Homeಕರ್ನಾಟಕಆರನೇ ದಿನಕ್ಕೆ ಕಾಲಿಟ್ಟ 'ಭೂಮಿ ಸತ್ಯಾಗ್ರಹ': ಫ್ರೀಡಂ ಪಾರ್ಕ್‌, ಚನ್ನರಾಯಪಟ್ಟಣದಲ್ಲಿ ನಿರಶನ

ಆರನೇ ದಿನಕ್ಕೆ ಕಾಲಿಟ್ಟ ‘ಭೂಮಿ ಸತ್ಯಾಗ್ರಹ’: ಫ್ರೀಡಂ ಪಾರ್ಕ್‌, ಚನ್ನರಾಯಪಟ್ಟಣದಲ್ಲಿ ನಿರಶನ

- Advertisement -
- Advertisement -

ದೇವನಹಳ್ಳಿ ರೈತರ ಭೂ ಸ್ವಾಧೀನ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ‘ಭೂಮಿ ಸತ್ಯಾಗ್ರಹ’ ಬುಧವಾರ (ಜು.2) ಆರನೇ ದಿನಕ್ಕೆ ಕಾಲಿಟ್ಟಿದೆ. ಫ್ರೀಡಂ ಪಾರ್ಕ್‌ ಮತ್ತು ಚನ್ನರಾಯಪಟ್ಟಣ ಎರಡೂ ಕಡೆ ರೈತರು, ಹೋರಾಟಗಾರರು ಉಪವಾಸ ಕೈಗೊಂಡಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ ಹೋರಾಟಗಾರರಾದ ಡಿ.ಎಚ್ ಪೂಜಾರಿ, ಯಶವಂತ, ಎಸ್‌. ವರಲಕ್ಷ್ಮಿ, ದೇವಿ, ಲಕ್ಷ್ಮಣ ಮಂಡಲಗೇರಾ, ಮಲ್ಲಿಗೆ ಸಿರಿಮನೆ, ಯಾಮ್ರೋಸ್ ಮತ್ತು ಪ್ರಭಾ ಬೆಳವಂಗಲ ಉಪವಾಸ ಕುಳಿತಿದ್ದಾರೆ. ಉಳಿದವರು ಅವರಿಗೆ ಸಾಥ್ ನೀಡಿದ್ದಾರೆ.

ಚನ್ನರಾಯಪಟ್ಟಣದಲ್ಲಿ ನಾಡ ಕಚೇರಿ ಮುಂಭಾಗದ ಧರಣಿ ಸ್ಥಳದಲ್ಲಿ ನೂರಾರು ರೈತರು ಉಪವಾಸದಲ್ಲಿದ್ದಾರೆ.

ಭೂ ಸ್ವಾಧೀನ ವಿರೋಧಿಸಿ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು ನಡೆಸುತ್ತಿದ್ದ ನಿರಂತರ ಹೋರಾಟ 2025 ಜೂನ್ 25ಕ್ಕೆ 1,180 ದಿನಗಳನ್ನು ಪೂರೈಸಿತ್ತು. ಹಾಗಾಗಿ, ಅಂದು ದೇವನಹಳ್ಳಿ ಪಟ್ಟಣದ ಸಂತೆ ಮೈದಾನದಲ್ಲಿ ದೊಡ್ಡ ಮಟ್ಟದಲ್ಲಿ ನಿರ್ಣಾಯಕ ‘ದೇವನಹಳ್ಳಿ ಚಲೋ’ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ಬಹುಭಾಷಾ ನಟ ಪ್ರಕಾಶ್ ರಾಜ್, ಎಎಪಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ರಾಜ್ಯ ರೈತ ಸಂಘದ ನಾಯಕ ಬಡಗಲಪುರ ನಾಗೇಂದ್ರ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಕರ್ನಾಟಕ ಪ್ರಾಂತ ರೈತ ಸಂಘದ ನಾಯಕ ಯಶವಂತ, ಸಿಐಟಿಯು ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮಿ, ಹೋರಾಟಗಾರರಾದ ಚುಕ್ಕಿ ನಂಜುಂಡಸ್ವಾಮಿ ಸೇರಿದಂತೆ ಪ್ರಮುಖರು ಸಮಾವೇಶದಲ್ಲಿ ಭಾಗವಹಿಸಿದ್ದರು. ಚನ್ನರಾಯಪಟ್ಟ ಹೋಬಳಿ ಮಾತ್ರವಲ್ಲದೆ ಇತರೆಡೆಗಳಿಂದಲೂ ರೈತರು ಆಗಮಿಸಿದ್ದರು.

ಆರಂಭದಲ್ಲಿ ಸಮಾವೇಶಕ್ಕೆ ಆಗಮಿಸುವವರಿಗೆ ಪೊಲೀಸರು ಕೊಂಚ ಅಡ್ಡಿಪಡಿಸಿದರೂ, ಬೆಳಿಗ್ಗೆಯಿಂದ ಸಂಜೆಯವರೆಗೆ ಪ್ರತಿಭಟನಾ ಸಮಾವೇಶ ಸುಸೂತ್ರವಾಗಿ ನಡೆದಿತ್ತು. ಆದರೆ, ಸಂಜೆ 6.30ರ ಸುಮಾರಿಗೆ ರೈತರು ಮತ್ತು ಹೋರಾಟಗಾರರನ್ನು ಪೊಲೀಸರು ಅಮಾನುಷವಾಗಿ ಬಂಧಿಸಿದ್ದರು.

ಇದರಿಂದ ಆಕ್ರೋಶಗೊಂಡ ಹೋರಾಟಗಾರರು, ಜೂನ್ 27ರಿಂದ ಫ್ರೀಡಂ ಪಾರ್ಕ್‌ನಲ್ಲಿ ಬಿಡಾರ ಹೂಡಿ ‘ಭೂಮಿ ಸತ್ಯಾಗ್ರಹ’ ಹಮ್ಮಿಕೊಂಡಿದ್ದಾರೆ.

ಸಚಿವ ಸಂಪುಟ ಮತ್ತು ಸಿಎಂ ಸಭೆ

ಜೂನ್ 26ರಂದು ನಟ ಪ್ರಕಾಶ್ ರಾಜ್ ನೇತೃತ್ವದಲ್ಲಿ ಹೋರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಲವಂತದ ಭೂ ಸ್ವಾಧೀನ ಕೈ ಬಿಡುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಜುಲೈ4ರಂದು ಸಮಗ್ರ ಸಭೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ಈ ನಡುವೆ ಜುಲೈ 2ರಂದು ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ರೈತ ಪರ ತೀರ್ಮಾನ ಕೈಗೊಳ್ಳುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲಾಗ್ತಿದೆ. ರೈತರು ಮತ್ತು ಹೋರಾಟಗಾರರು ನಂದಿ ಬೆಟ್ಟದ ಸಂಪುಟ ಸಭೆಯಿಂದ ನಿಟ್ಟುಸಿರು ಬಿಡುವ ಸುದ್ದಿ ಬರಲು ಕಾಯುತ್ತಿದ್ದಾರೆ. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

ದೇವನಹಳ್ಳಿ ಭೂಸ್ವಾಧೀನ ಮಾಡಿದರೆ ಸರಕಾರಕ್ಕೆ ಎಚ್ಚರಿಕೆ: ಸಂಯುಕ್ತ ಹೋರಾಟದ ನಾಯಕರೊಂದಿಗೆ ವಿಶೇಷ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...