೊಂಗ್ಟಾರ್ನ್ ಶಿನವಾತ್ರ ಅವರನ್ನು ಪ್ರಧಾನಿ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ.

ಸೋರಿಕೆಯಾದ ಫೋನ್ ಕರೆಯಲ್ಲೇನಿತ್ತು?

ಮೇ 28, 2025ರಂದು ಥಾಯ್ ಮತ್ತು ಕಾಂಬೋಡಿಯನ್ ಪಡೆಗಳ ನಡುವಿನ ಗಡಿ ಘರ್ಷಣೆಯಲ್ಲಿ ಒಬ್ಬ ಕಾಂಬೋಡಿಯನ್ ಸೈನಿಕ ಸಾವನ್ನಪ್ಪಿದ ವಾರಗಳ ನಂತರ, ಅಂದರೆ ಜೂನ್ 15ರಂದು ಫೋನ್ ಸಂಭಾಷಣೆ ನಡೆದಿದೆ.

ಈ ಕರೆ ಸೋರಿಕೆಯಾಗಿ ಥಾಯ್ಲೆಂಡ್ ರಾಜಕೀಯದಲ್ಲಿ ಬಿರುಗಾಳಿಗೆ ಎದ್ದಿತ್ತು. ಪೇಟೊಂಗ್ಟಾರ್ನ್ ರಾಷ್ಟ್ರೀಯ ಹಿತಾಸಕ್ತಿಗಳ ವಿಷಯದಲ್ಲಿ ರಾಜಿ ಮಾಡಿಕೊಂಡಿದ್ದಾರೆ ಮತ್ತು ಮಿಲಿಟರಿ ಅಧಿಕಾರವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ವಿಮರ್ಶಕರು ಆರೋಪಿಸಿದ್ದರು.

ಫೋನ್ ಕರೆಯನ್ನು ಹುನ್ ಸೇನ್ ರೆಕಾರ್ಡ್ ಮಾಡಿದ್ದಾರೆ. ನಂತರ ಅದು ಸೋರಿಕೆಯಾಗಿದೆ. ರೆಕಾರ್ಡ್ ಮಾಡಿದ ಸಂಭಾಷಣೆಯನ್ನು 80ಕ್ಕೂ ಹೆಚ್ಚು ಜನರೊಂದಿಗೆ ಹಂಚಿಕೊಂಡಿರುವುದಾಗಿ ಹುನ್ ಸೇನ್ ಹೇಳಿಕೊಂಡಿದ್ದಾರೆ.

ಫೋನ್ ಸಂಭಾಷಣೆಯಲ್ಲಿ, ಪೇಟೊಂಗ್ಟಾರ್ನ್ ಮತ್ತು ಹುನ್ ಸೇನ್ ಥಾಯ್ಲೆಂಡ್-ಕಾಂಬೋಡಿಯಾ ಗಡಿ ಉದ್ವಿಗ್ನತೆಯನ್ನು ಹೇಗೆ ಪರಿಹರಿಸುವುದು ಮತ್ತು ಘರ್ಷಣೆಯ ನಂತರ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಸಬೇಕೆ? ಎಂದು ಚರ್ಚಿಸಿರುವುದು ಇದೆ ಎಂದು ವರದಿಯಾಗಿದೆ.

ಬಹು ವರದಿಗಳ ಪ್ರಕಾರ, ಪೇಟೊಂಗ್ಟಾರ್ನ್ ಫೋನ್ ಕರೆಯಲ್ಲಿ ಹುನ್ ಸೇನ್ ಅವರನ್ನು ‘ಅಂಕಲ್’ ಎಂದು ಉಲ್ಲೇಖಿಸಿದ್ದಾರೆ. ಹುನ್ ಸೇನ್ ಪೇಟೊಂಗ್ಟಾರ್ನ್ ಅವರ ತಂದೆ ಥಾಕ್ಸಿನ್ ಶಿನವಾತ್ರ ಅವರ ಆಪ್ತ ಸ್ನೇಹಿತರಾಗಿದ್ದಾರೆ, ಅವರು ಕೂಡ ಥಾಯ್ಲೆಂಡ್ ಪ್ರಧಾನಿಯಾಗಿದ್ದರು.

ಥಾಯ್ಲೆಂಡ್‌ನ ‘ಇನ್ನೊಂದು ಕಡೆಯ’ ಮಾತನ್ನು ಕೇಳಬೇಡಿ ಎಂದು ಪೇಟೊಂಗ್ಟಾರ್ನ್ ಹುನ್ ಸೇನ್ ಅವರನ್ನು ಒತ್ತಾಯಿಸಿದ್ದಾರೆ ಮತ್ತು ಕಾಂಬೋಡಿಯಾವನ್ನು ನೇರವಾಗಿ ಟೀಕಿಸಿದ ಥಾಯ್ ಸೇನಾ ಕಮಾಂಡರ್ ಅನ್ನು ಉಲ್ಲೇಖಿಸಿದ್ದಾರೆ. ಸೋರಿಕೆಯಾದ ಫೋನ್ ಕರೆಯಲ್ಲಿ, ಪೇಟೊಂಗ್ಟಾರ್ನ್ ಸೇನಾ ಕಮಾಂಡರ್ ಅನ್ನು ‘ವಿರೋಧಿ’ ಎಂದು ಹಣೆಪಟ್ಟಿ ಕಟ್ಟುವುದು ಸಹ ಕೇಳಬಹುದು ಎಂದು
ವರದಿಯಾಗಿದೆ.

ಅಷ್ಟಕ್ಕೆ ಸುಮ್ಮನಾಗದ ಪೇಟೊಂಗ್ಟಾರ್ನ್ ಸೇನಾ ಕಮಾಂಡರ್ ಬಗ್ಗೆ ಉಲ್ಲೇಖಿಸುತ್ತಾ, “ಅವರು ಕೂಲ್ ಆಗಿ ಕಾಣಲು ಬಯಸುತ್ತಾರೆ” ಎಂದು ಹೇಳಿದ್ದಾರೆ. ಹುನ್‌ಸೇನ್ ಏನು ಬಯಸುತ್ತಿದ್ದಾರೆ ಎಂದು ಕೇಳಿರುವ ಪೇಟೊಂಗ್ಟಾರ್ನ್, ಅವರು ಬಯಸಿದ್ದನ್ನು ನೆರವೇರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಪೇಟೊಂಗ್ಟಾರ್ನ್ ಅವರ ಮಾತುಗಳು ಥಾಯ್ಲೆಂಡ್‌ನ ಹಿತಾಸಕ್ತಿಯಲ್ಲಿ ರಾಜಿ ಮಾಡಿಕೊಂಡತಿದೆ. ಇದು ರಾಜತಾಂತ್ರಿಕ ಮತ್ತು ಮಿಲಿಟರಿ ನಿಲುವಿಗೆ ಹಾನಿ ಮಾಡುವ ಸಾಧ್ಯತೆಯಿದೆ ಎಂದು ಆರೋಪಿಸಲಾಗಿದೆ. ಪೇಟೊಂಗ್ಟಾರ್ನ್ ಫೋನ್ ಕರೆ ಕುರಿತು ಕ್ಷಮೆಯಾಚಿಸಿದರೂ, ತನ್ನ ಮಾತುಕತೆ ಕಾರ್ಯ ತಂತ್ರದ ಭಾಗ ಎಂದು ಸಮರ್ಥಿಸಿಕೊಂಡಿದ್ದಾರೆ.

ಥಾಯ್-ಕಾಂಬೋಡಿಯನ್ ಗಡಿಯಲ್ಲಿರುವ ವಿವಾದಿತ ಪ್ರದೇಶದಲ್ಲಿ ಮೇ 28ರಂದು ನಡೆದ ಸಣ್ಣ ಗುಂಡಿನ ಚಕಮಕಿಯಿಂದ ಸಂಘರ್ಷ ಉಂಟಾಗಿದೆ. ಎರಡೂ ಕಡೆಯ ಸೈನಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ಘಟನೆಯು ದೀರ್ಘಕಾಲದ ಪ್ರಾದೇಶಿಕ ಉದ್ವಿಗ್ನತೆಯನ್ನು ಮತ್ತೆ ಮುನ್ನಲೆಗೆ ತಂದಿತ್ತು. ಆದರೆ, ಘರ್ಷಣೆಯ ನಂತರ ಎರಡೂ ಸರ್ಕಾರಗಳು ಸಮಸ್ಯೆಯನ್ನು ರಾಜತಾಂತ್ರಿಕವಾಗಿ ಪರಿಹರಿಸಿಕೊಳ್ಳುವ ಉತ್ಸಾಹ ತೋರಿತ್ತು.

ಇದರ ಹೊರತಾಗಿಯೂ, ಪ್ರತೀಕಾರದ ಕ್ರಮಗಳು ಮುಂದುವರೆದಿತ್ತು. ಪರಿಣಾಮ ಥಾಯ್ಲೆಂಡ್ ತೀವ್ರ ಗಡಿ ನಿರ್ಬಂಧಗಳನ್ನು ವಿಧಿಸಿತ್ತು. ಅಗತ್ಯ ಮತ್ತು ಸೀಮಿತ ಗಡಿ ದಾಟುವಿಕೆಗಳಿಗೆ ಮಾತ್ರ ಅವಕಾಶ ನೀಡಿತ್ತು. ಕಾಂಬೋಡಿಯಾ ಥಾಯ್ ಮಾಧ್ಯಮವನ್ನು ನಿಷೇಧಿಸುವ ಮೂಲಕ, ಹಣ್ಣು ಮತ್ತು ತರಕಾರಿ ಆಮದುಗಳನ್ನು ನಿಲ್ಲಿಸುವ ಮೂಲಕ ಮತ್ತು ಥಾಯ್ ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕಗಳನ್ನು ಬಹಿಷ್ಕರಿಸುವ ಮೂಲಕ ಪ್ರತಿಕಾರ ತೀರಿಸಿತ್ತು. ಅಲ್ಲದೆ, ಕಾಂಬೋಡಿಯಾ ಥಾಯ್ಲೆಂಡ್‌ನಿಂದ ಇಂಧನ ಆಮದನ್ನು ಸಹ ಸ್ಥಗಿತಗೊಳಿಸಿದೆ.

ಥಾಯ್ಲೆಂಡ್ ಮತ್ತು ಕಾಂಬೋಡಿಯಾ 800 ಕಿ.ಮೀ.ಗೂ ಹೆಚ್ಚು ಉದ್ದದ ಭೂ ಗಡಿಯನ್ನು ಹಂಚಿಕೊಂಡಿವೆ. ಕೆಲ ಗಡಿ ಭಾಗಗಳನ್ನು ಇನ್ನೂ ಗುರುತಿಸಲಾಗಿಲ್ಲ ಅಥವಾ ವಿವಾದಾತ್ಮಕವಾಗಿಯೇ ಉಳಿದಿವೆ. ಹೆಚ್ಚಿನ ವಿವಾದಿತ ಪ್ರದೇಶಗಳು 1907ರ ಫ್ರೆಂಚ್ ವಸಾಹತುಶಾಹಿ ಆಳ್ವಿಕೆಯಲ್ಲಿ ಚಿತ್ರಿಸಿದ ನಕ್ಷೆಗಿಂತ ಹಿಂದಿನವು. ಇದನ್ನು ಕಾಂಬೋಡಿಯಾ ತನ್ನ ಪ್ರದೇಶ ಎಂದು ಪ್ರತಿಪಾದಿಸಿಕೊಂಡು ಬಂದಿವೆ. ಥಾಯ್ಲೆಂಡ್ ವಿರೋಧಿಸಿದೆ.

ಕಳೆದ ಫೆಬ್ರವರಿಯಲ್ಲಿ, ಕಾಂಬೋಡಿಯನ್ ಪಡೆಗಳು ವಿವಾದಿತ ದೇವಾಲಯ ಪ್ರದೇಶವನ್ನು ಪ್ರವೇಶಿಸಿ ತಮ್ಮ ರಾಷ್ಟ್ರಗೀತೆಯನ್ನು ಹಾಡಿದಾಗ ಉದ್ವಿಗ್ನತೆ ಭುಗಿಲೆದ್ದಿತ್ತು. ಇದು ಥಾಯ್ ಸೈನಿಕರನ್ನು ಕೆರಳಿಸಿತ್ತು. ಐತಿಹಾಸಿಕವಾಗಿ, ಎರಡೂ ರಾಷ್ಟ್ರಗಳು ಹಕ್ಕು ಸಾಧಿಸಿರುವ 1,000 ವರ್ಷಗಳಷ್ಟು ಹಳೆಯದಾದ ಪ್ರಿಯಾ ವಿಹಿಯರ್ ದೇವಾಲಯದ ಸುತ್ತಲೂ ಅತ್ಯಂತ ಹಿಂಸಾತ್ಮಕ ಘರ್ಷಣೆಗಳು ನಡೆದಿತ್ತು.

1962ರಲ್ಲಿ, ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ದೇವಾಲಯದ ವಿಷಯದಲ್ಲಿ ಕಾಂಬೋಡಿಯಾದ ಪರವಾಗಿ ತೀರ್ಪು ನೀಡಿತ್ತು. 2011ರಲ್ಲಿ ನಡೆದ ಮಾರಕ ಘರ್ಷಣೆಗಳ ನಂತರ, ಐಸಿಜೆ 2013ರಲ್ಲಿ ಆ ಪ್ರದೇಶದ ಮೇಲೆ ಕಾಂಬೋಡಿಯಾದ ಸಾರ್ವಭೌಮತ್ವವನ್ನು ಪುನರುಚ್ಚರಿಸಿತ್ತು. ಈ ನಿರ್ಧಾರವು ಥಾಯ್ಲೆಂಡ್‌ನ ಆಕ್ರೋಶಕ್ಕೆ ಕಾರಣವಾಗಿದೆ.

ಥಾಯ್ಲೆಂಡ್-ಕಾಂಬೋಡಿಯಾ ಉದ್ವಿಗ್ನತೆಯಲ್ಲಿ ಹೊಸತೇನಿದೆ?

ಮೇ 28ರಂದು ಘರ್ಷಣೆ ನಡೆದ ಸ್ಥಳ ಸೇರಿದಂತೆ ಬಹು ವಿವಾದಿತ ಪ್ರದೇಶಗಳಿಗೆ ಕಾನೂನು ಪರಿಹಾರವನ್ನು ಕೋರಿ ಕಾಂಬೋಡಿಯಾ ಐಸಿಜೆ ಮೊರೆ ಹೋಗಿದೆ. ಆದರೆ, ಥಾಯ್ಲೆಂಡ್ ಐಸಿಜೆ ನ್ಯಾಯವ್ಯಾಪ್ತಿಯನ್ನು ತಿರಸ್ಕರಿಸಿದೆ. 2000ರಲ್ಲಿ ಸ್ಥಾಪಿಸಲಾದ ದ್ವಿಪಕ್ಷೀಯ ಕಾರ್ಯವಿಧಾನದ ಮೂಲಕ ಭೂ ಗಡಿ ಗುರುತಿಸುವಿಕೆಗೆ ಜವಾಬ್ದಾರರಾಗಿರುವ ಜಂಟಿ ಸಮಿತಿಯ ಮೂಲಕ ಪರಿಹಾರವನ್ನು ಕೋರಿದೆ.

ಕಾಂಬೋಡಿಯಾ ಇನ್ನು ಮುಂದೆ ದ್ವಿಪಕ್ಷೀಯ ಚರ್ಚೆಗಳನ್ನು ಮುಂದುವರಿಸುವುದಿಲ್ಲ ಎಂದಿದೆ. ಇದು ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸಿದೆ. ಎರಡೂ ಕಡೆಗಳಲ್ಲಿ ರಾಷ್ಟ್ರಪರ ವಾಗ್ವಾದಗಳು ಹೆಚ್ಚಿದ್ದು, ರಾಜತಾಂತ್ರಿಕತೆಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ.

ಥಾಯ್ಲೆಂಡ್ ಮತ್ತು ಕಾಂಬೋಡಿಯಾ ನಡುವಿನ ಘರ್ಷಣೆಯು ಕೇವಲ ಗಡಿ ವಿವಾದಕ್ಕೆ ಸೀಮಿತವಾಗಿಲ್ಲ. ಎರಡೂ ದೇಶಗಳ ನಡುವೆ ಆಳವಾದ ಸಾಂಸ್ಕೃತಿಕ ದ್ವೇಷವು ಶತಮಾನಗಳ ಹಿಂದಿನಿಂದ ಇದೆ. ಆಗ ಅವು ದೊಡ್ಡ ಮತ್ತು ಸ್ಪರ್ಧಾತ್ಮಕ ಸಾಮ್ರಾಜ್ಯಗಳಾಗಿದ್ದವು. ಇತ್ತೀಚಿನ ದಿನಗಳಲ್ಲಿ, ಫ್ರೆಂಚ್ ವಸಾಹತುಶಾಹಿ ಮತ್ತು 1970ರ ದಶಕದಲ್ಲಿ ಕಮ್ಯುನಿಸ್ಟ್ ಖಮೇರ್ ರೂಜ್‌ನ ಕ್ರೂರ ಆಳ್ವಿಕೆಯಿಂದ ಕಾಂಬೋಡಿಯಾದ ಅಭಿವೃದ್ಧಿಗೆ ಅಡ್ಡಿಯಾಗಿದೆ. ಆದ್ದರಿಂದ ಅದು ಥಾಯ್ಲೆಂಡ್‌ಗಿಂತ ಬಹಳ ಹಿಂದೆ ಇದೆ ಎಂಬ ಅಸಮಾಧಾನದ ಭಾವನೆ ಇದೆ.

ಬಾಕ್ಸಿಂಗ್ ಮತ್ತು ಮಾಸ್ಕ್‌ ಡ್ಯಾನ್ಸ್‌ನಿಂದ ಹಿಡಿದು ಸಾಂಪ್ರದಾಯಿಕ ಉಡುಪು ಮತ್ತು ಆಹಾರದವರೆಗೆ ಸಾಂಸ್ಕೃತಿಕ ಉತ್ಪನ್ನಗಳ ಹಕ್ಕುಗಳಿಗಾಗಿ ಎರಡೂ ದೇಶಗಳು ಹೋರಾಡುತ್ತಿವೆ.

‘ಭಾರತ-ಪಾಕ್ ಯುದ್ಧ ತಡೆದಿದ್ದು ನಾನೇ’: ಶ್ವೇತಭವನದಲ್ಲಿ ಪುನರುಚ್ಚರಿಸಿದ ಟ್ರಂಪ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...