Homeಕರ್ನಾಟಕಚನ್ನರಾಯಪಟ್ಟಣ ಭೂಸ್ವಾಧೀನ ಕೈಬಿಡುವಂತೆ ಸಿಎಂಗೆ ಪತ್ರ ಬರೆದ ಬಿಹಾರ ಸಂಸದ ರಾಜಾರಾಮ್ ಸಿಂಗ್

ಚನ್ನರಾಯಪಟ್ಟಣ ಭೂಸ್ವಾಧೀನ ಕೈಬಿಡುವಂತೆ ಸಿಎಂಗೆ ಪತ್ರ ಬರೆದ ಬಿಹಾರ ಸಂಸದ ರಾಜಾರಾಮ್ ಸಿಂಗ್

- Advertisement -
- Advertisement -

ಬಿಹಾರದ ಸಿಪಿಐ(ಎಂಎಲ್) ಪಕ್ಷದ ಲೋಕಸಭಾ ಸದಸ್ಯರಾಗಿರುವ (ಕರಕಟ್ ಕ್ಷೇತ್ರ) ರಾಜ ರಾಮ್ ಸಿಂಗ್ ಅವರು, ಚನ್ನರಾಯಪಟ್ಟಣ ಭೂಸ್ವಾಧೀನವನ್ನು ಕೈಬಿಡುವಂತೆ ಒತ್ತಾಯಿಸಿದ್ದಾರೆ. ದೇವನಹಳ್ಳಿ ರೈತರ ಕೊಡುಗೆಯನ್ನು ಶ್ಲಾಘಿಸಿ ಪತ್ರ ಬರೆದಿದ್ದು, ಮುಖ್ಯ ಮಂತ್ರಿ ಸಿದ್ದರಾಮಯ್ಯರಿ ಅವರಿಗೆ ಇಂದು ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?

ಸಿಪಿಐ(ಎಂಎಲ್) ಲಿಬರೇಶನ್‌ನೊಂದಿಗೆ ಸಂಬಂಧ ಹೊಂದಿರುವ ರೈತರ ಸಂಘಟನೆಯಾದ ಅಖಿಲ ಭಾರತ ಕಿಸಾನ್ ಮಹಾಸಭಾದ ಪರವಾಗಿ ನಾನು ನಿಮಗೆ ಪತ್ರ ಬರೆಯುತ್ತಿದ್ದೇನೆ, ಕರ್ನಾಟಕ ಸರ್ಕಾರವು ದೇವನಹಳ್ಳಿ ತಾಲ್ಲೂಕಿನಲ್ಲಿ 1,777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಪ್ರಸ್ತಾವಿತ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್‌ಗಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ಕೈಬಿಡಬೇಕೆಂದು ಒತ್ತಾಯಿಸುತ್ತಿದ್ದೇನೆ. ಇದರ ವಿರುದ್ಧ ರೈತರು ಕಳೆದ ಸುಮಾರು 1200 ಕ್ಕೈ ಹೆಚ್ಚು ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ.

ನಿಮಗೆ ತಿಳಿದಿರುವಂತೆ ದೇವನಹಳ್ಳಿಯ ಸುತ್ತಮುತ್ತಲಿನ ಈ ಪ್ರದೇಶವು ಹೆಚ್ಚು ಫಲವತ್ತಾದ ಭೂಮಿಯನ್ನು ಹೊಂದಿದೆ. ನಗರಕ್ಕೆ ಹಣ್ಣು, ತರಕಾರಿ, ಹಾಲು ಮತ್ತು ಇತರ ಅಗತ್ಯ ವಸ್ತುಗಳನ್ನು ಪೂರೈಸುತ್ತದೆ. ಬೆಂಗಳೂರಿನ ಆಹಾರ ಮತ್ತು ಪೌಷ್ಟಿಕಾಂಶ ಭದ್ರತೆಗೆ ಇದು ಸುತ್ತಮುತ್ತಲಿನ ಜಿಲ್ಲೆಗಳೊಂದಿಗೆ ವಾರ್ಷಿಕವಾಗಿ ಅಂದಾಜು 7-8 ಮಿಲಿಯನ್ ಟನ್ ತೋಟಗಾರಿಕಾ ಬೆಳೆಗಳನ್ನು ಉತ್ಪಾದಿಸುತ್ತದೆ ಎಂದು ಹೇಳಲಾಗುತ್ತದೆ. ಹೈನುಗಾರಿಕೆ ಮೂಲಕ ಬೆಂಗಳೂರಿನ ನಂದಿನಿ/ಮದರ್ ಡೈರಿ ಕೇಂದ್ರಕ್ಕೆ ಪ್ರತಿದಿನ 10 ಮಿಲಿಯನ್ ಲೀಟರ್‌ಗಳಿಗಿಂತ ಹೆಚ್ಚು ಹಾಲನ್ನು ತಲುಪಿಸುತ್ತವೆ. ಹೆಚ್ಚಿನ ಬಾಧಿತ ರೈತರು, ಸ್ವಾಧೀನದ ಭಾಗವನ್ನು ಕೈಬಿಡುವ ಅಥವಾ ಕೇವಲ ಪರಿಹಾರವನ್ನು ನೀಡುವ ಯಾವುದೇ ಪರಿಹಾರಗಳನ್ನು ತಿರಸ್ಕರಿಸಿದ್ದಾರೆ. ಬದಲಿಗೆ, ಯಾವುದೇ ಸ್ವಾಧೀನ ಬೇಡ ಎಂದು ಹೇಳಿದ್ದಾರೆ. ರೈತರು ತಮ್ಮ ಕೃಷಿಯನ್ನು ಮುಂದುವರಿಸಲು, ತಲೆಮಾರುಗಳಿಂದ ನಡೆಸುವಕೊಂಡು ಬಂದಿರುವ ಜೀವನ ಮತ್ತು ಜೀವನೋಪಾಯವನ್ನು ಉಳಿಸಿಕೊಂಡಿರುವ ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಬಯಸುತ್ತಾರೆ.

ಕೈಗಾರೊಕೋದ್ಯಮ ಸ್ಥಾಪನೆ ತತ್ವವನ್ನು ಆಧರಿಸಿದ ಬಲವಂತದ ಸ್ವಾಧೀನವು ವಸಾಹತುಶಾಹಿ ಅವಶೇಷವಾಗಿದೆ. ಅದಕ್ಕೆ ಪ್ರಜಾಪ್ರಭುತ್ವದಲ್ಲಿ ಯಾವುದೇ ಸ್ಥಾನವಿಲ್ಲ. ಇದಲ್ಲದೆ, ಇಲ್ಲಿಯವರೆಗೆ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಹೆಚ್ಚಿನ ಭಾಗಗಳು ಬಳಕೆಯಾಗದೆ ಉಳಿದಿವೆ ಎಂಬುದು ಈಗ ಸಾಮಾನ್ಯ ಜ್ಞಾನವಾಗಿದೆ. ಹೀಗಾಗಿ, ಕರ್ನಾಟಕ ಸರ್ಕಾರ ಸೇರಿದಂತೆ ಎಲ್ಲಾ ಸರ್ಕಾರಗಳು ವಿವಿಧ ಕಾನೂನುಗಳ ಅಡಿಯಲ್ಲಿ ಮತ್ತು ವಿವಿಧ ಉದ್ದೇಶಗಳಿಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಯ ಕುರಿತು ಶ್ವೇತಪತ್ರವನ್ನು ಸಿದ್ಧಪಡಿಸಿ ಪ್ರಕಟಿಸುವ ಸಮಯ ಬಂದಿದೆ, ಇದು ಕಾರ್ಯನಿರ್ವಹಿಸದ ಕೈಗಾರಿಕೆಗಳು ಮತ್ತು ಯೋಜನೆಗಳೊಂದಿಗೆ ಬಳಸಿದ, ಬಳಕೆಯಾಗದ ಮತ್ತು ಸ್ವಾಧೀನಪಡಿಸಿಕೊಂಡ ಭೂಮಿಯ ಪ್ರಮಾಣವನ್ನು ಒಳಗೊಂಡಿದೆ.

ದೇವನಹಳ್ಳಿಯ 13 ಹಳ್ಳಿಗಳಲ್ಲಿ 1777 ಎಕರೆಗಳನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ರಾಜ್ಯ ಸರ್ಕಾರವು ನಿಜವಾಗಿಯೂ ಕೈಬಿಡುತ್ತದೆ ಎಂದು ಘೋಷಿಸಲು ಮತ್ತು ಮುಂಬರುವ ತಿಂಗಳುಗಳಲ್ಲಿ ಸ್ವಾಧೀನಪಡಿಸಿಕೊಂಡ ಭೂಮಿಗಳ ಕುರಿತು ಶ್ವೇತಪತ್ರವನ್ನು ಪ್ರಕಟಿಸಲು ಕ್ರಮಗಳನ್ನು ತೆಗೆದುಕೊಳ್ಳಲು ಜುಲೈ 4 ರಂದು ಪ್ರತಿಭಟನಾ ನಿರತ ರೈತರೊಂದಿಗೆ ನಡೆಯುವ ಸಭೆಯನ್ನು ಸೂಕ್ತ ಸಂದರ್ಭವಾಗಿ ಬಳಸಿಕೊಳ್ಳಬೇಕೆಂದು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ.

ದೇವನಹಳ್ಳಿ ರೈತ ಹೋರಾಟಕ್ಕೆ ದನಿಗೂಡಿಸಿದ ನಟಿ ರಮ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...