Homeಕರ್ನಾಟಕಚನ್ನರಾಯಪಟ್ಟಣ ಭೂಸ್ವಾಧೀನ ಕೈಬಿಡುವಂತೆ ಸಿಎಂಗೆ ಪತ್ರ ಬರೆದ ಬಿಹಾರ ಸಂಸದ ರಾಜಾರಾಮ್ ಸಿಂಗ್

ಚನ್ನರಾಯಪಟ್ಟಣ ಭೂಸ್ವಾಧೀನ ಕೈಬಿಡುವಂತೆ ಸಿಎಂಗೆ ಪತ್ರ ಬರೆದ ಬಿಹಾರ ಸಂಸದ ರಾಜಾರಾಮ್ ಸಿಂಗ್

- Advertisement -
- Advertisement -

ಬಿಹಾರದ ಸಿಪಿಐ(ಎಂಎಲ್) ಪಕ್ಷದ ಲೋಕಸಭಾ ಸದಸ್ಯರಾಗಿರುವ (ಕರಕಟ್ ಕ್ಷೇತ್ರ) ರಾಜ ರಾಮ್ ಸಿಂಗ್ ಅವರು, ಚನ್ನರಾಯಪಟ್ಟಣ ಭೂಸ್ವಾಧೀನವನ್ನು ಕೈಬಿಡುವಂತೆ ಒತ್ತಾಯಿಸಿದ್ದಾರೆ. ದೇವನಹಳ್ಳಿ ರೈತರ ಕೊಡುಗೆಯನ್ನು ಶ್ಲಾಘಿಸಿ ಪತ್ರ ಬರೆದಿದ್ದು, ಮುಖ್ಯ ಮಂತ್ರಿ ಸಿದ್ದರಾಮಯ್ಯರಿ ಅವರಿಗೆ ಇಂದು ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?

ಸಿಪಿಐ(ಎಂಎಲ್) ಲಿಬರೇಶನ್‌ನೊಂದಿಗೆ ಸಂಬಂಧ ಹೊಂದಿರುವ ರೈತರ ಸಂಘಟನೆಯಾದ ಅಖಿಲ ಭಾರತ ಕಿಸಾನ್ ಮಹಾಸಭಾದ ಪರವಾಗಿ ನಾನು ನಿಮಗೆ ಪತ್ರ ಬರೆಯುತ್ತಿದ್ದೇನೆ, ಕರ್ನಾಟಕ ಸರ್ಕಾರವು ದೇವನಹಳ್ಳಿ ತಾಲ್ಲೂಕಿನಲ್ಲಿ 1,777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಪ್ರಸ್ತಾವಿತ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್‌ಗಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ಕೈಬಿಡಬೇಕೆಂದು ಒತ್ತಾಯಿಸುತ್ತಿದ್ದೇನೆ. ಇದರ ವಿರುದ್ಧ ರೈತರು ಕಳೆದ ಸುಮಾರು 1200 ಕ್ಕೈ ಹೆಚ್ಚು ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ.

ನಿಮಗೆ ತಿಳಿದಿರುವಂತೆ ದೇವನಹಳ್ಳಿಯ ಸುತ್ತಮುತ್ತಲಿನ ಈ ಪ್ರದೇಶವು ಹೆಚ್ಚು ಫಲವತ್ತಾದ ಭೂಮಿಯನ್ನು ಹೊಂದಿದೆ. ನಗರಕ್ಕೆ ಹಣ್ಣು, ತರಕಾರಿ, ಹಾಲು ಮತ್ತು ಇತರ ಅಗತ್ಯ ವಸ್ತುಗಳನ್ನು ಪೂರೈಸುತ್ತದೆ. ಬೆಂಗಳೂರಿನ ಆಹಾರ ಮತ್ತು ಪೌಷ್ಟಿಕಾಂಶ ಭದ್ರತೆಗೆ ಇದು ಸುತ್ತಮುತ್ತಲಿನ ಜಿಲ್ಲೆಗಳೊಂದಿಗೆ ವಾರ್ಷಿಕವಾಗಿ ಅಂದಾಜು 7-8 ಮಿಲಿಯನ್ ಟನ್ ತೋಟಗಾರಿಕಾ ಬೆಳೆಗಳನ್ನು ಉತ್ಪಾದಿಸುತ್ತದೆ ಎಂದು ಹೇಳಲಾಗುತ್ತದೆ. ಹೈನುಗಾರಿಕೆ ಮೂಲಕ ಬೆಂಗಳೂರಿನ ನಂದಿನಿ/ಮದರ್ ಡೈರಿ ಕೇಂದ್ರಕ್ಕೆ ಪ್ರತಿದಿನ 10 ಮಿಲಿಯನ್ ಲೀಟರ್‌ಗಳಿಗಿಂತ ಹೆಚ್ಚು ಹಾಲನ್ನು ತಲುಪಿಸುತ್ತವೆ. ಹೆಚ್ಚಿನ ಬಾಧಿತ ರೈತರು, ಸ್ವಾಧೀನದ ಭಾಗವನ್ನು ಕೈಬಿಡುವ ಅಥವಾ ಕೇವಲ ಪರಿಹಾರವನ್ನು ನೀಡುವ ಯಾವುದೇ ಪರಿಹಾರಗಳನ್ನು ತಿರಸ್ಕರಿಸಿದ್ದಾರೆ. ಬದಲಿಗೆ, ಯಾವುದೇ ಸ್ವಾಧೀನ ಬೇಡ ಎಂದು ಹೇಳಿದ್ದಾರೆ. ರೈತರು ತಮ್ಮ ಕೃಷಿಯನ್ನು ಮುಂದುವರಿಸಲು, ತಲೆಮಾರುಗಳಿಂದ ನಡೆಸುವಕೊಂಡು ಬಂದಿರುವ ಜೀವನ ಮತ್ತು ಜೀವನೋಪಾಯವನ್ನು ಉಳಿಸಿಕೊಂಡಿರುವ ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಬಯಸುತ್ತಾರೆ.

ಕೈಗಾರೊಕೋದ್ಯಮ ಸ್ಥಾಪನೆ ತತ್ವವನ್ನು ಆಧರಿಸಿದ ಬಲವಂತದ ಸ್ವಾಧೀನವು ವಸಾಹತುಶಾಹಿ ಅವಶೇಷವಾಗಿದೆ. ಅದಕ್ಕೆ ಪ್ರಜಾಪ್ರಭುತ್ವದಲ್ಲಿ ಯಾವುದೇ ಸ್ಥಾನವಿಲ್ಲ. ಇದಲ್ಲದೆ, ಇಲ್ಲಿಯವರೆಗೆ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಹೆಚ್ಚಿನ ಭಾಗಗಳು ಬಳಕೆಯಾಗದೆ ಉಳಿದಿವೆ ಎಂಬುದು ಈಗ ಸಾಮಾನ್ಯ ಜ್ಞಾನವಾಗಿದೆ. ಹೀಗಾಗಿ, ಕರ್ನಾಟಕ ಸರ್ಕಾರ ಸೇರಿದಂತೆ ಎಲ್ಲಾ ಸರ್ಕಾರಗಳು ವಿವಿಧ ಕಾನೂನುಗಳ ಅಡಿಯಲ್ಲಿ ಮತ್ತು ವಿವಿಧ ಉದ್ದೇಶಗಳಿಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಯ ಕುರಿತು ಶ್ವೇತಪತ್ರವನ್ನು ಸಿದ್ಧಪಡಿಸಿ ಪ್ರಕಟಿಸುವ ಸಮಯ ಬಂದಿದೆ, ಇದು ಕಾರ್ಯನಿರ್ವಹಿಸದ ಕೈಗಾರಿಕೆಗಳು ಮತ್ತು ಯೋಜನೆಗಳೊಂದಿಗೆ ಬಳಸಿದ, ಬಳಕೆಯಾಗದ ಮತ್ತು ಸ್ವಾಧೀನಪಡಿಸಿಕೊಂಡ ಭೂಮಿಯ ಪ್ರಮಾಣವನ್ನು ಒಳಗೊಂಡಿದೆ.

ದೇವನಹಳ್ಳಿಯ 13 ಹಳ್ಳಿಗಳಲ್ಲಿ 1777 ಎಕರೆಗಳನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ರಾಜ್ಯ ಸರ್ಕಾರವು ನಿಜವಾಗಿಯೂ ಕೈಬಿಡುತ್ತದೆ ಎಂದು ಘೋಷಿಸಲು ಮತ್ತು ಮುಂಬರುವ ತಿಂಗಳುಗಳಲ್ಲಿ ಸ್ವಾಧೀನಪಡಿಸಿಕೊಂಡ ಭೂಮಿಗಳ ಕುರಿತು ಶ್ವೇತಪತ್ರವನ್ನು ಪ್ರಕಟಿಸಲು ಕ್ರಮಗಳನ್ನು ತೆಗೆದುಕೊಳ್ಳಲು ಜುಲೈ 4 ರಂದು ಪ್ರತಿಭಟನಾ ನಿರತ ರೈತರೊಂದಿಗೆ ನಡೆಯುವ ಸಭೆಯನ್ನು ಸೂಕ್ತ ಸಂದರ್ಭವಾಗಿ ಬಳಸಿಕೊಳ್ಳಬೇಕೆಂದು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ.

ದೇವನಹಳ್ಳಿ ರೈತ ಹೋರಾಟಕ್ಕೆ ದನಿಗೂಡಿಸಿದ ನಟಿ ರಮ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...