Homeಮುಖಪುಟಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ವಿಚಾರಣೆ ಮತ್ತೆ ಮುಂದೂಡಿಕೆ: ಪೊಲೀಸರಿಂದ UAPA ಪುರಾವೆ ಸಲ್ಲಿಸಲು...

ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ವಿಚಾರಣೆ ಮತ್ತೆ ಮುಂದೂಡಿಕೆ: ಪೊಲೀಸರಿಂದ UAPA ಪುರಾವೆ ಸಲ್ಲಿಸಲು ವಿಫಲ

- Advertisement -
- Advertisement -

ಹೊಸದಿಲ್ಲಿ: 2020ರ ದೆಹಲಿ ಗಲಭೆಯ ಸಂಚುಕೋರರೆಂದು ಆರೋಪಿಸಲಾಗಿರುವ ವಿದ್ಯಾರ್ಥಿ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್‌ರ ಜಾಮೀನು ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಜುಲೈ 9ಕ್ಕೆ ಮುಂದೂಡಿದೆ. ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅನ್ವಯಿಸಲು ಪೊಲೀಸರು ಮತ್ತೊಮ್ಮೆ ಸಾಕಷ್ಟು ಪುರಾವೆಗಳನ್ನು ಒದಗಿಸಲು ವಿಫಲರಾಗಿದ್ದಾರೆ.

2020ರ ಫೆಬ್ರವರಿಯಲ್ಲಿ ಸಿಎಎ-ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಗಳ ವೇಳೆ ಭುಗಿಲೆದ್ದ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ, ಹೆಚ್ಚಾಗಿ ಮುಸ್ಲಿಂ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳಾದ 18 ಮಂದಿಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ. ಅವರಲ್ಲಿ ಇಬ್ಬರು ಇನ್ನೂ ಪತ್ತೆಯಾಗಿಲ್ಲ. ಈ ವಿಳಂಬದ ಕುರಿತು ಪ್ರತಿಕ್ರಿಯಿಸಿರುವ ಉಮರ್ ಖಾಲಿದ್ ಪರ ವಕೀಲ, ಹಿರಿಯ ವಕೀಲ ತ್ರಿದೀಪ್ ಪೈಸ್, “ಇದು ತೀವ್ರ ನಿರಾಶಾದಾಯಕ” ಎಂದಿದ್ದಾರೆ.

ಭಯೋತ್ಪಾದನಾ ವಿರೋಧಿ ಕಾನೂನು UAPA ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿರುವ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ 2020ರಿಂದಲೂ ಜೈಲಿನಲ್ಲಿದ್ದಾರೆ. ಈ ಕಠಿಣ ಕಾನೂನಿನ ಬಳಕೆಯು ಮಾನವ ಹಕ್ಕು ಸಂಘಟನೆಗಳು ಮತ್ತು ಕಾನೂನು ತಜ್ಞರಲ್ಲಿ ವ್ಯಾಪಕ ಕಳವಳವನ್ನು ಮೂಡಿಸಿದೆ. “ಇದು ವಿಚಾರಣೆಯಿಲ್ಲದೆ ನೀಡಲಾಗುತ್ತಿರುವ ಶಿಕ್ಷೆ. ಮುಸ್ಲಿಮರ ಧ್ವನಿ ಅಡಗಿಸಲು UAPA ಅನ್ನು ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂದು ಆರೋಪಿಗಳ ಕುಟುಂಬ ಸ್ನೇಹಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಂತಿಯುತ ಪ್ರತಿಭಟನೆ ಅಥವಾ ಭಾಷಣವನ್ನು UAPA ಅಡಿಯಲ್ಲಿ ದಾಖಲಿಸಬಹುದೇ ಎಂದು ದೆಹಲಿ ಹೈಕೋರ್ಟ್ ಪೊಲೀಸರನ್ನು ಈ ಹಿಂದೆ ಪ್ರಶ್ನಿಸಿತ್ತು. “ಪ್ರತಿಭಟನೆ ಆಯೋಜಿಸುವುದು ಈಗ ಭಯೋತ್ಪಾದನಾ ಕೃತ್ಯವೇ?” ಎಂದು ಕೇಳಿದ್ದ ನ್ಯಾಯಾಲಯ, ಆರೋಪಿಗಳನ್ನು ಹಿಂಸಾಚಾರಕ್ಕೆ ಜೋಡಿಸುವ ನೇರ ಮತ್ತು ದೃಢ ಪುರಾವೆಗಳನ್ನು ಸಲ್ಲಿಸಲು ನ್ಯಾಯಾಧೀಶರು ಸೂಚಿಸಿದ್ದರು.

ದೆಹಲಿ ಪೊಲೀಸರು ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್‌ರನ್ನು ಗಲಭೆಯ “ಮಾಸ್ಟರ್‌ಮೈಂಡ್‌ಗಳು” ಎಂದು ಗುರುತಿಸಿದ್ದಾರೆ. ಇದಕ್ಕೆ ಪುರಾವೆಯಾಗಿ ಪೊಲೀಸರು ಅವರ ಭಾಷಣಗಳು ಮತ್ತು ವಾಟ್ಸಾಪ್ ಚಾಟ್‌ಗಳನ್ನು ಸಾಕ್ಷ್ಯವಾಗಿ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ, ಅವರ ವಕೀಲರು, ಭಾಷಣಗಳು ಶಾಂತಿಯುತ ಪ್ರತಿಭಟನೆಯ ಭಾಗವಾಗಿದ್ದವೇ ಹೊರತು ಹಿಂಸಾಚಾರಕ್ಕೆ ಪ್ರಚೋದನೆಯಾಗಿರಲಿಲ್ಲ ಎಂದಿದ್ದಾರೆ. “ಉಮರ್ ಸದಾ ಜನರನ್ನು ಶಾಂತಿಯುತವಾಗಿರಲು ಕೇಳಿಕೊಂಡಿದ್ದಾನೆ” ಎಂದು ಅವರ ತಂದೆ ಡಾ. ಎಸ್.ಕ್ಯೂ.ಆರ್. ಇಲ್ಯಾಸ್ ಹೇಳಿದ್ದಾರೆ.

ಶರ್ಜೀಲ್ ಇಮಾಮ್ ಅವರನ್ನು 2020ರ ಜನವರಿಯಲ್ಲಿ ಅಲಿಗಢದಲ್ಲಿ ನೀಡಿದ ಶೈಕ್ಷಣಿಕ ಭಾಷಣದ ಕಾರಣಕ್ಕಾಗಿ ಗುರಿಯಾಗಿಸಲಾಗಿದೆ. ಪೊಲೀಸರು ಈ ಭಾಷಣವನ್ನು ‘ಪ್ರಚೋದನಕಾರಿ’ ಎಂದು ಬಿಂಬಿಸುತ್ತಿದ್ದರೆ, ಹಿರಿಯ ವಕೀಲೆ ರೆಬೆಕಾ ಜಾನ್ ಇದನ್ನು ಬಲವಾಗಿ ಖಂಡಿಸಿದ್ದಾರೆ. “ಇದು ಭಿನ್ನಾಭಿಪ್ರಾಯವನ್ನು ಹತ್ತಿಕ್ಕುವ ದುಷ್ಟ ತಂತ್ರ” ಎಂದು ಅವರು ಹೇಳಿದ್ದಾರೆ.

ಇದೇ ಪ್ರಕರಣದಲ್ಲಿ, 2021ರ ಜೂನ್‌ನಲ್ಲಿ ದೆಹಲಿ ಹೈಕೋರ್ಟ್ ದೇವಂಗನಾ ಕಲಿತಾ, ನತಾಶಾ ನರ್ವಾಲ್ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆ ವೇಳೆ, “ಭಿನ್ನಾಭಿಪ್ರಾಯವನ್ನು ಭಯೋತ್ಪಾದನೆಗೆ ಸಮಾನ ಎಂದು ಹೇಳಲಾಗದು” ಎಂದು ನ್ಯಾಯಾಲಯ ಖಡಾಖಂಡಿತವಾಗಿ ತಿಳಿಸಿತ್ತು. ಇಶ್ರತ್ ಜಹಾನ್ ಅವರಿಗೂ ಜಾಮೀನು ಲಭಿಸಿತ್ತು. ಈ ಆದೇಶಗಳು ಉಮರ್ ಮತ್ತು ಶರ್ಜೀಲ್ ಜಾಮೀನಿಗೆ ಬಲವಾದ ಒರೆಗಲ್ಲಾಗಿವೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೂ, “ಇದು ಆಯ್ದ ಕಿರುಕುಳದ ಸ್ಪಷ್ಟ ಉದಾಹರಣೆ” ಎಂದು ವಕೀಲ ತ್ರಿದೀಪ್ ಪೈಸ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣವು ನ್ಯಾಯಕ್ಕಿಂತ ಧರ್ಮ ಮತ್ತು ರಾಜಕೀಯಕ್ಕೆ ಹೆಚ್ಚು ಸಂಬಂಧಿಸಿದೆ ಎಂಬುದು ಅನೇಕರ ಅಭಿಪ್ರಾಯ. 2020ರಿಂದೀಚೆಗೆ, ಸಿಎಎ ವಿರೋಧಿ ಪ್ರತಿಭಟನೆಗಳಲ್ಲಿ ಧ್ವನಿ ಎತ್ತಿದ ಮುಸ್ಲಿಮರನ್ನು ಅನಗತ್ಯವಾಗಿ UAPA ಅಡಿಯಲ್ಲಿ ಬಂಧಿಸಿ, ವರ್ಷಗಟ್ಟಲೆ ಜೈಲಿನಲ್ಲಿರಿಸಿದ ಹಲವು ಪ್ರಕರಣಗಳು ವರದಿಯಾಗಿವೆ. ಆದರೆ, ಸಿಎಎ ಪರ ಬಣದ ಕೆಲವೇ ಕೆಲವರು ಮಾತ್ರ ತನಿಖೆಗೆ ಒಳಪಟ್ಟಿದ್ದಾರೆ ಎಂಬ ಆರೋಪವೂ ಇದೆ. “ನಮಗೆ ಯಾವುದೇ ವಿಶೇಷ ಸೌಲಭ್ಯ ಕೇಳುತ್ತಿಲ್ಲ. ಕಾನೂನು ನಮ್ಮ ಮಕ್ಕಳಿಗೆ ಸಮಾನವಾಗಿ ನ್ಯಾಯ ಒದಗಿಸಬೇಕು ಎಂದು ಮಾತ್ರ ಬಯಸುತ್ತಿದ್ದೇವೆ” ಎಂದು ಹಿರಿಯ ಪತ್ರಕರ್ತೆ ಅರ್ಫಾ ಖಾನಮ್ ಶೇರ್ವಾನಿ ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ.

ಪ್ರಕರಣದ ನಿರಂತರ ಮುಂದೂಡಿಕೆ ಆರೋಪಿಗಳ ಕುಟುಂಬಗಳಲ್ಲಿ ಆತಂಕ ಮೂಡಿಸಿದೆ. ನಾಲ್ಕು ವರ್ಷಗಳಿಂದ ಬಂಧನದಲ್ಲಿದ್ದರೂ, ಪ್ರಕರಣವು ಇನ್ನೂ ಆರೋಪಪಟ್ಟಿ ಹಂತದಲ್ಲೇ ಇರುವುದರಿಂದ ಉಮರ್, ಶರ್ಜೀಲ್ ಮತ್ತು ಇತರರ ಮುಂದಿನ ಭವಿಷ್ಯ ಅನಿಶ್ಚಿತವಾಗಿದೆ.

ಆರನೇ ದಿನಕ್ಕೆ ಕಾಲಿಟ್ಟ ‘ಭೂಮಿ ಸತ್ಯಾಗ್ರಹ’: ಫ್ರೀಡಂ ಪಾರ್ಕ್‌, ಚನ್ನರಾಯಪಟ್ಟಣದಲ್ಲಿ ನಿರಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...